ಕ್ರೈಮ್ ನ್ಯೂಸ್

ಕೌಟುಂಬಿಕ ಕಲಹ- ಪೊಲೀಸ್ ಪೇದೆ ದಂಪತಿಗಳಿಂದ ಆತ್ಮಹತ್ಯೆಗೆ ಯತ್ನ…! ➤ ಪತ್ನಿ ಮೃತ್ಯು, ಪತಿ ಪಾರು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಫೆ. 17. ಕೌಟುಂಬಿಕ ಕಲಹದ ಹಿನ್ನೆಲೆ ಪೊಲೀಸ್ ಪೇದೆ ಹಾಗೂ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಪತ್ನಿ ಮೃತಪಟ್ಟು, ಪತಿ ಪಾರಾದ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಣಕನೂರು ಬಳಿ ನಡೆದಿದೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿರುವ ಸುರೇಂದ್ರ ಕುಮಾರ್ ಮತ್ತು ಅವರ ಪತ್ನಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡು, ಪತಿ ಸುರೇಂದ್ರ ಕುಮಾರ್ ಅವರು ಕೈಗೆ ಗಾಯ ಮಾಡಿಕೊಂಡಿದ್ದಾರೆ. ಇದರಿಂದ ಮನನೊಂದ ಅವರ ಪತ್ನಿ ಆತ್ಮಹತ್ಯೆಗೆ […]

ಕೌಟುಂಬಿಕ ಕಲಹ- ಪೊಲೀಸ್ ಪೇದೆ ದಂಪತಿಗಳಿಂದ ಆತ್ಮಹತ್ಯೆಗೆ ಯತ್ನ…! ➤ ಪತ್ನಿ ಮೃತ್ಯು, ಪತಿ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಲಂಕಾರು: ಬಸ್ ನಿಲ್ದಾಣದಲ್ಲಿ ಮಲಗಿದ ಸ್ಥಿತಿಯಲ್ಲಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಆಲಂಕಾರು, ಫೆ. 17. ಬಸ್ ನಿಲ್ದಾಣದಲ್ಲಿ ರಾತ್ರಿ ವೇಳೆಯಲ್ಲಿ ಮಲಗಿದ ಸ್ಥಿತಿಯಲ್ಲೇ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಆಲಂಕಾರಿನಿಂದ ವರದಿಯಾಗಿದೆ. ಮೃತಪಟ್ಟವರನ್ನು ಶೇಷಪ್ಪ ಗೌಡ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಈ ಕುರಿತು ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಶ್ರೀಮತಿ ಹೇಮಾವತಿ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಲಂಕಾರು: ಬಸ್ ನಿಲ್ದಾಣದಲ್ಲಿ ಮಲಗಿದ ಸ್ಥಿತಿಯಲ್ಲಿ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಕಾರು- ಆಕ್ಟಿವಾ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 16. ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ಸವಾರ ಗಾಯಗೊಂಡ ಘಟನೆ ರಾ.ಹೆ 75ರ ಕೂಟೇಲು ಸೇತುವೆ ಬಳಿ ನಡೆದಿದೆ. ಗಾಯಗೊಂಡವರನ್ನು ಉಪ್ಪಿನಂಗಡಿ ಮಠ ನಿವಾಸಿ ಇಯಾಸ್ ಎಂದು ಗುರುತಿಸಲಾಗಿದೆ. ಇವರು ಉಪ್ಪಿನಂಗಡಿ ಮಠದ ಕಡೆಗೆ ಹೋಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಕಾರು ಹಠಾತ್ತನೆ ಬಲಗಡೆಗೆ ತಿರುಗಿದ್ದು, ಪರಿಣಾಮ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಗಾಯಾಳು ಸವಾರನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ

ಉಪ್ಪಿನಂಗಡಿ: ಕಾರು- ಆಕ್ಟಿವಾ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಾವಿಗೆ ಬಿದ್ದು ಬಾಲಕಿ ಮೃತ್ಯು ➤ ತಾಯಿಯ ವಿರುದ್ದ ತಂದೆಯಿಂದಲೇ ಕೊಲೆ ಆರೋಪ…!

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಫೆ. 16. ಬಾವಿಗೆ ಬಿದ್ದು ಬಾಲಕಿಯೋರ್ವಳು ಮೃತಪಟ್ಟ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಶಾಮರಾವ್ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ.   ಮೃತ ಬಾಲಕಿಯನ್ನು ರುಷ್ಮಿತಾ(10) ಎಂದು ಗುರುತಿಸಲಾಗಿದೆ. ಮಂಗಳವಾರದಂದು ಸಂಜೆ ಶಾಲೆಯಿಂದ ಬಂದ ರುಷ್ಮಿತಾ ಮನೆಯ ಪಕ್ಕದಲ್ಲಿರುವ ಜಮೀನಿಗೆ ತೆರಳಿದ್ದ ವೇಳೆ ಬಾವಿಗೆ ಬಿದ್ದಿದ್ದಾಳೆ. ಇತ್ತ ರುಷ್ಮಿತಾ ಕಾಣಿಸುತ್ತಿಲ್ಲ ಎಂದು ಹುಡುಕಾಡಿದ ಸಂದರ್ಭ ಬಾವಿಯ ಬಳಿ ಬಾಲಕಿಯ ಚಪ್ಪಲಿ ಪತ್ತೆಯಾಗಿದ್ದು, ಬಾವಿಯಲ್ಲಿ ನೋಡಿದಾಗ ರುಷ್ಮಿತಾಳ ಮೃತದೇಹ ಪತ್ತೆಯಾಗಿದೆ. ಈ ಕುರಿತು ಮಗುವಿನ

ಬಾವಿಗೆ ಬಿದ್ದು ಬಾಲಕಿ ಮೃತ್ಯು ➤ ತಾಯಿಯ ವಿರುದ್ದ ತಂದೆಯಿಂದಲೇ ಕೊಲೆ ಆರೋಪ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ನಾಪತ್ತೆಯಾಗಿದ್ದ ಆಟೋ ಚಾಲಕನ ಮೃತದೇಹ ರಿಕ್ಷಾದಲ್ಲೇ ಪತ್ತೆ..!

(ನ್ಯೂಸ್ ಕಡಬ) newskadaba.com ಪುತ್ತೂರು,‌ ಫೆ. 16.‌ ಬಾಡಿಗೆಗೆಂದು ಆಟೋ ರಿಕ್ಷಾದಲ್ಲಿ ಹೋದ ಆಟೋ ಚಾಲಕರೋರ್ವರ ಮೃತದೇಹವು ಬಲ್ನಾಡಿನ ಮಚ್ಚಿಮಲೆ ಬೊಲ್ಲಾಣ ರಸ್ತೆಯ ಮಧ್ಯೆ ರಿಕ್ಷಾದಲ್ಲಿ ಬುಧವಾರದಂದು ಬೆಳಗ್ಗೆ ಪತ್ತೆಯಾಗಿದೆ. ಮೃತ ಚಾಲಕನನ್ನು ಬಲ್ನಾಡು ಉಜ್ರುಪಾದೆ ನಿವಾಸಿ ಸುಂದರ ಪಿ ಎಂದು ಗುರುತಿಸಲಾಗಿದೆ. ಫೆ. 13ರಂದು ಮನೆಯಿಂದ ಆಟೋ ರಿಕ್ಷಾದಲ್ಲಿ ಬಾಡಿಗೆಗೆಂದು ತೆರಳಿದ್ದ ಅವರು ಮನೆಗೆ ಬಾರದೇ ಇದ್ದುದರಿಂದ ಸುಂದರ ಅವರಿಗೆ ಮೊಬೈಲ್ ಪೋನ್ ಮಾಡಿದಾಗ ಅವರ ಮೊಬೈಲ್ ಮನೆಯಲ್ಲೇ ಬಾಕಿಯಾಗಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು

ಪುತ್ತೂರು: ನಾಪತ್ತೆಯಾಗಿದ್ದ ಆಟೋ ಚಾಲಕನ ಮೃತದೇಹ ರಿಕ್ಷಾದಲ್ಲೇ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸೇತುವೆಯ ಬಳಿ ಬೈಕ್ ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆಗೈದ ಯುವಕ..!

(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 16. ಪಾವಂಜೆ ಸೇತುವೆಯ ಬಳಿ ಯುವಕನೋರ್ವ ಬೈಕ್ ನಿಲ್ಲಿಸಿ ನಂದಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿ ಬಳಿ ಬುಧವಾರದಂದು ನಡೆದಿದೆ. ಮೃತ ಯುವಕನನ್ನು ಸುಚೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಇಂಜಿನಿಯರ್ ವೃತ್ತಿ ಮಾಡಿಕೊಂಡಿದ್ದ ಇವರು ಬುಧವಾರದಂದು ಬೆಳಗ್ಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದರು. ಸುಮಾರು ಹನ್ನೊಂದು ಗಂಟೆಯ ವೇಳೆಗೆ ಸೇತುವೆಯಿಂದ ನದಿಗೆ ಹಾರಿದ ಮಾಹಿತಿ ದೊರೆತಿದ್ದು, ಸ್ಥಳಕ್ಕೆ ಆಗಮಿಸಿದ ಮುಲ್ಕಿ ಪೊಲೀಸರು ಸ್ಥಳೀಯರ

ಸೇತುವೆಯ ಬಳಿ ಬೈಕ್ ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆಗೈದ ಯುವಕ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ವಿಷದ ಹಾವು ಕಡಿದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕಡಬ, ಫೆ. 16. ತೋಟಕ್ಕೆ ಸ್ಪಿಂಕ್ಲರ್ ಅಳವಡಿಸಲು ಹೋದ ರೈತರೋರ್ವರು ವಿಷದ ಹಾವು ಕಡಿದು ಮೃತಪಟ್ಟ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಕೋಡಿಂಬಾಳ ಗ್ರಾಮದ ಪೆಲೊತ್ತೊಡಿ ನಿವಾಸಿ ಧರ್ಮಪಾಲ ಗೌಡ ಎಂದು ಗುರುತಿಸಲಾಗಿದೆ. ಇವರು ತಮ್ಮ‌ಮನೆಯ ಹತ್ತಿರದಲ್ಲಿರುವ ತೋಟಕ್ಕೆ ಸ್ಪ್ರಿಂಕ್ಲರ್ ಅಳವಡಿಸಲು ಹೋದ ಸಂದರ್ಭ ಯಾವುದೋ ವಿಷದ ಹಾವೊಂದು ಅವರ ಕಾಲಿಗೆ ಕಡಿದಿದ್ದು, ತಕ್ಷಣ ಅವರು ಮನೆಯ ಹತ್ತಿರ ಬರುತ್ತಿದ್ದಂತೆಯೇ ಪ್ರಜ್ಞೆ ತಪ್ಪಿ ನೆಲಕ್ಕೆ

ಕಡಬ: ವಿಷದ ಹಾವು ಕಡಿದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎರಡು ಕೋಟಿಗೂ ಅಧಿಕ ಬೆಲೆ ಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ..! ➤ ನಾಲ್ವರು ಅಂತರಾಜ್ಯ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಎರಡು ಕೋಟಿಗೂ ಅಧಿಕ ಮೌಲ್ಯದ ತಿಮಿಂಗಿಲ ವಾಂತಿಯನ್ನು ಮಾರಾಟ ಮಾಡಲೆತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಕಂಕನಾಡಿ ಪೋಲಿಸರು‌ ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಕೊಡಗಿನ ಕರಿಕೆ ಗ್ರಾಮದ ಜಾಬೀರ್ ಎಂ.ಎ ಮತ್ತು ಶಬಾದ್ ಎಲ್.ಕೆ, ಕೇರಳ ಮೂಲದ ಆಸೀರ್ ವಿ.ಪಿ ಹಾಗೂ ಶರೀಫ್ ಎಂದು‌ ಗುರುತಿಸಲಾಗಿದೆ. ಇವರು ಕಳೆದ 12ರಂದು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿನಮೊಗರು ಎಂಬಲ್ಲಿ ಸುಮಾರು 2 ಕೋಟಿ 21 ಲಕ್ಷ ಮೌಲ್ಯದ

ಎರಡು ಕೋಟಿಗೂ ಅಧಿಕ ಬೆಲೆ ಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ..! ➤ ನಾಲ್ವರು ಅಂತರಾಜ್ಯ ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಬೇಕರಿಯಲ್ಲಿ ಅಡುಗೆ ಗ್ಯಾಸ್ ಲೀಕ್ ಆಗಿ ವ್ಯಕ್ತಿಗೆ ಗಾಯ..!

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 16. ವ್ಯಕ್ತಿಯೋರ್ವರು ಬೇಕರಿಯಲ್ಲಿ ಬ್ರೆಡ್ ಮಾಡುತ್ತಿದ್ದ ವೇಳೆ ಬೆಂಕಿ ತಾಗಿ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಗಾಯಗೊಂಡವರನ್ನು ಸುಳ್ಯ ತಾಲೂಕು ಮರಕಂಜ ಗ್ರಾಮದ ನಿವಾಸಿ ಮಂಜುನಾಥ ಎಂದು ಗುರುತಿಸಲಾಗಿದೆ. ಇವರು ಅರಂತೋಡಿನಲ್ಲಿರುವ ತಮ್ಮ ಅಣ್ಣನ ಬೇಕರಿಯಲ್ಲಿ ಬ್ರೆಡ್ ಮಾಡಲು ಓವೆನ್ ಬಿಸಿಯಾಗಲು ಗ್ಯಾಸ್ ನಲ್ಲಿಟ್ಟು ಬೆಂಕಿ ಹೊತ್ತಿಸಿದಾಗ ಅದರ ಒಳಗೆ ಗ್ಯಾಸ್ ತುಂಬಿದ್ದರಿಂದ ಒಮ್ಮೆಲೇ ಗ್ಯಾಸ್ ಹೊರಬಂದು ಮಂಜುನಾಥರ ಮುಖ ಮತ್ತು ಎದೆಭಾಗಕ್ಕೆ ಸುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಸುಳ್ಯ

ಸುಳ್ಯ: ಬೇಕರಿಯಲ್ಲಿ ಅಡುಗೆ ಗ್ಯಾಸ್ ಲೀಕ್ ಆಗಿ ವ್ಯಕ್ತಿಗೆ ಗಾಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ರಬ್ಬರ್‌ ಸಾಗಾಟದ ಲಾರಿ ಪಲ್ಟಿ ➤ ಚಾಲಕ ಗಂಭೀರ..!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಫೆ. 15. ರಬ್ಬರ್ ಸಾಗಾಟದ ಲಾರಿಯೊಂದು ಪಲ್ಟಿಯಾದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಬೆಳ್ಳಾರೆ ಸಮೀಪದ ಪಂಜಿಗಾರು ಎಂಬಲ್ಲಿ ಮಂಗಳವಾರದಂದು ನಡೆದಿದೆ. ಬೆಳ್ಳಾರೆಯಿಂದ ಪಂಜ ಕಡೆಗೆ ರಬ್ಬರ್ ಸಾಗಿಸುತ್ತಿದ್ದ ಲಾರಿ ಪಂಜಿಗಾರ್ ಎಂಬಲ್ಲಿ ಪಲ್ಟಿಯಾಗಿದ್ದು, ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಚಾಲಕ ಗಂಭೀರ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಎಸ್ಐ ಆಂಜನೇಯ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ಳಾರೆ: ರಬ್ಬರ್‌ ಸಾಗಾಟದ ಲಾರಿ ಪಲ್ಟಿ ➤ ಚಾಲಕ ಗಂಭೀರ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top