ಕ್ರೈಮ್ ನ್ಯೂಸ್

ದನದ ಕಾಲನ್ನು ಕತ್ತರಿಸಿ ರಾಕ್ಷಸೀಕೃತ್ಯ ಮರೆದ ದುಷ್ಕರ್ಮಿಗಳು..! ➤ ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 29. ಸಾಕು ಹಸುವೊಂದರ ಕಾಲನ್ನು ಕಡಿದು ದುಷ್ಕರ್ಮಿಗಳು ವಿಕೃತಿ ಮೆರೆದ ಘಟನೆ ಅಡ್ಯನಡ್ಕದಲ್ಲಿ ನಡೆದಿದೆ. ಅಡ್ಯನಡ್ಕ ಸಮೀಪದ ಕೆದುಮೂಲೆ ನಿವಾಸಿಯೋರ್ವರು ಸಾಕುತ್ತಿದ್ದ ದನದ ಕಾಲನ್ನು ಯಾರೋ ದುಷ್ಕರ್ಮಿಗಳು ಕ್ರೂರವಾಗಿ ಕತ್ತರಿಸುವ ಮೂಲಕ ರಾಕ್ಷಸೀ ಕೃತ್ಯವೆಸಗಿದ್ದಾರೆ ಎಂದು ತಿಳಿದುಬಂದಿದೆ.  

ದನದ ಕಾಲನ್ನು ಕತ್ತರಿಸಿ ರಾಕ್ಷಸೀಕೃತ್ಯ ಮರೆದ ದುಷ್ಕರ್ಮಿಗಳು..! ➤ ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಆಟೋರಿಕ್ಷಾ ಹಾಗೂ ಜೀಪ್ ನಡುವೆ ಅಪಘಾತ ➤ ಮೂವರು ಗಂಭೀರ..

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 29. ರಿಕ್ಷಾ ಹಾಗೂ ಜೀಪು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಕೆಯ್ಯೂರು ನೆಟ್ಟಾಲ ಎಂಬಲ್ಲಿ ನಡೆದಿದೆ. ಕೆಯ್ಯೂರು ನೆಟ್ಟಾಲ ಎಂಬಲ್ಲಿದ್ದ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ರಿಕ್ಷಾ ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಜೀಪಿನ ನಡುವೆ ಢಿಕ್ಕಿ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು: ಆಟೋರಿಕ್ಷಾ ಹಾಗೂ ಜೀಪ್ ನಡುವೆ ಅಪಘಾತ ➤ ಮೂವರು ಗಂಭೀರ.. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿ ಪ್ರಾಣಬಿಟ್ಟ ಯುವಕ…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 29. ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿದ ಯುವಕ ಮೃತಪಟ್ಟ ಘಟನೆ ಸೋಮೇಶ್ವರದಲ್ಲಿ ನಡೆದಿದೆ. ಮೃತ ಯುವಕನನ್ನು ಮುನ್ನೂರು ಗ್ರಾಮದ ಉಳಿಯ ನಿವಾಸಿ ಲಾಯ್ಡ್ ಡಿಸೋಜಾ ಎಂದು ಗುರುತಿಸಲಾಗಿದೆ. ಈತ ಆತ್ಮಹತ್ಯೆಗೆ ಯತ್ನಿಸಿದ ಕೋಟೆಕಾರು ನಿವಾಸಿ ಅಶ್ವಿತಾ ಫೆರಾವೊ ಎಂಬಾಕೆಯನ್ನು ರಕ್ಷಿಸಲು ಹೋಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿ ಪ್ರಾಣಬಿಟ್ಟ ಯುವಕ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜೀವನದಲ್ಲಿ ಬರುವ ಕಷ್ಟಗಳನ್ನು ನೀವೇ ಹೇಗೆ ಸರಿ ಮಾಡಿಕೊಳ್ಳುವುದು ಎಂದು ತಿಳಿಯಿರಿ..!!

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಜೀವನದಲ್ಲಿ ಬರುವ ಕಷ್ಟಗಳನ್ನು ನೀವು ಹೀಗೆ ಸರಿ ಮಾಡಿಕೊಳ್ಳಬೇಕು. ವಿಶೇಷವಾಗಿ ಮೊದಲು ಕ್ರೋಧವನ್ನು ಕಡಿಮೆ ಮಾಡಿಕೊಂಡು ತಾಳ್ಮೆಯಿಂದ ಕುಳಿತುಕೊಂಡು ನಿಧಾನಕ್ಕೆ ಯೋಚನೆ ಮಾಡಿದರೆ ಪರಿಹಾರ ನಿಮ್ಮ ಹತ್ತಿರ ಇರುತ್ತದೆ.ಯಾವುದೇ

ಜೀವನದಲ್ಲಿ ಬರುವ ಕಷ್ಟಗಳನ್ನು ನೀವೇ ಹೇಗೆ ಸರಿ ಮಾಡಿಕೊಳ್ಳುವುದು ಎಂದು ತಿಳಿಯಿರಿ..!! Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕಡಬ: ಕಳಾರ ಸಮೀಪ ಬೆಂಕಿ ಆಕಸ್ಮಿಕ ➤ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಕಡಬ, ಜ. 28. ಇಲ್ಲಿನ ಕಳಾರ ಸಮೀಪ ರಸ್ತೆ ಬದಿ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸಮತಟ್ಟು ಪ್ರದೇಶ ಉರಿದಿದ್ದು ಕಡಬ ಪೊಲೀಸರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಶುಕ್ರವಾರ ಮಧ್ಯಾಹ್ನದ ವೇಳೆ ಟ್ರಾನ್ಸ್ ಫಾರ್ಮರಿನಿಂದ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುತ್ತ ಮುತ್ತಲಿನ ಹುಲ್ಲು ತುಂಬಿದ ಪ್ರದೇಶಕ್ಕೆ ಬೆಂಕಿ ಹಬ್ಬಿತ್ತು. ಈ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದು ಕೂಡಲೇ ಸ್ಥಳಕ್ಕೆ ತೆರಳಿದ ಎಸ್.ಐ ರುಕ್ಮ ನಾಯ್ಕ್, ಎ.ಎಸ್.ಐ ಚಂದ್ರಶೇಖರ್, ಹೆಡ್ ಕಾನ್ಸ್ಟೇಬಲ್

ಕಡಬ: ಕಳಾರ ಸಮೀಪ ಬೆಂಕಿ ಆಕಸ್ಮಿಕ ➤ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಗುಚಿಬಿದ್ದ ಮೀನುಗಾರಿಕಾ ದೋಣಿ- 6 ಮಂದಿಯ ರಕ್ಷಣೆ ➤ 15 ಲಕ್ಷ ರೂ. ನಷ್ಟ…!

(ನ್ಯೂಸ್ ಕಡಬ) newskadaba.com ಉಡುಪಿ, ಜ. 28. ಮಿನುಗಾರಿಕೆಗೆ ತೆರಳಿದ್ದ ಶ್ರೀಮಹಾದೇವು 370 ಹೆಸರಿನ ದೋಣಿಯೊಂದು ಮಗುಚಿ ಬಿದ್ದ ಘಟನೆ ವರದಿಯಾಗಿದೆ.       ಮಲ್ಪೆ ಬಂದರಿನಿಂದ ಹೊರಟಿದ್ದ ದೋಣಿಯು ದಡದಿಂದ ಸ್ವಲ್ಪ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿಯ ಕೆಳಭಾಗಕ್ಕೆ ಏನೋ ಬಡಿದ ಪರಿಣಾಮ ಮಗುಚಿಬಿದ್ದಿದೆ. ತಕ್ಷಣವೇ ಸಮೀಪದಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ರಾಮದೂತ್ ಬೋಟಿನ ಮೀನುಗಾರರು ರಕ್ಷಣೆಗೆ ಮುಂದಾಗಿದ್ದು ಆರು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ದೋಣಿಯನ್ನು ದಡಕ್ಕೆ ಎಳೆಯಲು ಹರಸಾಹಸಪಟ್ಟರಾದರೂ ದೋಣಿಗೆ ನೀರು ನುಗ್ಗಿದ್ದರಿಂದ

ಮಗುಚಿಬಿದ್ದ ಮೀನುಗಾರಿಕಾ ದೋಣಿ- 6 ಮಂದಿಯ ರಕ್ಷಣೆ ➤ 15 ಲಕ್ಷ ರೂ. ನಷ್ಟ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕುಪ್ಪೆಪದವು, ಜ. 28. ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಆಡಳಿತಾಧಿಕಾರಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ವಾಮಂಜೂರು ತಿರುವೈಲು ತಾರಿಗುಡ್ಡೆ ನಿವಾಸಿ ನಾಗರಾಜ್ ರಾವ್ ಎಂದು ಗುರುತಿಸಲಾಗಿದೆ. ಇವರು ಬ್ಯಾಂಕ್ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಗುರುವಾರದಂದು ರಾತ್ರಿ ವೇಳೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದನ್ನು ಕಂಡು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಮಂಗಳೂರು

ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

Breaking News ➤ ಮಾಜಿ ಮುಖ್ಯಮಂತ್ರಿ ಬಿಎಸ್ವೈ ಮೊಮ್ಮಗಳು ಆತ್ಮಹತ್ಯೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 28. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.       ಆತ್ಮಹತ್ಯೆ ಮಾಡಿಕೊಂಡವರನ್ನು ಪದ್ಮಾವತಿ ಅವರ ಪುತ್ರಿ ಸೌಂದರ್ಯ ಎಂದು ಗುರುತಿಸಲಾಗಿದೆ. ಬಿಎಸ್ವೈ ಮಗಳು ಪದ್ಮಾವತಿ ಅವರ ಪುತ್ರಿ ಸೌಂದರ್ಯ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.          

Breaking News ➤ ಮಾಜಿ ಮುಖ್ಯಮಂತ್ರಿ ಬಿಎಸ್ವೈ ಮೊಮ್ಮಗಳು ಆತ್ಮಹತ್ಯೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಾಳೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು…!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 28. ತಾಳೆ ಮರದಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನರಿಕೊಂಬು ಗ್ರಾಮದ ಕೆದ್ದೇಲು ಎಂಬಲ್ಲಿ ನಡೆದಿದೆ.     ಮೃತರನ್ನು ಕೆದ್ದೇಲು ನಿವಾಸಿ ಪ್ರಕಾಶ್ ಎಂದು ಗುರುತಿಸಲಾಗಿದೆ. ಇವರು ಕಳೆದ ಇಪ್ಪತ್ತು ವರ್ಷಗಳಿಂದ ತಾಳೆ ಮರದಿಂದ ಶೇಂದಿ ತೆಗೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಇವರು ಗುರುವಾರದಂದು ತಾಳೆ ಮರಕ್ಕೆ ಹತ್ತಿದ್ದು ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದನ್ನು ಕಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದಾಗ ತಲೆಗೆ ಗಂಭೀರ ಗಾಯಗೊಂಡ ಪರಿಣಾಮ ಪ್ರಕಾಶ್ ಅವರು ಅದಾಗಲೇ ಮೃತಪಟ್ಡಿದ್ದಾರೆ

ತಾಳೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಸಭ್ಯ ವರ್ತನೆ ➤ ಆಟೋ ರಿಕ್ಷಾದಲ್ಲಿದ್ದ ವ್ಯಕ್ತಿಯನ್ನು ಹೊರೆಗೆಳೆದು ಹಿಗ್ಗಾಮುಗ್ಗ ಥಳಿಸಿದ ಮಹಿಳೆ..!

(ನ್ಯೂಸ್ ಕಡಬ) newskadaba.com ತುಮಕೂರು, ಜ. 28. ಆಟೋದಲ್ಲಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಮಹಿಳೆಯೋರ್ವಳು ಹಿಗ್ಗಾಮುಗ್ಗ ಥಳಿಸಿರುವ ಘಟನೆ ತುಮಕೂರಿನ ಕೋಡಿ ಬಸವೇಶ್ವರ ಸರ್ಕಲ್ ಬಳಿ ನಡೆದಿದೆ.   ಮಹಿಳೆಯು ತುಮಕೂರಿನಿಂದ ಶಿರಾಗೇಟ್​​​​​​ಗೆ ತೆರಳುತ್ತಿದ್ದ ವೇಳೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಮಹಿಳೆಯ ಮೈಗೆ ಕೈ ಹಾಕಿದ್ದು, ಇದರಿಂದ ಕೋಪಗೊಂಡ ಮಹಿಳೆ ಆತನನ್ನು ಹೊರ ಎಳೆದು ಸಾರ್ವಜನಿಕವಾಗಿ ಥಳಿಸಿದ್ದಾಳೆ. ಈ ವೇಳೆ ಸಾರ್ವಜನಿಕರು ಸೇರಿ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಲು ಮುಂದಾದಾಗ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.    

ಅಸಭ್ಯ ವರ್ತನೆ ➤ ಆಟೋ ರಿಕ್ಷಾದಲ್ಲಿದ್ದ ವ್ಯಕ್ತಿಯನ್ನು ಹೊರೆಗೆಳೆದು ಹಿಗ್ಗಾಮುಗ್ಗ ಥಳಿಸಿದ ಮಹಿಳೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top