ಕ್ರೈಮ್ ನ್ಯೂಸ್

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಉರುಳುಬಿದ್ದ ಕಾರು..! ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 12. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಜೂಮ್ ಸಂಸ್ಥೆಗೆ ಒಳಪಟ್ಟ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಅಗಲೀಕರಣದ ಹೊಂಡಕ್ಕೆ ಬಿದ್ದ ಘಟನೆ ಮಂಗಳೂರು ಬೆಂಗಳೂರು ರಾ.ಹೆ ಪೆರಿಯಶಾಂತಿ ಎಂಬಲ್ಲಿ ಬುಧವಾರದಂದು ಬೆಳಗ್ಗೆ ಸಂಭವಿಸಿದೆ. ಘಟನೆಯ ಸಂದರ್ಭ ಇಬ್ಬರು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.  

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಉರುಳುಬಿದ್ದ ಕಾರು..! ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚೆಕ್ ಬೌನ್ಸ್ ಪ್ರಕರಣ ➤ ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 12. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಗ್ರಾ.ಪಂ. ಅಧ್ಯಕ್ಷೆಗೆ ಅರೆಸ್ಟ್ ವಾರಂಟ್ ಜಾರಿಗೊಳಿಸಿದ ಬೆನ್ನಲ್ಲೇ ಕೊಣಾಜೆ ಗ್ರಾ.ಪಂ. ಅಧ್ಯಕ್ಷೆ ಚಂಚಲಾಕ್ಷಿ ತಲೆಮರೆಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಚಂಚಲಾಕ್ಷಿ ಅವರು ಮಮತಾ ಶೈನಿ ಡಿಸೋಜಾ ಎಂಬವರಿಗೆ ಮೂರು ಲಕ್ಷ ರೂ.ಗಳ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೊಪಿಯಾಗಿದ್ದು, ಇದೀಗ ತಲೆಮರೆಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ 2020ರ ಜ. 06ರಂದು ಕೇಸು ದಾಖಲಾಗಿದ್ದು, ಆ ಬಳಿಕ ಒಂಬತ್ತು ಬಾರಿ ವಾದ ವಿವಾದಗಳು ನಡೆದಿದ್ದು, ಇದೀಗ

ಚೆಕ್ ಬೌನ್ಸ್ ಪ್ರಕರಣ ➤ ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಆಸಿಡ್ ಸೇವಿಸಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 12. ಆಸಿಡ್ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಬಡಗನ್ನೂರು ಗ್ರಾಮದ ಸಂಪಿಗೆಮಜಲು ವ್ಯಕ್ತಿಯೋರ್ವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದ ಘಟನೆ ವರದಿಯಾಗಿದೆ. ಮೃತರನ್ನು ಬಡಗನ್ನೂರು ಗ್ರಾಮದ ಸಂಪಿಗೆಮಜಲು ನಿವಾಸಿ ವೆಂಕಪ್ಪ ಗೌಡ ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು ಜ.10ರಂದು ರಬ್ಬರ್ ಹಾಲಿಗೆ ಮಿಕ್ಸ್ ಮಾಡಲೆಂದು ತಂದಿರಿಸಿದ್ದ ಆಸಿಡ್ ಅನ್ನು ಸೇವಿಸಿದ್ದು, ಇದನ್ನು ಗಮನಿಸಿದ ಪತ್ನಿ ಹೇಮಲತಾ ಮತ್ತು ಮನೆ ಮಂದಿ ತಕ್ಷಣವೇ ವೆಂಕಪ್ಪ ಗೌಡರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ, ಬಳಿಕ

ಪುತ್ತೂರು: ಆಸಿಡ್ ಸೇವಿಸಿ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಖಾಸಗಿ ಬಸ್…! ➤ 22 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕೊಲ್ಲೂರು, ಜ. 12. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಉರುಳಿಬಿದ್ದು, 22 ಮಂದಿ ಗಾಯಗೊಂಡ ಘಟನೆ ಕೊಲ್ಲೂರುನಲ್ಲಿ ನಡೆದಿದೆ. 22 ಮಂದಿಯ ಪೈಕಿ ಸಂಕ್ರಪ್ಪ, ರೂಪಾ, ಶ್ಯಾಮಲಮ್ಮ, ರತ್ನಮ್ಮ, ವೆಂಕಟರಮಣ ಹಾಗೂ ಚಂದ್ರಕಲಾ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಖಾಸಗಿ ಬಸ್…! ➤ 22 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟಯರ್ ಬ್ಲಾಸ್ಟ್ ಆಗಿ ಅಡಿಕೆ ಸಾಗಾಟದ ಟೆಂಪೋ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಾಪು, ಜ. 12. ಅಡಿಕೆ ಸಾಗಾಟದ ಟೆಂಪೋ ವಾಹನವೊಂದು ರಾ.ಹೆ 66ರ ಫ್ಲೈ ಓವರ್ ನಲ್ಲಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಸಿದ್ದಾಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಟೆಂಪೋದ ಟಯರ್ ಬ್ಲಾಸ್ಟ್ ಆಗಿದ್ದು, ಪರಿಣಾಮ ನಿಯಂತ್ರಣ ತಪ್ಪಿದ ಟೆಂಪೋ ಮಗುಚಿಬಿದ್ದಿದೆ. ಘಟನೆಯಲ್ಲಿ ಚಾಲಕ ಹಾಗೂ ನಿರ್ವಾಹಕ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಘಟನೆಯಿಂದಾಗಿ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಟಯರ್ ಬ್ಲಾಸ್ಟ್ ಆಗಿ ಅಡಿಕೆ ಸಾಗಾಟದ ಟೆಂಪೋ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ವಾಸ್ತವ್ಯ ಪರವಾನಿಗೆ ಪಡೆದುಕೊಂಡು ವ್ಯಾಪಾರ ನಡೆಸುತ್ತಿರುವ ಆರೋಪ ➤ ವೆಲ್ ನೆಸ್ ಸೆಂಟರ್ ಗೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ದಿಢೀರ್ ಭೇಟಿ – ಪರಿಶೀಲನೆ

ಕಡಬ, ಜ.12. ಇಲ್ಲಿನ ಮುಖ್ಯ ರಸ್ತೆಯಲ್ಲಿರುವ ಜೆ.ಪಿ.ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ವೆಲ್ ನೆಸ್ ಸೆಂಟರ್ ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪಕೀರ ಮೂಲ್ಯ ಅವರು ವೆಲ್ ಸೆಂಟರ್ ಗೆ ಎಚ್ಚರಿಕೆ ನೀಡಿದ ಘಟನೆ ಮಂಗಳವಾರದಂದು ನಡೆದಿದೆ. ಜೆ.ಪಿ. ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ವಾಸ್ತವ್ಯ ಪರವಾನಿಗೆ ಪಡೆದುಕೊಂಡು ವ್ಯಾಪಾರ ನಡೆಸುತ್ತಿರುವ ಬಗ್ಗೆ ಪಟ್ಟಣ ಪಂಚಾಯತ್ ಗೆ ಮಾಹಿತಿ ಬಂದ ಮೇರೆಗೆ ಅಧಿಕಾರಿಗಳು ಭೇಟಿ ನೀಡಿದ್ದರು. ಈ ಸಂದರ್ಭ ವೆಲ್ ನೆಸ್

ಕಡಬ: ವಾಸ್ತವ್ಯ ಪರವಾನಿಗೆ ಪಡೆದುಕೊಂಡು ವ್ಯಾಪಾರ ನಡೆಸುತ್ತಿರುವ ಆರೋಪ ➤ ವೆಲ್ ನೆಸ್ ಸೆಂಟರ್ ಗೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ದಿಢೀರ್ ಭೇಟಿ – ಪರಿಶೀಲನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅಪ್ರಾಪ್ತ ಬಾಲಕಿಯ ತಬ್ಬಿಹಿಡಿದ ಭೂಪ ಬಾತ್ ರೂಂ ಕಿಟಕಿಗೂ ಕ್ಯಾಮೆರಾ ಇಟ್ಟ…! ➤ ಫೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 12. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಮಹಿಳೆಯೋರ್ವರು ನೀಡಿದ ದೂರಿನಂತೆ ಆರೋಪಿಯ ವಿರುದ್ದ ಫೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿ ಬೆಳ್ತಂಗಡಿ ತಾಲೂಕಿನ ಕಳಂಜಿಬೈಲ್ ನಿವಾಸಿ ನಾಸಿರ್ ಅಲಿಯಾಸ್ ಸುನಾಮಿ ನಾಸಿರ್ ಎಂದು ಗುರುತಿಸಲಾಗಿದೆ. ಈತ ಜ. 6ರಂದು ದೂರುದಾರ ಮಹಿಳೆಯ ಅಪ್ರಾಪ್ತ ಮಗಳು ಮನೆಯ ಹೊರಗಡೆ ನಿಂತಿದ್ದ ವೇಳೆ ಆರೋಪಿ ಆಕೆಯ ಬಳಿ ಬಂದು 500 ರೂ. ಹಾಗೂ ಮೊಬೈಲ್ ಕೈಗೆ ನೀಡಿ ಆಕೆಯನ್ನು

ಪುತ್ತೂರು: ಅಪ್ರಾಪ್ತ ಬಾಲಕಿಯ ತಬ್ಬಿಹಿಡಿದ ಭೂಪ ಬಾತ್ ರೂಂ ಕಿಟಕಿಗೂ ಕ್ಯಾಮೆರಾ ಇಟ್ಟ…! ➤ ಫೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಈ 8 ರಾಶಿಯವರಿಗೆ, ವಿವಾಹ ಯೋಗ, ವ್ಯಾಪಾರ ಅಭಿವೃದ್ಧಿ, ಮನೆಯಲ್ಲಿನ ಸಮಸ್ಯೆ ಗಂಡ-ಹೆಂಡತಿ ಕಲಹ ದೂರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ವೃಶ್ಚಿಕ: ಮನೆಯವರು ನಿಮ್ಮ ನೆರವಿಗೆ ನಿಲ್ಲಲಿದ್ದಾರೆ. ರಾಜಕೀಯ ವ್ಯಕ್ತಿಗಳೊಂದಿಗೆ ಒಡನಾಟ ಬೆಳೆಸಿಕೊಳ್ಳುವಿರಿ. ಅಧಿಕಾರಿ ವರ್ಗದವರಿಗೆ ರಾಜಕಾರಣಿಗಳ ಕಿರುಕುಳ ಹೆಚ್ಚಾಗುತ್ತದೆ. ದೈವಾನುಗ್ರಹ ಹಿಡಿದ ಕೆಲಸಗಳು ದಡ ಸೇರುವುದು. ನಿಮ್ಮ ಜೀವನದ

ಈ 8 ರಾಶಿಯವರಿಗೆ, ವಿವಾಹ ಯೋಗ, ವ್ಯಾಪಾರ ಅಭಿವೃದ್ಧಿ, ಮನೆಯಲ್ಲಿನ ಸಮಸ್ಯೆ ಗಂಡ-ಹೆಂಡತಿ ಕಲಹ ದೂರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕಛೇರಿಯ ಬಾಡಿಗೆ ಹಣ ನೀಡದೆ ವಂಚಿಸಿ ಕಟ್ಟಡ ಮಾಲಕರಿಗೆ ಬೆದರಿಕೆ ಒಡ್ಡಿದ ಆರೋಪ ➤ ಕಡಬದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜ.11. ಬಾಡಿಗೆಗೆ ನೀಡಿದ ಕೋಣೆಯನ್ನು ಖಾಲಿ ಮಾಡಿ ಬಳಿಕ ಕೋಣೆಯಲ್ಲಿದ್ದ ಎಲೆಕ್ಟ್ರಾನಿಕ್ ಸ್ವಿಚ್ ಬೋರ್ಡ್, ಹಾಗೂ ವಯರ್ ಮತ್ತು ಗೋಡೆಗಳಿಗೆ ಹಾನಿಯನ್ನುಂಟು ಮಾಡಿ ಕಟ್ಟಡ ಮಾಲಿಕರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ಕಡಬ ಠಾಣೆಯಲ್ಲಿ ವ್ಯಕ್ತಿಯ ವಿರುದ್ದ ಎಫ್.ಐ ಆರ್ ದಾಖಲಾಗಿದೆ. ಕಡಬ ಪೇಟೆಯ ಜೆ.ಪಿ ಕಾಂಪ್ಲೇಕ್ಸ್ ಮಾಲಕ ವಿದ್ಯುತ್ ಗುತ್ತಿದಾರರಾಗಿರುವ ಜೋಸ್ ಪ್ರಕಾಶ್ ಎಂಬವರು ದೂರು ನೀಡಿದ್ದು, ತಮ್ಮ ಕಟ್ಟಡದಲ್ಲಿ ಬಾಡಿಗೆ ಕೋಣೆ ಪಡೆದಿದ್ದ ಅನೀಶ್ ಎಂಬವರ ವಿರುದ್ದ ಕೇಸು

ಕಛೇರಿಯ ಬಾಡಿಗೆ ಹಣ ನೀಡದೆ ವಂಚಿಸಿ ಕಟ್ಟಡ ಮಾಲಕರಿಗೆ ಬೆದರಿಕೆ ಒಡ್ಡಿದ ಆರೋಪ ➤ ಕಡಬದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸೀಫುಡ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸೋರಿಕೆ ➤ 20 ಮಂದಿ ಅಸ್ವಸ್ಥ- ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 11. ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ಕೆಮಿಕಲ್ ಸೋರಿಕೆಯಾಗಿ ಇಪ್ಪತ್ತು ಮಂದಿ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಒಟ್ಟು 80 ಜನ ಕಾರ್ಮಿಕರ ಪೈಕಿ 20 ಜನರು ಅಸ್ವಸ್ಥಗೊಂಡಿದ್ದು ಇವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಣಂಬೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ.    

ಮಂಗಳೂರು: ಸೀಫುಡ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸೋರಿಕೆ ➤ 20 ಮಂದಿ ಅಸ್ವಸ್ಥ- ಆಸ್ಪತ್ರೆಗೆ ದಾಖಲು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top