ಕ್ರೈಮ್ ನ್ಯೂಸ್

ಮನೆಯಲ್ಲಿ ಸುಖ ಶಾಂತಿ, ನೆಮ್ಮದಿ ಇಲ್ಲದಿರುವುದು ಹಾಗು ಕೌಟಂಬಿಕ ಕಲಹಗಳು ಆಗುತ್ತಿದ್ದರೆ ಈ ಒಂದು ನಿಯಮ ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮನೆಯಲ್ಲಿ ಸುಖ ಶಾಂತಿ, ನೆಮ್ಮದಿ ಇಲ್ಲದಿರುವುದು ಹಾಗು ಕೌಟಂಬಿಕ ಕಲಹಗಳು ಆಗುತ್ತಿದ್ದರೆ, ನೀವು ಈ ಮಂತ್ರವನ್ನು ಒಮ್ಮೆ ಜಪಿಸಿ ನಿಮ್ಮ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಅಷ್ಟಕ್ಕೂ ಯಾವ ಮಂತ್ರವನ್ನು […]

ಮನೆಯಲ್ಲಿ ಸುಖ ಶಾಂತಿ, ನೆಮ್ಮದಿ ಇಲ್ಲದಿರುವುದು ಹಾಗು ಕೌಟಂಬಿಕ ಕಲಹಗಳು ಆಗುತ್ತಿದ್ದರೆ ಈ ಒಂದು ನಿಯಮ ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಟೈರ್ ಪಂಕ್ಚರ್ ಆಗಿ ಮೀನು ಸಾಗಾಟದ ಲಾರಿ ಪಲ್ಟಿ ➤ ಚಾಲಕ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 11. ಮೀನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಪಡುಬಿದ್ರಿ ರಾ.ಹೆ. 66ರಲ್ಲಿ ನಡೆದಿದೆ. ಉಡುಪಿಯ ಮಲ್ಪೆ ಬಂದರಿ‌ನಿಂದ ಮಂಗಳೂರಿಗೆ ಮೀನು ತುಂಬಿಕೊಂಡು ಬರುತ್ತಿದ್ದ ವೇಳೆ ಪಡುಬಿದ್ರೆ ಸಮೀಪ ಟೈರ್ ಪಂಚರ್ ಆಗಿ ಲಾರಿ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಕುರಿತು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.        

ಟೈರ್ ಪಂಕ್ಚರ್ ಆಗಿ ಮೀನು ಸಾಗಾಟದ ಲಾರಿ ಪಲ್ಟಿ ➤ ಚಾಲಕ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಧಿಯ ಆಸೆಗೆ ಶ್ರೀಕೃಷ್ಣನ ದೇಗುಲ ದ್ವಂಸಗೈದ ಕಿಡಿಗೇಡಿಗಳು..!

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 11. ನಿಧಿಯ ಆಸೆಗೆ ಬಿದ್ದು ಶ್ರೀ ಕೃಷ್ಣನ ಪುಟ್ಟ ದೇಗುಲವೊಂದನ್ನು ದ್ವಂಸಗೈದಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಯಾಟಗಲ್ ಗ್ರಾಮದಲ್ಲಿ ನಡೆದಿದೆ. ಯಾಟಗಲ್ ಗ್ರಾಮದ ಸರಕಾರಿ ಶಾಲೆಯೊಂದರ ಪಕ್ಕದಲ್ಲಿರುವ ಶ್ರೀ ಕೃಷ್ಣನ ದೇಗುಲದ ವಿಗ್ರಹದ ಕೆಳಗೆ ನಿಧಿ ಇರುವುದಾಗಿ ಪ್ರತೀತಿ ಇದ್ದು, ಈ ಕಾರಣದಿಂದ ಯಾರೋ ಕಿಡಿಗೇಡಿಗಳು ಶುಕ್ರವಾರದಂದು ತಡರಾತ್ರಿ ಗುಂಡಿ ತೋಡಿ ಪೂಜಾ ಸ್ಥಳವನ್ನು ಹಾನಿಮಾಡಿದ್ದಾರೆ. ಬೆಳಗ್ಗೆ ಪೂಜೆಗೆಂದು ಬಂದ ಗ್ರಾಮಸ್ಥರಿಗೆ ಘಟನೆ ಬೆಳಕಿಗೆ ಬಂದಿದ್ದು, ದೇವದುರ್ಗ ಠಾಣೆಯಲ್ಲಿ

ನಿಧಿಯ ಆಸೆಗೆ ಶ್ರೀಕೃಷ್ಣನ ದೇಗುಲ ದ್ವಂಸಗೈದ ಕಿಡಿಗೇಡಿಗಳು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮೊಬೈಲ್ ಹಾಗೂ ಪರ್ಸ್ ದೋಚಿ ಕಳ್ಳ ಪರಾರಿ..!

(ನ್ಯೂಸ್ ಕಡಬ) newskadabac.com ಮಂಗಳ, ಡಿ. 11. ಕಳ್ಳನೋರ್ವ ವ್ಯಕ್ತಿಯಲ್ಲಿದ್ದ ಪರ್ಸ್ ಹಾಗೂ ಮೊಬೈಲ್ ಅನ್ನಜ ಎಗರಿಸಿ ಪರಾರಿಯಾದ ಘಟನೆ ನಗರದ ಲಾಲ್ ಬಾಗ್ ವೃತ್ತದ ಬಳಿ ಶನಿವಾರದಂದು ಮಧ್ಯಾಹ್ನ ನಡೆದಿದೆ. ಕಳ್ಳನನ್ನು ಸಾರ್ವಜನಿಕರು ಬಿಗ್ ಬಝಾರ್ ಕಡೆಯಿಂದ ಲಾಲ್ ಬಾಗ್ ವೃತ್ತದವರೆಗೆ ಬೆನ್ನಟ್ಟಿದರೂ ಹಿಡಿಯಲು ಸಾಧ್ಯವಾಗಿಲ್ಲ. ಬಿಳಿ ಶರ್ಟ್ ಧರಿಸಿದ್ದ ಈತನ ವಯಸ್ಸು ಸುಮಾರು 25ರಿಂದ 30 ಇರಬಹುದು, ಈತನ ಚಹರೆ ಲಾಲ್ ಬಾಗ್ ವೃತ್ತದ ಬಳಿಯಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರಬಹುದು ಎಂದು ಹೇಳಲಾಗಿದೆ. ಹೆಚ್ಚಿನ

ಮಂಗಳೂರು: ಮೊಬೈಲ್ ಹಾಗೂ ಪರ್ಸ್ ದೋಚಿ ಕಳ್ಳ ಪರಾರಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ ಚಾಲಕ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ. 11.ಆಟೋ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಮುಂಡಂಗಲ್ ಎಂಬಲ್ಲಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸುಧಾಕರ್ ಕೋಟ್ಯಾನ್ ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.  

ಆಟೋ ಚಾಲಕ ನೇಣುಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿಗೆ ಜೀಪ್ ಢಿಕ್ಕಿ- ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 11. ಕಾರು ಹಾಗೂ ಜೀಪ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಉಪ್ಪಿನಂಗಡಿ ಸಮೀಪದ ಗಾಂಧಿ ಪಾರ್ಕ್ ಬಳಿ ನಡೆದಿದೆ. ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ರಿಟ್ಝ್ ಕಾರಿಗೆ ಜೀಪೊಂದು ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು, ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ ಎನ್ನಲಾಗಿದೆ. ಘಟನೆಯಿಂದ ಕಾರಿನ ಹಿಂಭಾಗ ಸ್ವಲ್ಪ ನಜ್ಜು ಗುಜ್ಜಾಗಿದ್ದು, ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಕಾರಿಗೆ ಜೀಪ್ ಢಿಕ್ಕಿ- ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮತಾಂತರಕ್ಕೆ ಯತ್ನಿಸಿ ನಾಲ್ವರ ಸಾವಿಗೆ ಕಾರಣಳಾದ ಮಹಿಳೆ ಅಂದರ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 11. ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣದಲ್ಲಿ ನೂರ್ ಜಹಾನ್ ಎಂಬ ಮಹಿಳೆಯು ಮತಾಂತರಕ್ಕೆ ಯತ್ನಿಸಿದ ಘಟನೆ ದೃಢವಾಗಿದ್ದು, ಆಕೆಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಶನಿವಾರದಂದು ತಿಳಿಸಿದ್ದಾರೆ. ಪತಿ ನಾಗೇಶ್ ಗೆ ಡೈವೋರ್ಸ್ ಕೊಡು, ನಾನು ನಿನಗೆ ಮುಸ್ಲಿಂ ಹುಡುಗನ ಜೊತೆ ಮದುವೆ ಮಾಡುತ್ತೇನೆ ಎಂದು ನೂರ್ ಜಹಾನ್ ಹೇಳಿದ್ದಳು. ಇದಕ್ಕೆ ಸಂಬಂಧಿಸಿ ನೂರ್ ಜಹಾನ್ ಳನ್ನು ಬಂಧಿಸಲಾಗಿದೆ. ನೂರ್ ಜಹಾನ್ ಮುಸ್ಲಿಮರ ಮದುವೆ

ಮಂಗಳೂರು: ಮತಾಂತರಕ್ಕೆ ಯತ್ನಿಸಿ ನಾಲ್ವರ ಸಾವಿಗೆ ಕಾರಣಳಾದ ಮಹಿಳೆ ಅಂದರ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ತಿಗಾಗಿ ಮಗನನ್ನೇ ಬಲಿಪಡೆದ ತಂದೆ..!

(ನ್ಯೂಸ್ ಕಡಬ) newskadaba.com ಸರಗೂರು, ಡಿ. 11. ಆಸ್ತಿ ವಿಚಾರದ ವೈಷಮ್ಯಕ್ಕೆ ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಹಾದನೂರು ಗ್ರಾಮದಲ್ಲಿ ನಡೆದಿದೆ.   ಹತ್ಯೆಗೀಡಾಗಿರುವ ಯುವಕನನ್ನು ಸರಗೂರು ತಾಲ್ಲೂಕಿನ ಹಾಸನೂರು ಗ್ರಾಮದ ಸ್ವಾಮಿ(30) ಎಂದು ಗುರುತಿಸಲಾಗಿದೆ. ತಂದೆ ಸಿದ್ದರಾಜು ತನ್ನ ಸ್ವಂತ ಮಗನನ್ನೇ ಕೊಂದ ಆರೋಪಿಯಾಗಿದ್ದಾನೆ. ರಾತ್ರಿ ವೇಳೆ ಮನೆಯಲ್ಲಿ ಸ್ವಾಮಿ ನಿದ್ರಿಸುತ್ತಿದ್ದ ವೇಳೆ ತಂದೆ ಸಿದ್ದರಾಜು ಕಂಠಪೂರ್ತಿ ಕುಡಿದು ಬಂದು ಮರದ ತುಂಡಿನಿಂದ ತನ್ನ ಮಗನ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ನಡೆಸಿದ್ದಾನೆ ಎಂದು

ಆಸ್ತಿಗಾಗಿ ಮಗನನ್ನೇ ಬಲಿಪಡೆದ ತಂದೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಟೊ ರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ ➤ ನಾಲ್ವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 11. ನಗರದ ಹೊರವಲಯದ ಅಡ್ಯಾರ್ ಪದವಿನಲ್ಲಿ ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್, ಹಲ್ಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಮಹಿಳೆಯ ಚಪ್ಪಲಿ ಪತ್ತೆಯಾಗಿತ್ತು. ಹಲ್ಲೆಗೊಳಗಾದ ವ್ಯಕ್ತಿಯ ಹಿನ್ನೆಲೆ ಪರಿಶೀಲನೆ ನಡೆಸುತ್ತಿದ್ದೇವೆ, ಆದರೆ ಗಾಯಾಳು ಇದುವರೆಗೆಊ ಯಾವುದೇ ಹೇಳಿಕೆ ನೀಡಿಲ್ಲ ಎಂದು ತಿಳಿಸಿದರು.  

ಅಟೊ ರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ ➤ ನಾಲ್ವರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 11. ಆಕ್ಟಿವಾ ಹಾಗೂ ಲಾರಿ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಉಜಿರೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ಕಲ್ಮಂಜ ನಿವಾಸಿ ರಾಜೇಶ್ ಎಂದು ಗುರುತಿಸಲಾಗಿದೆ. ಇವರು ತಮ್ಮ ದ್ವಿಚಕ್ರ ವಾಹನದಲ್ಲಿ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಬಳಿ ಪರಸ್ಪರ ಢಿಕ್ಕಿ ಸಂಭವಿಸಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರನ ಕಾಲಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಸ್ಥಳೀಯರ

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top