ಕ್ರೈಮ್ ನ್ಯೂಸ್

ವಿಟ್ಲ: ಕೇರಳ ನೋಂದಣಿಯ ಕಾರಿನಲ್ಲಿ ಅನುಮಾನಾಸ್ಪದ ತಿರುಗಾಟ ➤ ಮೂವರು ವಶಕ್ಕೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 03. ಕೇರಳ ಮೂಲದ ಕಾರಿನಲ್ಲಿ ಬಂದು ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಸೆರ್ಕಳ ಕಲ್ಲಮಜಲು ಎಂಬಲ್ಲಿ ನಡೆದಿದೆ. ಬುಧವಾರದಂದು ರಾತ್ರಿ 12 ಗಂಟೆಯ ವೇಳೆಗೆ ಕೇರಳ ನೋಂದಣಿಯ ಮಾರುತಿ ರಿಟ್ಝ್ ಕಾರಿನಲ್ಲಿ ಬಂದ ಮೂವರು ಮನೆಯೊಂದರ ಬಳಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದುದನ್ನು ಕಂಡು, ಸ್ಥಳೀಯರು ವಿಚಾರಿಸಿದಾಗ ಕೇರಳದ ವಡಗರ ಎಂದು ಅಸ್ಪಷ್ಟ ಮಾಹಿತಿ ನೀಡಿದ ಕಾರಣ ಪೊಲೀಸರಿಗೆ ದೂರು ನೀಡಿದ್ದಾರೆ‌. […]

ವಿಟ್ಲ: ಕೇರಳ ನೋಂದಣಿಯ ಕಾರಿನಲ್ಲಿ ಅನುಮಾನಾಸ್ಪದ ತಿರುಗಾಟ ➤ ಮೂವರು ವಶಕ್ಕೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಟೋ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹಾರ್ಟ್ ಅಟ್ಯಾಕ್..! ➤ ಚಾಲಕ ಮೃತ್ಯು- ನೇತ್ರಾವತಿ ಸೇತುವೆ ಮಧ್ಯೆ ನಡೆದ ಘಟನೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 03. ಮಂಗಳೂರು ನಗರ ಭಾಗದಿಂದ ಕಲ್ಲಾಪಿನಲ್ಲಿರುವ ಗ್ಲೋಬಲ್ ಮಾರ್ಕೆಟ್ ಗೆ ತೆರಳುತ್ತಿದ್ದ ಆಟೋ ರಿಕ್ಷಾ ಚಾಲಕನೋರ್ವ, ಆಟೋ ಚಲಾಯಿಸುತ್ತಿರುವಾಗಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತರನ್ನು ಮೊಹಮ್ಮದ್ ಹನೀಫ್ ಎಂದು ಗುರುತಿಸಲಾಗಿದೆ. ಇವರು ಮಂಗಳೂರು ನಗರದಿಂದ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ಖರೀದಿಸಲೆಂದು ಇಂದು ಮುಂಜಾನೆ ಓರ್ವ ವ್ಯಾಪಾರಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ. ಮಂಗಳೂರಿನಿಂದ ಜಪ್ಪಿನ ಮೊಗರು ಹೆದ್ದಾರಿಯಲ್ಲೇ ಚಾಲಕನಿಗೆ ಕಣ್ಣು ಮಂಜಾಗಿದ್ದು,

ಆಟೋ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹಾರ್ಟ್ ಅಟ್ಯಾಕ್..! ➤ ಚಾಲಕ ಮೃತ್ಯು- ನೇತ್ರಾವತಿ ಸೇತುವೆ ಮಧ್ಯೆ ನಡೆದ ಘಟನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಮತ್ತೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ➤ ಜಗಳ ಬಿಡಿಸಲು ಬಂದ ಪೊಲೀಸರ ಮೇಲೂ ಹಲ್ಲೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03. ಕರಾವಳಿಯಲ್ಲಿ ಮತ್ತೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ಮುಂದುವರಿದಿದ್ದು, ಜಗಳ ಬಿಡಿಸಲು ಹೋದ ಐವರು ಪೊಲೀಸರಿಗೂ ಕಲ್ಲು ಹಾಗೂ ಇಂಟರ್ ಲಾಕ್ ಎಸೆದ ಘಟನೆ ನಡೆದಿದೆ. ಯೇನಪೋಯ ಮೆಡಿಕಲ್ ಕಾಲೇಜಿನಲ್ಲಿ ಬಿಎಸ್ಸಿ ಹಾಸ್ಪಿಟಾಲಿಟಿ ಓದುತ್ತಿರುವ ಕೇರಳ ಮೂಲದ ಆದರ್ಶ ಪ್ರೇಮಕುಮಾರ್ ಎಂಬಾತ ಬಾವುಟ ಗುಡ್ಡೆಯಲ್ಲಿರುವ ಲೈಟ್ ಹೌಸ್ ಹಿಲ್ ಅಪಾರ್ಟ್ಮೆಂಟ್ ಬಳಿ ಸ್ನೇಹಿತ ಸಿನಾನ್ ಎಂಬಾತನ ಜೊತೆ ಮಾತನಾಡುತ್ತಿದ್ದ ವೇಳೆ ಬಂದ ಎಂಟು ಜನರ ತಂಡವು ಆದರ್ಶ್ ಮೇಲೆ ಹಲ್ಲೆ

ಕರಾವಳಿಯಲ್ಲಿ ಮತ್ತೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ➤ ಜಗಳ ಬಿಡಿಸಲು ಬಂದ ಪೊಲೀಸರ ಮೇಲೂ ಹಲ್ಲೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್- ಅಟೋ‌ರಿಕ್ಷಾ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 03. ಬೈಕ್ ಮತ್ತು ಅಟೋರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಪುತ್ತೂರು- ಉಪ್ಪಿನಂಗಡಿ ರಸ್ತೆಯ ಚತುಷ್ಪತ ರಸ್ತೆ ಕೇಪುಳು ಎಂಬಲ್ಲಿ ನಡೆದಿದೆ.   ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಅಟೋ ರಿಕ್ಷಾ ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿಯ ರಭಸಕ್ಕೆ ಅಟೋ ರಿಕ್ಷಾ ಪಲ್ಟಿಯಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್- ಅಟೋ‌ರಿಕ್ಷಾ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯಲ್ಲಿ ಶುಭ ಕಾರ್ಯ ನಡೆಯುತ್ತಿಲ್ಲವೆ ? ನಿಮ್ಮ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಬಹಳಷ್ಟು ಜನರು ತಮ್ಮ ಮನೆಯಲ್ಲಿ ಶುಭ ಕಾರ್ಯಕ್ರಮವನ್ನು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ತಲೆಕೆಡಿಸಿಕೊಂಡಿದ್ದಾರೆ. ಎಷ್ಟೇ ಪ್ರಯತ್ನಪಟ್ಟರೂ ಮಕ್ಕಳ ಮದುವೆಯಾಗದೇ ಇರುವುದು, ತಂದೆ-ತಾಯಿ ಗಂಡು ಮಕ್ಕಳ ಹಾಗೂ ಹೆಣ್ಣು ಮಕ್ಕಳ

ಮನೆಯಲ್ಲಿ ಶುಭ ಕಾರ್ಯ ನಡೆಯುತ್ತಿಲ್ಲವೆ ? ನಿಮ್ಮ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕಡಬ: ಪ್ರವಾಸಿ ಬಂಗಲೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಕಡಬ, ಡಿ. 02. ಇಲ್ಲಿನ ಪಾಳು ಬಿದ್ದ ಪ್ರವಾಸಿ ಬಂಗಲೆಯೊಂದರಲ್ಲಿ ವ್ಯಕ್ತಿಯೋರ್ವನ ಮೃತದೇಹ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಳಿಪ್ಪು ನಿವಾಸಿ ಮೋನೆಚ್ಚನ್ ಎಂದು ಗುರುತಿಸಲಾಗಿದೆ. ಮೃತದೇಹವು ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.  

ಕಡಬ: ಪ್ರವಾಸಿ ಬಂಗಲೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 02. ಕಳೆದ ಮೂರು ದಿನಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದ ಕನ್ನಡ ಚಿತ್ರ ರಂಗದ ಹಿರಿಯ ನಟ ಶಿವರಾಮ್ ಅವರು ಮನೆಯಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಬಿದ್ದ ಕಾರಣ ತಲೆಗೆ ಪೆಟ್ಟಾಗಿದ್ದು, ಸದ್ಯದ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಇವರಿಗೆ ಹೊಸಕೆರೆ ಹಳ್ಳಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. 3 ದಿನಗಳ ಹಿಂದೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತವಾಗಿದ್ದು, ಚಿಕಿತ್ಸೆ ಪಡೆದು

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಸ್ಥಿತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ➤ ಪೊಲಿಸರನ್ನು ಕಂಡು ಚದುರಿದ ಗುಂಪು..!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 02. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ಗುರುವಾರದಂದು ನಡೆದಿದೆ. ಈ ಸಂದರ್ಭ ಅಲ್ಲಿಗೆ ಆಗಮಿಸಿದ ಪೊಲೀಸರನ್ನು ಕಂಡು ಅಲ್ಲಿ ನೆರೆದಿದ್ದ ಗುಂಪು ಚದುರಿರುವ ಕುರಿತು ತಿಳಿದು ಬಂದಿದೆ.

ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ➤ ಪೊಲಿಸರನ್ನು ಕಂಡು ಚದುರಿದ ಗುಂಪು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಾಲೆಗೆ ತೆರಳುತ್ತಿದ್ದ ಬಾಲಕಿಯ ಕೈ ಹಿಡಿದೆಳೆದು ಕಿರುಕುಳಕ್ಕೆ ಯತ್ನ ಪ್ರಕರಣ ➤ ಆರೋಪಿ ಅಂದರ್- ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 02. ತಲಪಾಡಿಯಲ್ಲಿ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯ ಕೈಹಿಡಿದೆಳೆದು ಕಿರುಕುಳ ನೀಡಿದ್ದ ವಿಕೃತ ಕಾಮಿಯನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತ ಆರೋಪಿಯನ್ನು ಕೆ.ಸಿ.ರೋಡ್ ಮುಳ್ಳುಗುಡ್ಡೆ ನಿವಾಸಿ ರಾಶಿಕ್ (22) ಎಂದು ಗುರುತಿಸಲಾಗಿದೆ. ಬುಧವಾರದಂದು ಬೆಳಗ್ಗೆ ತಲಪಾಡಿಯಿಂದ 14 ವರ್ಷದ ಬಾಲಕಿಯೋರ್ವಳು ಒಳರಸ್ತೆಯಾಗಿ ಕಾಲ್ನಡಿಗೆಯ ಮೂಲಕ ಶಾಲೆಗೆ ತೆರಳುತ್ತಿದ್ದ ವೇಳೆ ಸ್ಕೂಟರಿನಲ್ಲಿ ಬಂದ ಅಪರಿಚಿತನೋರ್ವ ಬಾಲಕಿಯ ಕೈ ಎಳೆದು ಅತ್ಯಾಚಾರಕ್ಕೆ ಯತ್ನಿಸಿರುವುದಾಗಿ ಬಾಲಕಿಯ ಹೆತ್ತವರು ಉಳ್ಳಾಲ ಪೊಲೀಸರಿಗೆ ದೂರು

ಶಾಲೆಗೆ ತೆರಳುತ್ತಿದ್ದ ಬಾಲಕಿಯ ಕೈ ಹಿಡಿದೆಳೆದು ಕಿರುಕುಳಕ್ಕೆ ಯತ್ನ ಪ್ರಕರಣ ➤ ಆರೋಪಿ ಅಂದರ್- ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸವಣೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪಕ್ಕದ ಮನೆಯ ಟ್ಯಾಂಕ್ ನಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 02. ಪಕ್ಕದ ಮನೆಯ ನೀರಿನ ಟ್ಯಾಂಕ್ ಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸವಣೂರಿನಲ್ಲಿ ನಡೆದಿದೆ.   ಮೃತಪಟ್ಟವರನ್ನು ಸವಣೂರು ಗ್ರಾಮದ ಮಾಂತೂರು ಒಡ್ಸಾಗ್ ನಿವಾಸಿ ರಾಮಯ್ಯ ಪೂಜಾರಿ (48) ಎಂದು ಗುರುತಿಸಲಾಗಿದೆ. ಇವರು ಕಳೆದೆರಡು ದಿನಗಳ ಹಿಂದೆ ಸವಣೂರು ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಹಿಂತಿರುಗಿ ಬಾರದೇ ಇದ್ದು, ಮನೆಯವರು ಎಲ್ಲೆಡೆ ಹುಡುಕಾಟ ನಡೆಸುತ್ತಿದ್ದಾಗ ಬುಧವಾರದಂದು ಪಕ್ಕದ ಮನೆಯ ನೀರಿನ ಟ್ಯಾಂಕ್ ನಲ್ಲಿ ಮೃತದೇಹ ಪತ್ತೆಯಾಗಿದೆ.

ಸವಣೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪಕ್ಕದ ಮನೆಯ ಟ್ಯಾಂಕ್ ನಲ್ಲಿ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top