ಕ್ರೈಮ್ ನ್ಯೂಸ್

ಕೆಲಸದ ಒತ್ತಡದಿಂದ ಖಿನ್ನತೆಗೊಳಗಾಗಿ‌ದ್ದ ಶಿಕ್ಷಕಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಣಿಪಾಲ, ನ. 23. ಕೆಲಸದ ಒತ್ತಡದಿಂದ ಬೇಸತ್ತಿದ್ದ ಶಿಕ್ಷಕಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಅಮೃತಾ ಎಂದು ಗುರುತಿಸಲಾಗಿದೆ. ಇವರು ಕಳೆದ 8 ವರ್ಷಗಳಿಂದ ವಿದ್ಯೋದಯ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೆಲಸದ ಒತ್ತಡದಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲಸದ ಒತ್ತಡದಿಂದ ಖಿನ್ನತೆಗೊಳಗಾಗಿ‌ದ್ದ ಶಿಕ್ಷಕಿ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ನ. 22. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಸಂದೀಪ್ ನಾಯ್ಕ ಹಾಗೂ ವಿಘ್ನೇಶ್ ನಾಯ್ಕ ಎಂದು ಗುರುತಿಸಲಾಗಿದೆ. ಸಂತ್ರಸ್ತ ಬಾಲಕಿಯ ತಂದೆ ಹಾಗೂ ತಾಯಿ ಕೆಲಸಕ್ಕೆ ಹೋದ ಸಂದರ್ಭ ಆರೋಪಿಗಳು ಬಾಲಕಿಯ ಮನೆಗೆ ಬಂದು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನಲಾಗಿದೆ. ಬಾಲಕಿಗೆ ಅಪ್ಪ, ಅಮ್ಮನನ್ನು ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಬಾಲಕಿಗೆ ದೌರ್ಜನ್ಯ ನಡೆಸಿರುವುದಾಗಿ ಬಾಲಕಿಯ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಬ್ಬರು ಮಕ್ಕಳ ಮುಂದೆಯೇ ತಂದೆಯ ಭೀಕರ ಕೊಲೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 22. ಇಬ್ಬರು ಹೆಣ್ಣುಮಕ್ಕಳ ಮುಂದೆಯೇ ತಂದೆಯನ್ನು ಭೀಕರ ಹತ್ಯೆಗೈದಿರುವ ಬೀಭತ್ಸ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ವೀರ್ ಸಾಗರ್ ರಸ್ತೆಯಲ್ಲಿ ನಡೆದಿದೆ. ಹತ್ಯೆಗೊಳಗಾದವರನ್ನು ಬಿಹಾರ್ ಮೂಲದ ದೀಪಕ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ. ಜಿಕೆವಿಕೆ ನಲ್ಲಿ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದ ಇವರು ಯಲಹಂಕದ ನ್ಯೂಟೌನ್ ಬಳಿ ಬಾಡಿಗೆ ಮನೆಯಲ್ಲಿ ಪತ್ನಿ, ಇಬ್ಬರು ಪುತ್ರಿಯರೊಂದಿಗೆ ವಾಸವಾಗಿದ್ದು, ಪತ್ನಿ ಇತ್ತೀಚೆಗೆ ಬಿಹಾರದ ತವರು ಮನೆಗೆ ತೆರಳಿದ್ದರು ಎನ್ನಲಾಗಿದೆ. ಭಾನುವಾರ

ಇಬ್ಬರು ಮಕ್ಕಳ ಮುಂದೆಯೇ ತಂದೆಯ ಭೀಕರ ಕೊಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಾಗದ ತಕರಾರು ➤ ಮಹಿಳೆಗೆ ನಾಡಕೋವಿಯಿಂದ ಗುಂಡು ಹಾರಿಸಿದ ಮೈದುನ..!

(ನ್ಯೂಸ್ ಕಡಬ) newskadaba.com ಪುತ್ತೂರು, ನ. 22. ಜಮೀನು ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆದು ಮಹಿಳೆಯೋರ್ವರಿಗೆ ನಾಡಕೋವಿಯಿಂದ ಶೂಟ್ ಮಾಡಿದ ಪ್ರಕರಣ ತಾಲೂಕಿನ ನರಿಮೊಗರು ಗ್ರಾಮದ ವೀರಮಂಗಲ ಎಂಬಲ್ಲಿ ಭಾನುವಾರದಂದು ನಡೆದಿದೆ. ಆರೋಪಿ ದೇವಪ್ಪ ಎಂಬಾತ ತನ್ನ ಅತ್ತಿಗೆ ಧರ್ಣಮ್ಮ ಎಂಬವರಿಗೆ ನಾಡಕೋವಿಯಿಂದ ಶೂಟ್ ಮಾಡಿದ್ದು, ಗುಂಡು ಗುರಿ ತಪ್ಪಿದ ಕಾರಣ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಜಾಗದ ತಕರಾರು ➤ ಮಹಿಳೆಗೆ ನಾಡಕೋವಿಯಿಂದ ಗುಂಡು ಹಾರಿಸಿದ ಮೈದುನ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಂಬಳ ಕೇಳಿದ್ದಕ್ಕೆ ದಲಿತ ಕಾರ್ಮಿಕನ ಕೈಕಡಿದ ಭೂಪ..!

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ನ. 22. ಸಂಬಳ ಕೇಳಿದ್ದಕ್ಕೆ ದಲಿತ ಕಾರ್ಮಿಕನೋರ್ವನ ಕೈಕಡಿದು ಹೊಲಕ್ಕೆಸೆದಿರುವ ಮನಕಲುಕುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಡೌಲ್ಮ್ ಗ್ರಾಮದಲ್ಲಿ ನಡೆದಿದೆ. ಸಂತ್ರಸ್ತ ಕಾರ್ಮಿಕನನ್ನು ಅಶೋಕ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ ಆರೋಪಿ ಗಣೇಶ್ ಮಿಶ್ರಾ ಎಂಬಾತನ ಮೆಲೆ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಸೆಕ್ಸನ್ ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಸಂತ್ರಸ್ತ ಅಶೋಕ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಈತ ತನ್ನ ಸಂಬಳದ

ಸಂಬಳ ಕೇಳಿದ್ದಕ್ಕೆ ದಲಿತ ಕಾರ್ಮಿಕನ ಕೈಕಡಿದ ಭೂಪ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಳ್ಳತನಗೈಯ್ಯಲು ಡಯೆಟ್ ಮಾಡಿ ತೂಕ ಇಳಿಸಿದ ಖತರ್ನಾಕ್ ಕಳ್ಳ..! ➤ ಉಂಡ ಮನೆಗೆ ಕನ್ನ ಹಾಕಿದ

(ನ್ಯೂಸ್ ಕಡಬ) newskadaba.com ಅಹ್ಮದಾಬಾದ್‌, ನ. 22. ಕಳ್ಳನೋರ್ವ ಕಳ್ಳತನಕ್ಕಾಗಿಯೇ ಡಯೆಟ್ ಮಾಡಿದ ಘಟನೆ ಗುಜರಾತ್‌ನ ಅಹ್ಮದಾ ಬಾದ್‌ನಿಂದ ವರದಿಯಾಗಿದೆ. ಡಯೆಟ್‌ ಮಾಡಿದ ಈತನ ಹೆಸರು ಮೋತಿಸಿಂಗ್‌ ಚೌಹಾನ್‌. ಈತ ಅಹ್ಮದಾಬಾದ್‌ನ ಬೋಪಾಲ್‌ ಪ್ರಾಂತ್ಯದಲ್ಲಿನ ವಾಸವಾಗಿದ್ದ ಮೋಹಿತ್‌ ಮೊರಾಡಿಯಾ ಎಂಬವರ ಮನೆಯಲ್ಲಿ ಎರಡು ವರ್ಷದ ಹಿಂದೆ ಕೆಲಸದಾಳಾಗಿದ್ದು, ಆತನಿಗೆ ಆ ಮನೆಯವರು ಬೆಲೆಬಾಳುವ ವಸ್ತುಗಳನ್ನು ಎಲ್ಲಿ ಬಚ್ಚಿಡುತ್ತಾರೆ ಎಂದು ಗೊತ್ತಿತ್ತು. ಆ ಮನೆಗೆ ಕನ್ನ ಹಾಕಲು ನಿರ್ಧರಿಸಿದ್ದರೂ, ಮನೆಯ ಎರಡೂ ಬಾಗಿಲಿನ ಸಮೀಪ ಸಿಸಿಟಿವಿ ಇದ್ದಿದ್ದರಿಂದ ಧೈರ್ಯ

ಕಳ್ಳತನಗೈಯ್ಯಲು ಡಯೆಟ್ ಮಾಡಿ ತೂಕ ಇಳಿಸಿದ ಖತರ್ನಾಕ್ ಕಳ್ಳ..! ➤ ಉಂಡ ಮನೆಗೆ ಕನ್ನ ಹಾಕಿದ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಂಟು ವರ್ಷದ ಮಗುವನ್ನು ಅತ್ಯಾಚಾರವೆಸಗಿ ಕೊಲೆಮಾಡಿ ಚರಂಡಿಗೆಸೆದ ಕಿಡಿಗೇಡಿಗಳು ➤ ಕರಾವಳಿಯನ್ನೇ ಬೆಚ್ಚಿಬೀಳಿಸುವ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 21. ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರೋರ್ವರ ಎಂಟು ವರ್ಷದ ಮಗುವೊಂದನ್ನು ಅತ್ಯಾಚಾರಗೈದು ಕೊಲೆಮಾಡಿ ಚರಂಡಿಗೆಸೆದು ಹೋದ ಘಟನೆ ಕಂಕನಾಡಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ಟೈಲ್ಸ್ ಫ್ಯಾಕ್ಟರಿಯ ಆವರಣದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕರು ಟೈಲ್ಸ್ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಇದರಲ್ಲಿ ಒಂದು ಮಗು ಸಂಜೆ ವೇಳೆಗೆ ಕಾಣೆಯಾಗಿತ್ತು. ಕಾರ್ಮಿಕರು ಹಾಗೂ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಸಂಜೆ 6 ಗಂಟೆಯ ವೇಳೆಗೆ ಅಲ್ಲೇ ಪಕ್ಕದ ಚರಂಡಿಯಲ್ಲಿ ಮಗುವಿನ ಮೃತದೇಹ

ಎಂಟು ವರ್ಷದ ಮಗುವನ್ನು ಅತ್ಯಾಚಾರವೆಸಗಿ ಕೊಲೆಮಾಡಿ ಚರಂಡಿಗೆಸೆದ ಕಿಡಿಗೇಡಿಗಳು ➤ ಕರಾವಳಿಯನ್ನೇ ಬೆಚ್ಚಿಬೀಳಿಸುವ ಘಟನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಡುಗಳ್ಳರ ಬೇಟೆಗೆ ಹೋದ ಪೊಲೀಸ್ ಅಧಿಕಾರಿಯನ್ನೇ ಹತ್ಯೆಗೈದ ಕಳ್ಳರ ಗ್ಯಾಂಗ್..!

(ನ್ಯೂಸ್ ಕಡಬ) newskadaba.com ತಿರುಚ್ಚಿ, ನ. 21. ಆಡುಗಳ್ಳರನ್ನು ಹಿಡಿಯಲು ಹೋದ ಸಬ್ ಇನ್ಸ್ ಪೆಕ್ಟರ್ ಓರ್ವನನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಗಡಿಭಾಗದ ಕಲಮಾವೂರು ಎಂಬಲ್ಲಿ ನಡೆದಿದೆ. ಹತ್ಯೆಗೊಳಗಾದವರನ್ನು ಎಸ್.ಐ ಭೂಮಿನಾಥನ್ ಎಂದು ಗುರುತಿಸಲಾಗಿದೆ. ತಿರುಚ್ಚಿ ಜಿಲ್ಲೆಯ ಪರಿಸರದಲ್ಲಿ ರಾತ್ರಿ ವೇಳೆ ಆಡುಗಳನ್ನು ನಿರಂತರವಾಗಿ ಕಳ್ಳತನ ಮಾಡಲಾಗುತ್ತಿದೆ ಎಂಬುವುದಾಗಿ ದೂರು ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಎಸ್ ಐ ಭೂಮಿನಾಥನ್ ಅವರ ನೇತೃತದಲ್ಲಿ ಪೊಲೀಸರು ವಿಶೇಷ ತಂಡದೊಂದಿಗೆ ಪಹರೆ ನಡೆಸುತ್ತಿದ್ದರು. ಶನಿವಾರದಂದು

ಆಡುಗಳ್ಳರ ಬೇಟೆಗೆ ಹೋದ ಪೊಲೀಸ್ ಅಧಿಕಾರಿಯನ್ನೇ ಹತ್ಯೆಗೈದ ಕಳ್ಳರ ಗ್ಯಾಂಗ್..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಬ್ಜಿ ಆಟದಲ್ಲಿ ತಲ್ಲೀನರಾಗಿದ್ದ ಬಾಲಕರಿಗೆ ಗೂಡ್ಸ್ ಢಿಕ್ಕಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಥುರಾ, ನ. 21. ರೈಲ್ವೇ ಟ್ರ್ಯಾಕ್ ನಲ್ಲಿ ಕುಳಿತು ಪಬ್ಜಿ ಆಡುತ್ತಿದ್ದ ಇಬ್ಬರು ಬಾಲಕರು ಗೂಡ್ಸ್ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ಮಥುರಾದಲ್ಲಿ ನಡೆದಿದೆ. ಮೃತಪಟ್ಟವರನ್ನು ಗೌರವ್ ಕುಮಾರ್ ಮತ್ತು ಕಪಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಆಟದಲ್ಲಿ ಮಗ್ನರಾಗಿದ್ದರು ಎನ್ನಲಾಗಿದೆ. ಎರಡೂ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಒಂದು ಮೊಬೈಲ್ ಹಾನಿಗೊಳಗಾಗಿದ್ದರೆ, ಇನ್ನೊಂದರಲ್ಲಿ PUBG ಇನ್ನೂ ಚಾಲನೆಯಲ್ಲೇ ಇತ್ತು ಎಂದು ಜಮುನಾಪರ್ ಪೊಲೀಸ್ ಠಾಣೆಯ (SHO) ಶಶಿ ಪ್ರಕಾಶ್ ಸಿಂಗ್ ಹೇಳಿದ್ದಾರೆ.  

ಪಬ್ಜಿ ಆಟದಲ್ಲಿ ತಲ್ಲೀನರಾಗಿದ್ದ ಬಾಲಕರಿಗೆ ಗೂಡ್ಸ್ ಢಿಕ್ಕಿ ➤ ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚೆನ್ನೈ: ಲಾರಿ ಅಪಘಾತ ➤ ಪುತ್ತೂರಿನ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 20. ಪುತ್ತೂರಿನ ಸರಕು ಸಾಗಾಟದ ಅಶೋಕ್ ಲೇಲ್ಯಾಂಡ್ ಲಾರಿಯೊಂದು ಚೆನ್ನೈನ ಕೃಷ್ಣಗಿರಿ ಸಮೀಪ ಅಪಘಾತಕ್ಕೀಡಾಗಿದ್ದು, ಲಾರಿಯಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಚಾಲಕ ಕಬಕ ನಿವಾಸಿ ಮಹಮ್ಮದ್ ಅಜಿನಾಸ್ ಹಾಗೂ ತೌಸೀಫ್ ಎಂದು ಗುರುತಿಸಲಾಗಿದೆ. ಲಾರಿಯಲ್ಲಿ ಸರಕು ತುಂಬಿಸಿಕೊಂಡು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಚೆನ್ನೈ: ಲಾರಿ ಅಪಘಾತ ➤ ಪುತ್ತೂರಿನ ಇಬ್ಬರಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top