ಕ್ರೈಮ್ ನ್ಯೂಸ್

crime, arrest, suspected

ನಟ ಶಾರುಖ್ ಖಾನ್‌ಗೆ ಬೆದರಿಕೆ ಹಾಕಿದ ವಕೀಲ ಫೈಜನ್‌ ಖಾನ್‌ ಅರೆಸ್ಟ್‌

(ನ್ಯೂಸ್ ಕಡಬ) newskadaba.com ರಾಯ್ ಪುರ, ನ. 12. ಬಾಲಿವುಡ್‌ ಬಾದ್‌ಶಾ ಶಾರುಖ್ ಖಾನ್‌ಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಛತ್ತೀಸ್‌ಗಢದ ರಾಯ್‌ಪುರದಲ್ಲಿ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ. ಬಂಧಿತನನ್ನು ವಕೀಲ ಫೈಜನ್‌ ಖಾನ್‌ ಎಂದು ಗುರುತಿಸಲಾಗಿದ್ದು, ಈತ ಕಳೆದ ವಾರ ಬಾಂದ್ರಾ ಪೊಲೀಸ್ ಠಾಣೆಗೆ ಕರೆ ಮಾಡಿ ಶಾರುಖ್ ಖಾನ್ ಅವರನ್ನು ಬೆದರಿಸಿ ₹50 ಲಕ್ಷ ಬೇಡಿಕೆ ಇಟ್ಟಿದ್ದ. ಇನ್ನು ಬಂಧಿತ ಆರೋಪಿ ಫೈಜನ್‌ ಖಾನ್‌ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) […]

ನಟ ಶಾರುಖ್ ಖಾನ್‌ಗೆ ಬೆದರಿಕೆ ಹಾಕಿದ ವಕೀಲ ಫೈಜನ್‌ ಖಾನ್‌ ಅರೆಸ್ಟ್‌ Read More »

ಕ್ರೈಮ್ ನ್ಯೂಸ್

ಸಿಐಎಸ್‌ಎಫ್ ಅಧಿಕಾರಿ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರವಾರ, ನ. 12. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಸಿಐಎಸ್‌ಎಫ್ ಅಧಿಕಾರಿ ತಮ್ಮ ಪಿಸ್ತೂಲಿನಿಂದ ಶೂಟ್‌ ಮಾಡಿಕೊಂಡು ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವುದು ಖಾಸಗಿ ಕಾರಣದಿಂದಲೋ ಅಥವಾ ಅಧಿಕಾರಿಗಳ ಕಿರುಕುಳ ಕಾರಣದಿಂದಲೋ ಎಂಬುದು ಇನ್ನೂ ತಿಳಿದಿಲ್ಲ. ಸದ್ಯ ಯಾವುದೇ ಡೆತ್‌ ನೋಟ್‌ ದೊರೆತಿಲ್ಲ. ರಕ್ಷಣಾ ಸಿಬ್ಬಂದಿಯ ಆತ್ಮಹತ್ಯೆಯಿಂದ ಕೈಗಾದಲ್ಲಿ ಆತಂಕ‌ ಸೃಷ್ಠಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.  

ಸಿಐಎಸ್‌ಎಫ್ ಅಧಿಕಾರಿ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕೊಲೆ ಯತ್ನ ಪ್ರಕರಣ: 4 ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 12. ತಲಪಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಕೆಸಿ ರಸ್ತೆ-ಉಚ್ಚಿಲ ಮಾರ್ಗದ ಬಳಿ ನವೆಂಬರ್ 8ರಂದು ನಡೆದಿದ್ದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಬಡಾಜೆ ಕಡಂಬಾರ್ ಶಾಲೆಯ ಬಳಿಯ ಫಾತಿಮಾ ಮಂಜಿಲ್ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಮೊಹಮ್ಮದ್ ಆಸಿಫ್ (33) ಮಂಗಳೂರಿನಿಂದ ಕೇರಳಕ್ಕೆ ಕುಟುಂಬ ಸಮೇತ ಮನೆಗೆ ತೆರಳುತ್ತಿದ್ದಾಗ ರಾತ್ರಿ 7:40 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಕೊಲೆ ಯತ್ನ ಪ್ರಕರಣ: 4 ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 24 ಮಂದಿ ಮೃತ್ಯು, 40ಕ್ಕೂ ಹೆಚ್ಚು ಜನರಿಗೆ ಗಾಯ..!

(ನ್ಯೂಸ್ ಕಡಬ) newskadaba.com ನ. 09. ರೈಲ್ವೇ ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 24 ಜನರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಕುರಿತು ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ವರದಿಯಾಗಿದೆ. ಸದ್ಯ ಬಾಂಬ್ ಸ್ಫೋಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದು ಪಾಕಿಸ್ತಾನ ಸೇನಾ ಸೈನಿಕರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಯಾಗಿದೆ. ಪಾಕಿಸ್ತಾನವು ದಕ್ಷಿಣದಲ್ಲಿ ಪ್ರತ್ಯೇಕತಾವಾದಿ ಜನಾಂಗೀಯ ಉಗ್ರಗಾಮಿಗಳು ಮತ್ತು ವಾಯುವ್ಯದಲ್ಲಿ ಇಸ್ಲಾಮಿಕ್ ಉಗ್ರಗಾಮಿಗಳ ದಾಳಿಯ ಉಲ್ಬಣವನ್ನು ಎದುರಿಸುತ್ತಿದೆ. ಸ್ಫೋಟದಲ್ಲಿ ಈವರೆಗೆ 24 ಜನರು ಮೃಪಟ್ಟಿದ್ದಾರೆ

ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 24 ಮಂದಿ ಮೃತ್ಯು, 40ಕ್ಕೂ ಹೆಚ್ಚು ಜನರಿಗೆ ಗಾಯ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕೆವೈಸಿ ಅಪ್ ಡೇಟ್ ನೆಪದಲ್ಲಿ ಸಾವಿರಾರು ರೂ.ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ನ. 09. ಕೆವೈಸಿ ಅಪ್‌ ಡೇಟ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯೋರ್ವರ ಮೊಬೈಲ್ ಗೆ ನ.7ರಂದು ಕೆನರಾ ಬ್ಯಾಂಕ್‌ ನವರು ಎಂದು ಹೇಳಿ ಕರೆ ಮಾಡಿದ್ದ ಅಪರಿಚಿತರು, ಕೆವೈಸಿ ಅಪ್‌ಡೇಟ್ ಆಗದೇ ಇರುವುದರಿಂದ ಅಕೌಂಟ್ ಬ್ಲಾಕ್ ಮಾಡುವುದಾಗಿ ತಿಳಿಸಿ, ಬಳಿಕ ದೂರುದಾರರಿಂದ ಬ್ಯಾಂಕ್ ಖಾತೆ ವಿವರ, ಓಟಿಪಿ ಪಡೆದುಕೊಂಡ ಅಪರಿಚಿತರು, 51,908ರೂ. ಹಣವನ್ನು ಖಾತೆಯಿಂದ ಮೋಸದಿಂದ ಡ್ರಾ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.

ಕೆವೈಸಿ ಅಪ್ ಡೇಟ್ ನೆಪದಲ್ಲಿ ಸಾವಿರಾರು ರೂ.ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್- ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ; ಸವಾರೆ ಮೃತ್ಯು, ಸಹಸವಾರೆ ಗಂಭೀರ

(ನ್ಯೂಸ್ ಕಡಬ) newskadaba.com ನ. 09. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರೆ ಮೃತಪಟ್ಟು, ಸಹಸವಾರೆ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಪರಿವಾರಕಾನ – ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ಸವಾರೆಯನ್ನು ಪುತ್ತೂರು ಖಾಸಗಿ ಕಾಲೇಜೊಂದರ ದ್ವಿತೀಯ ಪದವಿ ವಿದ್ಯಾರ್ಥಿನಿ, ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಅವರ ಪುತ್ರಿ ರಚನಾ (20) ಎಂದು ಗುರುತಿಸಲಾಗಿದೆ. ಅವರ ಸಹೋದರಿ ಸಹ ಸವಾರೆಯಾಗಿದ್ದ ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ

ಸ್ಕೂಟರ್- ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ; ಸವಾರೆ ಮೃತ್ಯು, ಸಹಸವಾರೆ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಡಿಸಿಎಂ ಹೆಸರಲ್ಲಿ ಅಧಿಕಾರಿಗಳಿಗೆ ವಂಚನೆ- ಅರೆಸ್ಟ್..!

(ನ್ಯೂಸ್ ಕಡಬ) newskadaba.com ನ. 09. ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ವ್ಯಕ್ತಿಯನ್ನು ವಿಧಾನಸೌಧ ಠಾಣಾ ಪೊಲೀಸರು ಅರೆಸ್ಟ್ ಮಾಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ ರಘುನಾಥ್ ಎಂದು ಗುರುತಿಸಲಾಗಿದೆ. ಆರೋಪಿ ರಘುನಾಥ್ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಆಮಿಷವೊಡ್ಡಿ ಹಣ ಪಡೆದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರನ್ನು ಹೇಳಿಕೊಂಡು ಇತ್ತೀಚೆಗೆ ರಘುನಾಥ್ ಇಂಜಿನಿಯರ್

ಡಿಸಿಎಂ ಹೆಸರಲ್ಲಿ ಅಧಿಕಾರಿಗಳಿಗೆ ವಂಚನೆ- ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಕಡಬ, ನ. 09. ಜಾಗದ ವಿವಾದಕ್ಕೆ ಸಂಬಂಧಿಸಿ ಅಣ್ಣ ತಮ್ಮನ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಕಡಬ ತಾಲೂಕಿನ ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪೆರ್ಲ ನಿವಾಸಿಯಾಗಿದ್ದ ರಮೇಶ ಗೌಡ(51) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಮೃತರ ಸಂಬಂಧಿ ಹರೀಶ್ ಎಂಬಾತ ಎನ್ನಲಾಗಿದೆ. ರಮೇಶ್ ಅವರು ಬೈಕ್ ನಲ್ಲಿ ಬರುತ್ತಿರುವ ವೇಳೆ ಅವರನ್ನು ಅಡ್ಡ ಕಟ್ಟಿ ಕತ್ತಿಯಿಂದ ಕಡಿದು ಕೊಲೆ

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮರಳುಗಾರಿಕೆ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ

(ನ್ಯೂಸ್ ಕಡಬ) newskadaba.com ನ. 08. ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಲಾಯಿತು. ಇದಲ್ಲದೇ ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ. ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ

ಅಕ್ರಮ ಮರಳುಗಾರಿಕೆ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ Read More »

ಕ್ರೈಮ್ ನ್ಯೂಸ್

ಕಂಡಕ್ಟರ್ ಪರ್ಸ್ ನಿಂದ ಹಣ ಕದ್ದು ಪರಾರಿಯಾದ ಕಳ್ಳ..!

(ನ್ಯೂಸ್ ಕಡಬ) newskadaba.com ನ. 08. ಸರ್ವೀಸ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ ಒಂದರಲ್ಲಿದ್ದ ಕಂಡಕ್ಟರ್ ಪರ್ಸ್ ನಿಂದ ಕಳ್ಳನೊಬ್ಬ ಕಲೆಕ್ಷನ್ ಹಣವನ್ನ ಕದ್ದು ಪರಾರಿ ಆಗಿರುವ ಘಟನೆ ವರದಿಯಾಗಿದೆ. ಬಸ್ ನಲ್ಲಿ ಪ್ರಯಾಣಿಕರು ಯಾರೂ ಇಲ್ಲದ ಸಂದರ್ಭದಲ್ಲಿ ಬಸ್ ಡ್ರೈವರ್ ಕಂಡಕ್ಟರ್ ಶೌಚಕ್ಕೆ ಹೋದಾಗ ಕಳ್ಳತನ ನಡೆದಿದೆ ಎನ್ನಲಾಗಿದೆ. ಕಳ್ಳ ಬಸ್ಸಿನ ಒಳಗೆ ಬಂದು ಹಣ ಕದಿಯುವ ದೃಶ್ಯ ಬಸ್ ನ ಒಳಗೆ ಅಳವಡಿಸಿದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಂಡಕ್ಟರ್ ಪರ್ಸ್ ನಿಂದ ಹಣ ಕದ್ದು ಪರಾರಿಯಾದ ಕಳ್ಳ..! Read More »

ಕ್ರೈಮ್ ನ್ಯೂಸ್
Scroll to Top