ಕ್ರೈಮ್ ನ್ಯೂಸ್

ಗೋಕಳ್ಳನೆಂಬ ಶಂಕೆಯಿಂದ ಯುವಕನನ್ನು ಥಳಿಸಿ ಹತ್ಯೆ

(ನ್ಯೂಸ್ ಕಡಬ) newskadaba.com ಅಗರ್ತಲಾ, ನ. 08. ಗೋಕಳ್ಳ ಎಂದು ಶಂಕಿಸಿ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿರುವ ಘಟನೆ ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯ ಸೋನಮುರಾ ಉಪವಿಭಾಗದ ಕಮಲ್ ನಗರ ಗ್ರಾಮದಲ್ಲಿ ನಡೆದಿದೆ. ತಡರಾತ್ರಿಯಲ್ಲಿ ಮೂವರು ಶಂಕಿತ ಜಾನುವಾರು ಕಳ್ಳ ಸಾಗಾಣಿಕೆದಾರರು ಹಸುಗಳನ್ನು ಕದಿಯಲು ಲಿಟನ್ ಪೌಲ್ ಎಂಬವರ ಮನೆಗೆ ಪ್ರವೇಶಿಸಿದ್ದಾರೆ ಎಂದು ಆರೋಪಿಸಿ, ಜನರು ಮೂವರನ್ನು ಅಟ್ಟಾಡಿಸಿದ್ದಾರೆ. ಈ ಮೂವರ ಪೈಕಿ ಇಬ್ಬರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆದರೆ ಓರ್ವನಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಆತನನ್ನು ಸ್ಥಳೀಯ ಗುಂಪೊಂದು ಹೊಡೆದು ಕೊಂದಿದೆ […]

ಗೋಕಳ್ಳನೆಂಬ ಶಂಕೆಯಿಂದ ಯುವಕನನ್ನು ಥಳಿಸಿ ಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡ್ರಗ್ಸ್ ಅಮಲಿನಲ್ಲಿ ತಾಯಿಯ ಮೇಲೆಯೇ ಅತ್ಯಾಚಾರವೆಸಗಿದ ಪಾಪಿ ಪುತ್ರ..!

(ನ್ಯೂಸ್ ಕಡಬ) newskadaba.com ಘಾಜಿಯಾಬಾದ್, ನ. 08. ಡ್ರಗ್ಸ್ ಸೇವಿಸಿದ ಅಮಲಿನಲ್ಲಿ ಸ್ವತಃ ಪುತ್ರನೇ ತನ್ನ ತಾಯಿಯ ಮೇಲೆ ಅತ್ಯಾಚಾರವೆಸಗಿದ ಬೀಭತ್ಸ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‌ ನಲ್ಲಿ ನಡೆದಿದೆ . ದೀಪಾವಳಿಯ ಹಿಂದಿನ ರಾತ್ರಿ ಡ್ರಗ್ಸ್ ಅಮಲಿನಲ್ಲಿ ಮನೆಗೆ ಬಂದ ಕಾಮುಕ ಪುತ್ರ ತನ್ನ ತಾಯಿಯ ಕತ್ತಿನಲ್ಲಿ ಚಾಕು ಇಟ್ಟು ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬಲವಂತ ಮಾಡಿದ್ದ. ಆಕೆ ವಿರೋಧಿಸಿದಷ್ಟೂ ಸಿಟ್ಟಿಗೆದ್ದ ಪಾಪಿ ಸಹಕರಿಸದೇ ಇದ್ದರೆ ಕತ್ತು ಸೀಳುವುದಾಗಿ ಬೆದರಿಕೆ ಹಾಕಿದ್ದಾನೆ.

ಡ್ರಗ್ಸ್ ಅಮಲಿನಲ್ಲಿ ತಾಯಿಯ ಮೇಲೆಯೇ ಅತ್ಯಾಚಾರವೆಸಗಿದ ಪಾಪಿ ಪುತ್ರ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೀಪಾವಳಿ ರಜೆ ವಿಚಾರವಾಗಿ ಯೋಧರ ನಡುವೆ ಮಾತಿನ ಚಕಮಕಿ- ಗುಂಡು ಹಾರಾಟ ➤ ನಾಲ್ವರು ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಛತ್ತೀಸ್ಗಢ, ನ. 08. ದೀಪಾವಳಿ ರಜೆಯ ವಿಚಾರವಾಗಿ ಯೋಧರಿಬ್ಬರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಮೃತಪಟ್ಟು, ಮೂವರ ಗಾಯಗೊಂಡ ಘಟನೆ ತೆಲಂಗಾಣ-ಛತ್ತೀಸ್‌ಗಢ ಗಡಿ ಭಾಗದಲ್ಲಿ ಸೋಮವಾರದಂದು ನಡೆದಿದೆ. ಮೃತರನ್ನು ಬಿಹಾರದ ರಾಜಮಣಿ ಯಾದವ್, ದಾಂಜಿ ಮತ್ತು ಬಂಗಾಳದ ರಾಜುಮಂಡಲ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂವರು ಗಾಯಾಳುಗಳನ್ನು ಭದ್ರಾಚಲಂ ಏರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಲಿಂಗಂಪಲ್ಲಿ ಬೇಸ್ ಕ್ಯಾಂಪ್‌ನಲ್ಲಿ ದೀಪಾವಳಿ ರಜೆ ವಿಚಾರವಾಗಿ ಯೋಧರ ನಡುವೆ ಮಾತಿನ ಚಕಮಕಿ

ದೀಪಾವಳಿ ರಜೆ ವಿಚಾರವಾಗಿ ಯೋಧರ ನಡುವೆ ಮಾತಿನ ಚಕಮಕಿ- ಗುಂಡು ಹಾರಾಟ ➤ ನಾಲ್ವರು ಮೃತ್ಯು, ಮೂವರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಊಟ ಖಾಲಿ ಆಗಿದೆ ಎಂದ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಚೂರಿ ಇರಿತ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ಊಟ ಖಾಲಿ ಆಗಿದೆ ಎಂದು ಹೇಳಿದ್ದಿಕ್ಕೆ ಹೋಟೆಲ್ ಮಾಲೀಕನಿಗೆ ವ್ಯಕ್ರಿಯೋರ್ವ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಆರೋಪಿಯನ್ನು ರೌಡಿಶೀಟರ್ ಯಲ್ಲಪ್ಪ ಎಂದು ಗುರುತಿಸಲಾಗಿದೆ. ಹೋಟೆಲ್ ಮಾಲೀಕ ಚಂದ್ರಶೇಖರ್‌ ಚಾಕು ಇರಿತಕ್ಕೆ ಒಳಗಾಗಿದ್ದು, ಗಾಯಾಳು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರೌಡಿಶೀಟರ್ ಯಲ್ಲಪ್ಪ ರಾತ್ರಿ 10 ಗಂಟೆಯ ನಂತರ ಮದ್ಯದ ಬಾಟಲಿ ಹಿಡಿದು ಸಿಗರೇಟು ಸೇದುತ್ತಾ ಹೋಟೆಲ್ ಗೆ ಬಂದಿದ್ದು, ಈ

ಊಟ ಖಾಲಿ ಆಗಿದೆ ಎಂದ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಚೂರಿ ಇರಿತ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಆಕಸ್ಮಿಕವಾಗಿ ತೆಂಗಿನಮರ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 08. ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮೈಮೇಲೆ ತೆಂಗಿನ ಮರ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪೆರ್ಲಾಪು ನಿವಾಸಿ ಸುರೇಶ್(38) ಎಂದು ಗುರುತಿಸಲಾಗಿದೆ. ಸುರೇಶ್ ನೆರೆಮನೆಯ ಭುಜಂಗ ಶೆಟ್ಟಿ ಅವರ ಮನೆಯ ತೋಟದಲ್ಲಿದ್ದ ತೆಂಗಿನ ಮರವನ್ನು ಕಡಿಯಲು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಒಂದು ತೆಂಗಿನ ಮರ ಕಡಿದು ನೆಲಕ್ಕೆ ಬಿದ್ದಾಗ, ಅದರ ಪಕ್ಕದಲ್ಲೇ ಇದ್ದ ಸತ್ತು ಒಣಗಿದ ತೆಂಗಿನ ಮರವು

ಬಂಟ್ವಾಳ: ಆಕಸ್ಮಿಕವಾಗಿ ತೆಂಗಿನಮರ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ನಿದ್ದೆ ಮಾತ್ರೆ ಬೆರೆಸಿದ ಜ್ಯೂಸ್ ಕುಡಿಸಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಆರೋಪಿ ರೌಡಿಶೀಟರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಅಪ್ರಾಪ್ತ ಬಾಲಕಿಯ ಮೇಲೆ ರೌಡಿಶೀಟರ್‌ ಓರ್ವ ಅತ್ಯಾಚಾರ ನಡೆಸಿದ ಆರೋಪಿಯನ್ನು ಬಂಧಿಸಿದ ಘಟನೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕೈಕಂಬದ ಹೊಟೇಲ್ ಒಂದರಲ್ಲಿ ಬಾಣಸಿಗನಾಗಿ ಕಾರ್ಯ ನಿರ್ವಹಿಸುತ್ತಿದ್ದ ರೌಡಿಶೀಟರ್ ನವೀನ್ ಸಿಕ್ವೇರ ಎಂದು ಗುರುತಿಸಲಾಗಿದೆ. ಈತನಿಗೆ ಬಾಲಕಿಯ ಸಹೋದರನ ಪರಿಚಯವಿದ್ದು, ಇದನ್ನೇ ನೆಪವಾಗಿಸಿ ಆಕೆಯ ನಂಬರ್ ಪಡೆದಿದ್ದ ರೌಡಿಶೀಟರ್ ಆಕೆ ಒಬ್ಬಳೇ ಮನೆಯಲ್ಲಿ ಇರುವ ವೇಳೆ ಮನೆಗೆ ಬಂದು ಬಾಲಕಿಗೆ ಜ್ಯೂಸ್ ನಲ್ಲಿ ನಿದ್ದೆ

ಮಂಗಳೂರು: ನಿದ್ದೆ ಮಾತ್ರೆ ಬೆರೆಸಿದ ಜ್ಯೂಸ್ ಕುಡಿಸಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಆರೋಪಿ ರೌಡಿಶೀಟರ್ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

➤➤ Breaking News ನೆಲ್ಯಾಡಿ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ. 07. ಕಾರುಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಗೋಳಿತೊಟ್ಟು ಎಂಬಲ್ಲಿ ಭಾನುವಾರದಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಹುಂಡೈ ವರ್ಣಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ನಾಲ್ವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

➤➤ Breaking News ನೆಲ್ಯಾಡಿ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ನಾಲ್ವರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಾಕಿಂಗ್ ಹೋಗಿದ್ದ ವ್ಯಕ್ತಿಗೆ ಆಂಬ್ಯುಲೆನ್ಸ್ ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ನ. 06. ಬೆಳಗ್ಗೆ ವಾಕಿಂಗ್ ಗೆಂದು ಹೋಗಿದ್ದ ವ್ಯಕ್ತಿಗೆ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ. 66ರ ಕಾಪುವಿನ ಕೋತಲ್ ಕಟ್ಟೆಯ ಬಳಿ ನಡೆದಿದೆ. ಮೃತರನ್ನು ಉಳಿಯಾರಗೋಳಿ ಗ್ರಾಮದ ಕೆಳತೋಟ ನಿವಾಸಿ ಗೋವಿಂದ ಪೂಜಾರಿ (65) ಎಂದು ಗುರುತಿಸಲಾಗಿದೆ. ಇವರು ಕೋತಲ್ ಕಟ್ಟೆಯ ಬಳಿ ವಾಕಿಂಗ್ ಗೆಂದು ತೆರಳಿದ್ದ ಸಂದರ್ಭ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಅಂಬುಲೆನ್ಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ತಕ್ಷಣವೇ ಗೋವಿಂದ

ವಾಕಿಂಗ್ ಹೋಗಿದ್ದ ವ್ಯಕ್ತಿಗೆ ಆಂಬ್ಯುಲೆನ್ಸ್ ಢಿಕ್ಕಿ ➤ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಚಾಲಕರಿಬ್ಬರ ನಡುವೆ ವಾಗ್ವಾದ ➤ ಓರ್ವನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 06. ಜೀಪು ಚಾಲಕ ಮತ್ತು ಆಟೋ ಚಾಲಕನ ನಡುವೆ ಮಾತಿನ ಚಕಮಕಿ ನಡೆದು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಜಿರೆಯ ಸೋಮಂತಡ್ಕ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಅಟೋ ಚಾಲಕನನ್ನು ಅಮೃತ್ ಅಲ್ಬರ್ಟ್ ಮೋನಿಸ್ (52) ಎಂದು ಗುರುತಿಸಲಾಗಿದೆ. ಆಟೋದಲ್ಲಿ ಕುಳಿತಿದ್ದ ಪ್ರಯಾಣಿಕರನ್ನು ಜೀಪು ಚಾಲಕ ಕರೆದುಕೊಂಡು ಹೋಗಿ ಜೀಪಿನಲ್ಲಿ ಕುಳ್ಳಿರಿಸಿದ್ದ ಇದನ್ನು ಪ್ರಶ್ನಿಸಿದ್ದ ಮೋನಿಸ್ ಮೇಲೆ ಜೀಪು ಚಾಲಕ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ ಎಂದು ಪ್ರಕರಣ

ಬೆಳ್ತಂಗಡಿ: ಚಾಲಕರಿಬ್ಬರ ನಡುವೆ ವಾಗ್ವಾದ ➤ ಓರ್ವನಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಟಾಕಿ ಸಿಡಿದು ಮಕ್ಕಳ ಸಹಿತ 9 ಜನರ ಕಣ್ಣಿಗೆ ಹಾನಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಟಾಕಿ ಸಿಡಿಸುವುದು ಸರ್ವೇ ಸಾಮಾನ್ಯ. ಅದರಲ್ಲೂ ಮಕ್ಕಳಿಗೆ ಪಟಾಕಿ ಅಂದ್ರೆ ತುಂಬಾ ಇಷ್ಟ. ಹೀಗೆ ಪಟಾಕಿ ಸಿಡಿಸುವ ಸಂದರ್ಭ ಆಕಸ್ಮಿಕವಾಗಿ ಕಿಡಿ ತಾಗಿ ಮಕ್ಕಳು ಸೇರಿದಂತೆ 9 ಜನರ ಕಣ್ಣಿಗೆ ಹಾನಿಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಟಾಕಿ ಸಿಡಿದು ಮಕ್ಕಳ ಸಹಿತ 9 ಜನರ ಕಣ್ಣಿಗೆ ಹಾನಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top