ಕ್ರೈಮ್ ನ್ಯೂಸ್

ದುಷ್ಕರ್ಮಿಗಳಿಂದ ಆಟೋ ಚಾಲಕನ ಬರ್ಬರ ಹತ್ಯೆ..!

(ನ್ಯೂಸ್ ಕಡಬ) Newskadaba.com ಮಂಡ್ಯ, ಅ. 27. ಆಟೋ ಚಾಲಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆಗೈದಿರುವ ಘಟನೆ ಮಂಡ್ಯ ಜಿಲ್ಲೆಯ ಕೆ. ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಅಟೋ ಚಾಲಕನನ್ನು ನಾಸಿರ್ ಅಹಮದ್ (30) ಎಂದು ಗುರುತಿಸಲಾಗಿದೆ. ಆಲಂಬಾಡಿಕಾವಲು ದರ್ಗಾ ಸಮೀಪದ ನಿರ್ಜನ ಪ್ರದೇಶವೊಂದರಲ್ಲಿ ಈ ಕೃತ್ಯ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ. ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ […]

ದುಷ್ಕರ್ಮಿಗಳಿಂದ ಆಟೋ ಚಾಲಕನ ಬರ್ಬರ ಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕ್ರಮ ಗೋಸಾಗಾಟ ತಡೆದ ಬಜರಂಗದಳ ಕಾರ್ಯಕರ್ತರು ➤ 25 ಗೋವುಗಳ ರಕ್ಷಣೆ

(ನ್ಯೂಸ್ ಕಡಬ) Newskadaba.com ಪಡುಬಿದ್ರಿ, ಅ. 27. ಅಕ್ರಮ ಗೋಸಾಗಾಟವನ್ನು ತಡೆದ ಬಜರಂಗದಳ ಕಾರ್ಯಕರ್ತರು 25ಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಿ ದುಷ್ಕರ್ಮಿಗಳ ಹೆಡೆಮುರಿ ಕಟ್ಟಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಲಾರಿಯೊಂದರಲ್ಲಿ ಇಪ್ಪತ್ತೈದಕ್ಕೂ ಅಧಿಕ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಭಜರಂಗದಳ ಹಾಗೂ ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಗೋವುಗಳನ್ನು ರಕ್ಷಿಸಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ರಮ ಗೋಸಾಗಾಟ ತಡೆದ ಬಜರಂಗದಳ ಕಾರ್ಯಕರ್ತರು ➤ 25 ಗೋವುಗಳ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ವಾಹನ ಹಾಗೂ ಬೈಕ್ ನಡುವೆ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) Newskadaba.com ಮುದ್ದೇಬಿಹಾಳ, ಅ. 27. ಶಾಲಾ ವಾಹನ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ತಾಲ್ಲೂಕಿನ ಜೈನಾಪೂರ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟವರನ್ನು ಚವನಬಾವಿ ಗ್ರಾಮದ ಶಿವಪ್ಪ ಹಣಮಪ್ಪ ಪೂಜಾರಿ(30) ಹಾಗೂ ಸಂಗಪ್ಪ ಬಸಪ್ಪ ಪೂಜಾರಿ(40) ಎಂದು ಗುರುತಿಸಲಾಗಿದೆ. ಚವನಬಾವಿ ರೇವಣಸಿದ್ದೇಶ್ವರ ಪ್ರಾಥಮಿಕ ಶಾಲೆಯ ವಾಹನ ವಿದ್ಯಾರ್ಥಿಗಳನ್ನು ತುಂಬಿಕೊಂಡು ನಾಲತವಾಡದಿಂದ ಚವನಬಾವಿ ಗ್ರಾಮದ ಶಾಲೆಯ ಕಡೆಗೆ ಬರುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬೈಕ್ ನಡುವೆ

ಶಾಲಾ ವಾಹನ ಹಾಗೂ ಬೈಕ್ ನಡುವೆ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ಪೊಲೀಸ್ ಸಿಬ್ಬಂದಿಗೆ ಗಾಯ

(ನ್ಯೂಸ್ ಕಡಬ) Newskadaba.com ನೆಲ್ಯಾಡಿ, ಅ. 27. ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪೊಲೀಸ್ ಸಿಬ್ಬಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಬುಧವಾರದಂದು ನಡೆದಿದೆ. ಗಾಯಗೊಂಡವರನ್ನು ಬೈಕ್ ಸವಾರ ಪೊಲೀಸ್ ಸಿಬ್ಬಂದಿ ಸಿದ್ದಪ್ಪ ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಂದು ಬೆಳಗ್ಗೆ ಹಾಸನಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ

ನೆಲ್ಯಾಡಿ: ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ಪೊಲೀಸ್ ಸಿಬ್ಬಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ➤ ಬಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) Newskadaba.com ಕಾಸರಗೋಡು, ಅ. 27. ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಕಾಞಂಗಾಡ್ ನ ಅತಿಂಞಾಲ್ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಚುಳ್ಳಿಕೆರೆಯ ಬಿಜು ಎಂಬವರ ಪುತ್ರ ಆಶಿಲ್(15) ಎಂದು ಗುರುತಿಸಲಾಗಿದೆ. ಈತ ಮನೆ ಸಮೀಪದ ಅಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ವೇಗದಿಂದ ಬಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕ ರಸ್ತೆಗೆಸೆಯಲ್ಪಟ್ಟಿದ್ದು, ಈ ಸಂದರ್ಭ ಬಂದ ಗೂಡ್ಸ್ ಆಟೋ ಆತನ ದೇಹದ ಮೆಲೆಯೇ ಹರಿದಿದೆ. ತಕ್ಷಣ

ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ➤ ಬಾಲಕ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರೀತಿಸಲು ನಿರಾಕರಿಸಿದ ವಿವಾಹಿತ ಮಹಿಳೆ ➤ ಕೊಡಲಿಯಿಂದ ಕೊಚ್ಚಿ ಕೊಂದು ಮೃತದೇಹದೊಂದಿಗೆ ಮಲಗಿದ ಪ್ರೇಮಿ..!

(ನ್ಯೂಸ್ ಕಡಬ) Newskadaba.com ಜೈಪುರ, ಅ. 27. ತನ್ನನ್ನು ಪ್ರೀತಿಸುವಂತೆ ಮಹಿಳೆಯನ್ನು ಪೀಡಿಸುತ್ತಿದ್ದ ಯುವಕನೋರ್ವ ಆಕೆ ಪ್ರೀತಿಸಲು ನಿರಾಕರಿಸಿದಳೆಂದು ಆಕೆಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿ ಮೃತದೇಹವನ್ನು ತಬ್ಬಿಕೊಂಡು ಮಲಗಿದ ಬೀಭತ್ಸ ಘಟನೆ ರಾಜಸ್ಥಾನದ ಅಹೋರ್ ಪ್ರದೇಶದಲ್ಲಿ ನಡೆದಿದೆ. ಹತ್ಯೆಗೀಡಾದ ಮಹಿಳೆಯನ್ನು ಶಾಂತಿ ದೇವಿ ಎಂದು ಗುರುತಿಸಲಾಗಿದೆ. ಈಕೆಗೆ ಇಬ್ಬರು ಗಂಡು ಮಕ್ಕಳಿದ್ದು, ಪತಿ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಪತಿ ಇಲ್ಲದ ವೇಳೆ ಮನೆಗೆ ಬಂದ ಆರೋಪಿ ಗಣೇಶ್, ತನ್ನನ್ನು ಪ್ರೀತಿಸುವಂತೆ ಕೇಳಿಕೊಂಡಿದ್ದು, ಅದಕ್ಕೆ

ಪ್ರೀತಿಸಲು ನಿರಾಕರಿಸಿದ ವಿವಾಹಿತ ಮಹಿಳೆ ➤ ಕೊಡಲಿಯಿಂದ ಕೊಚ್ಚಿ ಕೊಂದು ಮೃತದೇಹದೊಂದಿಗೆ ಮಲಗಿದ ಪ್ರೇಮಿ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಾಡುಹಗಲೇ ಮಹಿಳೆಯ ಕತ್ತಿನಲ್ಲಿದ್ದ ಕರಿಮಣಿ ಸರ ಎಗರಿಸಿ ಪರಾರಿ

(ನ್ಯೂಸ್ ಕಡಬ) Newskadaba.com ವಿಟ್ಲ, ಅ. 27. ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಕರಿಮಣಿ ಸರ ಎಗರಿಸಿ ಪರಾರಿಯಾದ ಘಟನೆ ವಿಟ್ಲದಲ್ಲಿ ನಡೆದಿದೆ. ಉಕ್ಕುಡ ಸಮೀಪದ ಗುಂಪಲಡ್ಕ ನಿವಾಸಿ ಕಮಲ(55) ಎಂಬವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕೆಂಪು ಬಣ್ಣದ ಹೋಂಡಾ ಆಕ್ಟಿವಾ ವಾಹನದಲ್ಲಿ ಬಂದ ಅಪರಿಚಿತನೋರ್ವ ಮಹಿಳೆಯ ಕತ್ತಿನಲ್ಲಿದ್ದ 3.5 ಪವನ್ ತೂಕದ ಕರಿಮಣಿಸರ ಎಗರಿಸಿ ಪರಾರಿ ಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹಾಡುಹಗಲೇ ಮಹಿಳೆಯ ಕತ್ತಿನಲ್ಲಿದ್ದ ಕರಿಮಣಿ ಸರ ಎಗರಿಸಿ ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಿಕ್ಷಾ ದಲ್ಲಿ ತೆರಳುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ ಹಿನ್ನೆಲೆ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 27. ಅಟೋ ರಿಕ್ಷಾದಲ್ಲಿ ತೆರಳುತ್ತಿದ್ದ ಮಹಿಳೆಗೆ ವ್ಯಕ್ತಿಯೋರ್ವರು ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಅನಿಲ್ ಎಂದು ಗುರುತಿಸಲಾಗಿದೆ. ಈತ ರಿಕ್ಷಾವೊಂದರಲ್ಲಿ ಹೋಗುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ಕುರಿತು ಮಹಿಳೆಯು ನೀಡಿದ ದೂರಿನಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ರಿಕ್ಷಾ ದಲ್ಲಿ ತೆರಳುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ ಹಿನ್ನೆಲೆ ➤ ಓರ್ವ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮನೆ ಬಿಟ್ಟು ತೆರಳಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) Newskadaba.com ಉಪ್ಪಿನಂಗಡಿ, ಅ. 27. ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಾಮಣ್ಣ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಕೆಲವು ದಿನಗಳ ಹಿಂದೆಮನೆ ಬಿಟ್ಟು ಹೋಗಿದ್ದು, ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆ ಬಿಟ್ಟು ತೆರಳಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೂಳೂರು ನಾಗನ ಕಟ್ಟೆಯಿಂದ ನಾಪತ್ತೆಯಾಗಿದ್ದ ನಾಗನ ಕಲ್ಲುಗಳು ಪತ್ತೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 27. ಇಲ್ಲಿನ ಹೊರವಲಯದ ಕೂಳೂರು ನಾಗನಕಟ್ಟೆಯಿಂದ ನಾಪತ್ತೆಯಾಗಿದ್ದ 6 ನಾಗನಕಟ್ಟೆಗಳು ಮಂಗಳವಾರದಂದು ಸಮೀಪದ ಗದ್ದೆಯಲ್ಲಿ ಪತ್ತೆಯಾಗಿದೆ. ನಾಗನಕಟ್ಟೆಯಲ್ಲಿದ್ದ 19 ನಾಗನ ಕಲ್ಲುಗಳ ಪೈಕಿ‌ 6 ಕಲ್ಲುಗಳು ಶನಿವಾರದಂದು ನಾಪತ್ತೆಯಾಗಿದ್ದು, ಒಂದು ಕಲ್ಲನ್ನು ಹುಡಿಗೈಯ್ಯಲಾಗಿತ್ತು. ಈ ಕುರಿತು ತನಿಖೆ ಮುಂದುವರಿಸಿದ ಕಾವೂರು ಪೊಲೀಸರು ಮಂಗಳವಾರದಂದು ಹುಡುಕಾಟ ಆರಂಭಿಸಿದ್ದರು. ಅದರಂತೆ ನಾಗನಕಟ್ಟೆ ಸಮೀಪದ ಬಾವಿಯ ನೀರನ್ನು ಖಾಲಿ ಮಾಡಿ ಹುಡುಕಾಡಲಾಯಿತಾದರೂ ಕಲ್ಲು ಪತ್ತೆಯಾಗಿರಲಿಲ್ಲ. ಬಳಿಕ ಸಮೀಪದ ಗದ್ದೆಯಲ್ಲಿ ಪತ್ತೆಯಾಗಿವೆ.  

ಕೂಳೂರು ನಾಗನ ಕಟ್ಟೆಯಿಂದ ನಾಪತ್ತೆಯಾಗಿದ್ದ ನಾಗನ ಕಲ್ಲುಗಳು ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top