ಕ್ರೈಮ್ ನ್ಯೂಸ್

ಮಂಗಳೂರು: ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದ ಪೋಕ್ಸೋ ಪ್ರಕರಣದ ಆರೋಪಿ ➤ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.31. ಪೋಕ್ಸೋ ಪ್ರಕರಣದ ಆರೋಪಿಯೋರ್ವ ನ್ಯಾಯಾಲಯದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಸಂಜೆ ಮಂಗಳೂರಿನಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪೋಕ್ಸೋ ಪ್ರಕರಣದ ಆರೋಪಿ ನಾಟೆಕಲ್ ಸಮೀಪದ ಕಿನ್ಯ ನಿವಾಸಿ ರವಿರಾಜ್ (32) ಎಂದು ಗುರುತಿಸಲಾಗಿದೆ. ಈತ ಪೋಕ್ಸೋ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಿದ್ದು, ನ್ಯಾಯಾಲಯದ ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ನೆಲಕ್ಕೆ ಅಪ್ಪಳಿಸಿದ ಆರೋಪಿಯ ತಲೆಗೆ ಭಾರೀ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. […]

ಮಂಗಳೂರು: ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದ ಪೋಕ್ಸೋ ಪ್ರಕರಣದ ಆರೋಪಿ ➤ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಪಿಕಪ್ ಢಿಕ್ಕಿ ➤ ಇಬ್ಬರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) Newskadaba.com ಉಪ್ಪಿನಂಗಡಿ, ಆ.30. ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯೊಂದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೆಕ್ಯಾನಿಕ್ ಗಳು ಸ್ಥಳದಲ್ಲೇ ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಬೆದ್ರೋಡಿ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಆಂಧ್ರಪ್ರದೇಶ ಮೂಲದ ಲಾರಿಯೊಂದು ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದು, ಅದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ

ಉಪ್ಪಿನಂಗಡಿ: ಪಿಕಪ್ ಢಿಕ್ಕಿ ➤ ಇಬ್ಬರು ಮೃತ್ಯು, ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಆಟೋ ರಿಕ್ಷಾ – ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ರಿಕ್ಷಾ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ.27. ಆಟೋ ರಿಕ್ಷಾ ಹಾಗೂ ಇಂಡಿಕಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಪುಣಚ ಗ್ರಾಮದ ಮಣಿಲ ಎಂಬಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತ‌ ರಿಕ್ಷಾ ಚಾಲಕನನ್ನು ಪರಿಯಾಲ್ತಡ್ಕ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಮಣಿಲ ಬಳಿ ಎರಡು ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಅಶ್ರಫ್ ರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  

ವಿಟ್ಲ: ಆಟೋ ರಿಕ್ಷಾ – ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ರಿಕ್ಷಾ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ➤ ಓರ್ವನ ಬಂಧನ, 4 ಕರು, 40 ಕೆಜಿ ದನದ ಮಾಂಸ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.27. ಅಕ್ರಮ‌ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಪೊಲೀಸರು 40 ಕೆಜಿ ದನದ ಮಾಂಸ, ಕಟ್ಟಿ ಹಾಕಿದ್ದ 4 ಕರುಗಳು ಸೇರಿದಂತೆ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಪರಾರಿಯಾದ ಘಟನೆ ಶುಕ್ರವಾರ ಬೆಳಿಗ್ಗೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಳಾರ ನಿವಾಸಿ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ. ಕಳಾರ ಇಸ್ಮಾಯಿಲ್ ಎಂಬವರ ಪಾಳು ಬಿದ್ದ ಶೆಡ್ ನಲ್ಲಿ ಅಕ್ರಮವಾಗಿ ಮಾಂಸ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ

ಕಡಬ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ➤ ಓರ್ವನ ಬಂಧನ, 4 ಕರು, 40 ಕೆಜಿ ದನದ ಮಾಂಸ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಪರಿಚಿತ ಯುವತಿಯ ವಿಡಿಯೋ ಕಾಲ್’ನಲ್ಲಿ ಬಟ್ಟೆ ಬಿಚ್ಚಿದ ಯುವಕ ➤ ಕಡಬದ ಆಟೋ ಚಾಲಕನ ಹನಿ ಟ್ರ್ಯಾಪ್ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಕಡಬ, ಆ.26. ನಗರಗಳಲ್ಲಿ ಕೇಳಿ ಬರುತ್ತಿದ್ದ ವೀಡಿಯೋ ಟ್ರ್ಯಾಪ್ ಜಾಲ ಇದೀಗ ಹಳ್ಳಿಗೂ ಕಾಲಿಟ್ಟಿದ್ದು, ವೀಡಿಯೋ ಕಾಲ್ ನಲ್ಲಿ ಬಟ್ಟೆ ಬಿಚ್ಚಿದ ಕಡಬದ ಆಟೋ ಚಾಲಕನ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಡಬ ಸಮೀಪ ಆಟೋ ಚಾಲಕನಾಗಿರುವ ಯುವಕನಿಗೆ ಯುವತಿಯೋರ್ವಳು ನಗ್ನವಾಗಿ ವೀಡಿಯೋ ಕಾಲ್ ಮಾಡಿದ್ದು, ಈ ಕಡೆಯಿಂದ ಯುವಕನೂ ಬಟ್ಟೆ ಬಿಚ್ಚಿದ್ದಾನೆ. ರಾತ್ರಿ ಹೊತ್ತು ನಡೆದ ಈ ಸಂಭಾಷಣೆಯ ವೀಡಿಯೋ ತುಣುಕೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಯುವಕನ ಮಾನ

ಅಪರಿಚಿತ ಯುವತಿಯ ವಿಡಿಯೋ ಕಾಲ್’ನಲ್ಲಿ ಬಟ್ಟೆ ಬಿಚ್ಚಿದ ಯುವಕ ➤ ಕಡಬದ ಆಟೋ ಚಾಲಕನ ಹನಿ ಟ್ರ್ಯಾಪ್ ವೀಡಿಯೋ ವೈರಲ್ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಪಾಲುದಾರಿಕೆ ಹೆಸರಲ್ಲಿ ಲಕ್ಷಾಂತರ ರೂ. ಎಗರಿಸಿ ಪರಾರಿ ➤ ಹಣ, ಚಿನ್ನ ಕೊಟ್ಟು ಕೈ ಸುಟ್ಟುಕೊಂಡ ವಿವಿಧ ವ್ಯಾಪಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ಆ.25. ಇತ್ತೀಚೆಗೆ ಶುಭಾರಂಭಗೊಂಡ ಹೊಟೇಲೊಂದರಲ್ಲಿ ಕೆಲಸದಲ್ಲಿದ್ದ ವ್ಯಕ್ತಿಯೋರ್ವ ಪಾಲುದಾರಿಕೆಯ ಹೆಸರಿನಲ್ಲಿ ಸ್ಥಳೀಯ ಜನರೊಂದಿಗೆ ಸ್ನೇಹ ಸಂಪಾದಿಸಿ ನಂತರ ಲಕ್ಷಾಂತರ ರೂ. ಹಣವನ್ನು ಹಾಗೂ ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡಿ ಪರಾರಿಯಾಗಿರುವ ಘಟನೆ ಕಡಬದಿಂದ ವರದಿಯಾಗಿದೆ. ಪರಾರಿಯಾಗಿರುವ ವ್ಯಕ್ತಿಯನ್ನು ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಹೋಬಳಿಯ ರಾಮಮಂದಿರ ಸಮೀಪದ ನಿವಾಸಿ ಎಂ.ಟಿ. ಕರೀಗೌಡ ಎಂಬವರ ಪುತ್ರ ಶರತ್ ಬಾಬು ಸಿ.ಕೆ. ಎಂದು ಗುರುತಿಸಲಾಗಿದೆ. ಈತ ಕಡಬದಲ್ಲಿ ನೂತನವಾಗಿ ಆರಂಭವಾದ ಹೋಟೆಲ್ ಒಂದರಲ್ಲಿ ಅಡುಗೆ ಕೆಲಸಗಾರನಾಗಿ

ಕಡಬ: ಪಾಲುದಾರಿಕೆ ಹೆಸರಲ್ಲಿ ಲಕ್ಷಾಂತರ ರೂ. ಎಗರಿಸಿ ಪರಾರಿ ➤ ಹಣ, ಚಿನ್ನ ಕೊಟ್ಟು ಕೈ ಸುಟ್ಟುಕೊಂಡ ವಿವಿಧ ವ್ಯಾಪಾರಿಗಳು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ➤ ಗಲಭೆಗೆ ಹುನ್ನಾರ..?

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.23. ಇಲ್ಲಿನ ಹಳೆಗೇಟು ಬಳಿ ಇರುವ ಮೀನಿನ ಅಂಗಡಿಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಇಲ್ಲಿನ ಹಳೆಗೇಟು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಅಶೋಕ್ ಎಂಬವರಿಗೆ ಸೇರಿದ ಮೀನಿನ ಅಂಗಡಿಯಿದ್ದು, ಅದಕ್ಕೆ ಆದಿತ್ಯವಾರ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯಿಂದ ಮೀನಿನ ಅಂಗಡಿ ಹಾಗೂ ಮಂಜುಗಡ್ಡೆ ಹಾಕಿ ಶೇಖರಿಸಿಟ್ಟ ಮೀನು ಸುಟ್ಟು ಹೋಗಿವೆ. ಅಶೋಕ್ ಅವರು ಹಿಂದೂ ಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು, ಗಲಭೆಗೆ ಕುಮ್ಮಕ್ಕು ನೀಡುವ

ಉಪ್ಪಿನಂಗಡಿ: ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ➤ ಗಲಭೆಗೆ ಹುನ್ನಾರ..? Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಾಯಿ-ಮಗಳಿಂದಲೇ ಹನಿ ಟ್ರ್ಯಾಪ್ ದಂಧೆ ➤ ಖತರ್ನಾಕ್ ಗ್ಯಾಂಗ್ ನ ಹೆಡೆಮುರಿ ಕಟ್ಟಿದ ಪೊಲೀಸರು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಆ.19. ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಗ್ಯಾಂಗ್ ವೊಂದನ್ನು ಜನನಬಂಧಿಸಿರುವ ಚಿಕ್ಕಮಗಳೂರು ಪೊಲೀಸರು ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ವರ್ಗದವರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಿದ್ದ ತಂಡ ಆ ಬಳಿಕ ಮನೆಗೆ ಕರೆಸಿ ಮೋಸದ ಬಲೆಗೆ ಬೀಳಿಸಿ ನಗ್ನ ವಿಡಿಯೋ ಮಾಡಿಕೊಂಡು ಯಾಮಾರಿಸುತ್ತಿದ್ದರು. ತಾಯಿ, ಮಗಳು ಸೇರಿದಂತೆ 6 ಮಹಿಳೆಯರು ಹಾಗೂ ಏಳು ಪುರುಷರು ಮೋಸದಿಂದ ಹನಿಟ್ರ್ಯಾಪ್ ನಡೆಸಿ ವಂಚಿಸುತ್ತಿದ್ದರು ಎಂದು ತಿಳಿದುಬಂದಿದೆ. ಇವರಿಂದ ಮೋಸ

ತಾಯಿ-ಮಗಳಿಂದಲೇ ಹನಿ ಟ್ರ್ಯಾಪ್ ದಂಧೆ ➤ ಖತರ್ನಾಕ್ ಗ್ಯಾಂಗ್ ನ ಹೆಡೆಮುರಿ ಕಟ್ಟಿದ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಟ್ಟಿಗೆಯಿಂದ ಹೊಡೆದು ಪತ್ನಿಯ ಕೊಂದ ಪತಿ ಮಹಾಶಯ ➤ ಗಂಡ – ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.19. ಪತ್ನಿಯ ಮೇಲಿನ ಸಂಶಯದಿಂದ ಆಕೆಯನ್ನು ಕಟ್ಟಿಗೆಯಿಂದ ಹೊಡೆದು ಕೊಂದು ಆ ಬಳಿಕ ಮಹಡಿಯಿಂದ ಬಿದ್ದ ಬಗ್ಗೆ ಕಟ್ಟು ಕಥೆ ಕಟ್ಟಿದ ಪತಿ ಮಹಾಶಯನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಹೊರವಲಯದ ದರೆಗುಡ್ಡೆ ಎಂಬಲ್ಲಿ ಈ ಕೃತ್ಯ ನಡೆದಿದ್ದು, ದಿನ್ ರಾಜ್ ಎಂಬಾತ ಒಂದೂವರೆ ವರ್ಷದ ಹಿಂದೆ ಸುನಿತಾ ಎಂಬ ಯುವತಿಯನ್ನು ವಿವಾಹವಾಗಿದ್ದ ಎನ್ನಲಾಗಿದೆ. ಆದರೆ ಸುನಿತಾಳ ತಾಯಿ ಮನೆಯಲ್ಲಿ ಒಬ್ಬರೇ ಇರುತ್ತಿದ್ದರಿಂದ, ಮಗಳು ಸುನಿತಾ ಸಹ ತಾಯಿಯೊಂದಿಗೆ ತವರು ಮನೆಯಲ್ಲೇ

ಕಟ್ಟಿಗೆಯಿಂದ ಹೊಡೆದು ಪತ್ನಿಯ ಕೊಂದ ಪತಿ ಮಹಾಶಯ ➤ ಗಂಡ – ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಖ್ಯಾತ ನಟಿಯ ಬಾಯ್ ಫ್ರೆಂಡ್ ಜೊತೆಗಿನ ಸೆಕ್ಸ್ ವೀಡಿಯೋ ವೈರಲ್ ➤ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ವೀಡಿಯೋ ಟ್ರೆಂಡ್

(ನ್ಯೂಸ್ ಕಡಬ) newskadaba.com ಬಿಹಾರ, ಆ.14. ಖ್ಯಾತ ಭೋಜಪುರಿ ನಟಿ ತ್ರಿಷಾ ಕರ್ ಮಧು ಅವರು ತನ್ನ ಬಾಯ್ ಫ್ರೆಂಡ್ ಜೊತೆಗಿನ ಸೆಕ್ಸ್ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟಿ ಮಧು ಅವರು ತನ್ನ ಬಾಯ್ ಫ್ರೆಂಡ್ ಜೊತೆ ಬೆಡ್ ರೂಮಿನಲ್ಲಿದ್ದ ಖಾಸಗಿ ಕ್ಷಣಗಳ ವಿಡಿಯೋ ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆಕೆಯ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ. ಇತ್ತ ವೀಡಿಯೋ ವೈರಲ್ ಆಗುತ್ತಿದ್ದಂತೆ ಫೇಸ್‌ಬುಕ್‌ ಲೈವ್ ನಲ್ಲಿ ವಿಡಿಯೋ ವೈರಲ್ ಮಾಡಿದವರ ವಿರುದ್ಧ ಮಧು ಗುಡುಗಿದ್ದಾರೆ.

ಖ್ಯಾತ ನಟಿಯ ಬಾಯ್ ಫ್ರೆಂಡ್ ಜೊತೆಗಿನ ಸೆಕ್ಸ್ ವೀಡಿಯೋ ವೈರಲ್ ➤ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ವೀಡಿಯೋ ಟ್ರೆಂಡ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top