ಕ್ರೈಮ್ ನ್ಯೂಸ್

ಕಡಬ: ಬಾಲಕಿಯ ಅತ್ಯಾಚಾರ ಯತ್ನ ಪ್ರಕರಣ ಪೂರ್ವಯೋಜಿತ ➤ ವಾಡ್ಯಪ್ಪ ಗೌಡ ಎರ್ಮಾಯಿಲ್ ಆರೋಪ

ಕಡಬ, ಆ.14. ಬಿಳಿನೆಲೆ ಕಿದು ಸಮೀಪದ ಹಾಲುಮಡ್ಡಿಯ ತೋಟದಲ್ಲಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ಹಾಗೂ ಕಿಡ್ನಾಪ್‌ಗೆ ಯತ್ನ ಮಾಡಿರುವ ಪ್ರಕರಣವು ಪೂರ್ವ ಯೋಜಿತವಾಗಿದ್ದು, ಪೊಲೀಸರು ಕೂಡಾ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ಆರೋಪಿಯನ್ನು ರಕ್ಷಿಸುವ ಯತ್ನ ನಡೆಸಿದ್ದರು ಎಂದು ಬಿಳಿನೆಲೆ ಗ್ರಾ.ಪಂ. ಮಾಜಿ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್ ಆರೋಪಿಸಿದ್ದಾರೆ. ಅವರು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರಕರಣದ ಆರೋಪಿಯ ಬಗ್ಗೆ ಸ್ಪಷ್ಟ ಮಾಹಿತಿಯಿದ್ದರೂ ಪೊಲೀಸರು ಪ್ರಕರಣ ದಾಖಲಿಸಲು ಮೀನಾಮೇಷ ನಡೆಸಿ ಊರವರು ಒತ್ತಡ ಹಾಕಿದ ಬಳಿಕವೇ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು […]

ಕಡಬ: ಬಾಲಕಿಯ ಅತ್ಯಾಚಾರ ಯತ್ನ ಪ್ರಕರಣ ಪೂರ್ವಯೋಜಿತ ➤ ವಾಡ್ಯಪ್ಪ ಗೌಡ ಎರ್ಮಾಯಿಲ್ ಆರೋಪ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮದುವೆಗೆ ಮನೆಯವರ ವಿರೋಧ ➤ ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ.14. ಮದುವೆಗೆ ಮನೆಯಲ್ಲಿ ವಿರೋಧ ವ್ಯಕ್ತವಾಗಿದ್ದರಿಂದ ಪ್ರೇಮಿಗಳು ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳನ್ನು ಚಾಮರಾಜನಗರದ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಕಾಂಚನ(20) ಹಾಗೂ ಶ್ರೀನಿವಾಸ್(26) ಎಂದು ಗುರುತಿಸಲಾಗಿದೆ. ಸ್ಟಾಫ್ ನರ್ಸ್ ಆಗಿದ್ದ ಕಾಂಚನ ಹಾಗೂ ಕಾರು ಚಾಲಕನಾಗಿದ್ದ ಶ್ರೀನಿವಾಸ್ ಪರಸ್ಪರ ಪ್ರೀತಿಸುತ್ತಿದ್ದು, ಇವರ ಮದುವೆಗೆ ಇಬ್ಬರ ಮನೆಯಲ್ಲೂ ವಿರೋಧ ವ್ಯಕ್ತವಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲೂಕು ತೇರಂಬಳ್ಳಿ ಕೆರೆಯ ಬಳಿ

ಮದುವೆಗೆ ಮನೆಯವರ ವಿರೋಧ ➤ ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆರೆಗೆ ಬಿದ್ದ ಮಗು ಜೊತೆ ರಕ್ಷಿಸಲು ನೀರಿಗೆ ಹಾರಿದ ತಾಯಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಆ.08. ಆಕಸ್ಮಿಕವಾಗಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಹಾಗೂ ಮಗು ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸುಳ್ಯದಲ್ಲಿ ಭಾನುವಾರದಂದು ಸಂಭವಿಸಿದೆ. ಮೃತರನ್ನು ಸುಳ್ಯ ತಾಲೂಕು ನೆಲ್ಲೂರು ಕೆಮ್ರಾಜೆ ಗ್ರಾಮದ ಮಾಪಲಕಜೆ ನಿವಾಸಿ ಸಂಗೀತಾ(30) ಹಾಗೂ ಆಕೆಯ ಮಗು‌ ಮೂರೂವರೆ ವರ್ಷದ ಅಭಿಮನ್ಯು ಎಂದು ಗುರುತಿಸಲಾಗಿದೆ. ಸಂಗೀತಾರನ್ನು ಮೆಲ್ಕಾರ್ ನಿವಾಸಿ ಅಮಿತ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿದ್ದು, ಕಳೆದೆರಡು ದಿನಗಳ ಹಿಂದಷ್ಟೇ ಪೂಜೆಯ ನಿಮಿತ್ತ ತವರು

ಕೆರೆಗೆ ಬಿದ್ದ ಮಗು ಜೊತೆ ರಕ್ಷಿಸಲು ನೀರಿಗೆ ಹಾರಿದ ತಾಯಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತನ್ನ ಅಪ್ರಾಪ್ತೆ ಶಿಷ್ಯೆಯನ್ನೇ ಅತ್ಯಾಚಾರಗೈದ ಕಾಮುಕ ಶಿಕ್ಷಕ ➤ ಪೋಕ್ಸೋ ಕಾಯ್ದೆಯಡಿ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.08. ಅಪ್ರಾಪ್ತ ವಯಸ್ಸಿನ ತನ್ನ ಶಿಷ್ಯೆಯನ್ನೇ ಅತ್ಯಾಚಾರಗೈದ ಕಾಮುಕ ಶಿಕ್ಷಣಕನನ್ನು ಸುಬ್ರಹ್ಮಣ್ಯ ಪೊಲೀಸರು ಭಾನುವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂದು ಗುರುತಿಸಲಾಗಿದೆ. ಆರೋಪಿಯು 2018 ರ ಬಳಿಕ ಹಲವು ಬಾರಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು ಆ ಬಳಿಕ ಫೋಟೋ ತೆಗೆದಿದ್ದಲ್ಲದೆ, ಈ ಬಗ್ಗೆ ಯಾರಲ್ಲಾದರೂ ಹೇಳಿದರೆ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಬಾಲಕಿಯು ಸುಬ್ರಹ್ಮಣ್ಯ

ತನ್ನ ಅಪ್ರಾಪ್ತೆ ಶಿಷ್ಯೆಯನ್ನೇ ಅತ್ಯಾಚಾರಗೈದ ಕಾಮುಕ ಶಿಕ್ಷಕ ➤ ಪೋಕ್ಸೋ ಕಾಯ್ದೆಯಡಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೈಲಿನಡಿಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಆ.07. ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರು – ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ನಡುವಿನ ಎಡಮಂಗಲದಲ್ಲಿ ಶನಿವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕು ಎಡಮಂಗಲ ನಿವಾಸಿ ಭರತ ಎಂದು ಗುರುತಿಸಲಾಗಿದೆ. ಭರತನಿಗೆ 22 ವರ್ಷ ವಯಸ್ಸಾಗಿತ್ತು. ಶನಿವಾರ ಸಂಜೆ ರೈಲು ಹಳಿಯ ಮೇಲೆ ಭರತನ ಮೃತದೇಹ ದೊರೆತಿದ್ದು, ಘಟನೆಯ ಬಗ್ಗೆ ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.      

ರೈಲಿನಡಿಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಣ್ಣನ ಪತ್ನಿಯ ಜೊತೆ ಅನೈತಿಕ ಸಂಬಂಧ ಆರೋಪ ➤ ಸಲಾಕೆಯಿಂದ ಹೊಡೆದು ತಮ್ಮನನ್ನು ಕೊಂದ ಅಣ್ಣ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.07. ಅತ್ತಿಗೆಯ ಜೊತೆ ಅನೈತಿಕ ಸಂಬಂಧ ಹೊಂದಿದ ಆರೋಪದಲ್ಲಿ ಸ್ವಂತ ತಮ್ಮನನ್ನು ಅಣ್ಣನೇ ಸಲಾಕೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಾಂತಿಗುಡ್ಡೆ ನಿವಾಸಿ ಸುಂದರ(30) ಎಂದು ಗುರುತಿಸಲಾಗಿದೆ. ಅವಿವಾಹಿತವಾಗಿದ್ದ ಸುಂದರ ಮೂಲ ಮನೆಯಲ್ಲಿ ಒಬ್ಬನೇ ವಾಸವಾಗಿದ್ದು, ಆತನ ಮನೆಯ ಸಮೀಪದಲ್ಲಿರುವ ಅಣ್ಣನ ಮನೆಯಿಂದ ಅತ್ತಿಗೆ ಊಟ- ತಿಂಡಿ‌ ನೀಡುತ್ತಿದ್ದರು ಎನ್ನಲಾಗಿದೆ. ಅತ್ತಿಗೆಯ ಜೊತೆ ಅನೈತಿಕ‌ ಸಂಬಂಧವಿದೆ ಎಂದು

ಅಣ್ಣನ ಪತ್ನಿಯ ಜೊತೆ ಅನೈತಿಕ ಸಂಬಂಧ ಆರೋಪ ➤ ಸಲಾಕೆಯಿಂದ ಹೊಡೆದು ತಮ್ಮನನ್ನು ಕೊಂದ ಅಣ್ಣ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆನ್‌ಲೈನ್ ತರಗತಿಯ ಅವಾಂತರ ➤ ಕಾಲೇಜಿಗೆಂದು ತೆರಳಿದ ಅಪ್ರಾಪ್ತ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.06. ಮೊಬೈಲ್ ಮೂಲಕ ಹುಟ್ಟಿಕೊಂಡ ಪ್ರೀತಿಯಿಂದ ಅಪ್ರಾಪ್ತ ಯುವತಿಯು ಸ್ಥಳೀಯ ಯುವಕನ ಜೊತೆ ನಾಪತ್ತೆಯಾಗಿರುವ ಘಟನೆ ಕಡಬ ಸಮೀಪದ ಕಳಾರದಿಂದ ವರದಿಯಾಗಿದೆ. ಕಳಾರ ನಿವಾಸಿ ಹದಿನೇಳು ವರ್ಷದ ಯುವತಿಯು ಗುರುವಾರದಂದು ಕಾಲೇಜಿಗೆಂದು ಮನೆಯಿಂದ ತೆರಳಿದ್ದು, ಸಂಜೆಯವರೆಗೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡಿಕಾಡಿದ ಆಕೆಯ ಮನೆಯವರು ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಇಂದು ಕಡಬ ಠಾಣೆಗೆ ದೂರು ನೀಡಿದ್ದಾರೆ. ಇದೇ ವೇಳೆ ಸ್ಥಳೀಯ ನಿವಾಸಿ 24 ವರ್ಷದ ಹನೀಫ್ ಎಂಬಾತ

ಆನ್‌ಲೈನ್ ತರಗತಿಯ ಅವಾಂತರ ➤ ಕಾಲೇಜಿಗೆಂದು ತೆರಳಿದ ಅಪ್ರಾಪ್ತ ಯುವತಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಕ್ರಮ ಮರದ ದಿಮ್ಮಿ ಸಾಗಾಟ ಪತ್ತೆ ➤ ಲಾರಿ, ಬೈಕ್ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸ್ವತ್ತು ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.02. ಅಕ್ರಮ ಮರದ ದಿಮ್ಮಿ ಸಾಗಾಟ ಪ್ರಕರಣವೊಂದನ್ನು ಪತ್ತೆ ಹಚ್ಚಿದ ಪುತ್ತೂರು ವಲಯದ ಅರಣ್ಯ ಇಲಾಖೆಯ ಅಧಿಕಾರಿಗಳು 9 ಮರದ ದಿಮ್ಮಿ, ಒಂದು ಲಾರಿ, ಒಂದು ಬೈಕ್ ಸಹಿತ 8 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಸೋಮವಾರದಂದು ವಶಪಡಿಸಿಕೊಂಡಿದ್ದಾರೆ. ಲಾರಿಯೊಂದರಲ್ಲಿ ಕಿರಾಲ್ ಬೋಗಿ ಜಾತಿಗೆ ಸೇರಿದ ಮರದ ದಿಮ್ಮಿಗಳನ್ನು ಅಕ್ರಮವಾಗಿ ಲಾರಿಯಲ್ಲಿ ಸಾಗಾಟ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸುಳ್ಯ ತಾಲೂಕಿನ ಜಾಲ್ಸೂರು

ಪುತ್ತೂರು: ಅಕ್ರಮ ಮರದ ದಿಮ್ಮಿ ಸಾಗಾಟ ಪತ್ತೆ ➤ ಲಾರಿ, ಬೈಕ್ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸ್ವತ್ತು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಫೇಸ್‌ಬುಕ್‌ ಪರಿಚಯ ಕೊಲೆಯಲ್ಲಿ ಅಂತ್ಯ ➤ ಪ್ರಿಯತಮೆಯನ್ನು ಗುಂಡಿಟ್ಟು ಕೊಂದು ಪ್ರಿಯಕರ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಣ್ಣೂರು, ಆ.01. ಬ್ರೇಕಪ್ ಆಗೋಣ ಎಂದು ಹೇಳಿದ್ದಕ್ಕೆ ತನ್ನ ಪ್ರಿಯತಮೆಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದಿಂದ ವರದಿಯಾಗಿದೆ. ಕೇರಳದ ಕಣ್ಣೂರು ನಿವಾಸಿ ಮಾನಸ(24) ಎಂಬಾಕೆಗೆ ವರ್ಷದ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ತನ್ನದೇ ಜಿಲ್ಲೆಯ ರಾಖಿಲ್(32) ಎಂಬಾತನ ಪರಿಚಯವಾಗಿತ್ತು. ಯುವತಿಯು ಕೋತಮಂಗಲಂ ಸಮೀಪದ ನೆಲ್ಲಿಕುಝಿ ಎಂಬಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದು, ಈ ನಡುವೆ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಕಳೆದ ಒಂದು ತಿಂಗಳ ಹಿಂದೆ ಲವ್ ಬ್ರೇಕಪ್ ಮಾಡಿಕೊಳ್ಳಲು

ಫೇಸ್‌ಬುಕ್‌ ಪರಿಚಯ ಕೊಲೆಯಲ್ಲಿ ಅಂತ್ಯ ➤ ಪ್ರಿಯತಮೆಯನ್ನು ಗುಂಡಿಟ್ಟು ಕೊಂದು ಪ್ರಿಯಕರ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಂಜಿರ: ಆಕಸ್ಮಿಕವಾಗಿ ನೀರು ಪಾಲಾಗಿದ್ದ ಮಹಿಳೆಯ ಮೃತದೇಹ ಪತ್ತೆ ➤ ಆತ್ಮಹತ್ಯೆ ಶಂಕೆಯೆಂದು ಪ್ರಕಟವಾಗಿದ್ದಕ್ಕೆ ವಿಷಾದ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.01. ಸೊಪ್ಪು ತರಲೆಂದು ತೆರಳಿದ್ದ ವೇಳೆ ಆಕಸ್ಮಿಕವಾಗಿ ನೀರುಪಾಲಾಗಿದ್ದ ಮಹಿಳೆಯ ಮೃತದೇಹವು ಭಾನುವಾರದಂದು ಗುಂಡ್ಯ ಹೊಳೆಯ ಎಂಜಿರ ಎಂಬಲ್ಲಿ ಪತ್ತೆಯಾಗಿದೆ. ಕಡಬ ತಾಲೂಕಿನ ರೆಖ್ಯಾ ಗ್ರಾಮದ ನೇಲ್ಯಡ್ಕ‌ ಸಮೀಪದ ಉರ್ನಡ್ಕ ನಿವಾಸಿ ಸುಂದರ ಗೌಡ ಎಂಬವರ ಪತ್ನಿ ಶಕುಂತಲಾ(50) ಕಳೆದ ಹಲವು ಸಮಯಗಳಿಂದ ಪಿತ್ತ ಖಾಯಿಲೆಯಿಂದ ಬಳಲುತ್ತಿದ್ದು, ಶನಿವಾರ ಬೆಳಿಗ್ಗೆ ನಾಟಿ ಔಷಧಿ ನೆಲನೆಲ್ಲಿ ಸೊಪ್ಪು ತರಲೆಂದು ಮನೆಯಿಂದ ತೆರಳಿದ್ದವರು ಆಕಸ್ಮಿಕವಾಗಿ ತನ್ನ ಮನೆಯ ಪಕ್ಕದಲ್ಲಿ ಹರಿಯುವ ಗುಂಡ್ಯ ಹೊಳೆಯಲ್ಲಿ ನೀರುಪಾಲಾಗಿದ್ದರು.

ಎಂಜಿರ: ಆಕಸ್ಮಿಕವಾಗಿ ನೀರು ಪಾಲಾಗಿದ್ದ ಮಹಿಳೆಯ ಮೃತದೇಹ ಪತ್ತೆ ➤ ಆತ್ಮಹತ್ಯೆ ಶಂಕೆಯೆಂದು ಪ್ರಕಟವಾಗಿದ್ದಕ್ಕೆ ವಿಷಾದ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top