ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು ➤ ಚಾಲಕ ಮೃತ್ಯು

(ನ್ಯೂಸ್ ಕಡಬ) Newskadaba.com ಉಡುಪಿ, ಜು. 19. ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಬಿದ್ದ ಪರಿಣಾಮ ಗ್ಯಾರೇಜ್ ಮಾಲಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಚ್ಚಿಲ-ಮುದರಂಗಡಿ ರಸ್ತೆಯ ಎಲ್ಲೂರು ಸಮೀಪದ ಪಣಿಯೂರು ಪೆಜತ್ತಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಕಾಪು ಕೊಪ್ಪಲಂಗಡಿ ನಿವಾಸಿ ರವೀಂದ್ರ ಪೂಜಾರಿ (38) ಎಂದು ಗುರುತಿಸಲಾಗಿದೆ. ಉದ್ಯಾವರದ ಬಲಾಯಿಪಾದೆ ಎಂಬಲ್ಲಿ ಗ್ಯಾರೇಜ್ ನಡೆಸುತ್ತಿದ್ದ ಇವರು ಆದಿತ್ಯವಾರದಂದು ರಾತ್ರಿ ಎಲ್ಲೂರಿಗೆ ತೆರಳಿದ್ದು, ಅಲ್ಲಿಂದ ಹಿಂದಿರುಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಚರಂಡಿ ಮತ್ತು ಮಣ್ಣಿನ […]

ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು ➤ ಚಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಕೊಠಡಿಗೆ ತಗುಲಿದ ಬೆಂಕಿ..! ➤ ವಿದ್ಯಾರ್ಥಿಗಳ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 19. ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನವಾದ ಇಂದು ಪರೀಕ್ಷೆ ನಡೆಯುತ್ತಿದ್ದ ಕೊಠಡಿಗೆ ಬೆಂಕಿ ತಗುಲಿದ ಘಟನೆ ಉಳ್ಳಾಲದ ಬಬ್ಬುಕಟ್ಟೆ ಎಂಬಲ್ಲಿ ನಡೆದಿದೆ. ಬಬ್ಬುಕಟ್ಟೆ ಖಾಸಗಿ ಶಾಲೆಯ ಲ್ಯಾಬ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಕೊಠಡಿಗೂ ಬೆಂಕಿ ತಗುಲಿದೆ. ಈ ಸಂದರ್ಭ ತಕ್ಷಣವೇ ಕಾರ್ಯ ಪ್ರವೃತ್ತರಾದ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಬೇರೊಂದು ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ

ಉಳ್ಳಾಲ: ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಕೊಠಡಿಗೆ ತಗುಲಿದ ಬೆಂಕಿ..! ➤ ವಿದ್ಯಾರ್ಥಿಗಳ ಸ್ಥಳಾಂತರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಐರಾವತ ಬಸ್ ➤ ಚಾಲಕ‌ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) Newskadaba.com ಮಡಿಕೇರಿ, ಜು. 19. ಚಾಲಕನ ನಿಯಂತ್ರಣ ತಪ್ಪಿದ ಐರಾವತ ಬಸ್ಸೊಂದು ರಸ್ತೆ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗಿನ ಗಡಿ ಪೆರುಂಬಾಡಿಯಲ್ಲಿ ಇಂದು ಮುಂಜಾನೆ ನಡೆದಿದೆ. ಮೃತ ಚಾಲಕನನ್ನು ಬೆಂಗಳೂರಿನ ಸ್ವಾಮಿ ಎಂದು ಗುರುತಿಸಲಾಗಿದೆ. ವಿರಾಜಪೇಟೆ ಪೊಲೀಸರು ಹಾಗೂ ಕೇರಳ ಕಾರ್ಯ ಪಡೆಯ ಸಿಬ್ಬಂದಿಗಳ ಮೂರು ಗಂಟೆಯ ಕಾರ್ಯಾಚರಣೆಯ ಬಳಿಕ ಮೃತದೇಹವನ್ನು ಹೊರಕ್ಕೆ ತೆಗೆಯಲಾಗಿದೆ. ಬಸ್ಸಿನಲ್ಲಿದ್ದ ಉಳಿದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಐರಾವತ ಬಸ್ ➤ ಚಾಲಕ‌ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಡಿದ ಮತ್ತಿನಲ್ಲಿ ಆಂಬ್ಯುಲೆನ್ಸ್ ಚಾಲನೆ- ಕಾರಿಗೆ ಢಿಕ್ಕಿ ➤ ಕಾರು ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಗದಗ, ಜು. 17. ಕುಡಿದ ಅಮಲಿನಲ್ಲಿ ಆಂಬ್ಯುಲೆನ್ಸ್ ಚಾಲನೆ ಮಾಡಿ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ಇಲ್ಲಿನ ಹೊರವಲಯದಲ್ಲಿ ನಡೆದಿದೆ. ಗಾಯಗೊಂಡ ಕಾರು ಚಾಲಕನನ್ನು ಗೋವಿಂದಪ್ಪ ಲಮಾಣಿಗ ಎಂದು ಗುರುತಿಸಲಾಗಿದೆ. ಶಿರಹಟ್ಟಿ ಕಡೆಗೆ ಹೊರಟಿದ್ದ ಆಂಬ್ಯುಲೆನ್ಸ್ ನ ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಗೆ ಆಂಬ್ಯುಲೆನ್ಸ್ ಚಾಲಕ ವಿಶ್ವನಾಥ್ ಬೋರಶೆಟ್ಟಿಯ ನಿರ್ಲಕ್ಷ್ಯವೇ ಕಾರಣ ಎಂದು ತಿಳಿದುಬಂದಿದೆ.

ಕುಡಿದ ಮತ್ತಿನಲ್ಲಿ ಆಂಬ್ಯುಲೆನ್ಸ್ ಚಾಲನೆ- ಕಾರಿಗೆ ಢಿಕ್ಕಿ ➤ ಕಾರು ಚಾಲಕನಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟವಾಡುತ್ತಿದ್ದ ವೇಳೆ‌ ಮೊಬೈಲ್ ಬ್ಯಾಟರಿ‌ ಸ್ಫೋಟ ➤ ಬಾಲಕ ಗಂಭೀರ

(ನ್ಯೂಸ್ ಕಡಬ) Newskadaba.com ಹಾವೇರಿ, ಜು. 17. ಬಾಲಕನೋರ್ವ ಆಟವಾಡುತ್ತಿದ್ದ ವೇಳೆ ಮೊಬೈಲ್ ಬ್ಯಾಟರಿ ಸ್ಫೋಟಗೊಂಡು ಬಾಲಕ ಗಾಯಗೊಂಡಿರುವ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ಹುರಳಿಕುಪ್ಪಿ ಎಂಬಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ಕಾರ್ತಿಕ್ (10) ಎಂದು ಗುರುತಿಸಲಾಗಿದೆ. ಈತ ಆಟವಾಡುತ್ತಿದ್ದ ವೇಳೆ ಮನೆಯ ಪಕ್ಕದಲ್ಲಿ ಮೊಬೈಲ್ ನ ಹಳೆಯ ಬ್ಯಾಟರಿಯೊಂದು ಸಿಕ್ಕಿದ್ದು, ಇದನ್ನು ಕೈಯಲ್ಲಿ ಹಿಡಿದುಕೊಂಡು ಬಾಲಕ ಆಟವಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಬ್ಯಾಟರಿ ಸ್ಫೋಟಗೊಂಡಿದ್ದು, ಬಾಲಕನ ಮುಖ ಹಾಗೂ ಕೈಗೆ ಗಾಯಗಳಾಗಿವೆ.

ಆಟವಾಡುತ್ತಿದ್ದ ವೇಳೆ‌ ಮೊಬೈಲ್ ಬ್ಯಾಟರಿ‌ ಸ್ಫೋಟ ➤ ಬಾಲಕ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಂಬಳ ಓಟಗಾರ ಶ್ರೀನಿವಾಸ್ ಗೌಡರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ- ದೂರು ದಾಖಲು ➤ ಆರೋಪಿಯ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯ

(ನ್ಯೂಸ್ ಕಡಬ) Newskadaba.com ಮೂಡುಬಿದಿರೆ, ಜು. 17. ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳ ಕ್ಷೇತ್ರದಲ್ಲಿ ಅತೀ ವೇಗದ ಓಟಗಾರನೆಂದು ಪ್ರಸಿದ್ದಿ ಗಳಿಸಿರುವ ಅಶ್ವತ್ಥಪುರದ ಶ್ರೀನಿವಾಸ ಗೌಡ ರವರಿಗೆ ಪ್ರಶಾಂತ್ ಎಂಬಾತ ದೂರವಾಣಿ ಮುಖಾಂತರ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆಡಿಯೋವೊಂದು ಇದೀಗ ವೈರಲ್ ಆಗಿದೆ. ದೂರವಾಣಿ ಕರೆ ಮೂಲಕ ನಿಂದಿಸಿರುವ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಂಬಳ ಕೋಣಗಳ ಯಜಮಾನರು ಹಾಗೂ ಶ್ರೀನಿವಾಸ ಗೌಡರ ಅಭಿಮಾನಿಗಳು ಮೂಡುಬಿದಿರೆ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ.

ಕಂಬಳ ಓಟಗಾರ ಶ್ರೀನಿವಾಸ್ ಗೌಡರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ- ದೂರು ದಾಖಲು ➤ ಆರೋಪಿಯ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಹಿಟ್ ಆ್ಯಂಡ್ ರನ್ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.16. ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಗುಂಡ್ಯದಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ವಿರುದ್ಧ ದಿಕ್ಕಿನಿಂದ ಆಗಮಿಸಿದ ಅಪರಿಚಿತ ವಾಹನವು ಲಾವತ್ತಡ್ಕ ಸಮೀಪ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಮೃತ ವ್ಯಕ್ತಿಯ ಪರಿಚಯ ಇನ್ನಷ್ಟೇ ದೊರೆಯಬೇಕಿದೆ. ಗಂಭೀರ ಗಾಯಗೊಂಡಿರುವ ಸಕಲೇಶಪುರ ತಾಲೂಕಿನ

ನೆಲ್ಯಾಡಿ: ಹಿಟ್ ಆ್ಯಂಡ್ ರನ್ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿವಾದಿತ ಫೇಸ್‌ಬುಕ್‌ ಪೋಸ್ಟ್ ➤ ಸೌದಿಯ ಜೈಲಿನಲ್ಲಿದ್ದ ಮಂಗಳೂರಿನ ಹರೀಶ್ ಬಂಗೇರ ಬಿಡುಗಡೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಜು. 16. ವಿವಾದಿತ ಫೇಸ್‍ಬುಕ್ ಪೋಸ್ಟ್ ಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್‌ ಬಂಗೇರ ಎಸ್‌. ಅವರು ಜೈಲಿನಿಂದ ಬಿಡುಗಡೆಯಾಗಿ ಶೀಘ್ರದಲ್ಲೇ ತಾಯ್ನಾಡಿಗೆ ಮರಳಲಿದ್ದಾರೆ. ಈ ಬಗ್ಗೆ ಮಂಗಳೂರು ಅಷೋಷಿಯೇಷನ್ ಸೌದಿ ಅರೇಬಿಯಾ(MASA) ಇದರ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಮಾಹಿತಿ ನೀಡಿ, ಶೀಘ್ರದಲ್ಲೇ ಹರೀಶ್ ಬಂಗೇರ ರವರು ತಾಯ್ನಾಡಿಗೆ ಮರಳಲಿದ್ದಾರೆ ಎಂದಿದ್ದಾರೆ. ಇವರ ವಿಮಾನ ಪ್ರಯಾಣದ ವೆಚ್ಚವನ್ನು ಕೂಡಾ ಮಂಗಳೂರು ಅಷೋಷಿಯೇಷನ್ ನ

ವಿವಾದಿತ ಫೇಸ್‌ಬುಕ್‌ ಪೋಸ್ಟ್ ➤ ಸೌದಿಯ ಜೈಲಿನಲ್ಲಿದ್ದ ಮಂಗಳೂರಿನ ಹರೀಶ್ ಬಂಗೇರ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮೀನುಗಾರನ ಬಲಿ ಪಡೆದ ಮೀನು ಹಿಡಿಯುವ ಬಲೆ ➤ ಮೀನು ಹಿಡಿಯುತ್ತಿದ್ದ ವೇಳೆ ದುರ್ಘಟನೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಜು. 16. ಮೀನುಗಾರನೋರ್ವ ಬಲೆ ಹಾಕಿ ಮೀನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಅಳಿವೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ತೋಟಬೆಂಗ್ರೆ ನಿವಾಸಿ ಜಯಪುತ್ರನ್ (55) ಎಂದು ಗುರುತಿಸಲಾಗಿದೆ. ಇವರು ಅಳಿವೆಬಾಗಿಲಿನ ಸಮೀಪ ಮೀನು ಹಿಡಿಯುತ್ತಿದ್ದ ವೇಳೆ ಭಾರೀ ಗಾಳಿ- ಮಳೆ ಸುರಿದಿದ್ದು, ಈ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಇವರ ಕಾಲಿಗೆ ಮೀನು ಹಿಡಿಯುವ ಬಲೆ ಸಿಲುಕಿದ್ದರಿಂದ ಈಜಲಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಮೀನುಗಾರನ ಬಲಿ ಪಡೆದ ಮೀನು ಹಿಡಿಯುವ ಬಲೆ ➤ ಮೀನು ಹಿಡಿಯುತ್ತಿದ್ದ ವೇಳೆ ದುರ್ಘಟನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೆಂಡತಿಯ ನಗ್ನ ಫೋಟೋ ವಾಟ್ಸ್ಅಪ್ ನಲ್ಲಿ ನೋಡಿದ ಗಂಡ ➤ ಮುಂದೆ ಆಗಿದ್ದೇ ಬೇರೆ

(ನ್ಯೂಸ್ ಕಡಬ) newskadaba.com ಕಡಬ, ಜು.16. ಕಡಬದ ಯುವತಿಯ ದಾಂಪತ್ಯಕ್ಕೆ ಯುವಕನೋರ್ವ ಹುಳಿ ಹಿಂಡಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದ್ದು, ಇದೀಗ ಯುವತಿಯ ಗಂಡ ವಿಚ್ಚೇದನಕ್ಕೆ ಮುಂದಾದ ಬಗ್ಗೆ ವರದಿಯಾಗಿದೆ. ಸುಬ್ರಹ್ಮಣ್ಯದ ಯುವಕ ವಿಜೇಶ್ ಹಾಗೂ ಕಡಬದ 26 ವರ್ಷದ ಯುವತಿಯು ಪರಸ್ಪರ ಪ್ರೀತಿಸುತ್ತಿದ್ದು, 2016 ರಲ್ಲಿ ಆಕೆಯನ್ನು ಸುರತ್ಕಲ್ ನ ಲಾಡ್ಜ್ ಗೆ ಕರೆದೊಯ್ದು ದೈಹಿಕ ಸಂಪರ್ಕ ಮಾಡಿದ್ದಲ್ಲದೆ, ಆಕೆಯ ನಗ್ನ ಫೋಟೊ ಹಾಗೂ ವೀಡಿಯೋವನ್ನು ರೆಕಾರ್ಡ್ ಮಾಡಿದ್ದಾನೆ ಎನ್ನಲಾಗಿದೆ. ಯುವತಿಗೆ ಎರಡು ತಿಂಗಳ ಹಿಂದೆ ಬೇರೆ

ಹೆಂಡತಿಯ ನಗ್ನ ಫೋಟೋ ವಾಟ್ಸ್ಅಪ್ ನಲ್ಲಿ ನೋಡಿದ ಗಂಡ ➤ ಮುಂದೆ ಆಗಿದ್ದೇ ಬೇರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top