ಕ್ರೈಮ್ ನ್ಯೂಸ್

ಕಡಬ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ➤ ತೀವ್ರ ರಕ್ತಸ್ರಾವದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.15. ವಿಪರೀತ ರಕ್ತಸ್ರಾವದಿಂದಾಗಿ ಕಡಬದ ಬಾಣಂತಿ ಮಹಿಳೆಯೋರ್ವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಮಹಿಳೆಯನ್ನು ಕಡಬ ತಾಲೂಕು ಕೊಂಬಾರು ಗ್ರಾಮದ ಇಡ್ಯಡ್ಕ ಕಟ್ಟೆ ನಿವಾಸಿ ಚೇತನ್ ಎಂಬವರ ಪತ್ನಿ ವಿದ್ಯಾ(30) ಎಂದು ಗುರುತಿಸಲಾಗಿದೆ. ಮೃತರನ್ನು ಹೆರಿಗೆಗಾಗಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಬೆಳಗಿನ ಜಾವ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ. ಬಳಿಕ ತೀವ್ರ ರಕ್ತಸ್ರಾವದಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ‌.      

ಕಡಬ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ➤ ತೀವ್ರ ರಕ್ತಸ್ರಾವದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆತೂರು ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಪ್ರಕರಣ ➤ ಇಬ್ಬರ ಬಂಧನ | ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಜು.14. ಇತ್ತೀಚೆಗೆ ಕಡಬ ಠಾಣಾ ವ್ಯಾಪ್ತಿಯ ಆತೂರು ಎಂಬಲ್ಲಿ ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಯೂಸುಫ್ ಎಂಬವರ ಪುತ್ರ ತೌಸೀಫ್(30) ಮತ್ತು ಕೊಯಿಲ ಗ್ರಾಮದ ಸನ್ಯಾಸಿ ಮೂಲೆ ನಿವಾಸಿ ಅಬ್ದುಲ್ ರಜಾಕ್ ಎಂಬವರ ಪುತ್ರ ಮಹಮ್ಮದ್ ಶಾಕಿರ್(25) ಎಂದು ಗುರುತಿಸಲಾಗಿದೆ. ಜೂನ್ 29 ರಂದು ಆತೂರು ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ

ಆತೂರು ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಪ್ರಕರಣ ➤ ಇಬ್ಬರ ಬಂಧನ | ಬಂಧಿತರ ಸಂಖ್ಯೆ 8ಕ್ಕೆ ಏರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೂಲಿ ಕಾರ್ಮಿಕ ದಂಪತಿಯ ಪುಟ್ಟ ಮಗುವಿನ ಅಪಹರಣ ➤ ಸಿಸಿ ಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಉಡುಪಿ, ಜು.11. ಕೂಲಿ ಕಾರ್ಮಿಕ ದಂಪತಿಯ ಪುಟ್ಟ ಮಗುವೊಂದನ್ನು ಉಡುಪಿಯಿಂದ ಕಿಡಿಗೇಡಿಯೊಬ್ಬ ಅಪಹರಿಸಿದ್ದು, ಆರೋಪಿ ಮಗುವನ್ನು ಎತ್ತಿಕೊಂಡು ಬಸ್‌ ಹತ್ತುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಾಪತ್ತೆಯಾದ ಮಗುವನ್ನು ಬಾಗಲಕೋಟೆ ಜಿಲ್ಲೆಯ ಮುದೋಳ ತಾಲೂಕಿನ ಭಾರತಿ ಮತ್ತು ಅರುಣ್ ದಂಪತಿಯ ಪುತ್ರ ಎರಡೂವರೆ ವರ್ಷದ ಶಿವರಾಜ್ ಎಂದು ಗುರುತಿಸಲಾಗಿದೆ. ದಂಪತಿಗೆ ಪರಿಚಿತನಾಗಿರುವ ಪರಶು ಎಂಬಾತ ಕೃತ್ಯ ಎಸಗಿರುವ ಸಂಶಯವಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆರೋಪಿ ಪರಶು ಕೆಲವು ದಿನಗಳ ಹಿಂದಷ್ಟೇ ದಂಪತಿಗೆ

ಕೂಲಿ ಕಾರ್ಮಿಕ ದಂಪತಿಯ ಪುಟ್ಟ ಮಗುವಿನ ಅಪಹರಣ ➤ ಸಿಸಿ ಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹೆಂಡತಿಯನ್ನು ತವರಿನಲ್ಲಿ ಬಿಟ್ಟ ಪತಿ ಮಹಾಶಯ ➤ ನಾದಿನಿಯೊಂದಿಗೆ ಪರಾರಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.10. ಪತಿ ಮಹಾಶಯನೋರ್ವ ತನ್ನ ಹೆಂಡತಿಯನ್ನು ತವರಿನಲ್ಲಿ ಬಿಟ್ಟು ನಾದಿನಿಯೊಂದಿಗೆ ಪರಾರಿಯಾದ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಸಮೀಪದ ಕೈಕಂಬ ನಿವಾಸಿ ಮಹಮ್ಮದ್‌ ಎಂಬವರ ಪುತ್ರಿಯನ್ನು 9 ತಿಂಗಳ ಹಿಂದೆ ಮುಸ್ತಫಾ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿದ್ದು, ಇತ್ತೀಚೆಗೆ ದಂಪತಿಯ ನಡುವೆ ಮನಸ್ತಾಪ ಉಂಟಾಗಿದೆ ಎನ್ನಲಾಗಿದೆ. ಈ ನಡುವೆ ತನ್ನ ಪತ್ನಿಯ ತಂಗಿಯ ಜೊತೆ ಸಲುಗೆಯಿಂದಿದ್ದ ಮುಸ್ತಫಾ, ಗುರುವಾರದಂದು ತನ್ನ ಪತ್ನಿಯನ್ನು ಬಿಟ್ಟು ನಾದಿನಿಯ ಜೊತೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ತನ್ನ

ಹೆಂಡತಿಯನ್ನು ತವರಿನಲ್ಲಿ ಬಿಟ್ಟ ಪತಿ ಮಹಾಶಯ ➤ ನಾದಿನಿಯೊಂದಿಗೆ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟ್ರ್ಯಾಕ್ಟರ್ ನ ಚಕ್ರದಡಿಯಲ್ಲಿ ಸಿಲುಕಿ 5 ವರ್ಷದ ಮಗು ಮೃತ್ಯು ➤ ಬೇಸತ್ತ ಚಾಲಕ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) Newskadaba.com ಚಾಮರಾಜನಗರ, ಜು. 09. ಕ್ರಿಕೆಟ್ ಮೈದಾನವನ್ನು ಸಮತಟ್ಟು ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ನಡಿಗೆ ಸಿಲುಕಿ ಐದು ವರ್ಷದ ಮಗು ಮೃತಪಟ್ಟಿದ್ದು, ಇದರಿಂದ ಬೇಸತ್ತ ಟ್ರ್ಯಾಕ್ಟರ್ ಚಾಲಕ ಕೂಡಾ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಸವಕನಹಳ್ಳಿ ಪಾಳ್ಯ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಟ್ರ್ಯಾಕ್ಟರ್ ನಡಿಗೆ ಸಿಲುಕಿ ಮೃತಪಟ್ಟ ಮಗುವನ್ನು ಸವಕನಹಳ್ಳಿ ಪಾಳ್ಯ ಗ್ರಾಮದ ಮುದ್ದ ಹಾಗೂ ನಾಗಮಣಿ ದಂಪತಿಯ ಪುತ್ರ ಹರ್ಷ (5) ಎಂದು ಗುರುತಿಸಲಾಗಿದೆ. ಇದರಿಂದ ಬೇಸತ್ತು ಆತ್ಮಹತ್ಯೆಗೊಳಗಾದ ಚಾಲಕನನ್ನು ಸುನೀಲ್

ಟ್ರ್ಯಾಕ್ಟರ್ ನ ಚಕ್ರದಡಿಯಲ್ಲಿ ಸಿಲುಕಿ 5 ವರ್ಷದ ಮಗು ಮೃತ್ಯು ➤ ಬೇಸತ್ತ ಚಾಲಕ ಆತ್ಮಹತ್ಯೆಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ಪರಿಸರದಲ್ಲಿ ಕಳ್ಳರ ಓಡಾಟ..‼️ ➤ ಈ ಬಗ್ಗೆ ಕಡಬ ಎಸ್ಐ ಹೇಳಿದ್ದೇನು ಗೊತ್ತೇ..⁉️

(ನ್ಯೂಸ್ ಕಡಬ) newskadaba.com ಕಡಬ, ಜು.08. ಇತ್ತೀಚೆಗೆ ಕಟ್ಟತ್ತಾರು, ಮಾಡಾವು ಪರಿಸರದಲ್ಲಿ ನಡೆದ ಸರಣಿ ದರೋಡೆಯ ಕಳ್ಳರ ಗ್ಯಾಂಗ್ ಕಡಬ ಪರಿಸರದಲ್ಲಿ ಬೀಡುಬಿಟ್ಟಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಕಡಬ ಎಸ್ಐ ರುಕ್ಮನಾಯ್ಕ್ ಎಚ್ಚರಿಸಿದ್ದಾರೆ. ಮನೆಯ ಬಾಗಿಲು ಮುರಿದು ಒಳನುಗ್ಗುವ ಕಳ್ಳರು ಸಲೀಸಾಗಿ ಕಳ್ಳತನ ನಡೆಸುತ್ತಿದ್ದಾರೆ. ಕಡಬ ಆಸುಪಾಸಿನ ಪ್ರತಿಯೋರ್ವರು ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿರುವ ಅವರು, ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅಥವಾ ಕಳ್ಳತನದ ಮಾಹಿತಿ ಸಿಕ್ಕಿದ್ದಲ್ಲಿ ತಕ್ಷಣವೇ ಕಡಬ ಪೋಲೀಸ್

ಕಡಬ ಪರಿಸರದಲ್ಲಿ ಕಳ್ಳರ ಓಡಾಟ..‼️ ➤ ಈ ಬಗ್ಗೆ ಕಡಬ ಎಸ್ಐ ಹೇಳಿದ್ದೇನು ಗೊತ್ತೇ..⁉️ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಅಕ್ರಮ ಮರಳು ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) Newskadaba.com ಉಳ್ಳಾಲ, ಜು. 07. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಲಾರಿ ಹಾಗೂ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕೋಟೆಪುರದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕೋಟೆಪುರ ನಿವಾಸಿ ಶೌಕತ್ (35) ಎಂದು ಗುರುತಿಸಲಾಗಿದೆ. ಉಳಿದ ಆರೋಪಿಗಳು ತಪ್ಪಿಸಿಕೊಂಡಿದ್ದು, ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ. ಪೊಲೀಸರ ದಾಳಿ ಸಂದರ್ಭದಲ್ಲಿ ನಾಲ್ಕು ಲಾರಿಗಳಲ್ಲಿ ಮರಳು ತುಂಬಿಸಿಡಲಾಗಿತ್ತು, ಅಲ್ಲದೇ ಘಟನಾ ಸ್ಥಳದಲ್ಲಿ ಆರೋಪಿಗಳು ಮೂರು ಲೋಡು ಮರಳು ಶೇಖರಣೆ ಮಾಡಿಟ್ಟಿದ್ದರು.

ಉಳ್ಳಾಲ: ಅಕ್ರಮ ಮರಳು ಸಾಗಾಟ ➤ ಓರ್ವ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಲಾರಿ ಹಾಗೂ ಬೈಕ್ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) Newskadaba.com ಬಂಟ್ವಾಳ, ಜು. 07. ಲಾರಿ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಲ್ಲಿನ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮಂಗಳೂರಿನ ಬ್ಯಾಂಕ್ ಒಂದರಲ್ಲಿ ಉದ್ಯೋಗಿಯಾಗಿದ್ದ ಮಂಚಿ ಗ್ರಾಮದ ಕಂಚಿಲ ನಿವಾಸಿ ಗಣೇಶ್ ನಾಯ್ಕ್ (55) ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಗಣೇಶ್ ಎಂನವರು ಬೆಳಗ್ಗೆ ಮನೆಯಿಂದ ಕಚೇರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ

ಬಂಟ್ವಾಳ: ಲಾರಿ ಹಾಗೂ ಬೈಕ್ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಮನೆಯಲ್ಲಿ ಅಕ್ರಮ ಜಿಂಕೆ ಮಾಂಸ ಪತ್ತೆ ➤ ಓರ್ವನ ಬಂಧನ

ಕಡಬ, ಜು.06: ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ಬಿಳಿನೆಲೆ ಎಂಬಲ್ಲಿ ಮನೆಯಲ್ಲಿ ಕಾಡುಪ್ರಾಣಿ ಮಾಂಸ ಇರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಅಧಿಕಾರಿಗಳು ಒರ್ವನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಬಿಳಿನೆಲೆಯ ವಾಲ್ತಾಜೆ ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ಮಂಗಳವಾರ ಅರಣ್ಯಾಧಿಕಾರಿಗಳಿಗೆ ಮನೆಯಲ್ಲಿ ಕಾಡುಪ್ರಾಣಿ ಮಾಂಸ ಇರುವ ಬಗ್ಗೆ ಮಾಹಿತಿ ಬಂದಿತ್ತು. ಅದರಂತೆ ಅಲ್ಲಿಗೆ ದಾಳಿ ನಡೆಸಿದ ವೇಳೆ ಮನೆಯಲ್ಲಿ ಕಾಡುಪ್ರಾಣಿ ಮಾಂಸ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ವನ್ಯಜೀವಿ ಪ್ರಕರಣ ಅಡಿಯಲ್ಲಿ

ಕಡಬ: ಮನೆಯಲ್ಲಿ ಅಕ್ರಮ ಜಿಂಕೆ ಮಾಂಸ ಪತ್ತೆ ➤ ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) Newskadaba.com ಕಾಞಂಗಾಡು, ಜು. 06. ಕೆಎಸ್ಸಾರ್ಟಿಸಿ ಬಸ್ ಹಾಗೂ ಇನೋವಾ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅಲಿ (30) ಎಂದು ಗುರುತಿಸಲಾಗಿದೆ. ಇವರ ಸಂಬಂಧಿ ಕೊಡ್ಯಮೆಯ ಸಿದ್ದೀಕ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಕಾಞಂಗಾಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಣ್ಣೂರಿನಲ್ಲಿರುವ ಅಲಿಯ ಸಹೋದರಿಯ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು,

ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ➤ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top