ಕ್ರೈಮ್ ನ್ಯೂಸ್

ಆಟವಾಡುತ್ತಿದ್ದ ವೇಳೆ ಸ್ಟೀಲ್ ಪಾತ್ರೆಯೊಳಗಡೆ ಸಿಲುಕಿದ ಮಗುವಿನ ತಲೆ ➤ ಅಗ್ನಿಶಾಮಕ ದಳದಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾಞಂಗಾಡು, ಜೂ. 25. ಮಗುವೊಂದು ಆಟವಾಡುತ್ತಿದ್ದ ವೇಳೆ ಸ್ಟೀಲ್ ಪಾತ್ರೆಯೊಳಗೆ ತಲೆ ಸಿಲುಕಿ ಹೊರತೆಗೆಯಲು ಒದ್ದಾಡಿದ ಘಟನೆ ನಡೆದಿದೆ. ಕಾಞಂಗಾಡು ತೈಕಡಪ್ಪುರ ನಿವಾಸಿ ನಫೀಸಾ ಎಂಬವರ ಒಂದೂವರೆ ವರ್ಷದ ಮಗು ಸ್ಟೀಲ್ ಪಾತ್ರೆ ಹಿಡಿದುಕೊಂಡು ಆಟವಾಡುತ್ತಿದ್ದ ವೇಳೆ ಪಾತ್ರೆಯೊಳಗೆ ತನ್ನ ತಲೆಯನ್ನು ತುರುಕಿಸಿಕೊಂಡಿದೆ. ನಂತರ ಮನೆಯವರು ಮಗುವಿನ ತಲೆಯನ್ನು ಹೊರತೆಗೆಯಲು ಎಷ್ಟೇ ಪ್ರಯತ್ನಪಟ್ಟರೂ ಹೊರತೆಗೆಯಲು ಸಾಧ್ಯವಾಗಲಿಲ್ಲ. ಬಳಿಕ ಪೊಲೀಸರು ಬಂದು ಮಗುವನ್ನು ಅಗ್ನಿಶಾಮಕ ದಳದ ಕಛೇರಿಗೆ ಕೊಂಡೊಯ್ದು, ಅಲ್ಲಿ ಯಂತ್ರದ ಸಹಾಯದಿಂದ ಪಾತ್ರೆಯನ್ನು […]

ಆಟವಾಡುತ್ತಿದ್ದ ವೇಳೆ ಸ್ಟೀಲ್ ಪಾತ್ರೆಯೊಳಗಡೆ ಸಿಲುಕಿದ ಮಗುವಿನ ತಲೆ ➤ ಅಗ್ನಿಶಾಮಕ ದಳದಿಂದ ರಕ್ಷಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಮನೆಯಿಂದ ಅಡಿಕೆ ಕಳವು ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜೂ.24. ಮನೆಯಲ್ಲಿರಿಸಿದ್ದ ಅಡಿಕೆ ಚೀಲವನ್ನು ಪಕ್ಕದ ಮನೆಯಾತ ಕದ್ದೊಯ್ದ ಘಟನೆ ಠಾಣಾ ವ್ಯಾಪ್ತಿಯ ಹಳೆನೇರಂಕಿ ಎಂಬಲ್ಲಿ ಬುಧವಾರದಂದು ನಡೆದಿದೆ. ಹಳೆ ನೇರಂಕಿ ಗ್ರಾಮದ ಅಲೆಪ್ಪಾಡಿ ನಿವಾಸಿ ಸುಕೇಶ ಎಂಬವರು ತನ್ನ ಮನೆಯ ಅಂಗಳದಲ್ಲಿ ಎರಡು ಗೋಣಿ ಚೀಲಗಳಲ್ಲಿ ಅಡಿಕೆಯನ್ನು ಇರಿಸಿದ್ದರು ಎನ್ನಲಾಗಿದೆ. ಬುಧವಾರದಂದು ಮನೆಮಂದಿ ತೋಟಕ್ಕೆ ತೆರಳಿದ್ದ ವೇಳೆ ಪಕ್ಕದ ಮನೆಯ ಪರಮೇಶ್ವರ್ ಎಂಬಾತ ಒಂದು ಗೋಣಿ ಚೀಲ ಅಡಿಕೆಯನ್ನು ಎಗರಿಸಿರುವುದಾಗಿ ಸುಕೇಶ ಕಡಬ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಸಿದ

ಕಡಬ: ಮನೆಯಿಂದ ಅಡಿಕೆ ಕಳವು ಪ್ರಕರಣ ➤ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಭೀಕರ ಹತ್ಯೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.24: ಮಹಾನಗರ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆಯೇ ಪಾಲಿಕೆಯ ಮಾಜಿ ಸದಸ್ಯೆಯ ಹತ್ಯೆಯಾಗಿದೆ. ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರ ಕಚೇರಿ ಮುಂದೆಯೇ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಒಳಗಿದ್ದ ರೇಖಾ ಕದಿರೇಶ್ ಅವರನ್ನು ಹೊರಗೆ ಕರೆದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ನಡೆಸಿದ್ದಾರೆ. ರಕ್ತಸ್ರಾವವಾಗಿ ಕೆಳಗೆ ಬಿದ್ದ ಅವರನ್ನು ಸ್ಥಳದಲ್ಲಿದ್ದವರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.ರೇಖಾ ಅವರು

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಭೀಕರ ಹತ್ಯೆ Read More »

ಕ್ರೈಮ್ ನ್ಯೂಸ್

ಮನೆಯಲ್ಲಿದ್ದ ಅಡಿಕೆ ಚೀಲವನ್ನು ಕದ್ದೊಯ್ದ ಪಕ್ಕದ ಮನೆಯಾತ ➤ ಪೊಲೀಸರಿಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಜೂ.24. ಮನೆಯಲ್ಲಿರಿಸಿದ್ದ ಅಡಿಕೆ ಚೀಲವನ್ನು ಪರಿಚಿತ ವ್ಯಕ್ತಿಯೋರ್ವ ಕದ್ದೊಯ್ದ ಘಟನೆ ಠಾಣಾ ವ್ಯಾಪ್ತಿಯ ಹಳೆನೇರಂಕಿ ಎಂಬಲ್ಲಿ ಬುಧವಾರದಂದು ನಡೆದಿದೆ. ಹಳೆ ನೇರಂಕಿ ಗ್ರಾಮದ ಅಲೆಪ್ಪಾಡಿ ನಿವಾಸಿ ಸುಕೇಶ ಎಂಬವರು ತನ್ನ ಮನೆಯ ಅಂಗಳದಲ್ಲಿ ಎರಡು ಗೋಣಿ ಚೀಲಗಳಲ್ಲಿ ಅಡಿಕೆಯನ್ನು ಇರಿಸಿದ್ದರು ಎನ್ನಲಾಗಿದೆ. ಬುಧವಾರದಂದು ಮನೆಮಂದಿ ತೋಟಕ್ಕೆ ತೆರಳಿದ್ದ ವೇಳೆ ಪಕ್ಕದ ಮನೆಯ ಪರಮೇಶ್ವರ್ ಎಂಬಾತ ಒಂದು ಗೋಣಿ ಚೀಲ ಅಡಿಕೆಯನ್ನು ಎಗರಿಸಿರುವುದಾಗಿ ಸುಕೇಶ ಕಡಬ ಠಾಣೆಗೆ ದೂರು ನೀಡಿದ್ದಾರೆ.    

ಮನೆಯಲ್ಲಿದ್ದ ಅಡಿಕೆ ಚೀಲವನ್ನು ಕದ್ದೊಯ್ದ ಪಕ್ಕದ ಮನೆಯಾತ ➤ ಪೊಲೀಸರಿಗೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಷ ಕುಡಿದು ಪ್ರಿಯಕರನ ತೊಡೆ ಮೇಲೇ ಪ್ರಾಣ ಬಿಟ್ಟ ವಿವಾಹಿತೆ

(ನ್ಯೂಸ್ ಕಡಬ) newskadaba,ವಿಜಯಪುರ ಜೂ.23: ಬೇರೆ ಮದುವೆಯಾಗಿದ್ದರೂ ಒಬ್ಬರನ್ನು ಒಬ್ಬರು ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಇದ್ದರೂ ಒಟ್ಟಿಗೇ, ಸತ್ತರೂ ಒಟ್ಟಿಗೇ ಎಂದು ನಿರ್ಧರಿಸಿದ್ದರು. ಅದೇ ಕಾರಣಕ್ಕೆ ದುಡುಕಿ ತಪ್ಪಾದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಪ್ರೀತಿ ಕುರುಡು ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ. 3 ಮತ್ತು 6 ಮಕ್ಕಳಿರುವ ವಿವಾಹಿತರಿಬ್ಬರು ತಮ್ಮ ಮಕ್ಕಳ ಬಗ್ಗೆಯೂ ಯೋಚಿಸದೆ ತಮ್ಮ ಪ್ರೀತಿಗಾಗಿ ವಿಷ ಸೇವಿಸಿದ್ದಾರೆ. ಇಬ್ಬರಿಗೂ ಬೇರೆಯವರ ಜೊತೆ ಮದುವೆಯಾಗಿತ್ತು. ಹೀಗಾಗಿ, ತಮ್ಮ ಪ್ರೀತಿಯನ್ನು ಈ ಸಮಾಜ ಒಪ್ಪುವುದಿಲ್ಲ ಎಂದು ವಿಷಯ ಕುಡಿದು ಸಾಯಲು ನಿರ್ಧರಿಸಿದ್ದರು. ಬೇರೊಬ್ಬಳನ್ನು

ವಿಷ ಕುಡಿದು ಪ್ರಿಯಕರನ ತೊಡೆ ಮೇಲೇ ಪ್ರಾಣ ಬಿಟ್ಟ ವಿವಾಹಿತೆ Read More »

ಕ್ರೈಮ್ ನ್ಯೂಸ್

ಹದಿನೇಳು ವರ್ಷದ ಮಗನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ ➤ ಒಂದೇ ದಿನ ತಂದೆ-ಮಗನ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.23. ತನ್ನ ಹದಿನೇಳು ವರ್ಷದ ಪುತ್ರನನ್ನೇ ಕೊಲೆಗೈದ ತಂದೆ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಬೆಳ್ತಂಗಡಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ನಿವಾಸಿ ಬಾಬು ನಾಯ್ಕ್ ಎಂಬವರ ಪುತ್ರ ಸಾತ್ವಿಕ್ ಎಂದು ಗುರುತಿಸಲಾಗಿದೆ. ಬುಧವಾರದಂದು ಪುಂಜಾಲಕಟ್ಟೆ ಭಜನಾ ಮಂದಿರದ ಬಳಿ ತಂದೆ ಮತ್ತು ಮಗನ ನಡುವೆ ಯಾವುದೋ ಕಾರಣಕ್ಕೆ ಜಗಳ ನಡೆದಿದ್ದು, ಈ ವೇಳೆ ಕೋಪಗೊಂಡ ತಂದೆ ಮಗನನ್ನು ಕೊಲೆಗೈದಿದ್ದಾರೆ ಎನ್ನಲಾಗಿದೆ. ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ

ಹದಿನೇಳು ವರ್ಷದ ಮಗನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ ➤ ಒಂದೇ ದಿನ ತಂದೆ-ಮಗನ ದಾರುಣ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಿಕ್ಷಾ ಕಳವು ಮಾಡಿ ಸ್ನೇಹಿತನಿಗೆ ಕೊಟ್ಟ ಕಡಬದ ವ್ಯಕ್ತಿ ➤ ಕೊರಗಜ್ಜನ ಮೊರೆಯಿಂದ ರಿಕ್ಷಾ ಪತ್ತೆ

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜೂ.22. ಮನೆಯಂಗಳದ ಶೆಡ್ ನಲ್ಲಿರಿಸಲಾಗಿದ್ದ ಅಟೋ ರಿಕ್ಷಾವೊಂದನ್ನು ಕಳ್ಳರು ಕದ್ದೊಯ್ದ ಪ್ರಕರಣದಲ್ಲಿ ಕಳವಾದ ಅಟೋ ರಿಕ್ಷಾವು ಉಪ್ಪಿನಂಗಡಿಯಲ್ಲೇ ಮಂಗಳವಾರದಂದು ಪತ್ತೆಯಾಗಿದೆ. ಇಲ್ಲಿನ ನಟ್ಟಿಬೈಲು ನಿವಾಸಿ ನವೀನ್ ಎಂಬವರು ಚಲಾಯಿಸುತ್ತಿದ್ದ ಅಟೋ ರಿಕ್ಷಾವನ್ನು ಕಳೆದ ಶುಕ್ರವಾರದಂದು ಅವರ ಮನೆಯಂಗಳದ ಶೆಡ್‌ನಲ್ಲಿ ರಾತ್ರಿ ವೇಳೆ ನಿಲ್ಲಿಸಲಾಗಿದ್ದು, ಶನಿವಾರ ಮುಂಜಾನೆ ರಿಕ್ಷಾ ಕಳವಾಗಿರುವುದು ಅರಿವಿಗೆ ಬಂದಿತ್ತು.  ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿತ್ತು. ತನ್ನ ಜೀವನಧಾರವಾಗಿದ್ದ ಅಟೋ ರಿಕ್ಷಾ ಕಳವಿಗೀಡಾಗಿ ಕಂಗಾಲಾಗಿದ್ದ ನವೀನ್ ಈ ಬಗ್ಗೆ

ರಿಕ್ಷಾ ಕಳವು ಮಾಡಿ ಸ್ನೇಹಿತನಿಗೆ ಕೊಟ್ಟ ಕಡಬದ ವ್ಯಕ್ತಿ ➤ ಕೊರಗಜ್ಜನ ಮೊರೆಯಿಂದ ರಿಕ್ಷಾ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಕೆಲಸಕ್ಕೆ ತೆರಳಿದ್ದ ಮಹಿಳೆ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜೂ.22.: ಅನ್ಯ ಮನೆಯ ಕೆಲಸಕ್ಕೆಂದು  ಹೋಗಿದ್ದ ಮಹಿಳೆಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ಕರಾಯ ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಕ್ಕೆಪದವು ಉಳಿ  ಗ್ರಾಮದ ನಿವಾಸಿ ದೇವಕಿ (೬೨) ಎಂದು  ತಿಳಿಯಲಾಗಿದೆ. ಈಕೆ  ರಾಮಕೃಷ್ಣ ಕರ್ಕೇರ  ಎಂಬವರ ಮನೆ ಕೆಲಸಕ್ಕೆಂದು  ಬಂದಿದ್ದ ವೇಳೆ ಕುಸಿದು ಬಿದ್ದು  ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು  ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತ್ತಾದರೂ ಅಲ್ಲಿ ಅವರು ಮೃತಪಟ್ಟರೆಂದು ತಿಳಿಸಲಾಯಿತು. ಘಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್

ಉಪ್ಪಿನಂಗಡಿ: ಕೆಲಸಕ್ಕೆ ತೆರಳಿದ್ದ ಮಹಿಳೆ ಕುಸಿದು ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹಳೆನೇರಂಕಿ: ಅಕ್ರಮ ಮದ್ಯ ಮಾರಾಟದ ವೇಳೆ ಅಬಕಾರಿ ಅಧಿಕಾರಿಗಳ ದಾಳಿ ➤ ದ್ವಿಚಕ್ರ ವಾಹನ ಸಹಿತ ಮದ್ಯ ವಶಕ್ಕೆ, ಆರೋಪಿ ಪರಾರಿ

ಕಡಬ, ಜೂ.22. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ಅಬಕಾರಿ ಇಲಾಖೆಯ ಅಧಿಕಾರಿಗಳು ದ್ವಿಚಕ್ರ ವಾಹನ ಸಹಿತ ಮದ್ಯದ ಪ್ಯಾಕೆಟ್ ವಶಪಡಿಸಿಕೊಂಡ ಘಟನೆ ಕಡಬ ತಾಲೂಕಿನ ಹಳೆನೇರಂಕಿ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಹಳೆನೇರಂಕಿ ಜಂಕ್ಷನ್‌ನಲ್ಲಿರುವ ಗೋಳಿಮರದ ಅಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು 90 ಎಂಎಲ್‌ನ 31 ಪ್ಯಾಕೇಟ್ ಮದ್ಯ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದು, ಈ ವೇಳೆ ಆರೋಪಿ ಹಳೆನೇರಂಕಿ ನಿವಾಸಿ ಕಾಳಪ್ಪ

ಹಳೆನೇರಂಕಿ: ಅಕ್ರಮ ಮದ್ಯ ಮಾರಾಟದ ವೇಳೆ ಅಬಕಾರಿ ಅಧಿಕಾರಿಗಳ ದಾಳಿ ➤ ದ್ವಿಚಕ್ರ ವಾಹನ ಸಹಿತ ಮದ್ಯ ವಶಕ್ಕೆ, ಆರೋಪಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ತೋಟಕ್ಕೆ ನುಗ್ಗಿ ಕೃಷಿ ನಾಶಗೊಳಿಸಿದ ಕಾಡುಕೋಣ

(ನ್ಯೂಸ್ ಕಡಬ) Newskadaba.com ವಿಟ್ಲ, ಜೂ. 22. ಇಲ್ಲಿನ ವೀರಕಂಬ ಗ್ರಾಮದ ಕೆಲಿಂಜ ಸಮೀಪದ ಕಲ್ಮಲೆ ಎಂಬಲ್ಲಿನ ವಾಸಿಸುತ್ತಿರುವ ಕೃಷಿಕರು ಇದೀಗ ಕಾಡುಕೋಣಗಳ ಹಾವಳಿಯಿಂದಾಗಿ ತತ್ತರಿಸಿ ಹೋಗಿದ್ದಾರೆ. ಇಲ್ಲಿನ ಕಲ್ಮಲೆ ವಿಠಲ ರೈ ಎಂಬವರ ಅಡಿಕೆ ತೋಟಕ್ಕೆ ಕಳೆದ ಐದಾರು ದಿನಗಳಿಂದ ನುಗ್ಗಿದ ಎರಡು ಕಾಡುಕೋಣಗಳು 300ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಮತ್ತು ತೆಂಗಿನ ಗಿಡಗಳನ್ನು ಹಾನಿಗೈದಿದೆ. ಕಳೆದ ವರ್ಷ ಇದೇ ರೀತಿ ದಾಳಿ ನಡೆಸಿದ ಕಾಡುಕೋಣಗಳು 200ಕ್ಕೂ ಹೆಚ್ಚು ಆಡಿಕೆ ಹಾಗೂ ತೆಂಗಿನ ಮರಗಳನ್ನು ನಾಶಪಡಿಸಿದ್ದವು

ವಿಟ್ಲ: ತೋಟಕ್ಕೆ ನುಗ್ಗಿ ಕೃಷಿ ನಾಶಗೊಳಿಸಿದ ಕಾಡುಕೋಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top