ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಚಲಿಸುತ್ತಿದ್ದ ರಿಕ್ಷಾದ ಮೇಲೆ ಉರುಳಿಬಿದ್ದ ಬೃಹತ್ ಮರ ➤ ಮಹಿಳೆಗೆ ಗಂಭೀರ ಗಾಯ

(ನ್ಯೂಸ್ ಕಡಬ) Newskadaba.com ಉಪ್ಪಿನಂಗಡಿ, ಜೂ. 17. ಚಲಿಸುತ್ತಿದ್ದ ಅಟೋರಿಕ್ಷಾದ ಮೇಲೆ ಮರವೊಂದು ಉರುಳಿಬಿದ್ದ ಪರಿಣಾಮ ಮಕ್ಕಳು ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪ ನೇಜಿಕಾರು ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ- ಬೆಳ್ತಂಗಡಿ ರಸ್ತೆಯ ಕಲ್ಲೇರಿ ನೇಜಿಕಾರು ಎಂಬಲ್ಲಿ ಅಟೋರಿಕ್ಷಾ ಚಲಿಸುತಿದ್ದ ವೇಳೆ ಭಾರೀ ಗಾಳಿಮಳೆಯ ಪರಿಣಾಮ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ತಾಯಿ-ಮಗು, ಇನ್ನೋರ್ವ ಪ್ರಯಾಣಿಕ ಹಾಗೂ ಆಟೋ ಚಾಲಕನಿಗೆ ಗಾಯಗಳಾಗಿವೆ ಎನ್ನಲಾಗಿದೆ. ರಿಕ್ಷಾದಲ್ಲಿದ್ದ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದ್ದು ಕೂಡಲೇ […]

ಉಪ್ಪಿನಂಗಡಿ: ಚಲಿಸುತ್ತಿದ್ದ ರಿಕ್ಷಾದ ಮೇಲೆ ಉರುಳಿಬಿದ್ದ ಬೃಹತ್ ಮರ ➤ ಮಹಿಳೆಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ರಿಕ್ಷಾ ಚಾಲಕನಿಂದ ಅತ್ಯಾಚಾರ ➤ ಯುವತಿ ಎಂಟು ತಿಂಗಳ ಗರ್ಭಿಣಿ

(ನ್ಯೂಸ್ ಕಡಬ) newskadaba.com ಕಡಬ, ಜೂ.17. ರಿಕ್ಷಾ ಚಾಲಕನೋರ್ವ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ನಿರಂತರ ಅತ್ಯಾಚಾರ ಎಸಗಿದ ಹಿನ್ನೆಲೆಯಲ್ಲಿ ಆಕೆ ಗರ್ಭಿಣಿಯಾಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲದಿಂದ ವರದಿಯಾಗಿದೆ. ಕೊಯಿಲ ಗ್ರಾಮದ ಬುಡಲೂರು ನಿವಾಸಿ ರಿಕ್ಷಾ ಚಾಲಕ ಯುವರಾಜ್ ಎಂಬಾತ ತನ್ನ ಪರಿಚಯದ 19 ವರ್ಷದ ಯುವತಿಯನ್ನು ಕಳೆದೊಂದು ವರ್ಷದಿಂದ ಆತನ ಮನೆಯ ಸಮೀಪದ ಗುಡ್ಡದಲ್ಲಿ ನಿರಂತರವಾಗಿ ಅತ್ಯಾಚಾರಗೈದಿದ್ದಾನೆ ಎನ್ನಲಾಗಿದೆ. ಯುವತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಮನೆಯವರು ಆಕೆಯನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ಆಕೆ

ಕಡಬ: ರಿಕ್ಷಾ ಚಾಲಕನಿಂದ ಅತ್ಯಾಚಾರ ➤ ಯುವತಿ ಎಂಟು ತಿಂಗಳ ಗರ್ಭಿಣಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉದ್ಯಾವರ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) Newskadaba.com ಉದ್ಯಾವರ, ಜೂ. 17. ಮಹಿಳೆಯೋರ್ವರು ನೇಣುಬಿಗಿದು ಆಥಮಹತ್ಯೆ ಮಾಡಿಕೊಂಡ ಘಟನೆ ಪಿತ್ರೋಡಿ ಎಂಬಲ್ಲಿ ಗುರುವಾರದಂದು ನಡೆದಿದೆ. ಆತ್ಮಹತ್ಯೆಗೈದವರನ್ನು ಪಿತ್ರೋಡಿ ನಿವಾಸಿ ಸುಕನ್ಯ(52) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಕ್ಷಣವೇ ಸ್ಥಳೀಯರ ಸಹಾಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉದ್ಯಾವರ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರೇಮಿಗಾಗಿ ಗಾಂಜಾ ತಲುಪಿಸುವಾಗ ಸಿಕ್ಕಿಬಿದ್ದ ಇಂಜಿನಿಯರಿಂಗ್ ಪದವೀಧರೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.16: ಪ್ರಿಯಕರನಿಗಾಗಿ ಗಾಂಜಾ ತಲುಪಿಸುತ್ತಿದ್ದ ಇಂಜಿನಿಯರಿಂಗ್ ಪದವೀಧರೆಯನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿ ಎರಡೂವರೆ ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.ಅಂಧ್ರಪ್ರದೇಶದಿಂದ ಬಂದು ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ರೇಣುಕಾ ಬಂಧಿತ ಆರೋಪಿ. ಚೆನ್ನೈನ ಖಾಸಗಿ‌ ಕಾಲೇಜಿನಲ್ಲಿ ಸಿದ್ದಾರ್ಥ್ ಎಂಬಾತನನ್ನು ಪ್ರೇಮಿಸಿದ್ದ ರೇಣುಕಾ, ಸಿದ್ದಾರ್ಥ್ ಕೊಡುತ್ತಿದ್ದ ಗಾಂಜಾವನ್ನು ಗ್ರಾಹಕರಿಗೆ ತಲುಪಿಸುತ್ತಿದ್ದಳು.ಬೆಂಗಳೂರಿನ ಮುಖ್ಯರಸ್ತೆಗಳಲ್ಲಿರುವ ಓಯೋ ರೂಮ್ ಮಾಡುತ್ತಿದ್ದ ರೇಣುಕಾ, ಸಿದ್ದಾರ್ಥ್ ಜೊತೆ ಕಾನ್ಫರೆನ್ಸ್ ಕಾಲ್ ನಲ್ಲಿ ಮಾತನಾಡಿ ಗ್ರಾಹಕರನ್ನು ರೂಮ್ ಬಳಿ ಕರೆಸಿಕೊಂಡು ಗಾಂಜಾ ಪೂರೈಸಲಾಗುತಿತ್ತು. ತಾನು

ಪ್ರೇಮಿಗಾಗಿ ಗಾಂಜಾ ತಲುಪಿಸುವಾಗ ಸಿಕ್ಕಿಬಿದ್ದ ಇಂಜಿನಿಯರಿಂಗ್ ಪದವೀಧರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

“ರಾಬರ್ಟ್” ಸಿನಿಮಾ ನಿರ್ಮಾಪಕನ ಕೊಲೆಗೆ ಸಂಚು ಪ್ರಕರಣ ➤ ಪ್ರಮುಖ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ನಟ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ ಕೊಲೆಗೆ ಸ್ಕೆಚ್ ಹಾಕಿದ್ದ ಪ್ರಕರಣ ಸಂಬಂಧ ಮತ್ತೊಬ್ಬ ಕಿಂಗ್ ಪಿನ್ ರಾಜೇಶ್ ಅಲಿಯಾಸ್ ಕರಿಯನನ್ನ ಬೆಂಗಳೂರಿನ ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ.   ಮೂರು ತಿಂಗಳ ಹಿಂದೆ ನಿರ್ಮಾಪಕ ಉಮಾಪತಿ ಹತ್ಯೆಗೆ ಸ್ಕೆಚ್ ನಡೆದಿತ್ತು. ಕೊನೆ ಕ್ಷಣದಲ್ಲಿ ಎಚ್ಚೆತ್ತ ಪೊಲೀಸರು, ಆ ಕೊಲೆಗೆ ರೆಡಿಯಾಗಿದ್ದ ಆರೋಪಿಗಳನ್ನು ಮಾರಕಾಸ್ತ್ರಗಳ ಸಮೇತ ಬಂಧಿಸಿದ್ದರು. ಈ ವೇಳೆ ಹಲವರು ಎಸ್ಕೇಪ್ ಕೂಡ ಆಗಿದ್ರು. ಅವರಲ್ಲಿ ಪ್ರಮುಖ

“ರಾಬರ್ಟ್” ಸಿನಿಮಾ ನಿರ್ಮಾಪಕನ ಕೊಲೆಗೆ ಸಂಚು ಪ್ರಕರಣ ➤ ಪ್ರಮುಖ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್

ಸವಣೂರು: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪಾರ್ಸೆಲ್ ಸಾಗಾಟದ ಓಮ್ನಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) Newskadaba.com ಪುತ್ತೂರು, ಜೂ. 15. ವಿದ್ಯುತ್ ಕಂಬಕ್ಕೆ ಓಮ್ನಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಇಬ್ಬರಿಗೆ ಗಾಯವಾದ ಘಟನೆ ಕಾಣಿಯೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸವಣೂರು ಎಂಬಲ್ಲಿ ನಡೆದಿದೆ. ಅಮೆಜಾನ್ ನ ಪಾರ್ಸೆಲ್ ಸಾಗಟದ ಓಮ್ನಿ ಕಾರೊಂದು ಸುಬ್ರಹ್ಮಣ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಓಮ್ಮಿ ಸ್ಕಿಡ್ ಆಗಿ ವಿರುದ್ಧ ದಿಕ್ಕಿನಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಪರಿಣಾಮ ಒಮ್ನಿಯಲ್ಲಿದ್ದ ಇಬ್ಬರಿಗೆ ತಲೆ ಹಾಗೂ ಕಿವಿಗೆ ಗಾಯವಾಗಿದೆ. ಈ

ಸವಣೂರು: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪಾರ್ಸೆಲ್ ಸಾಗಾಟದ ಓಮ್ನಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸ್ವಂತ ಚಿಕ್ಕಪ್ಪನಿಂದಲೇ ಕಾಲೇಜು ವಿದ್ಯಾರ್ಥಿನಿಯ ನಿರಂತರ ಅತ್ಯಾಚಾರ ➤ ಪೊಲೀಸರಿಗೆ ದೂರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.14. ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯ ದೂರಿನ ಮೇರೆಗೆ ವ್ಯಕ್ತಿಯೋರ್ವನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ ಸಾಲ್ಯಾನ್ ಎಂಬಾತ ಆತನ ಪತ್ನಿಯ ಅಕ್ಕ‌ನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ ಎಂದು ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಮನೆಯವರಿಗೆ ತಿಳಿಸಿದರೆ ಕೊಲೆ

ಸ್ವಂತ ಚಿಕ್ಕಪ್ಪನಿಂದಲೇ ಕಾಲೇಜು ವಿದ್ಯಾರ್ಥಿನಿಯ ನಿರಂತರ ಅತ್ಯಾಚಾರ ➤ ಪೊಲೀಸರಿಗೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಪಘಾತದಿಂದಾಗಿ ಗಂಭೀರಾವಸ್ಥೆಯಲ್ಲಿದ್ದ ನಟ ಸಂಚಾರಿ ವಿಜಯ್ ಇನ್ನಿಲ್ಲ

(ನ್ಯೂಸ್ ಕಡಬ) Newskadaba.com ಬೆಂಗಳೂರು, ಜೂ. 14. ಸ್ಯಾಂಡಲ್ ವುಡ್ ಯುವ ನಟ ಸಂಚಾರಿ ವಿಜಯ್ ಬೈಕ್ ಅಪಘಾತದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಕಳೆದ ಶನಿವಾರ ತಡರಾತ್ರಿ ತನ್ನ ಸ್ನೇಹಿತನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ್ದ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಸ್ನೇಹಿತ ನವೀನ್ ಎಂಬವರ ಬೆನ್ನು ಮೂಳೆಗೆ ತೀವ್ರ ಗಾಯವಾಗಿದ್ದರೆ, ಸಂಚಾರಿ

ಅಪಘಾತದಿಂದಾಗಿ ಗಂಭೀರಾವಸ್ಥೆಯಲ್ಲಿದ್ದ ನಟ ಸಂಚಾರಿ ವಿಜಯ್ ಇನ್ನಿಲ್ಲ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪಘಾತದಿಂದಾಗಿ ಗಂಭೀರಾವಸ್ಥೆಯಲ್ಲಿರುವ ವಿಜಯ್ ಬದುಕುಳಿಯುವ ಸಾಧ್ಯತೆ ಇಲ್ಲ…! ➤ ಅಂಗಾಂಗ ದಾನಕ್ಕೆ ಸಿದ್ದತೆ- ಸಹೋದರ ಸಿದ್ದೇಶ್

(ನ್ಯೂಸ್ ಕಡಬ) Newskadaba.com ಬೆಂಗಳೂರು, ಜೂ. 14. ರಸ್ತೆ ಅಪಘಾತದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರು ಸಹಜ ಉಸಿರಾಟವನ್ನು ನಿಲ್ಲಿಸಿದ್ದು, ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದರಿಂದ ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಇವರು ಸಹಜ ಉಸಿರಾಟವಿಲ್ಲದೆ ಸಂಪೂರ್ಣ ಕೃತಕ ಉಸಿರಾಟದಲ್ಲಿದ್ದು, ಮೆದುಳು ನಿಷ್ಕ್ರಿಯವಾಗಿ ಯಾವುದೇ ಚಿಕಿತ್ಸೆಗೆ ಅವರು ಸ್ಪಂದಿಸುತ್ತಿಲ್ಲ. ಇವರು ಇನ್ನು ಬದುಕುವ ಸಾಧ್ಯತೆ ತೀರಾ ಕಡಿಮೆಯಿದೆ. ಹೀಗಾಗಿ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದೇವೆ

ಅಪಘಾತದಿಂದಾಗಿ ಗಂಭೀರಾವಸ್ಥೆಯಲ್ಲಿರುವ ವಿಜಯ್ ಬದುಕುಳಿಯುವ ಸಾಧ್ಯತೆ ಇಲ್ಲ…! ➤ ಅಂಗಾಂಗ ದಾನಕ್ಕೆ ಸಿದ್ದತೆ- ಸಹೋದರ ಸಿದ್ದೇಶ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಎಂಡಿಎಂಎ ಸಾಗಾಟ ➤ 3.90 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 13. ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ಬೆಂಗಳೂರಿನಿಂದ ಕಾಸರಗೋಡಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಧಿತರನ್ನು ಕಾಸರಗೋಡಿನ ಶಫೀಕ್‌ ಹಾಗೂ ಅಲ್ತಾಫ್‌ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಒಟ್ಟು 65 ಗ್ರಾಂ ತೂಕದ ಸುಮಾರು 3.90 ಲಕ್ಷ ರೂ. ಮೌಲ್ಯದ ಎಂಡಿಎಂ, ಸ್ವಿಫ್ಟ್‌ ಕಾರು ಹಾಗೂ ಸುಮಾರು 11 ಸಾವಿರ ಮೌಲ್ಯದ 4 ಮೊಬೈಲ್‌‌ ಸಹಿತ

ಮಂಗಳೂರು: ಅಕ್ರಮ ಎಂಡಿಎಂಎ ಸಾಗಾಟ ➤ 3.90 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಸಹಿತ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top