ಕ್ರೈಮ್ ನ್ಯೂಸ್

ಶಿರಾಡಿ ಘಾಟ್ ನಲ್ಲಿ ಟ್ರಕ್ ಹಾಗೂ ಟಾಟಾ ಏಸ್ ನಡುವೆ ಢಿಕ್ಕಿ ➤ ಉಪ್ಪಿನಂಗಡಿ ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ. 05. ಎಳನೀರು ಹೇರಿಕೊಂಡು ಬರುತ್ತಿದ್ದ ಟ್ರಕ್ ಹಾಗೂ ಟಾಟಾ ಏಸ್ ಗಾಡಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಉದನೆ ಪರವರ ಕೊಟ್ಯ ಎಂಬಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕು ಕುಕ್ಕಾಜೆ ನಿವಾಸಿ ಹನೀಫ್ (56) ಎಂದು ಗುರುತಿಸಲಾಗಿದೆ. ಎಳನೀರು ಹೇರಿಕೊಂಡು ಬರುತ್ತಿದ್ದ ಟ್ರಕ್ ಹಾಗೂ ಹಾಸನಕ್ಕೆ ಬೀಡಿ ವ್ಯಾಪಾರಕ್ಕಾಗಿ ತೆರಳುತ್ತಿದ್ದ ಟಾಟಾಏಸ್ ಗಾಡಿ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಉಪ್ಪಿನಂಗಡಿಯ ಹನೀಫ್ […]

ಶಿರಾಡಿ ಘಾಟ್ ನಲ್ಲಿ ಟ್ರಕ್ ಹಾಗೂ ಟಾಟಾ ಏಸ್ ನಡುವೆ ಢಿಕ್ಕಿ ➤ ಉಪ್ಪಿನಂಗಡಿ ನಿವಾಸಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮುಲ್ಕಿ: ಬೈಕ್ ನಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಎ. 05. ಬೈಕ್ ನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮುಲ್ಕಿಯಲ್ಲಿ ನಡೆದಿದೆ. ಮೃತರನ್ನು ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ, ಆರ್‌ಎಸ್‌ಎಸ್‌ ಕಾರ್ಯಕರ್ತ ವಿಶ್ವನಾಥ ಶೆಟ್ಟಿ(46 ) ಎಂದು ಗುರುತಿಸಲಾಗಿದೆ. ಇವರು ಮುಲ್ಕಿಯ ಬಪ್ಪನಾಡು ಜಾತ್ರೆಗೆಂದು ತೆರಳುತ್ತಿದ್ದ ಸಂದರ್ಭ ಬೈಕ್ ನಿಂದ ಆಕಸ್ಮಿಕವಾಗಿ ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  

ಮುಲ್ಕಿ: ಬೈಕ್ ನಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಮನೆಗೆ ನುಗ್ಗಿ ನಗದು, ಬೆಳ್ಳಿ ನಾಣ್ಯ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಎ. 05. ಮನೆಯೊಳಗೆ ನುಗ್ಗಿದ ಕಳ್ಳರು ಮನೆ ಮಂದಿಯನ್ನು ಕೋಣೆಯೊಳಗೆ ಲಾಕ್ ಮಾಡಿ ಬೆಳ್ಳಿ ನಾಣ್ಯ ಹಾಗೂ ನಗದು ಕಳ್ಳತನಗೈದ ಘಟನೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಪರಣೆ ಎಂಬಲ್ಲಿ ರವಿವಾರ ಮುಂಜಾನೆ ನಡೆದಿದೆ. ಪಾಲ್ತಾಡಿ ಗ್ರಾಮದ ಪರಣೆ ನಿವಾಸಿ ಮಿತ್ರಾ ಜೈನ್ ಬಂಬಿಲಗುತ್ತು ಎಂಬವರ ಮನೆಯಿಂದ ಕಳ್ಳತನಗೈಯಲಾಗಿದೆ. ಮನೆಯ ಮಾಡಿನ ಹಂಚು ತೆಗೆದು ಒಳ ನುಗ್ಗಿರುವ ಕಳ್ಳರು, ಕೋಣೆಯೊಂದರಲ್ಲಿ ಮಲಗಿದ್ದ ಮಿತ್ರಾಜೈನ್ ಹಾಗೂ ಅವರ ಪುತ್ರಿ ದಿವ್ಯ ಎಂಬವರನ್ನು ಕೋಣೆಯೊಳಗೆ ಕೂಡಿ‌ಹಾಕಿ

ಬೆಳ್ಳಾರೆ: ಮನೆಗೆ ನುಗ್ಗಿ ನಗದು, ಬೆಳ್ಳಿ ನಾಣ್ಯ ದೋಚಿದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮಸೀದಿಗೆ ಕಲ್ಲೆಸೆದು ಹಾನಿಗೈದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 05. ಇಲ್ಲಿನ ಕಾಟಿಪಳ್ಳ ಬಳಿಯ ಕಾನ ಜನತಾ ಕಾಲನಿಯಲ್ಲಿ ಮಸೀದಿಗೆ ಕಿಡುಗೇಡಿಗಳು ಕಲ್ಲೆಸೆದು ಹಾನಿಗೈದ ಘಟನೆ ನಡೆದಿದೆ.‌ ಜನತಾ ಕಾಲನಿಯ ಸಾದುಲಿ ಜುಮಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದ್ರಸಕ್ಕೆ ಶನಿವಾರದಂದು ರಾತ್ರಿ ದುಷ್ಕರ್ಮಿಗಳು ಕಲ್ಲೆಸೆದಿದ್ದು, ಈ ಬಗ್ಗೆ ಮಸೀದಿ ಕಮಿಟಿ ಸದಸ್ಯರು ನೀಡಿದ ದೂರಿನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಸೀದಿಯಲ್ಲಿ ಶನಿವಾರ ರಾತ್ರಿ 1:30ರ ವರೆಗೆ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಬಳಿಕ ಸುಮಾರು 2:30ರ ವೇಳೆಗೆ ದ್ವಿಚಕ್ರ

ಮಂಗಳೂರು: ಮಸೀದಿಗೆ ಕಲ್ಲೆಸೆದು ಹಾನಿಗೈದ ದುಷ್ಕರ್ಮಿಗಳು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮದ್ಯ ಸಾಗಾಟದ ಲಾರಿ ಪಲ್ಟಿ- ರಸ್ತೆ ಮೇಲೆ ಬಿದ್ದಿದ್ದ ಮದ್ಯಕ್ಕಾಗಿ ಮುಗಿಬಿದ್ದ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಕಾರವಾರ, ಎ. 04. ಅಕ್ರಮವಾಗಿ ಗೋವಾದಿಂದ ಹುಬ್ಬಳ್ಳಿಗೆ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಅಂಕೋಲಾ ತಾಲೂಕಿನ ಅಡ್ಲೂರು ಗ್ರಾಮದಲ್ಲಿ ನಡೆದಿದೆ. ಲಾರಿಯ ತುಂಬ ಮದ್ಯವನ್ನ ತುಂಬಿಸಿಡಲಾಗಿದ್ದು ಲಾರಿಯು ಪಲ್ಟಿಯಾದ ವಿಷಯ ತಿಳಿಯುತ್ತಿದ್ದಂತೆಯೇ ಸಾರ್ವಜನಿಕರು ಓಡೋಡಿ ಬಂದು ರಸ್ತೆ ಮೇಲೆ ಬಿದ್ದಿದ್ದ ಮದ್ಯದ ಬಾಟಲಿಯನ್ನ ಎತ್ತಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮದ್ಯ ಸಾಗಾಟದ ಲಾರಿ ಪಲ್ಟಿ- ರಸ್ತೆ ಮೇಲೆ ಬಿದ್ದಿದ್ದ ಮದ್ಯಕ್ಕಾಗಿ ಮುಗಿಬಿದ್ದ ಸಾರ್ವಜನಿಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ವ್ಯಕ್ತಿಗೆ ಚೂರಿಯಿಂದ ಇರಿದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಎ. 04. ಬೈಕಿನಲ್ಲಿ ಹಿಂಬಾಳಿಸಿಕೊಂಡು ಬಂದ ದುಷ್ಕರ್ಮಿಗಳ ತಂಡವೊಂದು ಯುವಕನೋರ್ವನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಿ.ಸಿ ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ಬ್ರಹ್ಮರಕೂಟ್ಲು ವಳವೂರು ನಿವಾಸಿ ಮನೋಜ್ ಸಪಲ್ಯ (30) ಎಂದು ಗುರುತಿಸಲಾಗಿದೆ. ಮನೋಜ್ ಅವರು ತುಂಬೆಯಿಂದ ಬಿಸಿರೋಡು ಕಡೆಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಹೆಲ್ಮೆಟ್ ಧರಿಸಿ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬರುತ್ತಿದ್ದರು. ಇದನ್ನು ಗಮನಿಸಿದ ಮನೋಜ್ ಬಿಸಿರೋಡಿಗೆ ಆಗಮಿಸುತ್ತಿದ್ದಂತೆಯೇ ಅಜ್ಜಿಬೆಟ್ಟು ಕ್ರಾಸ್‌

ಬಂಟ್ವಾಳ: ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ವ್ಯಕ್ತಿಗೆ ಚೂರಿಯಿಂದ ಇರಿದ ದುಷ್ಕರ್ಮಿಗಳು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ರಿಕ್ಷಾ ಸ್ಕಿಡ್- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಎ. 04. ಉಪ್ಪಿನಂಗಡಿ- ಕಡಬ ರಸ್ತೆಯ ಆಲಂಕಾರು ಪೇಟೆ ಸಮೀಪ ರಿಕ್ಷಾವೊಂದು ಸ್ಕಿಡ್ ಆಗಿ ರಸ್ತೆ ಪಕ್ಕದಲ್ಲಿದ್ದ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಾಯಗೊಂಡ ಘಟನೆ ಆಲಂಕಾರು ಪೇಟೆಯ ನೂಜಿಬೈಲು ಎಂಬಲ್ಲಿ ನಡೆದಿದೆ. ರಿಕ್ಷಾ ರಾಮಕುಂಜದಿಂದ ಆಲಂಕಾರು ಪೇಟೆಗೆ ಬಂದು ಹಿಂದಿರುಗಿ ಹೋಗುವಾಗ ಈ ಅಪಘಾತ ಸಂಭವಿಸಿದ್ದು ಚಾಲಕನಿಗೆ ಗಾಯವಾಗಿದೆ ಎನ್ನಲಾಗಿದೆ.  

ಕಡಬ: ರಿಕ್ಷಾ ಸ್ಕಿಡ್- ಚಾಲಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಬೈಕ್ ಸ್ಕಿಡ್ ➤ ಯುವಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಎ. 04. ಬೈಕ್ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಗಾಯಗೊಂಡ ಘಟನೆ ಮೂರ್ಜೆ ಎಂಬಲ್ಲಿ ನಡೆದಿದೆ. ಗಾಯಗೊಂಡವನನ್ನು ಗೇರುಕಟ್ಟೆ ನಿವಾಸಿ ಪದ್ಮನಾಭ ಎಂಬವರ ಮಗ ಸಚಿನ್(21) ಎಂದು ಗುರುತಿಸಲಾಗಿದೆ. ಘಟನೆಯಿಂದ ರಸ್ತೆ ಬದಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಎಸ್ಕೆಎಸ್ಸೆಸ್ಸೆಫ್ ಧೂಮಲಿಕೆ ವಿಖಾಯ ತಂಡದ ಚೇರ್ ಮೆನ್ ಫಯಾಝ್ ಎಂಬವರು ಬಂಟ್ವಾಳ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಬಂಟ್ವಾಳ: ಬೈಕ್ ಸ್ಕಿಡ್ ➤ ಯುವಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: 12ರ ಬಾಲಕನ ಕೊಲೆ ಪ್ರಕರಣ ➤ ಓರ್ವ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಎ.04. ಹಾಕಿಬ್ (12) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಮೊಬೈಲ್ ಗೆ ಕೊನೆಯ ಕರೆಯ ಆಧಾರದಲ್ಲಿ ಸ್ಥಳೀಯವಾಗಿ ವಾಸಿಸುತ್ತಿರುವ ಯುವಕನೋರ್ವನನ್ನು ಪೊಲೀಸರು ತನಿಖೆ ನಡೆಸಲು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.   ಆನ್ ಲೈನ್ ಗೇಮ್ ನಲ್ಲಿ ಸೋತ ವಿಚಾರವಾಗಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದ್ದು, ಬಾಲಕ ರಾತ್ರಿ ಪೋನ್ ಕರೆಯ ಬಳಿಕ ಮನೆಯಿಂದ ಹೊರಗೆ ಹೋಗಿದ್ದನೆಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಬಾಲಕ ಮನೆಯ ಸಮೀಪ ವೇಗವಾಗಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸ್ಥಳೀಯ

ಮಂಗಳೂರು: 12ರ ಬಾಲಕನ ಕೊಲೆ ಪ್ರಕರಣ ➤ ಓರ್ವ ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಲ್ಲಂಗಡಿ ಹಣ್ಣನ್ನು ತಿಂದು ಇಬ್ಬರು ಮೃತ್ಯು, ಮೂವರ ಸ್ಥಿತಿ ಚಿಂತಾಜನಕ ➤ ತನಗೆ ವಿಷ ಇಟ್ಟವರ ಪಾಲಿಗೆ ತಾನೇ ಯಮದೂತನಾದ ಇಲಿ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಎ. 04. ಕಲ್ಲಂಗಡಿ ಹಣ್ಣು ತಿಂದ ಪರಿಣಾಮ ಇಬ್ಬರು ಬಾಲಕರು ಮೃತಪಟ್ಟು, ಮೂವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ ಎಂಬಲ್ಲಿ ನಡೆದಿದೆ.   ಮೃತರನ್ನು ದರವೇಣಿ ಸಿವಾನಂದು (12) ಮತ್ತು ಚರಣ್​ (10) ಎಂದು ಗುರುತಿಸಲಾಗಿದೆ. ಕುಟುಂಬದ ಇತರ ಸದಸ್ಯರಾದ ಶ್ರೀಶೈಲಂ, ಗುಣವತಿ ಮತ್ತು ಅಜ್ಜಿ ಸರಮ್ಮಲ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇದೀಗ ಇಡೀ ಕುಟುಂಬಸ್ಥರ ಸಾವಿಗೆ ಇಲಿ

ಕಲ್ಲಂಗಡಿ ಹಣ್ಣನ್ನು ತಿಂದು ಇಬ್ಬರು ಮೃತ್ಯು, ಮೂವರ ಸ್ಥಿತಿ ಚಿಂತಾಜನಕ ➤ ತನಗೆ ವಿಷ ಇಟ್ಟವರ ಪಾಲಿಗೆ ತಾನೇ ಯಮದೂತನಾದ ಇಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top