ಕ್ರೈಮ್ ನ್ಯೂಸ್

ಉಡುಪಿ: ದೇವಸ್ಥಾನದ ಒಳಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೋಟ, ಮಾ. 07. ಇಲ್ಲಿನ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದ ಒಳಗೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ನಹತ್ಯೆಗೈದ ಯುವಕನನ್ನು ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಸೆಂಟ್ರಿಂಗ್ ಕೆಲಸಗಳಿಗೆ ಹೋಗುತ್ತಿದ್ದ ಇವರು ಪ್ರತೀ ದಿನ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿನ ಕೆಲಸ ಕಾರ್ಯಗಳಿಗೂ ನೆರವಾಗುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಇವರು ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ದೇವಸ್ಥಾನದ ಬಾವಿಯ ಹಗ್ಗದಿಂದ ನೇಣು ಬಿಗಿದು ಚಂದ್ರ ಪೂಜಾರಿಯವರು […]

ಉಡುಪಿ: ದೇವಸ್ಥಾನದ ಒಳಗೆ ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಉಡುಪಿ: ಪೇಜಾವರ ಮಠದಲ್ಲಿ ಅಗ್ನಿ ಅವಘಡ ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 07. ವಿದ್ಯುತ್ ಅವಘಡದಿಂದಾಗಿ ಅಗ್ನಿ ಅನಾಹುತ ಸಂಭವಿಸಿದ ಘಟನೆ ಉಡುಪಿಯ ಪೇಜಾವರ ಮಠದಲ್ಲಿ ನಡೆದಿದೆ. ಮಠದಲ್ಲಿ ಅಳವಡಿಸಲಾಗಿದ್ದ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಮಠದ ಸಿಬ್ಬಂದಿಗಳು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಕ್ಷಣವೇ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾವುದೇ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

? ಉಡುಪಿ: ಪೇಜಾವರ ಮಠದಲ್ಲಿ ಅಗ್ನಿ ಅವಘಡ ➤ ತಪ್ಪಿದ ಅನಾಹುತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಣ್ಣೂರು: ಸ್ಟೀಲ್ ಬಾಂಬ್ ಪತ್ತೆ

(ನ್ಯೂಸ್ ಕಡಬ) newskadaba.com ಕೇರಳ, ಮಾ. 07. ತಲಶ್ಶೇರಿ ಪೊಲೀಸರು ಹಾಗೂ ಬಾಂಬ್‍ ಸ್ಕ್ವಾಡ್ ಜಂಟಿಯಾಗಿ ನಡೆಸಿದ ಆಯುಧ ತಪಾಸಣೆಯ ವೇಳೆ ಸ್ಟೀಲ್ ಬಾಂಬೊಂದು ತಲಶ್ಯೇರಿ ಠಾಣಾ ವ್ಯಾಪ್ತಿಯ ಉಕಂಡನ್ ಪೀಡಿಗ ಸಮೀಪ ಪಿಪಿ ಅನಂತನ್ ರಸ್ತೆಯ ಅಯ್ಯತ್ತಾನ್ ಎಂಬಲ್ಲಿ ಪತ್ತೆಯಾಗಿದೆ. ಈ ಸಂದರ್ಭದಲ್ಲಿ ಬಾಂಬ್ ತಯಾರಿಸಲು ಬಳಸುವ 13 ಸ್ಟೀಲ್ ಕಂಟೈನರ್ ಹಾಗೂ ಸಿಡಿಮದ್ದು ಪತ್ತೆಯಾಗಿದೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ತಲಶ್ಶೇರಿ ಇನ್ಸ್‌ಪೆಕ್ಟರ್ ಗೋಪಕುಮಾರ್ ನೇತೃತ್ವದಲ್ಲಿ ಸಬ್‌ಇನ್ಸ್‌ಪೆಕ್ಟರ್

ಕಣ್ಣೂರು: ಸ್ಟೀಲ್ ಬಾಂಬ್ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿಯ ನಾಗರಿಕರನ್ನು ದೇಶದ್ರೋಹಿಗಳಿಗೆ ಹೋಲಿಸಿದ ಶಾಸಕರ ಹೇಳಿಕೆ ವಾಪಸ್ ಪಡೆಯಬೇಕು- ಪಿಎಫ್ಐ ➤ ಸಂಘಪರಿವಾರದಲ್ಲಿ ಇರುವಷ್ಟು ದೇಶದ್ರೋಹಿಗಳು ಬೇರೆಲ್ಲೂ ಇಲ್ಲ- ಹಮೀದ್ ಮೆಜೆಸ್ಟಿಕ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.06. ಬಿಜೆಪಿಯ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಸಂಜೀವ ಮಠಂದೂರು ಮಾತನಾಡುತ್ತಾ ಉಪ್ಪಿನಂಗಡಿಯಲ್ಲಿ ಇರುವಷ್ಟು ದೇಶದ್ರೋಹಿಗಳು ಮತ್ತು ಮತಾಂಧರು ಬೇರೆಲ್ಲೂ ಇಲ್ಲ ಎಂಬ ಹೇಳಿಕೆ ನೀಡಿ ಸಮಸ್ತ ಉಪ್ಪಿನಂಗಡಿಯ ನಾಗರಿಕರನ್ನು ದೇಶದ್ರೋಹಿಗಳಿಗೆ ಹೋಲಿಸಿದ ಕ್ರಮವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತಿದೆ. ಈ ಹಿಂದೆ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದಂತೆ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಮಾತನಾಡಿರುವುದು ಒಪ್ಪುವಂತಹದಲ್ಲ. ಇಂತಹ ಸಾಮರಸ್ಯ

ಉಪ್ಪಿನಂಗಡಿಯ ನಾಗರಿಕರನ್ನು ದೇಶದ್ರೋಹಿಗಳಿಗೆ ಹೋಲಿಸಿದ ಶಾಸಕರ ಹೇಳಿಕೆ ವಾಪಸ್ ಪಡೆಯಬೇಕು- ಪಿಎಫ್ಐ ➤ ಸಂಘಪರಿವಾರದಲ್ಲಿ ಇರುವಷ್ಟು ದೇಶದ್ರೋಹಿಗಳು ಬೇರೆಲ್ಲೂ ಇಲ್ಲ- ಹಮೀದ್ ಮೆಜೆಸ್ಟಿಕ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ನಾಲ್ವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಡ್ಯ, ಮಾ. 06. ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ವೃತ್ತದ ಬಳಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಜಯದೇವ್, ಕಿರಣ್ ಅಶೋಕ್‌ ಸೇರಿ ಮತ್ತಿಬ್ಬರು ರಸ್ತೆಯ ಪಕ್ಕದಲ್ಲಿ ನಿಂತಿದ್ದು, ವೇಗವಾಗಿ ಬಂದ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ. ಘಟ‌ನೆಯಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದಿಂದಾಗಿ ಕಾರು

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ನಾಲ್ವರು ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಮದ್ಯ ಸೇವಿಸಿ ಗಂಡ – ಹೆಂಡತಿಯ ನಡುವೆ ಜಗಳ ➤ ಪತ್ನಿಯ ಹೊಡೆತಕ್ಕೆ ಗಂಡ ಬಲಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 06. ಹೆಂಡತಿಯೇ ಸ್ವತಃ ಗಂಡನನ್ನು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಕೊಲೆಗೈದವರನ್ನು ಸೇಸಪ್ಪರವರ ಪತ್ನಿ ಉಮಾವತಿ (52) ಅವರನ್ನು ವಶಕ್ಕೆ ಪಡೆಯಲಾಗಿದೆ. ಸೇಸಪ್ಪರವರು ಕೂಲಿ ಕೆಲಸ ಮಾಡುತ್ತಿದ್ದು, ಪ್ರತೀದಿನ ಮನೆಯಲ್ಲಿ ಗಂಡ- ಹೆಂಡತಿ ಮಧ್ಯೆ ಕುಡಿದು ಗಲಾಟೆ ನಡೆಯುತ್ತಿತ್ತು. ಮಾ.3 ರಂದು ರಾತ್ರಿ ಗಂಡ ಹೆಂಡತಿ ಮಧ್ಯೆ ಗಲಾಟೆ

ಬಂಟ್ವಾಳ: ಮದ್ಯ ಸೇವಿಸಿ ಗಂಡ – ಹೆಂಡತಿಯ ನಡುವೆ ಜಗಳ ➤ ಪತ್ನಿಯ ಹೊಡೆತಕ್ಕೆ ಗಂಡ ಬಲಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕನ್ನಡ ಸುಗಮ ಸಂಗೀತಲೋಕದ ಧ್ರುವತಾರೆ, ಸಾಹಿತಿ ಡಾ/ಎನ್.ಎಸ್.ನಾರಾಯಣಭಟ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 06. ಕನ್ನಡದ ಖ್ಯಾತ ಕವಿ ಸಾಹಿತಿ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು(85 ) ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಎನ್.ಎಸ್.ಎಲ್ ಎಂದೇ ಸಾಹಿತ್ಯಲೋಕದಲ್ಲಿ ಚಿರಪರಿಚಿತರಾಗಿದ್ದ ಇವರು, ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಬೆಳಗ್ಗೆ 4:45ರ ಸುಮಾರಿಗೆ ಬನಶಂಕರಿಯ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾವಗೀತೆ, ಸಾಹಿತ್ಯ ವಿಮರ್ಶೆ, ನವ್ಯಕವಿತೆ, ಅನುವಾದ ಮೊದಲಾದ ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿದ ಎನ್.ಎಸ್.ಎಲ್ ಕನ್ನಡ ಸಾಹಿತ್ಯದ ಅಗ್ರಮಾನ್ಯ ಕವಿ, ಜನಪ್ರಿಯ ಪ್ರಾಧ್ಯಾಪಕರಾಗಿದ್ದರು. ಇವರು ಕನ್ನಡ-ಸಂಸ್ಕೃತ-ಇಂಗ್ಲೀಷ್ ಭಾಷೆಗಳಲ್ಲಿ ಕೃತಿರಚನೆ ಮಾಡಿದ್ದಾರೆ.

ಕನ್ನಡ ಸುಗಮ ಸಂಗೀತಲೋಕದ ಧ್ರುವತಾರೆ, ಸಾಹಿತಿ ಡಾ/ಎನ್.ಎಸ್.ನಾರಾಯಣಭಟ್ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಗೆ ಸ್ಕೂಟರ್ ಅಡ್ಡ ಇಟ್ಟು ನಿಂದಿಸಿ ಚಾಲಕನ ಕೊಲೆಗೆ ಯತ್ನ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 06. ಪುತ್ತೂರಿನಿಂದ ಮಂಗಳೂರು ಕಡೆಗೆ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ ಬಸ್ ಚಾಲಕರೋರ್ವರಿಗೆ ಪಡೀಲ್ ಎಂಬಲ್ಲಿ ಸ್ಕೂಟರ್ ಸವಾರನೊಬ್ಬ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿದ ಸ್ಕೂಟರ್ ಸವಾರನನ್ನು‌ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಸೊಹಿಫ್ ಎಂದು ಗುರುತಿಸಲಾಗಿದೆ. ಪುತ್ತೂರು ಡಿಪೋದ ಕೆಎಸ್ಆರ್​​​​ಟಿಸಿ ಬಸ್ ಚಾಲಕ ರಾಜು ಗಜಕೋಶ ಎಂಬವರು ಪುತ್ತೂರಿನಿಂದ ಮಂಗಳೂರು ಕಡೆಗೆ ಬಸ್​ ಚಲಾಯಿಸಿಕೊಂಡು ಹೋಗುತ್ತಿದ್ದ‌ ವೇಳೆ ಬಸ್ ಪಡೀಲ್ ಕಣ್ಣೂರು ತಲುಪುತ್ತಿದ್ದಂತೆಯೇ

ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಗೆ ಸ್ಕೂಟರ್ ಅಡ್ಡ ಇಟ್ಟು ನಿಂದಿಸಿ ಚಾಲಕನ ಕೊಲೆಗೆ ಯತ್ನ ➤ ಓರ್ವನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಸುಬ್ರಹ್ಮಣ್ಯ: ಉಯ್ಯಾಲೆಯಲ್ಲಿ ಆಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಹಗ್ಗ ಬಿಗಿದು ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ. 06. ಹುಟ್ಟುಹಬ್ಬದ ದಿನದಂದೇ ಉಯ್ಯಾಲೆಯ ಹಗ್ಗಕ್ಕೆ ಸಿಲುಕಿ ದಾರುಣವಾಗಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಕಡಬ ತಾಲೂಕಿನ ಏನೆಕಲ್ಲಿನಲ್ಲಿ ಸಂಭವಿಸಿದೆ. ಮೃತಳನ್ನು ಯೇನೆಕಲ್ಲು ಗ್ರಾಮದ ಮುತ್ಲಾಜಡ್ಕ ಬಾಬು ಅಜಿಲ ಅವರ ಪುತ್ರಿ ಏನೆಕಲ್ಲು ಸರಕಾರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಶೃತಿ(11) ಎಂದು ಗುರುತಿಸಲಾಗಿದೆ. ಶುಕ್ರವಾರದಂದು ಈಕೆಯ ಹುಟ್ಟು ಹಬ್ಬವಾದುದರಿಂದ ಶಾಲೆಗೆ ಹೋಗದೆ ಮನೆಯಲ್ಲೇ ಇದ್ದು ಮದ್ಯಾಹ್ನದ ವೇಳೆ ಮನೆಯ ಪಕ್ಕದಲ್ಲಿದ್ದ ಪೇರಳೆ ಮರಕ್ಕೆ ಕಟ್ಟಲಾದ ಉಯ್ಯಾಲೆಯೊಂದರಲ್ಲಿ ಆಟವಾಡುತ್ತಿದ್ದ ಸಂದರ್ಭ ಉಯ್ಯಾಲೆಯ

? ಸುಬ್ರಹ್ಮಣ್ಯ: ಉಯ್ಯಾಲೆಯಲ್ಲಿ ಆಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಹಗ್ಗ ಬಿಗಿದು ಬಾಲಕಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಗುಡ್ಡಕ್ಕೆ ಬೆಂಕಿ ➤ ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 06. ಇಲ್ಲಿನ ಪನ್ನೆ ಎಂಬಲ್ಲಿ ಶುಕ್ರವಾರದಂದು ಸಂಜೆ ವೇಳೆ ಗುಡ್ಡೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಸ್ಥಳೀಯರು ಅಗ್ನಿಶಾಮಕ ದಳದವರ ಸಹಕಾರದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯುತ್ ಲೈನ್ ನಿಂದಾಗಿ ಬೆಂಕಿ ತಗುಲಿ ಗುಡ್ಡೆಗೆ ವ್ಯಾಪಿಸಿತ್ತು. ಈ ಹಿಂದೆಯೂ ಇದೇ ಸ್ಥಳದಲ್ಲಿ ಬೆಂಕಿ ಅವಘಡ ನಡೆದಿತ್ತು. ಈ ಕುರಿತು ವಿದ್ಯುತ್ ಲೈನ್ ಬದಲಾವಣೆ ಬಗ್ಗೆ ಮೆಸ್ಕಾಂಗೆ ತಿಳಿಸಿದ್ದರೂ ನಿರ್ಲಕ್ಷ್ಯ ವಹಿಸುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ಬೆಳ್ಳಾರೆ: ಗುಡ್ಡಕ್ಕೆ ಬೆಂಕಿ ➤ ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top