ಕ್ರೈಮ್ ನ್ಯೂಸ್

ಮಂಗಳೂರು: ಮುಡಿಪು ಬೆಟ್ಟದಲ್ಲಿ ಸರಸದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿ..! ➤ ಪೊಲೀಸರಿಗೆ ಒಪ್ಪಿಸಿದ ಹಿಂದೂ ಜಾಗರಣಾ ವೇದಿಕೆ

(ನ್ಯೂಸ್ ಕಡಬ) newskadaba.com ಕೊಣಾಜೆ, ಫೆ. 03. ಮುಡಿಪು ಪವಾಡ ಬೆಟ್ಟದಲ್ಲಿ ಸರಸ ಸಲ್ಲಾಪದಲ್ಲಿ ತೊಡಗಿದ್ದ ಅಂತರ್ಜಾತಿಯ ಜೋಡಿಯೊಂದನ್ನು ಪತ್ತೆ ಹಚ್ಚಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಮೂಡುಬಿದಿರೆ ನಿವಾಸಿ ಮಹಮ್ಮದ್ ಜುನೈದ್ ಎಂಬ ಯುವಕನು ಮುಡಿಪು ಡಿ.ಜಿ ಕಟ್ಟೆ ವಿದ್ಯಾನಗರ ನಿವಾಸಿಯಾದ ಹಿಂದೂ ಯುವತಿಯೊಂದಿಗೆ ಪರಿಚಯ ಬೆಳೆಸಿದ್ದು, ಈ ಜೋಡಿಯು ಮುಡಿಪು ಬೆಟ್ಟದಲ್ಲಿ ಸರಸ ಸಲ್ಲಾಪದಲ್ಲಿದ್ದರು ಎನ್ನಲಾಗಿದೆ. ಈ ಕುರಿತು ಮಾಹಿತಿಯನ್ನು ಕಲೆಹಾಕಿದ ದಾಳಿ ಮಾಡಿದ ಹಿಂದು ಜಾಗರಣ ವೇದಿಕೆ ಸದಸ್ಯರು […]

ಮಂಗಳೂರು: ಮುಡಿಪು ಬೆಟ್ಟದಲ್ಲಿ ಸರಸದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿ..! ➤ ಪೊಲೀಸರಿಗೆ ಒಪ್ಪಿಸಿದ ಹಿಂದೂ ಜಾಗರಣಾ ವೇದಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಮಾರಾಧಾರ ನದಿಯಲ್ಲಿ ಮೀನು ಹಿಡಿಯಲೆಂದು ತೆರಳಿದ್ದ ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 02. ಶಾಂತಿಗೋಡು ಸಮೀಪದ ಕುಮಾರಧಾರ ನದಿಗೆ ಮೀನು ಹಿಡಿಯಲೆಂದು ತೆರಳಿದ್ದ ಮೂವರ ಪೈಕಿ ಓರ್ವ ನಾಪತ್ತೆಯಾದ ಘಟನೆ ಇಂದದು ನಡೆದಿದೆ.   ನಾಪತ್ತೆಯಾದವರನ್ನು ಮುಂಡೂರು ನಿವಾಸಿ ಕಾಂತಪ್ಪ ಎಂದು ಗುರುತಿಸಲಾಗಿದೆ. ಇವರು ಶಾಂತಿಗೋಡು ಕುಮಾರಧಾರ ನದಿಗೆ ಮೀನು ಹಿಡಿಯಲೆಂದು ತನ್ನ ಮಗ ಹಾಗೂ ಸಂಬಂಧಿಕರೊಂದಿಗೆ ತೆರಳಿದ್ದ ಸಂದರ್ಭ ಇವರು ನಾಪತ್ತೆಯಾಗಿದ್ದಾರೆ ಎಂದು ಅವರ ಮಗ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಹುಡುಕಾಟ ನಡೆಸುತ್ತಿದ್ದಾರೆ.

ಕುಮಾರಾಧಾರ ನದಿಯಲ್ಲಿ ಮೀನು ಹಿಡಿಯಲೆಂದು ತೆರಳಿದ್ದ ವ್ಯಕ್ತಿ ನಾಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಸು ತೊಲೆಯಲು ಹೋಗಿದ್ದ ಬಾಲಕ ಹಾಗೂ ಮಹಿಳೆ ಕೆಸರಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ, ಫೆ. 02. ಹಸುವಿನ ಮೈತೊಳೆಯಲೆಂದು ಹೋಗಿದ್ದ ಬಾಲಕ ಹಾಗೂ ಅವನನ್ನು ಕಾಪಾಡಲು ಹೋದ ಮಹಿಳೆಯೋರ್ವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕನಕಪುರದ ಹುಣಸೆಮರದದೊಡ್ಡಿ ಎಂಬ ಗ್ರಾಮದಲ್ಲಿ ನಡೆದಿದೆ. ಮೃತರನ್ನು ದೀಪು(11) ಹಾಗೂ ಆತನ ಸಂಬಂಧಿ ಮಹಿಳೆ ಭಾರತಿ(30) ಎಂದು ಗುರುತಿಸಲಾಗಿದೆ. ದೀಪು ಎಂಬಾತ ಜಮೀನಿನಲ್ಲಿದ್ದ ಹೊಂಡದಲ್ಲಿ ಹಸುವನ್ನು ತೊಳೆಯಲೆಂದು ಹೋಗಿದ್ದ ವೇಳೆ ಬಾಲಕ ಕಾಲು ಜಾರಿ ನೀರು ಪಾಲಾಗುವುದನ್ನು ಕಂಡ ಭಾರತಿ ಬಾಲಕನನ್ನು ರಕ್ಷಿಸಲೆಂದು ಹೋಗಿ ಇಬ್ಬರೂ ಕೆಸರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಹಸು ತೊಲೆಯಲು ಹೋಗಿದ್ದ ಬಾಲಕ ಹಾಗೂ ಮಹಿಳೆ ಕೆಸರಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಳಿನೆಲೆ: ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 02. ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟನ ಎಂಬಲ್ಲಿ ವರದಿಯಾಗಿದೆ. ಕಾಣೆಯಾದವರನ್ನು ಚೆಮ್ಮಡ್ಕ್ ಮನೆಯ ನಿವಾಸಿ ಚೆನ್ನಪ್ಪ(75) ಎಂದು ಗುರುತಿಸಲಾಗಿದೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಳಿನೆಲೆ: ವ್ಯಕ್ತಿ ನಾಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 02. ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 113 ರ ನೆಟ್ಟಣದಲ್ಲಿ ಮಸೀದಿ ಎದುರುಡೆ ಇಂದು ಬೆಳಗ್ಗೆ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಬರುತ್ತಿದ್ದ ಕಡಬದ ಕೆಂಚಪಟ್ರೆ ನಿವಾಸಿ ಸುದರ್ಶನ್ ಬೈಪಡಿತ್ತಾಯ ಎಂಬವರ ಬೈಕಿಗೆ ಹಿಂದಿನಿಂದ ಅತೀ ವೇಗದಲ್ಲಿ ಬಂದ ಬೈಕ್ ಒಂದು ಡಿಕ್ಕಿ ಹೊಡೆದಿದ್ದು ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಸುದರ್ಶನ್ ಬೈಪಡಿತ್ತಾಯ ಅವರ ಕೈಗೆ ತೀವ್ರ

ಸುಬ್ರಹ್ಮಣ್ಯ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೋಳಿ ಅಂಕಕ್ಕೆ ಪೊಲೀಸರಿಂದ ದಾಳಿ ➤ ವಶಕ್ಕೆ ಪಡೆದ 4 ದ್ವಿಚಕ್ರ ವಾಹನಗಳು ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ತೀರ್ಥಹಳ್ಳಿ, ಫೆ. 02. ಕೋಳಿ ಅಂಕದ ಮೇಲೆ ದಾಳಿ ನಡೆಸಿದ ವಶಕ್ಕೆ ಪಡೆದಿದ್ದ ದ್ವಿಚಕ್ರ ವಾಹನಗಳನ್ನು ಸಾಗಾಟ ಮಾಡುವಾಗ ಬೈಕ್ ಗಳು ದಾರಿ ಮಧ್ಯೆಯೇ ಸುಟ್ಟು ಭಸ್ಮವಾದ ಘಟನೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಬಳಿ ನಡೆದಿದೆ. ಕೋಣಂದೂರಿನ ಕಾಡು ಮಾರ್ಗಗಗಳಲ್ಲಿ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ವಾಹನಗಳನ್ನು ಬಿಟ್ಟು ಸ್ಥಳದಲ್ಲಿದ್ದವರೆಲ್ಲಾ ಪರಾರಿಯಾಗಿದ್ದರು. ಘಟನಾ ಸ್ಥಳದಲ್ಲಿದ್ದ ದ್ವಿಚಕ್ರ ವಾಹನಗಳನ್ನು ವಶಪಡಿಸಿದ ಪೊಲೀಸರು, ಬೈಕ್

ಕೋಳಿ ಅಂಕಕ್ಕೆ ಪೊಲೀಸರಿಂದ ದಾಳಿ ➤ ವಶಕ್ಕೆ ಪಡೆದ 4 ದ್ವಿಚಕ್ರ ವಾಹನಗಳು ಬೆಂಕಿಗಾಹುತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ರಂಗ ಕಲಾವಿದ ನಾರಾಯಣ ಗಾಣಿಗ ವಿಧಿವಶ

(ನ್ಯೂಸ್ ಕಡಬ) newskadaba.com ಕುಂದಾಪುರ, ಫೆ. 02. ಹಿರಿಯ ಯಕ್ಷಗಾನದ ಸ್ತ್ರೀವೇಷಧಾರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂಡ್ಸೆ ನಾರಾಯಣ ಗಾಣಿಗ ಎಂಬವರು ಸೋಮವಾರದಂದು ನಿಧನರಾಗಿದ್ದಾರೆ. ಇವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿರುವ ಕೊಲ್ಲೂರಿನ ವಂಡ್ಸೆ ಗ್ರಾಮದವರಾಗಿದ್ದು, ಸುಮಾರು 28 ವರ್ಷಗಳ ಕಾಲ ಅನೇಕ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಇನ್ನು ಚಿತ್ರಾಂಗದೆ, ದ್ರೌಪದಿ, ಶಶಿಪ್ರಭೆ, ಮಂಡೋದರಿ, ಮೀನಾಕ್ಷಿ, ತಾರೆ ಮುಂತಾದ ಪಾತ್ರಗಳಲ್ಲಿ ಮಿಂಚಿರುವ ಇವರಿಗೆ 2008ನೇ ಸಾಲಿನಲ್ಲಿ ಯಕ್ಷಗಾನ ಅಕಾಡೆಮಿ ಪುರಸ್ಕಾರ, 2013ರಲ್ಲಿ ಮಕ್ಕಳ ಮೇಳದ ಉಡುಪಿ ಪ್ರಶಸ್ತಿ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ರಂಗ ಕಲಾವಿದ ನಾರಾಯಣ ಗಾಣಿಗ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೂರಿಕುಮೇರು: ಟ್ಯಾಂಕರ್ ಪಲ್ಟಿ ➤ 10 ಗಂಟೆಗಳ ಬಳಿಕ ವಾಹನ ಸಂಚಾರ ಮುಕ್ತ

(ನ್ಯೂಸ್ ಕಡಬ) newskadaba.com ಸೂರಿಕುಮೇರು, ಫೆ. 02. ಅನಿಲ ಟ್ಯಾಂಕರೊಂದು ಪಲ್ಟಿಯಾಗಿ ಸಂಚರಾ ಅಸ್ತವ್ಯಸ್ತಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ನಡೆದಿದ್ದು, ಇದೀಗ ಸಂಚಾರ ಮುಕ್ತಗೊಳಿಸಲಾಗಿದೆ. ಬೆಳಗ್ಗಿನಿಂದಲೇ ವಿಟ್ಲ, ಅನಂತಾಡಿ, ಕಲ್ಲಡ್ಕ ಮೂಲಕ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದೀಗ 10 ಗಂಟೆಯ ಬಳಿಕ ಕಾರ್ಯಾಚರಣೆ ಮುಗಿದು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಸೂರಿಕುಮೇರು: ಟ್ಯಾಂಕರ್ ಪಲ್ಟಿ ➤ 10 ಗಂಟೆಗಳ ಬಳಿಕ ವಾಹನ ಸಂಚಾರ ಮುಕ್ತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೊಲಿಯೋ ಬದಲು ಸ್ಯಾನಿಟೈಸರ್ ನೀಡಿದ ಆರೋಗ್ಯ ಸಿಬ್ಬಂದಿ ➤ 12 ಮಕ್ಕಳು ಅಸ್ವಸ್ಥ

(ನ್ಯೂಸ್ ಕಡಬ) newsladaba.com ಮುಂಬೈ, ಫೆ. 02. 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಬದಲಿಗೆ ಸ್ಯಾನಿಟೈಸರ್ ನೀಡಿದ ದುರದೃಷ್ಟಕರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸ್ಯಾನಿಟೈಸರ್ ನೀಡಿದ್ದರಿಂದಾಗಿ 12 ಮಕ್ಕಳು ಅಸ್ವಸ್ಥರಾಗಿದ್ದು, ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯವತ್ಮಲ್ ಜಿಲ್ಲೆಯ 5 ವರ್ಷದೊಳಗಿನ ಮಕ್ಕಳಿಗೆ ಆರೋಗ್ಯ ಸಿಬ್ಬಂದಿ ಪೋಲಿಯೋ ಲಸಿಕೆ ಹಾಕುವ ಬದಲು ಯಡವಟ್ಟು ಮಾಡಿ ಹ್ಯಾಂಡ್ ಸ್ಯಾನಿಟೈಸರ್ ನೀಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನಂತರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಲೋಪವೆಸಗಿದ ಮೂವರು

ಪೊಲಿಯೋ ಬದಲು ಸ್ಯಾನಿಟೈಸರ್ ನೀಡಿದ ಆರೋಗ್ಯ ಸಿಬ್ಬಂದಿ ➤ 12 ಮಕ್ಕಳು ಅಸ್ವಸ್ಥ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಮಹಾನಗರ ಪಾಲಿಕೆ ಅಧಿಕಾರಿಯ ಮನೆ ಹಾಗೂ ಕಛೇರಿ ಮೇಲೆ ಎಸಿಬಿ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.‌ 02. ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಜಯರಾಜ್ ಎಂಬವರ ಮನೆ ಹಾಗೂ ಕಛೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇವರು ಕಳೆದ ಆರು ವರ್ಷಗಳಿಂದ ಮಹಾನಗರ ಪಾಲಿಕೆಯಲ್ಲಿ ಕರ್ತವ್ಯದಲ್ಲಿದ್ದು, ಜಯರಾಜ್ ಅವರ ಕಾಪಿಕಾಡ್ ಎಂಬಲ್ಲಿರುವ ಮನೆಗೆ ಹಾಗೂ ಕಛೇರಿಗೆ ದಾಳಿ ನಡೆಸಿದ್ದಾರೆ. ಇವರ ಪತ್ನಿ ಕೊಚ್ಚಿಯ ಕೇಂದ್ರಾಡಳಿತ ಪ್ರದೇಶವಾದ ಮಾಹೆಯಲ್ಲಿ ಕೇಂದ್ರ ಸರಕಾರಿ ಇಲಾಖೆಯ ವೈದ್ಯೆಯಾಗಿದ್ದು, ಅಲ್ಲಿ ಅವರು

ಮಂಗಳೂರು: ಮಹಾನಗರ ಪಾಲಿಕೆ ಅಧಿಕಾರಿಯ ಮನೆ ಹಾಗೂ ಕಛೇರಿ ಮೇಲೆ ಎಸಿಬಿ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top