ಕ್ರೈಮ್ ನ್ಯೂಸ್

ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 02. ನದಿಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಇಲ್ಲಿನ ಮಾಲಾಡಿ ಬಳಿಯ ಕುಕ್ಕೇಡಿ ಎಂಬಲ್ಲಿ ನಡೆದಿದೆ. ಮೃತ ಯುಕನನ್ನು ಮಾಲಾಡಿ ಗ್ರಾಮದ ನಿವಾಸಿ ರವೀಂದ್ರ (26) ಎಂದು ಗುರುತಿಸಲಾಗಿದೆ. ಕುಕ್ಕೇಡಿಯ ಉಮಿಲಾಯಿ ಡ್ಯಾಮ್ ಬಳಿ ನದಿ ನೀರಿನಲ್ಲಿ ಯುವಕನು ಸ್ನಾನ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ವೃದ್ದೆ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಮಕ್ಕಳು..! ➤ ಮಗ ಪೊಲೀಸ್ ಆದರೂ ತಾಯಿಯ ಸ್ಥಿತಿ ಶೋಚನೀಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 01. ವೃದ್ಧೆ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಕರಾಳ ಘಟನೆ ಬೆಳ್ತಂಗಡಿಯ ಕಳಿಯದ ನಾಳ ಎಂಬಲ್ಲಿ ನಡೆದಿದೆ. ವೃದ್ಧ ತಾಯಿಗೆ 5 ಜನ ಮಕ್ಕಳಿದ್ದು, ಇದರ ಪೈಕಿ ಒಬ್ಬ ಪುತ್ರಿ ಆಶಾ ಕಾರ್ಯಕರ್ತೆಯಾಗಿದ್ದು, ಮತ್ತೋರ್ವ ಪುತ್ರಿ ಗೃಹಿಣಿಯಾಗಿದ್ದಾರೆ. ಒಬ್ಬ ಪುತ್ರ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನಿಬ್ಬರು ಪುತ್ರರು ಖಾಸಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಮತ್ತೋರ್ವ ಪೊಲೀಸ್ ಸಿಬ್ಬಂದಿಯಾಗಿ ಸೇವೆಯಲ್ಲಿದ್ದಾನೆ ಎಂದು ತಿಳಿದುಬಂದಿದೆ. ಬೀದಿ ಬದಿಯಲ್ಲಿದ್ದ ಈ ವೃದ್ದೆಯನ್ನು ಗಮನಿಸಿದ ಸಾರ್ವಜನಿಕರು ದ.ಕ. ಜಿಲ್ಲಾ

ಬೆಳ್ತಂಗಡಿ: ವೃದ್ದೆ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಮಕ್ಕಳು..! ➤ ಮಗ ಪೊಲೀಸ್ ಆದರೂ ತಾಯಿಯ ಸ್ಥಿತಿ ಶೋಚನೀಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಹೋಟೆಲ್ ನಲ್ಲಿ ಯುವತಿಗೆ ಚೂರಿ ಇರಿತ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 01. ಇಲ್ಲಿನ ಹೋಟೆಲೊಂದರಲ್ಲಿ ಯುವತಿ ಹಾಗೂ ಆಕೆಯ ಪ್ರಿಯಕರನ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೊಕ್ಕಪಟ್ಟಣದ ತ್ರಿಶೂಲ್ ಸಾಲಿಯಾನ್, ಕೋಡಿಕಲ್ ನ ಸಂತೋಷ್ ಪೂಜಾರಿ ಹಾಗೂ ಅಶೋಕ್ ನಗರದ ದ್ಯಾನೇಶ್ ಎಂದು ಗುರುತಿಸಲಾಗಿದೆ. ಇಲ್ಲಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿ ಮತ್ತು ಆರೋಪಿ ತ್ರಿಶೂಲ್ ನಡುವೆ ಫೇಸ್ ಬುಕ್ ಮೂಲಕ ಪರಿಚಯವಾಗಿ ಬಳಿಕ ಪ್ರೇಮಕ್ಕೆ ತಿರುಗಿದ ನಂತರ ವೈಮನಸ್ಸಿನಿಂದಾಗಿ ಆತನಿಂದ ದೂರವಾಗಲು ನಿರ್ಧರಿಸಿದ್ದಾಳೆ.

ಮಂಗಳೂರು: ಹೋಟೆಲ್ ನಲ್ಲಿ ಯುವತಿಗೆ ಚೂರಿ ಇರಿತ ಪ್ರಕರಣ ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಭಜನಾ ಮಂದಿರದಲ್ಲಿ ಮಲ-ಮೂತ್ರ ವಿಸರ್ಜನೆ ಆರೋಪ ➤ ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 01. ಕೊಣಾಜೆ ಬಳಿಯ ಗೋಪಾಕೃಷ್ಣ ಭಜನಾ ಮಂದಿರದಲ್ಲಿ ಮಲಮೂತ್ರ ಮಾಡಿ ಅಪವಿತ್ರಗೊಳಿಸಿದ ಕೃತ್ಯಕ್ಕೆ ಸಂಬಂಧಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ತಲಪಾಡಿಯ ಕೊಮರಂಗಳ ನಿವಾಸಿ ಮಹಮ್ಮದ್ ಸುಹೈಲ್(19) ಹಾಗೂ ತಲಪಾಡಿಯ ಪಿಲಿಕೂರು ನಿವಾಸಿ ನಿಜಾಮುದ್ದೀನ್(21) ಎಂದು ಗುರುತಿಸಲಾಗಿದೆ. ಪೋಲಿಸರು ವಿವಿಧ ಕಡೆಯ ಸಿಸಿಟಿವಿ ಫೂಟೇಜ್ ಮೂಲಕ ಇವರನ್ನು ಬೆನ್ನತ್ತಿ ಹೋದ ಸಂದರ್ಭ ಸಿಕ್ಕಿಬಿದ್ದಿದ್ದಾರೆ. ಭಜನಾ ಮಂದಿರಕ್ಕೆ ಕಾಣಿಕೆ ಹುಂಡಿಯಿಂದ ಹಣ ಕಳ್ಳತನಕ್ಕೆಂದು ನುಗ್ಗಿದ್ದು, ಅಲ್ಲಿ ಯಾವುದೇ

ಮಂಗಳೂರು: ಭಜನಾ ಮಂದಿರದಲ್ಲಿ ಮಲ-ಮೂತ್ರ ವಿಸರ್ಜನೆ ಆರೋಪ ➤ ಇಬ್ಬರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ದ್ವಿಚಕ್ರ ವಾಹನ ಸ್ಕಿಡ್- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 01. ದ್ವಿಚಕ್ರ ವಾಹನ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ರಾತ್ರಿ ರಾಪ್ಟ್ರೀಯ ಹೆದ್ದಾರಿ ಸಂತೆಕಟ್ಟೆ ಸೇತುವೆ ಬಳಿ ನಡೆದಿದೆ. ಮೃತ ಯುವಕನನ್ನು ಕೊಳಲಗಿರಿಯ ಆಸೀಫ್(19) ಎಂದು ಗುರುತಿಸಲಾಗಿದೆ. ಈತ ನಿನ್ನೆ ರಾತ್ರಿ ಉಡುಪಿ ಕಡೆಯಿಂದ ಕೊಳಲಗಿರಿಗೆ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದ ವೇಳೆ ಸಂತೆಕಟ್ಟೆ ಸೇತುವೆಯಲ್ಲಿ ದ್ವಿಚಕ್ರ ವಾಹನ ಸ್ಕೀಡ್ ಆಗಿದ್ದು, ಪರಿಣಾಮ ಆಸೀಫ್ ಸೇತುವೆಯ ತಡೆಗೋಡೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು

ಉಡುಪಿ: ದ್ವಿಚಕ್ರ ವಾಹನ ಸ್ಕಿಡ್- ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾನಸಿಕ ಖಿನ್ನತೆ- ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಫೆ. 01. ಹೊಳೆಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಗಂ ಡಂಪಿಂಗ್ ಯಾರ್ಡ್ ಬಳಿ ನಡೆದಿದೆ. ಆತ್ಮಹತ್ಯೆಗೈದವರನ್ನು ಶಾರದಾ (57) ಎಂದು ಗುರುತಿಸಲಾಗಿದೆ. ಇವರು ಮಕ್ಕಳಿಲ್ಲ ಎಂಬ ಕಾರಣಕ್ಕೆ ಹಾಗೂ ಗಂಡ ಮೃತಪಟ್ಟ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ನಡುವೆ ಜ.30 ರಂದು ಹೊರಗೆ ಹೋಗುತ್ತೇನೆ ಎಂದು ಹೇಳಿ ಹೋದವರು ವಾಪಾಸು ಮನೆಗೆ ಬಾರದೆ ಇದ್ದ ಕಾರಣ ಮನೆಯವರು ಹುಡುಕಾಟ ನಡೆಸಿದ್ದಾರೆ. ಜ. 31 ರಂದು ಶಾರದಾ ಅವರ

ಮಾನಸಿಕ ಖಿನ್ನತೆ- ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤➤ Breaking news ಸುಬ್ರಹ್ಮಣ್ಯ: ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ.‌ 01. ಇಲ್ಲಿನ ಕೈಕಂಬ ಎಂಬಲ್ಲಿ ಟೂರಿಸ್ಟ್ ವಾಹನ ಚಾಲಕನಿಗೆ ರಸ್ತೆ ದಾಟುತ್ತಿದ್ದ ವೇಳೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಗಂಭೀರ ಗಾಯಗೊಂಡವರನ್ನು ಬೆಂಗಳೂರು ಮೂಲದವರಾದ ಭೂತೇಶ್ ಪಿ. ಜೆ ಎಂದು ಗುರುತಿಸಲಾಗಿದೆ. ಇವರು ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದಿದ್ದು, ಕೈಕಂಬ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತದಿಂದಾಗಿ ಭೂತೇಶ್ ಸ್ಥಿತಿ ಚಿಂತಾಜನಕವಾಗಿದ್ದು, ಕೆ.ಎಸ್.ಆರ್‍.ಟಿ.ಸಿ ಬಸ್ ಚಾಲಕ ಅಪಘಾತ ನಡೆದ ಕೂಡಲೇ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

➤➤ Breaking news ಸುಬ್ರಹ್ಮಣ್ಯ: ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ➤ ವ್ಯಕ್ತಿಯ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಕಡಬ, ಫೆ.01. ರಸ್ತೆ ದಾಟುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೈಕಂಬ ಜಂಕ್ಷನ್‌ ನಲ್ಲಿ ಸೋಮವಾರದಂದು ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಬೆಂಗಳೂರು ಮೂಲದ ಟೂರಿಸ್ಟ್ ವಾಹನ ಚಾಲಕ ಭೂತೇಶ್ ಪಿ.ಜೆ. ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಕುಕ್ಕೇ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ತನ್ನ ವಾಹನವನ್ನು ಕೈಕಂಬ ಜಂಕ್ಷನ್ ನಲ್ಲಿ ನಿಲ್ಲಿಸಿ ಅಂಗಡಿಯಿಂದ ಬಾಟಲ್

ಕಡಬ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ➤ ವ್ಯಕ್ತಿಯ ಸ್ಥಿತಿ ಚಿಂತಾಜನಕ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸ್ನಾನಕ್ಕೆಂದು ಹೊಳೆಗಿಳಿದ ಇಬ್ಬರು ಸಹೋದರರು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 01. ಸ್ನಾನಕ್ಕೆಂದು ಹೊಳೆಗೆ ಇಳಿದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಜೆ ಕುಂಬಳೆ ಸಮೀಪದ ಬಂಬ್ರಾಣ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಇಚ್ಲಂಗೋಡಿನ ಶರೀಫ್ ಎಂಬವರ ಪುತ್ರರಾದ ಶದಾದ್ (12) ಮತ್ತು ಶಿಯಾಝ್ (8) ಎಂದು ಗುರುತಿಸಲಾಗಿದೆ. ಇವರಿಬ್ಬರು ಬಂಬ್ರಾಣ ಆಣೆಕಟ್ಟು ಸಮೀಪದ ಹೊಳೆಯಲ್ಲಿ ಪರಿಸರದ ಮಕ್ಕಳೊಂದಿಗೆ ಸ್ನಾನಕ್ಕಿಳಿದಿದ್ದು, ಈ ಸಂದರ್ಭ ಸಹೋದರರಿಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಈ ವೇಳೆ ಜೊತೆಗಿದ್ದ ಮಕ್ಕಳು ಬೊಬ್ಬೆ ಹಾಕಿದ್ದು, ವಿಷಯ ತಿಳಿದ

ಸ್ನಾನಕ್ಕೆಂದು ಹೊಳೆಗಿಳಿದ ಇಬ್ಬರು ಸಹೋದರರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ: ಕೊಕ್ಕೊ ಗಿಡ ಕಡಿದ ವಿಚಾರ -ಮಹಿಳೆಗೆ ಹಲ್ಲೆ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 01. ಕೊಕ್ಕೊ ಗಿಡ ಕಡಿದ ವಿಚಾರವಾಗಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರ ಮೇಲೆ ಮಾನಭಂಗಕ್ಕೆ ಯತ್ನಿಸಿ, ಬಳಿಕ ಹಲ್ಲೆ ನಡೆಸಿದ ಘಟನೆ ಕನ್ಯಾನ ಗ್ರಾಮದ ಪಂಜಾಜೆ ಎಂಬಲ್ಲಿ ನಡೆದಿದೆ. ಕನ್ಯಾನ ಗ್ರಾಮದ ಪಂಜಾಜೆ ಎಂಬಲ್ಲಿ ಮಹಿಳೆಯೋರ್ವರ ಮನೆ ಬಳಿ ಇರುವ ಕೋ ಕೋ ಗಿಡವನ್ನು ಆರೋಪಿ ಜಯರಾಮ ಎಂಬಾತ ಕಡಿಯುತ್ತಿರುವಾಗ ಮಹಿಳೆ ನೀನು ಕೋ ಕೋ ಗಿಡವನ್ನು ಯಾಕೆ ಕಡಿಯುತ್ತಿ ಎಂದು ಕೇಳಿದಾಗ ಆರೋಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ

ವಿಟ್ಲ: ಕೊಕ್ಕೊ ಗಿಡ ಕಡಿದ ವಿಚಾರ -ಮಹಿಳೆಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top