ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ಯುವಕ ಮೃತ್ಯು
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 02. ನದಿಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಇಲ್ಲಿನ ಮಾಲಾಡಿ ಬಳಿಯ ಕುಕ್ಕೇಡಿ ಎಂಬಲ್ಲಿ ನಡೆದಿದೆ. ಮೃತ ಯುಕನನ್ನು ಮಾಲಾಡಿ ಗ್ರಾಮದ ನಿವಾಸಿ ರವೀಂದ್ರ (26) ಎಂದು ಗುರುತಿಸಲಾಗಿದೆ. ಕುಕ್ಕೇಡಿಯ ಉಮಿಲಾಯಿ ಡ್ಯಾಮ್ ಬಳಿ ನದಿ ನೀರಿನಲ್ಲಿ ಯುವಕನು ಸ್ನಾನ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ಯುವಕ ಮೃತ್ಯು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್





