ಕ್ರೈಮ್ ನ್ಯೂಸ್

ಕಲುಷಿತ ನೀರು ಕುಡಿದು 70 ಮಂದಿ ಅಸ್ವಸ್ಥ..!

(ನ್ಯೂಸ್ ಕಡಬ) newskadaba.com ಧಾರವಾಡ, ಅ.26. ಕಲುಷಿತ ನೀರು ಕುಡಿದು 70ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಟಗಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಬಳಿಕ ಹಲವರಲ್ಲಿ ವಾಂತಿ ಹಾಗೂ ಅತಿಸಾರ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ 70 ಮಂದಿಯ ಪೈಕಿ 10 ಮಂದಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹಾಗೂ 36 ಮಂದಿ ಕಲಘಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಔಷಧಿ ಪಡೆದುಕೊಂಡ ಪರಿಣಾಮ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. […]

ಕಲುಷಿತ ನೀರು ಕುಡಿದು 70 ಮಂದಿ ಅಸ್ವಸ್ಥ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

7 ವರ್ಷದ ಬಾಲಕನನ್ನು ಕಾಲುವೆಗೆ ಎಸೆದು ಕೊಲೆಗೈದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ವಿಜಯನಗರ, ಅ.26. ವ್ಯಕ್ತಿಯೋರ್ವ ಏಳು ವರ್ಷದ ಬಾಲಕನನ್ನು ಹರಿಯುವ ನೀರಿನ ಅಡವಿ (ಎಚ್.ಎಲ್.ಸಿ.) ಕಾಲುವೆಗೆ ಎಸೆದು ಕೊಲೆಗೈದಿರುವ ಘಟನೆ ಕಮಲಾಪುರ ಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಬಾಲಕನನ್ನು ಕಮಲಾಪುರದ ರಾಜಮ್ಮ ಮತ್ತು ಬಾಬು ದಂಪತಿಯ ಪುತ್ರ ಅಭಿ(7) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಕಮಲಾಪುರ ನಿವಾಸಿ ಓಬಳೇಶ್ (24) ಎಂದು ಗುರುತಿಸಲಾಗಿದೆ. ಪರಿಚಯಸ್ಥನಾಗಿದ್ದ ಓಬಳೇಶ ಅ.22ರಂದು ಬೆಳಗ್ಗೆ ಅಭಿಯನ್ನು ತನ್ನ ಸ್ಕೂಟರ್ ನಲ್ಲಿ ಶಾಲೆಗೆ ಕರೆದುಕೊಂಡು ಹೋಗಿದ್ದಾನೆ. ಶಾಲೆಯಲ್ಲಿ ಬ್ಯಾಗ್ ಇರಿಸಿ ಅಭಿಯನ್ನು

7 ವರ್ಷದ ಬಾಲಕನನ್ನು ಕಾಲುವೆಗೆ ಎಸೆದು ಕೊಲೆಗೈದ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೆಲ್ಫಿ ತೆಗೆಯಲು ಮುಂದಾದ ಕಾರ್ಮಿಕನ ಮೇಲೆ ಕಾಡಾನೆ ದಾಳಿ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಅ.25. ಸೆಲ್ಫಿ ತೆಗೆಯಲು ಮುಂದಾದ ಕಾರ್ಮಿಕನನ್ನು ಕಾಡಾನೆಯೊಂದು ತುಳಿದು ಕೊಂದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಶ್ರೀಕಾಂತ್ ರಾಮಚಂದ್ರ ಸಾತ್ರೆ(23) ಎಂದು ಗುರುತಿಸಲಾಗಿದೆ. ಶ್ರೀಕಾಂತ್ ಸಾತ್ರೆ ನವೆಗಾಂವ್ನಿಂದ ಕೇಬಲ್ ಅಳವಡಿಕೆ ಕೆಲಸಕ್ಕಾಗಿ ಗಡ್ಚಿರೋಲಿಗೆ ತನ್ನ ಸ್ನೇಹಿತರೊಂದಿಗೆ ಬಂದಿದ್ದರು. ತನ್ನ ಇಬ್ಬರು ಸ್ನೇಹಿತರ ಜೊತೆ ಗುರುವಾರ ಬೆಳಿಗ್ಗೆ ಮಹಾರಾಷ್ಟ್ರದ ಗಡ್ಚಿರೋಲಿಯ ಅಬಾಪುರ ಅರಣ್ಯಕ್ಕೆ ಕಾಡಾನೆಯನ್ನು ನೋಡಲು ತೆರಳಿದ್ದರು. ಅರಣ್ಯದಲ್ಲಿ ಸೆಲ್ಫಿ ತೆಗೆಯುವಾಗ ಶ್ರೀಕಾಂತ್ ಮೇಲೆ ಕಾಡಾನೆ ದಾಳಿ ಮಾಡಿದೆ. ಈ

ಸೆಲ್ಫಿ ತೆಗೆಯಲು ಮುಂದಾದ ಕಾರ್ಮಿಕನ ಮೇಲೆ ಕಾಡಾನೆ ದಾಳಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್‌ ಸೀಟ್ ವಿಚಾರಕ್ಕೆ ಚಪ್ಪಲಿಯಲ್ಲಿ ಹೊಡೆದಾಡಿದ ಮಹಿಳೆಯರು..!

(ನ್ಯೂಸ್ ಕಡಬ) newskadaba.com ಬೆಳಗಾವಿ, ಅ.25. ಸರ್ಕಾರಿ ಬಸ್ಸಿನಲ್ಲಿ ಸೀಟ್‌ ವಿಚಾರಕ್ಕೆ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ಸವದತ್ತಿಗೆ ಹೋಗುವ ಬಸ್ಸನ್ನು ಮಹಿಳೆಯರು ಹತ್ತಿದ್ದಾರೆ. ಈ ವೇಳೆ ಸೀಟ್ ನನ್ನದು ನನ್ನದು ಅಂತಾ ಮಹಿಳೆಯರ ಮಧ್ಯೆ ಜಗಳ ಆರಂಭವಾಗಿದೆ. ಮೊದಲಿಗೆ ಮಹಿಳೆಯರು ಪರಸ್ಪರ ಬೈದಾಡಿಕೊಂಡಿದ್ದಾರೆ. ನಂತರ ಕೈಕೈ ಮಿಲಾಯಿಸಿ ಚಪ್ಪಲಿಯಲ್ಲಿ ಹೊಡೆದಾಡಿದ್ದಾರೆ. ಈ ವೇಳೆ ಅಡ್ಡ ಬಂದ ಬಾಲಕಿಗೂ ಚಪ್ಪಲಿಯಿಂದ ಮಹಿಳೆ ಹೊಡೆದಿದ್ದಾಳೆ.  

ಬಸ್‌ ಸೀಟ್ ವಿಚಾರಕ್ಕೆ ಚಪ್ಪಲಿಯಲ್ಲಿ ಹೊಡೆದಾಡಿದ ಮಹಿಳೆಯರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪತ್ನಿ..!

(ನ್ಯೂಸ್ ಕಡಬ) newskadaba.com ಅ. 25. ಪ್ರಿಯಕರನೊಂದಿಗೆ ಸೇರಿ ವಿಷವುಣಿಸಿ ಬಳಿಕ ಉಸಿರುಗಟ್ಟಿಸಿ ಪತಿಯನ್ನೇ ಉಸಿರುಗಟ್ಟಿಸಿ ಕೊಲೆಗೈದ ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ ಘಟನೆ ಉಡುಪಿಯ ಮರ್ಣೆ ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಕಳೆದ 25 ದಿನಗಳಿಂದ ಜ್ವರ ಹಾಗೂ ವಾಂತಿಯ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕೃಷ್ಣ ಅವರಿಗೆ ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಅ.20ರಂದು ಬಾಲಕೃಷ್ಣ ಮನೆಯಲ್ಲೇ ಸಾವನ್ನಪ್ಪಿದ್ದರು. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪ್ರತಿಮಾಳ ಸಹೋದರ ನೀಡಿದ

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪತ್ನಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಧಿಕೃತ ನಿವಾಸದಲ್ಲಿ ಅಯೋಧ್ಯೆ ಎಂಡಿಎಂ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಲಕ್ನೋ, ಅ.25. ಅಯೋಧ್ಯೆಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್(ಎಂಡಿಎಂ) ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುರ್ಜಿತ್ ಸಿಂಗ್ (58) ಕೊತ್ವಾಲಿ ನಗರದ ಸಿವಿಲ್ ಲೈನ್ಸ್ ಪ್ರದೇಶದ ಸುರ್ಸಾರಿ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಅ.24ರಂದು ನಿಗೂಢವಾಗಿ ಮೃತಪಟ್ಟಿದ್ದಾರೆ. ಮೂಲಗಳ ಪ್ರಕಾರ ಸಿಂಗ್ ಮೃತದೇಹ ಪತ್ತೆಯಾದ ಕೋಣೆಯ ಸುತ್ತ ನೆಲದ ಮೇಲೆ ರಕ್ತ ಕಂಡುಬಂದಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡವೂ ಆಗಮಿಸಿದೆ. ಅವರ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ತನಿಖೆ ಹಾಗೂ

ಅಧಿಕೃತ ನಿವಾಸದಲ್ಲಿ ಅಯೋಧ್ಯೆ ಎಂಡಿಎಂ ಮೃತದೇಹ ಪತ್ತೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಈಜಲು ತೆರಳಿದ್ದ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಅ. 25.  ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ನೀರು ಪಾಲಾಗಿದ್ದ ಯುವಕ ಪ್ರಜ್ವಲ್ ಅವರ ಮೃತದೇಹ ಗುರುವಾರದಂದು ಸಸಿಹಿತ್ಲು ಸಮೀಪದ ಆಳ ಸಮುದ್ರದಲ್ಲಿ ಪತ್ತೆಯಾಗಿದೆ. ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ಪ್ರಜ್ವಲ್ ಮೃತದೇಹ ತೇಲುತ್ತಿರುವುದನ್ನು ಗಮನಿಸಿ ಕರಾವಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಮೀನುಗಾರರೊಂದಿಗೆ ಕರಾವಳಿ ಪೊಲೀಸರು ರಕ್ಷಣಾ ಬೋಟ್‌ನಲ್ಲಿ ಸ್ಥಳಕ್ಕೆ ತೆರಳಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ. ಚಂಡಮಾರುತ ಹಾಗೂ ಆಗಾಗ ಸುರಿದ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಇದರಿಂದ ಮುಕ್ಕದಲ್ಲಿ ಮುಳುಗಿ

ಈಜಲು ತೆರಳಿದ್ದ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ತಾರತಮ್ಯ- ಜಾತಿ ಹಿಂಸಾಚಾರ ಪ್ರಕರಣ: ದೇಶದಲ್ಲಿ ಮೊದಲ ಬಾರಿಗೆ 98 ಮಂದಿಗೆ ಸಾಮೂಹಿಕ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಕೊಪ್ಪಳ, ಅ.25. ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರನ್ನು ಗುರಿಯಾಗಿಸಿಕೊಂಡು 2014ರಲ್ಲಿ ನಡೆದ ತಾರತಮ್ಯ ಮತ್ತು ಜಾತಿ ಹಿಂಸಾಚಾರ ಪ್ರಕರಣದಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಸೆಷನ್ಸ್ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ನ್ಯಾಯಾಧೀಶ ಚಂದ್ರಶೇಖರ್ ಸಿ ಪ್ರಕರಣದಲ್ಲಿ 101 ಜನರಿಗೆ ಶಿಕ್ಷೆ ವಿಧಿಸಿದರು. ಇದು ಜಾತಿ ಸಂಬಂಧಿತ ಪ್ರಕರಣಗಳಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಸಾಮೂಹಿಕ ಶಿಕ್ಷೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಪಬ್ಲಿಕ್

ತಾರತಮ್ಯ- ಜಾತಿ ಹಿಂಸಾಚಾರ ಪ್ರಕರಣ: ದೇಶದಲ್ಲಿ ಮೊದಲ ಬಾರಿಗೆ 98 ಮಂದಿಗೆ ಸಾಮೂಹಿಕ ಶಿಕ್ಷೆ ಪ್ರಕಟ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ – ಗಾಯಗೊಂಡಿದ್ದ ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.25. ವ್ಯಕ್ತಿಯೋರ್ವ ತನ್ನ ತಮ್ಮನ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಕುರಿತು ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದಿಂದ ವರದಿಯಾಗಿದೆ. ಮೃತಪಟ್ಟವರನ್ನು ಜಯಭಾರತಿ ಎಂದು ಗುರುತಿಸಲಾಗಿದೆ. ಅ.12ರಂದು ರಾತ್ರಿ ಮನೆಯ ಕೋಣೆಯಲ್ಲಿ ಮಲಗಿದ್ದ ಜಯಭಾರತಿ ಎಂಬವರ ಪತಿಯ ಅಣ್ಣ ಶಂಕರ ನಾಯಕ್ ಎಂಬಾತ ಕಿಟಕಿಯ ಮೂಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಎನ್ನಲಾಗಿದ್ದು, ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದರು. ಶೇ. 80 ರಷ್ಟು ಗಾಯಗೊಂಡಿದ್ದ ಮಹಿಳೆ ಜಯಭಾರತಿ

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ – ಗಾಯಗೊಂಡಿದ್ದ ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಾಪು, ಅ.25. ಕಾರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದಿಂದ ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಅ. 22ರಂದು ಕೇರಳದ ಕಣ್ಣೂರು ಏರ್‌ಪೋರ್ಟ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಶ್ಮತ್ ಅಲಿ(35) ಎಂದು ಗುರುತಿಸಲಾಗಿದೆ. ಆರೋಪಿ ಅಶ್ಮತ್ ಅಲಿ ವಿರುದ್ಧ 2019ರಲ್ಲಿ ಕಾಪು ಪೊಲೀಸ್ ಠಾಣೆಯಲ್ಲಿ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿ ಅದನ್ನು ವೀಡಿಯೋ ಮಾಡಿ ಬ್ಲಾಕ್‌ಮೇಲ್ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿಯು ಉಡುಪಿಯ 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ 2019ರ ಸೆ.

ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top