ಕ್ರೈಮ್ ನ್ಯೂಸ್

ಬೆಳ್ತಂಗಡಿ: ‘ತಾಂಟ್ ರೆ ಬಾ ತಾಂಟ್’ ಎಂದು ಹೇಳಿ 25 ಮಂದಿಯಿಂದ ಇಬ್ಬರಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 24. ಸರಿಸುಮಾರು 25ಕ್ಕಿಂತಲೂ ಅಧಿಕ ಜನರ ತಂಡವೊಂದು ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಬೆಳ್ತಂಗಡಿ ತಾಲೂಕಿನ ಸುದೇಮುಗೇರು ನಿವಾಸಿ ಮಹಮ್ಮದ್ ಅಲ್ತಾಫ್ (21) ಎಂದು ಗುರುತಿಸಲಾಗಿದೆ. ಅಲ್ತಾಫ್ ಎಂಬವರು ಉಜಿರೆಯ ಎಂಪಾಯರ್ ಹೋಟೆಲ್ ನಲ್ಲಿ ಜ್ಯೂಸ್ ಮೇಕರ್ ಆಗಿ ಕೆಲಸ ಮಾಡಿಕೊಂಡಿದ್ದು, ಒಂದು ವಾರದ ಹಿಂದೆ ಹೋಟೆಲ್ ಗೆ ಬಂದ ಗಿರಾಕಿಗಳಲ್ಲಿ ಕೆಲವರು ಗುರಾಯಿಸಿ ನೋಡಿದ್ದಕ್ಕೆ ಅವರಲ್ಲಿ ನೀನು ಯಾಕೆ ನನ್ನನ್ನು ಗುರಾಯಿಸಿ ನೋಡಿದ್ದಿ ಎಂದು […]

ಬೆಳ್ತಂಗಡಿ: ‘ತಾಂಟ್ ರೆ ಬಾ ತಾಂಟ್’ ಎಂದು ಹೇಳಿ 25 ಮಂದಿಯಿಂದ ಇಬ್ಬರಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಹಾಡಹಗಲೇ ದುಷ್ಕರ್ಮಿಗಳಿಂದ ವ್ಯಕ್ತಿಯ ಕೊಲೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 24. ಹಾಡುಹಗಲೇ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳ ಗುಂಪೊಂದು ಥಳಿಸಿ ಕೊಲೆಗೈದ ಘಟನೆ ಶನಿವಾರ ಮಧ್ಯಾಹ್ನ ಕಾಸರಗೋಡು ನಗರದಲ್ಲಿ ನಡೆದಿದೆ. ಮೃತರನ್ನು ಚೆಮ್ನಾಡ್ ದೇಳಿಯ ಮುಹಮ್ಮದ್ ರಫೀಕ್ (48) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಆಸ್ಪತ್ರೆಯೊಂದರ ಸಮೀಪದ ಮೆಡಿಕಲ್ ಸ್ಟೋರ್ ನಲ್ಲಿ ಔಷಧಿ ಖರೀದಿಸುತ್ತಿದ್ದ ಸಂದರ್ಭ ಅಲ್ಲಿಗೆ ಆಗಮಿಸಿದ ಗುಂಪೊಂದು ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ರಫೀಕ್ ಆಸ್ಪತ್ರೆಗೆ ಕರೆದೊಯ್ದರೂ ಆಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕಾಸರಗೋಡು ಡಿವೈ.ಎಸ್.ಪಿ. ಪಿ.ಬಾಲಕೃಷ್ಣನ್

ಕಾಸರಗೋಡು: ಹಾಡಹಗಲೇ ದುಷ್ಕರ್ಮಿಗಳಿಂದ ವ್ಯಕ್ತಿಯ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಾತಿ ನಿಂದನೆ ಆರೋಪ ➤ ‘ಝೀ ಕನ್ನಡ’ ಮುಖ್ಯಸ್ಥ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 24. ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಝೀ ಕನ್ನಡ ವಾಹಿನಿ ಮುಖ್ಯಸ್ಥ ಸೇರಿದಂತೆ ಹಲವರ ವಿರುದ್ಧ ಅಶೋಕನಗರ ಠಾಣೆಯಲ್ಲಿ ಎಫ್‍.ಐ.ಆರ್ ದಾಖಲಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಈ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ತನಿಖೆಯನ್ನು ಎಸಿಪಿಯವರು ನಡೆಸಲಿದ್ದು, ಅವರೇ ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಜಾತಿ ನಿಂದನೆ ಆರೋಪ ➤ ‘ಝೀ ಕನ್ನಡ’ ಮುಖ್ಯಸ್ಥ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಪಯಸ್ವಿನಿ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 24. ಇಲ್ಲಿನ ಕೇರ್ಪಳ ಎಂಬಲ್ಲಿನ ಮಹಿಳೆಯೋರ್ವರು ಜ.18ರಂದು ಕಾಣೆಯಾಗಿದ್ದು, ಇದೀಗ ಅವರ ಮೃತದೇಹವು ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಗಿದೆ. ಸುಳ್ಯದ ಕೇರ್ಪಳದಲ್ಲಿ ಬಾಡಿಗೆ ಕೋಣೆಯಲ್ಲಿರುವ ಆನಂದ ಎಂಬವರ ಪತ್ನಿ ಚಂದ್ರಾವತಿಯವರ ಮೊಬೈಲ್ ಫೋನ್ ಮತ್ತು ಪರ್ಸ್ ನದಿಯಲ್ಲಿದ್ದುದನ್ನು ಕಂಡು ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಗೃಹರಕ್ಷಕ ದಳದವರು ಸೇರಿ ಹೊಳೆಯಲ್ಲಿ ಹುಡುಕಾಟ ನಡೆಸಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ ಹಾಗೂ ಮನೆಗೂ ಹಿಂತಿರುಗಿರಲಿಲ್ಲ. ಇದೀಗ ಜ.23 ರಂದು ನಾರ್ಕೋಡು ಸಮೀಪ ಪಯಸ್ವಿನಿ ಹೊಳೆಯ ನೀರಲ್ಲಿ

ಸುಳ್ಯ: ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಪಯಸ್ವಿನಿ ನದಿಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಶ್ವತ್ಥ ಮರ ಬಿದ್ದು ವಾಹನಗಳು ಜಖಂ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 24. ಇಲ್ಲಿನ ರಥಬೀದಿಯಲ್ಲಿರುವ ವೆಂಕಟರಮಣ ದೇವಸ್ಥಾನದ ಮುಂದೆ ಇದ್ದ ಅಶ್ವತ್ಥ ಕಟ್ಟೆಯ ಹಳೆಯದಾದ ಮರವೊಂದು ಬುಡ ಸಮೇತ ಉರುಳಿ ಬಿದ್ದ ಪರಿಣಾಮ ‌ಟ್ಯಾಂಕರ್, ಜೆಸಿಬಿ ಹಾಗೂ ಕಾರಿಗೆ ಹಾನಿಯಾಗಿದೆ. ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು ಮರದಡಿ ನಿಲ್ಲಿಸಿದ್ದ ಒಂದು ನೀರಿನ ಟ್ಯಾಂಕರ್, ಜೆಸಿಬಿ ಮತ್ತು ಒಂದು ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದು ಹಾನಿಯಾಗಿದೆ. ಈ ಸಂದರ್ಭ ಆ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಪ್ರಾಣ ಹಾನಿ ಸಂಭವಿಸಿಲ್ಲ.

ಮಂಗಳೂರು: ಅಶ್ವತ್ಥ ಮರ ಬಿದ್ದು ವಾಹನಗಳು ಜಖಂ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತೊಕ್ಕೊಟ್ಟು: ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವೃದ್ದ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 24. ಪಾದಚಾರಿ ವೃದ್ದರೋರ್ವರಿಗರ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ದ ಸ್ಥಳದಲ್ಲೇ ಮೃತಪಟ್ಟ ಘಟನೆ ನಸುಕಿನ ಜಾವ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.   ಮೃತರನ್ನು ಪಾಣೆಮಂಗಳೂರಿನ ನಿವಾಸಿ ಹಮ್ಮಬ್ಬ (60) ಎಂದು ಗುರುತಿಸಲಾಗಿದೆ. ಇವರು ತೊಕ್ಕೊಟ್ಟು ಸಹರಾ ಆಸ್ಪತ್ರೆಯ ಎದುರು ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನವು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ತೊಕ್ಕೊಟ್ಟಿನ ಕಲ್ಲಾಪಿನಲ್ಲಿರುವ ಸಂಬಂಧಿಕರ ಮ‌ನೆಗೆ ಬಂದಿದ್ದರೆನ್ನಲಾಗಿದೆ. ಮಂಗಳೂರು

ತೊಕ್ಕೊಟ್ಟು: ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವೃದ್ದ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿರತೆಯನ್ನೇ ಕೊಂದು ಸಾಂಬಾರ್ ಮಾಡಿದ ಕಿರಾತಕರು ➤ ಅರಣ್ಯಾಧಿಕಾರಿಗಳಿಂದ ಐವರ ಬಂಧನ

(ನ್ಯೂಸ್ ಕಡಬ) newskadaba.com ಕೇರಳ, ಜ. 23. ಕಿರಾತಕರ ಗ್ಯಾಂಗ್ ಒಂದು ನರಭಕ್ಷಕ ಚಿರತೆಯನ್ನೇ ಕೊಂದು ಅದನ್ನು ಚೆನ್ನಾಗಿ ಸಾಂಬಾರ್ ಮಾಡಿ ತಿಂದ 5 ಜನರನ್ನು ಇದೀಗ ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಕೊಲ್ಲಿಕೊಲ್ವಿಲ್ ನ ವಿನೋದ್(45), ಕುರಿಯಾ ಕೋಸ್(74), ಸಿ.ಎಸ್ ಬಿನು(50), ಮಲಾಯಿಲ್ ಸಾಲಿ ಕಂಜಪ್ಪನ್(54) ಹಾಗೂ ವಿನ್ಸೆಂಟ್(50) ಎಂದು ಗುರುತಿಸಲಾಗಿದೆ. ಆರೋಪಿಗಳಲ್ಲಿ ವಿನೋದ್ ಎಂಬಾತ ಅರಣ್ಯದಿಂದ 100 ಮೀಟರ್ ದೂರದಲ್ಲಿರುವ ಖಾಸಗಿ ಭೂಮಿಯಲ್ಲಿ ಚಿರತೆ ಹಿಡಿಯಲು ಕುಣಿಕೆ

ಚಿರತೆಯನ್ನೇ ಕೊಂದು ಸಾಂಬಾರ್ ಮಾಡಿದ ಕಿರಾತಕರು ➤ ಅರಣ್ಯಾಧಿಕಾರಿಗಳಿಂದ ಐವರ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಚರ್ಚ್ ಗೆ ನುಗ್ಗಿದ ಕಳ್ಳರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 23. ಇಲ್ಲಿನ ನಾವೂರು ಗ್ರಾಮದ ಪರ್ಲ ಚರ್ಚ್ ನ ಒಳನುಗ್ಗಿದ ಕಳ್ಳರು ಹಣಕ್ಕಾಗಿ ತಡಕಾಡಿ ಪವಿತ್ರ ವಸ್ತುಗಳನ್ನು ಹಾನಿ ಮಾಡಿದ ಘಟನೆ ವರದಿಯಾಗಿದೆ. ಶುಕ್ರವಾರದಂದು ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಚರ್ಚ್ ಪ್ರತಿನಿಧಿಗಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕಳ್ಳರ ದುಷ್ಕೃತ್ಯ ಚರ್ಚ್ ನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾವೂರು ಚರ್ಚ್ ರಸ್ತೆಯಲ್ಲಿದ್ದ ಬಾರ್ ಮತ್ತು ಪ್ರಾವಿಷನ್

ಬಂಟ್ವಾಳ: ಚರ್ಚ್ ಗೆ ನುಗ್ಗಿದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಮಹಿಳೆಗೆ ಅತ್ಯಾಚಾರ ಹಾಗೂ ಮಕ್ಕಳಿಗೆ ಕಿರುಕುಳ ಪ್ರಕರಣ ➤ ಎಸ್ಡಿಪಿಐ ಮುಖಂಡನ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 23. ಮತಾಂತರಗೊಂಡ ಮಹಿಳೆಗೆ ಸಹಾಯದ ನೆಪವಿಟ್ಟು ಅತ್ಯಾಚಾರವೆಸಗಿ ಆಕೆಯ ಇಬ್ಬರು ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಉಳ್ಳಾಲದ ಎಸ್ಡಿಪಿಐ ಮುಖಂಡನನ್ನು ಉಳ್ಳಾಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.   ಬಂಧಿತ ಆರೋಪಿಯನ್ನು SDPI ಮುಖಂಡ ಸಿದ್ದೀಕ್ ಎಂದು ಗುರುತಿಸಲಾಗಿದೆ. ಈ ಸಂತ್ರಸ್ತ ಮಹಿಳೆಯು ಗಂಡನಿಂದ ದೂರವಾಗಿ ಉಳ್ಳಾಲದ ಒಂಭತ್ತುಕೆರೆ ಎಂಬಲ್ಲಿ ತನ್ನ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳೊಂದಿಗೆ ವಾಸಿಸುತ್ತಿದ್ದು, ಈಕೆಗೆ ಸಹಾಯ ಮಾಡೋ ನೆಪದಲ್ಲಿ ಸ್ನೇಹ ಬೆಳೆಸಿಕೊಂಡ ಸಿದ್ದೀಕ್ ಆಕೆಯನ್ನು

ಉಳ್ಳಾಲ: ಮಹಿಳೆಗೆ ಅತ್ಯಾಚಾರ ಹಾಗೂ ಮಕ್ಕಳಿಗೆ ಕಿರುಕುಳ ಪ್ರಕರಣ ➤ ಎಸ್ಡಿಪಿಐ ಮುಖಂಡನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಫರ್ನಿಚರ್ ಮಳಿಗೆಯಲ್ಲಿ ಬೆಂಕಿ ಅವಘಡ ➤ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಜ. 23. ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ. ಶುಕ್ರವಾರದಂದು ರಾತ್ರಿ 11 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಂಗಡಿಯಲ್ಲಿದ್ದ ಸೊತ್ತುಗಳು ಬೆಂಕಿಗಾಹುತಿಯಾಗಿದೆ ಅಲ್ಲದೇ ಅಪಾರ ನಷ್ಟವೂ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿ, ಬೆಂಕಿಯು ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದ ವಾಹನಗಳು ಕಾರ್ಯಾಚರಣೆ

ಸುರತ್ಕಲ್: ಫರ್ನಿಚರ್ ಮಳಿಗೆಯಲ್ಲಿ ಬೆಂಕಿ ಅವಘಡ ➤ ಅಪಾರ ನಷ್ಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top