ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 22. ಭಾರೀ ಪ್ರಮಾಣದ ಗಾಂಜಾ ಮಾರಾಟಕ್ಕೆತ್ನಿಸುತ್ತಿದ್ದ ಎರಡು ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ತೆಲಂಗಾಣ ಮೂಲದ ವಿಠಲ್ ಚೌಹಾನ್ ಹಾಗೂ ಬೀದರ್ ನಿವಾಸಿಗಳಾದ ಸಂಜೀವ ಕುಮಾರ್, ಕಲ್ಲಪ್ಪ ಎಂದು ಗುರುತಿಸಲಾಗಿದೆ. ಮಂಗಳೂರು ಹೊರವಲಯದ ದೇರಳಕಟ್ಟೆಯಿಂದ ಮುಡಿಪು ಕಡೆಗೆ ಗಾಂಜಾ ಸಾಗಾಟದ ಕುರಿತು ಖಚಿತ ಮಾಹಿತಿಯ ಪಡೆದ ಸಿಸಿಬಿ ತಂಡ ದಾಳಿ ನಡೆಸಿ, ಗಾಂಜಾ ಸಾಗಾಟಕ್ಕೆ ಬಳಕೆ ಮಾಡಿದ ಮಹಾರಾಷ್ಟ್ರ ನೋಂದಾಯಿತ ಕಾರು, 15 […]

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ➤ ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಿಕ್ಷಾ ಹಾಗೂ ಕಂಟೇನರ್ ನಡುವೆ ಢಿಕ್ಕಿ ➤ 7 ಮಂದಿ ಮೃತ್ಯು, 15ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹೈದ್ರಾಬಾದ್, ಜ. 22. ಆಟೋ ರಿಕ್ಷಾ ಹಾಗೂ ಕಂಟೇನರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಂಗಡಿಪೇಟ್ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಆಟೋ ಚಾಲಕ ಮಲ್ಲೇಶ್, ಪೆದ್ದಮ್ಮ, ನೋಮಲ ಸೈದಮ್ಮ ಕೊಟ್ಟಂ, ಇದ್ದಮ್ಮ, ಮಲ್ಲಮ್ಮ ಹಾಗೂ ಅಂಜನಮ್ಮ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ 13 ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಮೃತಪಟ್ಟವರೆಲ್ಲರೂ ಕೂಲಿ

ರಿಕ್ಷಾ ಹಾಗೂ ಕಂಟೇನರ್ ನಡುವೆ ಢಿಕ್ಕಿ ➤ 7 ಮಂದಿ ಮೃತ್ಯು, 15ಕ್ಕೂ ಅಧಿಕ ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಬಡ್ಡಿ ಆಡುತ್ತಿದ್ದ ವೇಳೆಯೇ ಕಬಡ್ಡಿ ಪ್ರೇಮಿ ಮೃತ್ಯು

(ನ್ಯೂಸ್ ಕಡಬ) newskadaba.com ಛತ್ತೀಸಗಢ, ಜ. 22. ಕಬಡ್ಡಿ ಪ್ರೇಮಿ ಯುವಕನೋರ್ವ ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಛತ್ತೀಸಗಢ ಧಾಮ್‌ ತಾರಿ ಜಿಲ್ಲೆಯ ಗೋಜಿ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕೋಕಾಡಿ ಗ್ರಾಮದ ನರೇಂದ್ರ ಸಾಹು ಎಂದು ಗುರುತಿಸಲಾಗಿದೆ. ಈತ ರಾತ್ರಿ ವೇಳೆ ನಡೆದ ಕಬಡ್ಡಿ ಪಂದ್ಯಾಟದಲ್ಲಿ ರೈಡರ್ ಆಗಿ ಎದುರಾಳಿಗಳ ಕೋರ್ಟ್‌ಗ ಕಾಲಿರಿಸಿದ್ದು, ಬಳಿಕ ಈತನನ್ನು ಎದುರಾಳಿ ತಂಡವು ಹಿಡಿದಿದೆ. ಈ ವೇಳೆ ಆತ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ತಕ್ಷಣವೇ ಸಾಹುನನ್ನು ಆಸ್ಪತ್ರೆಗೆ

ಕಬಡ್ಡಿ ಆಡುತ್ತಿದ್ದ ವೇಳೆಯೇ ಕಬಡ್ಡಿ ಪ್ರೇಮಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ವೇಶ್ಯಾವಾಟಿಕೆ ದಂಧೆ ➤ ಸುಳ್ಯದ ಯುವಕ ಸೇರಿದಂತೆ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಕಟಪಾಡಿ, ಜ. 22. ವೇಶ್ಯಾವಾಟಿಕೆಯ ಗುಂಪೊಂದು ಅಪ್ರಾಪ್ತ ಬಾಲಕಿಯನ್ನು ಬಲವಂತದಿಂದ ಕಾರಿನಲ್ಲಿ ಕರೆದೊಯ್ದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.   ಬಂಧಿತ ಆರೋಪಿಗಳನ್ನು ಮೂಲತಃ ಸುಳ್ಯ ತಾಲೂಕಿನ ಕರಿಕ್ಕಳ ಪಂಬೆತ್ಪಾಡಿ ನಿವಾಸಿ ಗುಲಾಬಿ ನಾಯ್ಕ್‌ (29), ಕುಂದಾಪುರ ಹೊಸೂರು ನಿವಾಸಿ ಮಂಜುನಾಥ (26), ಬ್ರಹ್ಮಾವರ ಕೀಳಿಂಜೆ ನಿವಾಸಿ ಶಶಿಧರ (42), ಉಡುಪಿ ತೆಂಕನಿಡಿಯೂರಿನ ರೋವೆಲ್‌ ಸೂರಜ್‌(47) ಎಂದು ಗುರುತಿಸಲಾಗಿದೆ. ಸಂತ್ರಸ್ತ ಬಾಲಕಿಯು ಸಹೋದರಿ ತಂಗಿ

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ವೇಶ್ಯಾವಾಟಿಕೆ ದಂಧೆ ➤ ಸುಳ್ಯದ ಯುವಕ ಸೇರಿದಂತೆ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜ್ಯೂಸ್ ನಲ್ಲಿ ಅಮಲು ಪದಾರ್ಥ ಸೇರಿಸಿ ಯುವತಿಯ ಅತ್ಯಾಚಾರ ➤ ಉಪ್ಪಿನಂಗಡಿಯ ಯುವಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 22. ಕಾಲೇಜು ವಿದ್ಯಾರ್ಥಿನಿಯೋರ್ವಳನ್ನು ಕಾರಿನಲ್ಲಿ ಕರೆದೊಯ್ದು ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಹಾಕಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಆರೋಪಿಯನ್ನು ಉಪ್ಪಿನಂಗಡಿ ನಿವಾಸಿ ಪ್ರಾಣೇಶ್ ಎಂದು ಗುರುತಿಸಲಾಗಿದೆ. ಯುವತಿ ಕಾಲೇಜಿಗೆಂದು ತೆರಳಲು ಬಸ್ಸಿಗೆ ಕಾಯುತ್ತಿದ್ದ ವೇಳೆ ಆಕೆಯ ದೊಡ್ಡಪ್ಪನ ಪರಿಚಯದ ಪ್ರಾಣೇಶ್ ಎಂಬಾತ ಅದೇ ಮಾರ್ಗದಲ್ಲಿ ಕಾರಿನಲ್ಲಿ ಬಂದು ಡ್ರಾಪ್ ಕೊಡುವುದಾಗಿ ನಂಬಿಸಿ ಕರೆದುಕೊಂಡು ಹೋಗಿದ್ದಾನೆ. ಆಕೆ ಇಳಿಯಬೇಕಾಗಿದ್ದ ಸ್ಥಳ ತಲುಪಿದರೂ ಕಾರನ್ನು ನಿಲ್ಲಿಸದೆ ಉಪ್ಪಿನಂಗಡಿ ಕಡೆಗೆ ಕಾರನ್ನು

ಜ್ಯೂಸ್ ನಲ್ಲಿ ಅಮಲು ಪದಾರ್ಥ ಸೇರಿಸಿ ಯುವತಿಯ ಅತ್ಯಾಚಾರ ➤ ಉಪ್ಪಿನಂಗಡಿಯ ಯುವಕನ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಿ-ಫಾರ್ಮಾ ವಿದ್ಯಾರ್ಥಿಗೆ ರಾಗಿಂಗ್ ➤ ಒಂಭತ್ತು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.22. ಕೇರಳ ಮೂಲದ ವಿದ್ಯಾರ್ಥಿಗೆ ರ್ಯಾಗಿಂಗ್ ಮಾಡಿದ ಆರೋಪದಲ್ಲಿ ನಗರದ ಖಾಸಗಿ ಕಾಲೇಜಿನ ಒಂಭತ್ತು ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಪೊಲೀಸರು ಶುಕ್ರವಾರದಂದು ಬಂಧಿಸಿದ್ದಾರೆ. ಮೊದಲ ವರ್ಷದ ಬಿ-ಫಾರ್ಮಾ ವಿದ್ಯಾರ್ಥಿಗೆ ತಲೆಕೂದಲು ಮತ್ತು ಮೀಸೆ ತೆಗೆದು ಬರುವಂತೆ ಹಿರಿಯ ವಿದ್ಯಾರ್ಥಿಗಳು ಒತ್ತಡ ಹೇರಿದ್ದಲ್ಲದೆ, ಹಿರಿಯ ವಿದ್ಯಾರ್ಥಿಗಳ ಮಾತು ಕೇಳದ ಪ್ರಥಮ ವರ್ಷದ ವಿದ್ಯಾರ್ಥಿಗೆ ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ವಿದ್ಯಾರ್ಥಿ ನೀಡಿದ ದೂರಿನಂತೆ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿ ಕರ್ನಾಟಕ

ಮಂಗಳೂರು: ಬಿ-ಫಾರ್ಮಾ ವಿದ್ಯಾರ್ಥಿಗೆ ರಾಗಿಂಗ್ ➤ ಒಂಭತ್ತು ಮಂದಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲ್ವೇ ಕ್ರಷರ್ ನಲ್ಲಿ ಭೀಕರ ಸ್ಫೋಟ ➤ 15ಕ್ಕೂ ಹೆಚ್ಚು ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ. 22. ಇಲ್ಲಿನ ರೈಲ್ವೇ ಕ್ರಷರ್ ಒಂದರಲ್ಲಿ ಭಾರೀ ಸ್ಫೋಟ ಉಂಟಾಗಿದ್ದು, ಇದರಲ್ಲಿ ಸುಮಾರು ಕನಿಷ್ಠ 15 ಕಾರ್ಮಿಕರು ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಕ್ರಮ ಕಲ್ಲು ಗಣಿಗಾರಿಕೆಗೆಂದು ಸುಮಾರು 50 ಡೈನಮೈಟ್‌ ಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಡೈನಮೈಟ್ ಸಿಡಿದ ಪರಿಣಾಮ ಈ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಕಾರ್ಮಿಕರ ದೇಹಗಳು ಛಿದ್ರ ಛಿದ್ರವಾಗಿವೆ. ಲಾರಿಯ ತುಂಬಾ ಡೈನಮೈಟ್‌ ಗಳನ್ನು ಸಾಗಿಸಲಾಗುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ. ಆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಎಲ್ಲ

ರೈಲ್ವೇ ಕ್ರಷರ್ ನಲ್ಲಿ ಭೀಕರ ಸ್ಫೋಟ ➤ 15ಕ್ಕೂ ಹೆಚ್ಚು ಕಾರ್ಮಿಕರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ- ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 21. ಖಾಸಗಿ ಬಸ್ ಚಾಲಕನಿಗೆ ಪೆಟ್ರೋಲ್ ಎರಚಿ ಬೆಂಕಿ ಕೊಡಲು ಪ್ರಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫೈಸಲ್ ನಗರದ ಮಹಮ್ಮದ್ ಅಶ್ರಫ್ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜ.19ರ ಮಂಗಳವಾರ ರಾತ್ರಿ 8.30ರ ಸುಮಾರಿಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ 23 ನಂಬರಿನ ಸುವರ್ಣ ಹೆಸರಿನ ಖಾಸಗಿ ಬಸ್ ಪಡೀಲ್ ಫೈಸಲ್ ನಗರಕ್ಕೆ ತೆರಳುತ್ತಿದ್ದ ವೇಳೆ ಸೈಡ್ ಕೊಡದ ವಿಚಾರದಲ್ಲಿ ಬೈಕ್ ಸವಾರ ರೌಡಿಸಂ ತೋರಿಸಿ, ಬೈಕನ್ನು ಅಡ್ಡ ಇಟ್ಟು ಬೈದಿದ್ದಲ್ಲದೆ,

ಮಂಗಳೂರು: ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ- ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಜ. 21. ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಚಾಂತಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೈದವರನ್ನು ಅನುಶ್ರೀ ಎಂದು ಗುರುತಿಸಲಾಗಿದೆ. ಅನುಶ್ರೀ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿಯ ಪುತ್ರಿಯಾಗಿದ್ದು, ಆಕೆ ಅದೇ ಶಾಲೆಯ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಇಂದು ಸಂಜೆ ತಾಯಿ ಮನೆಗೆ ಬಂದಾಗ ಮಗಳು ನೇಣು ಬಿಗಿದ ಸ್ಥಿತಿಯಲ್ಲಿದ್ದು, ಗಾಬರಿಗೊಂಡ ತಾಯಿಯು ಸಮೀಪದದಲ್ಲಿದ್ದ ನಿರ್ಮಾಣ ಕಟ್ಟಡದ ಕೂಲಿ

ಉಡುಪಿ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಸ್ಕೂಟರ್ ಸ್ಕಿಡ್ ಆಗಿ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 21. ಚಾಲಕನ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ಪಲ್ಟಿಯಾಗಿ ಸವಾರ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ವೇಳೆ ನಡೆದಿದೆ. ಮೃತರನ್ನು ಮಂಗಳೂರು ಬೆಂಗ್ರೆ ನಿವಾಸಿ ಅಬ್ದುಲ್ ಅಜೀಜ್ (45) ಎಂದು ಗುರುತಿಸಲಾಗಿದೆ. ಇವರು ಸ್ಕೂಟರ್ ನಲ್ಲಿ ಮಂಗಳೂರಿನಿಂದ ಕಲ್ಲಡ್ಕಕ್ಕೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಸವಾರರನ್ನು ಸ್ಥಳೀಯರ ಸಹಕಾರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಲಕಿದು ಬಂದಿದೆ.

ಬಂಟ್ವಾಳ: ಸ್ಕೂಟರ್ ಸ್ಕಿಡ್ ಆಗಿ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top