ಕ್ರೈಮ್ ನ್ಯೂಸ್

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ➤ ಕೊನೆಗೂ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 21. ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಕಳೆದ ಸೆಪ್ಟೆಂಬರ್ ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿಗೆ ಕೊನೆಗೂ ಜಾಮೀನು ಸಿಕ್ಕಿದ್ದು, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಕಳೆದ ವಾರ ಹೈಕೋರ್ಟಿನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತಾದರೂ ಕೊನೆಕ್ಷಣದಲ್ಲಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ ಮಾಡಿದ್ದರಿಂದ ರಾಗಿಣಿ ಪರ […]

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ➤ ಕೊನೆಗೂ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಎಪಿಎಂಸಿ ಬಳಿ ಅಕ್ರಮ ಮದ್ಯ ಸಾಗಾಟ ಪತ್ತೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 21. ಬೈಕ್ ವೊಂದರಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಸಂದರ್ಭ ಗಸ್ತು ನಿರತ ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪೆರ್ನೆ ಕಾರ್ಲ ನಿವಾಸಿ ಪಿಯಾದ್ ಪಿಂಟೋ ಎಂದು ಗುರುತಿಸಲಾಗಿದೆ. ರಾತ್ರಿ ಕರ್ತವ್ಯ ನಿರತರಾಗಿದ್ದ ಅಬಕಾರಿ ಪೊಲೀಸರು ಎಪಿಎಂಸಿ ರೈಲ್ವೇ ಗೇಟ್ ಬಳಿ ತಪಾಸಣೆ ನಡೆಸಿದಾಗ ಬೈಕ್ ನ ಚೀಲವೊಂದರಲ್ಲಿ 280 ಎಂ.ಎಲ್ ನ48 ಬಾಟಲಿಯಲ್ಲಿ 8.640 ಲೀಟರ್ ಪ್ರೆಸ್ಟೇಜ್ ವಿಸ್ಕಿಯನ್ನು ವಶಕ್ಕೆ

ಪುತ್ತೂರು: ಎಪಿಎಂಸಿ ಬಳಿ ಅಕ್ರಮ ಮದ್ಯ ಸಾಗಾಟ ಪತ್ತೆ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಣಾಜೆ: ಸಿಲಿಂಡರ್ ತುಂಬಿದ್ದ ಪಿಕ್-ಅಪ್ ವಿದ್ಯುತ್ ಕಂಬಕ್ಕೆ ಢಿಕ್ಕಿ ➤ ತಪ್ಪಿದ ಭಾರೀ ಅಪಾಯ

(ನ್ಯೂಸ್ ಕಡಬ) newskadaba.com ಕೊಣಾಜೆ, ಜ.20. ಸಿಲಿಂಡರ್ ತುಂಬಿದ್ದ ಪಿಕ್ ಅಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದ್ದು , ಕೂದಲೆಲೆಯ ಅಂತರದಲ್ಲಿ ಭಾರೀ ಪ್ರಾಣಾಪಾಯ ತಪ್ಪಿದ ಘಟನೆ ಬುಧವಾರದಂದು ನಡೆದಿದೆ. ಪಜೀರು ಗ್ರಾಮ ಪಂಚಾಯತ್ ಕಚೇರಿಯ ಹಿಂಬದಿ ರಸ್ತೆಯಲ್ಲಿ ಪಿಕ್-ಅಪ್ ವಾಹನದಲ್ಲಿ HP ಗ್ಯಾಸ್ ಸಿಲಿಂಡರ್ ಗಳನ್ನು‌ ಗ್ರಾಹಕರಿಗೆ ವಿತರಿಸುತ್ತಿದ್ದು, ವಾಹನವನ್ನು ಹಿಂತೆಗೆಯುವ ತೆಗೆಯುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಂಬವು

ಕೊಣಾಜೆ: ಸಿಲಿಂಡರ್ ತುಂಬಿದ್ದ ಪಿಕ್-ಅಪ್ ವಿದ್ಯುತ್ ಕಂಬಕ್ಕೆ ಢಿಕ್ಕಿ ➤ ತಪ್ಪಿದ ಭಾರೀ ಅಪಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಕಲಿ ದಾಖಲೆಪತ್ರ ಸೃಷ್ಟಿಸಿ ಜಾಗ ಮಾರಾಟ ಮಾಡುತ್ತಿದ್ದ ಖದೀಮರು..! ➤ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 20. ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಬೆಲೆಬಾಳುವ ಜಾಗಗಳನ್ನು ತಮ್ಮ ಹೆಸರಿಗೆ ನೋಂದಾಯಿಸಿ ಮಾರಾಟ ಮಾಡುತ್ತಿದ್ದ ಆರು ಮಂದಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಕೀರ್ತನಾ ಶೇಖರ್, ಶೇಖರ್, ಪವನ್ ಕುಮಾರ್, ಪ್ರಜ್ವಲ್ ರಾಮಯ್ಯ ಹಾಗೂ ಜಯಪ್ರಕಾಶ್ ಎಂದು ಗುರುತಿಸಲಾಗಿದೆ. ಇವರಿಂದ 16.83 ಲಕ್ಷ ರೂ ಮೌಲ್ಯದ ಚಿನ್ನಾಭರಣ ಹಾಗೂ 35 ಲಕ್ಷದ ಮೂರು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ‌. ಯಾವುದಾದರೂ ಹೆಚ್ಚು ಬೆಲೆಗೆ ಮಾರಾಟವಾಗುವ ಖಾಲಿ ಜಾಗವನ್ನು ತಮ್ಮಲ್ಲಿಯೇ ಒಬ್ಬರ ಹೆಸರಿಗೆ

ನಕಲಿ ದಾಖಲೆಪತ್ರ ಸೃಷ್ಟಿಸಿ ಜಾಗ ಮಾರಾಟ ಮಾಡುತ್ತಿದ್ದ ಖದೀಮರು..! ➤ ಆರು ಮಂದಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಜೇಶ್ವರ: ಗಾಂಜಾ ಹಾಗೂ ಚಿನ್ನಾಭರಣ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಜ. 20. ಗಾಂಜಾ ಹಾಗೂ ಚಿನ್ನಾಭರಣ ಕಳ್ಳತನ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹೊಸಂಗಡಿ ರಾಮಂತಳಿಯ ಆಬಿದ್ (22) ಎಂದು ಗುರುತಿಸಲಾಗಿದೆ. ಈತ 2019ರಲ್ಲಿ ಚಿನ್ನಾಭರಣ ವಂಚನೆ ಹಾಗೂ 2020ರಲ್ಲಿ ಗಾಂಜಾ ಸಾಗಾಟ ಪ್ರಕರಣದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಜೇಶ್ವರ: ಗಾಂಜಾ ಹಾಗೂ ಚಿನ್ನಾಭರಣ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಜೇಶ್ವರ: ಕಾರ್ಮಿಕನ ಮೃತದೇಹ ಬಾವಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಜ. 20. ಉತ್ತರಪ್ರದೇಶ ಮೂಲದ ಕಾರ್ಮಿಕನೋರ್ವನ ಮೃತದೇಹವೊಂದು ಮಂಜೇಶ್ವರ ಠಾಣಾ ವ್ಯಾಪ್ತಿಯ ಕುಂಜತ್ತೂರು ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ‌. ವಿದ್ಯುತ್ ಕಂಬ ತಯಾರಿಕಾ ಘಟಕದಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಇವರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಇವರ ಮೃತದೇಹವು ಕುಂಜತ್ತೂರಿನ ಅಂಬಿತ್ತಡಿ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರ ಕೆರೆಯಲ್ಲಿ ಪತ್ತೆಯಾಗಿತ್ತು. ಇವರ ತಲೆಯಲ್ಲಿ ಗಾಯಗಳಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ನೈಜ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಜೇಶ್ವರ: ಕಾರ್ಮಿಕನ ಮೃತದೇಹ ಬಾವಿಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮದುವೆಗೆ ಒಪ್ಪದ ಮಗಳನ್ನೇ 1ಲಕ್ಷ ರೂ.ಗೆ ಮಾರಿದ ಪೋಷಕರು..!

(ನ್ಯೂಸ್ ಕಡಬ) newskadaba.com ಜೈಪುರ, ಜ. 20. 13 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಮದುವೆಗೆ ಒಪ್ಪಲಿಲ್ಲವೆಂದು ಒಂದು ಲಕ್ಷ ರೂ. ಗಳಿಗೆ ಮಾರಾಟ ಮಾಡಿದ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ನಡೆದಿದೆ. ಡಿಸೆಂಬರ್ ತಿಂಗಳಲ್ಲಿ ಬಾಲಕಿಗೆ ಹೆತ್ತವರು ವಿವಾಹ ನಿಶ್ಚಯಿಸಿದ್ದು, ಆದರೆ ಬಾಲಕಿ ಮದುವೆಗೆ ಒಪ್ಪಿರಲಿಲ್ಲ. ಈ ವೇಳೆ ಚಂಡಿಕೇಡಿ ಎಂಬಲ್ಲಿ ವಾಸಿವಾಗಿದ್ದ ಗೀತಾ ಸಿಂಗ್ ಎಂಬವರಿಗೆ ಬಾಲಕಿಯನ್ನು 1.21 ಲಕ್ಷ ರೂ. ಗಳಿಗರ ಮಾರಾಟ ಮಾಡಿದ್ದಾರೆ ಎಂದು ಬಾಲಕಿ ತಿಳಿಸಿದ್ದಾಳೆ. ಮಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ

ಮದುವೆಗೆ ಒಪ್ಪದ ಮಗಳನ್ನೇ 1ಲಕ್ಷ ರೂ.ಗೆ ಮಾರಿದ ಪೋಷಕರು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲದ ಘಟನೆಯ ಬೆನ್ನಿಗೇ ಕೊಣಾಜೆಯಲ್ಲೂ ವಿಕೃತಿ ಮೆರೆದ ದುಷ್ಕರ್ಮಿಗಳು ➤ ಭಜನಾಮಂದಿರದಲ್ಲಿ ಮಲಮೂತ್ರ ಮಾಡಿ ದುಷ್ಕೃತ್ಯ

(ನ್ಯೂಸ್ ಕಡಬ) newskadaba.com ಕೊಣಾಜೆ, ಜ. 20. ಉಳ್ಳಾಲದ ಕೊರಗಜ್ಜನ ಕಟ್ಟೆಯಲ್ಲಿ ವಿಕೃತಿ ಮೆರೆದ ಬೆನ್ನಲ್ಲೇ ಕೊಣಾಜೆಯಲ್ಲೂ ಇದೇ ತರದ ಹಿಂದೂ ಧರ್ಮದ ಭಾವನೆಗೆ ಧಕ್ಕೆ ತರುವ ಕೃತ್ಯ ನಡೆದಿದೆ. ಕೊಣಾಜೆ ವಿವಿಯ ಆಡಳಿತ ಸೌಧ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿರಿ, ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ಕಿಡಿಗೇಡಿಗಳು ಮಲ-ಮೂತ್ರ ವಿಸರ್ಜನೆಗೈದು ವಿಕೃತಿ ಮೆರೆದಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕ ಈ ಕೃತ್ಯ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ. ಈ ಘಟನೆಯ ಕುರಿತು ಕೊಣಾಜೆ ಠಾಣೆಗೆ ದೂರು ನೀಡಲಾಗಿದ್ದು,

ಉಳ್ಳಾಲದ ಘಟನೆಯ ಬೆನ್ನಿಗೇ ಕೊಣಾಜೆಯಲ್ಲೂ ವಿಕೃತಿ ಮೆರೆದ ದುಷ್ಕರ್ಮಿಗಳು ➤ ಭಜನಾಮಂದಿರದಲ್ಲಿ ಮಲಮೂತ್ರ ಮಾಡಿ ದುಷ್ಕೃತ್ಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸೈಡ್ ಕೊಡೋ ವಿಚಾರದಲ್ಲಿ ಬೈಕ್ ಸವಾರ ಹಾಗೂ ಬಸ್ ಚಾಲಕನ ನಡುವೆ ವಾಗ್ವಾದ ➤ ಬಸ್ ಗೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಬೈಕ್ ಸವಾರ.!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಸೈಡ್ ಕೊಡುವ ವಿಚಾರವಾಗಿ ಬೈಕ್ ಸವಾರ ಹಾಗೂ ಬಸ್ ಚಾಲಕನ ನಡುವೆ ಮಾತಿಗೆ ಮಾತು ಬೆಳೆದ ಪರಿಣಾಮ ಬೈಕ್ ಸವಾರ ಬಸ್ ಗೆ ಬೆಂಕಿ ಹಚ್ಚಲು ಮುಂದಾದ ಘಟನೆ ಪಡೀಲ್ ಎಂಬಲ್ಲಿ ನಡೆದಿದೆ. ಸ್ಟೇಟ್ ಬ್ಯಾಂಕ್ ನಿಂದ ಫೈಝಲ್ ನಗರಕ್ಕೆ ತೆರಳುತ್ತಿದ್ದ 23 ನಂಬರಿನ ಖಾಸಗಿ ಬಸ್ ಗೆ ಬೈಕ್ ಸವಾರ ಅಶ್ರಫ್ ಎಂಬಾತ ಸೈಡ್ ಕೊಡೋ ವಿಚಾರವಾಗಿ ಬಸ್ ಚಾಲಕನ ಜೊತೆ ವಾಗ್ವಾದ ನಡೆಸಿದ್ದು, ತದನಂತರ ಬಸ್

ಮಂಗಳೂರು: ಸೈಡ್ ಕೊಡೋ ವಿಚಾರದಲ್ಲಿ ಬೈಕ್ ಸವಾರ ಹಾಗೂ ಬಸ್ ಚಾಲಕನ ನಡುವೆ ವಾಗ್ವಾದ ➤ ಬಸ್ ಗೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಬೈಕ್ ಸವಾರ.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಾಲಕಿಗೆ ಲೈಂಗಿಕ ಕಿರುಕುಳ ➤ ಪೊಲೀಸ್ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಯನಾಡ್, ಜ. 20. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೆನಿಚಿರಾ ಪೊಲೀಸ್ ಠಾಣೆಯ ಗ್ರೇಡ್ ಎಸ್.ಐ ಮುರಳಿ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ಐದು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಪೊಲೀಸ್ ವರದಿಯ ಬಳಿಕ ಅಮಾನತು ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಗೆ ಲೈಂಗಿಕ ಕಿರುಕುಳ ➤ ಪೊಲೀಸ್ ವಿರುದ್ದ ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top