ಕ್ರೈಮ್ ನ್ಯೂಸ್

ಮಂಗಳೂರು: ಒಳ ಉಡುಪಿನಲ್ಲಿ 2 ಕೆ.ಜಿ ಅಕ್ರಮ ಚಿನ್ನ ಸಾಗಾಟ ➤ ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 15. ಒಳುಡುಪಿನಲ್ಲಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಆರೋಪಿಗಳನ್ನು ಕಾಸರಗೋಡಿನ ಫೈಝಲ್ ತೊಟ್ಟಿ ಮೇಲ್ಪರಂಬ(37) ಹಾಗೂ ಮೊಹಮ್ಮದ್ ಶುಹೈಬ್(31) ಎಂದು ಗುರುತಿಸಲಾಗಿದೆ. ಇವರಿಬ್ಬರು ಶಾರ್ಜಾದಿಂದ ಮಂಗಳೂರಿಗೆ ಬಂದಿಳಿದಿದ್ದು, ಸಂಶಯದ ಮೇರೆಗೆ ಇವರನ್ನು ತಪಾಸಣೆ ನಡೆಸಿದಾಗ ಒಳ ಉಡುಪಿನಲ್ಲಿ 24 ಕ್ಯಾರೆಟ್ ನ 2.154 ಕೆ.ಜಿ ಚಿನ್ನ ಪತ್ತೆಯಾಗಿದೆ. ಇದೀಗ ಕಸ್ಟಮ್ಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ, 1.09 ಕೋ.ರೂ […]

ಮಂಗಳೂರು: ಒಳ ಉಡುಪಿನಲ್ಲಿ 2 ಕೆ.ಜಿ ಅಕ್ರಮ ಚಿನ್ನ ಸಾಗಾಟ ➤ ಇಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಹಾವು ಕಡಿದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಶಂಕರನಾರಾಯಣ, ಜ. 15. ಹಾವು ಕಚ್ಚಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕುಂದಾಪುರದ ಹೆಂಗವಳ್ಳಿಯಲ್ಲಿ ನಡೆದಿದೆ. ಮೃತರನ್ನು ಮುಹಮ್ಮದ್ ಆಲಂ ಎಂದು ಗುರುತಿಸಲಾಗಿದೆ‌. ಹೆಂಗವಳ್ಳಿ ನಿವಾಸಿಯೋರ್ವರ ಮನೆ ಸಮೀಪ ಹಾವನ್ನು ಹಿಡಿಯುತ್ತಿದ್ದ ವೇಳೆ ಹಾವು ಕಚ್ಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆನ್ನಲಾಗಿದೆ.

ಉಡುಪಿ: ಹಾವು ಕಡಿದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ- ಟೆಂಪೊ ನಡುವೆ ಭೀಕರ ಅಪಘಾತ ➤ 11 ಮಂದಿಯ ದುರ್ಮರಣ

(ನ್ಯೂಸ್ ಕಡಬ) newskadaba.com ಧಾರವಾಡ, ಜ. 15. ಟೆಂಪೋ ಹಾಗೂ ಲಾರಿಯ ನಡುವೆ ಢಿಕ್ಕಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟ ಘಟನೆ ತಾಲ್ಲೂಕಿನ ಇಟಿಗಟ್ಟಿ ಬಳಿ ಶುಕ್ರವಾರ ನಸುಕಿನ ಜಾವ ನಡೆದಿದೆ. ದಾವಣಗೆರೆಯಿಂದ ಹೊರಟಿದ್ದ ಟೆಂಪೋ ಹಾಗೂ ಲಾರಿ ನಡುವೆ ಧಾರವಾಡ ಸಮೀಪ ಈ ಅಪಘಾತ ಸಂಭವಿಸಿದೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಲಾರಿ- ಟೆಂಪೊ ನಡುವೆ ಭೀಕರ ಅಪಘಾತ ➤ 11 ಮಂದಿಯ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೆಗಣಿ ಗುಂಡಿಗೆ ಬಿದ್ದು ಹತ್ತು ವರ್ಷದ ಬಾಲಕ ದುರ್ಮರಣ

(ನ್ಯೂಸ್ ಕಡಬ) newskadaba.com ಮುಂಬೈ, ಜ. 15.‌ ಗಾಳಿಪಟ ಹಾರಿಸುವ ವೇಳೆ ಸೆಗಣಿ ಗುಂಡಿಗೆ ಬಿದ್ದು ಹತ್ತು ವರ್ಷದ ಬಾಲಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಕಾಂಡಿವಾಲಿ ಎಂಬಲ್ಲಿ ನಡೆದಿದೆ. ಬಾಲಕ ಗಾಳಿಪಟ ಹಾರಿಸುತ್ತಿದ್ದ ವೇಳೆ ದಾರ ಕತ್ತರಿಸಲ್ಪಟ್ಟು ಅದು ಸೆಗಣಿ ಗುಂಡಿಗೆ ಬಿದ್ದಿತ್ತು. ಅದನ್ನು ಮೇಲೆತ್ತಲೆಂದು ಬಾಲಕ ಬಗ್ಗಿದಾಗ ಆಕಸ್ಮತ್ತಾಗಿ ಗುಂಡಿಗೆ ಬಿದ್ದಿದ್ದಾನೆ. ಸಮೀಪದಲ್ಲಿಯೇ ಕಟ್ಟಡ ಕಾರ್ಮಿಕರು ಬಾಲಕನ ಬೊಬ್ಬೆ ಕೇಳಿ ಓಡಿ ಬಂದರೂ ಗುಂಡಿಯಿಂದ ಮೇಲೆತ್ತಲು ಸಾಧ್ಯವಾಗಿಲ್ಲ. ಗುಂಡಿ ಬಹಳ ಆಳವಾಗಿದ್ದು, ಊರವರು, ಪೊಲೀಸರು ಮತ್ತು

ಸೆಗಣಿ ಗುಂಡಿಗೆ ಬಿದ್ದು ಹತ್ತು ವರ್ಷದ ಬಾಲಕ ದುರ್ಮರಣ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಹೋದ್ಯೋಗಿಯ ಮೇಲೆಯೇ ಅತ್ಯಾಚಾರಗೈದ ಪೊಲೀಸ್…!

(ನ್ಯೂಸ್ ಕಡಬ) newskadaba.com ಲಕ್ನೋ, ಜ. 15. ಸಹೋದ್ಯೋಗಿಯೋರ್ವ ತನ್ನ ಮೇಲೆ ಅತ್ಯಾಚಾರಗೈದಿದ್ದಾರೆ ಎಂದು ಆರೋಪಿಸಿ ಮಹಿಳಾ ಕಾನ್‌ಸ್ಟೇಬಲ್ ದೂರು ದಾಖಲಿಸಿದ್ದಾರೆ. ಪೊಲೀಸ್ ಕಾನ್ ಸ್ಟೇಬಲ್ ಓರ್ವ ತನ್ನ ಮನೆಯನ್ನು ತೋರಿಸುವುದಾಗಿ ಹೇಳಿ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದು, ಅಲ್ಲದೇ ಈ ಬಗ್ಗೆ ಯಾರಿಗಾದರೂ ದೂರು ನೀಡಿದರೆ ಪರಿಣಾಮ ನೆಟ್ಟಗಿರದು ಎಂದು ಬೆದರಿಕೆ ನೀಡಿದ್ದಾನೆ ಎಂದು ಮಹಿಳಾ ಕಾನ್ ಸ್ಟೇಬಲ್ ದೂರು ನೀಡಿದ್ದಾರೆ. ಆರೋಪಿ ಪೊಲೀಸ್ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಸಹೋದ್ಯೋಗಿಯ ಮೇಲೆಯೇ ಅತ್ಯಾಚಾರಗೈದ ಪೊಲೀಸ್…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ವಿದ್ಯುತ್ ಶಾಕ್ ತಗುಲಿ ಮೆಕ್ಯಾನಿಕ್ ಮೃತ್ಯು ➤ ತನ್ನ ಗೃಹಪ್ರವೇಶಕ್ಕೆ ಎರಡು ದಿನ ಬಾಕಿ ಇರುವಾಗಲೇ ವಿದ್ಯುತ್ ಆಘಾತ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.14. ತನ್ನ ಗೃಹಪ್ರವೇಶಕ್ಕೆ ಎರಡು ದಿನವಿದ್ದಾಗಲೇ ಮೆಕ್ಯಾನಿಕ್ ಓರ್ವರು ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಗುರುವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ. ಮೃತ ಮೆಕ್ಯಾನಿಕ್ ನನ್ನು ಸಂಪ್ಯ ಉದಯ ಗಿರಿ ನಿವಾಸಿ ವೆಂಕಪ್ಪ ನಾಯ್ಕ್ ಎಂಬವರ ಪುತ್ರ ಕೃಷ್ಣಪ್ಪ ನಾಯ್ಕ್(45) ಎಂದು ಗುರುತಿಸಲಾಗಿದೆ. ಕೃಷ್ಣಪ್ಪರವರು ನೂತನ ಮನೆ ಕಟ್ಟಿಸಿದ್ದು, ಶನಿವಾರದಂದು ಗೃಹಪ್ರವೇಶವಿದ್ದ ಹಿನ್ನೆಲೆಯಲ್ಲಿ ಮನೆಯಲ್ಲಿ ಹೊಸ ಪ್ಲಗ್ ಸಿಕ್ಕಿಸುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿದೆ ಎನ್ನಲಾಗಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ

ಪುತ್ತೂರು: ವಿದ್ಯುತ್ ಶಾಕ್ ತಗುಲಿ ಮೆಕ್ಯಾನಿಕ್ ಮೃತ್ಯು ➤ ತನ್ನ ಗೃಹಪ್ರವೇಶಕ್ಕೆ ಎರಡು ದಿನ ಬಾಕಿ ಇರುವಾಗಲೇ ವಿದ್ಯುತ್ ಆಘಾತ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರ್ಕಳ: ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

(ನ್ಯೂಸ್ ಕಡಬ) newskadaba.com  ಕಾರ್ಕಳ, ಜ. 14. ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾಣೆಯಾದವರನ್ನು ಜೋಡುಕಟ್ಟೆ ಸುರೇಖಾ ನಗರದ ನಿವಾಸಿ ಗಣೇಶ್ ಎಂಬವರ ಪತ್ನಿ ಜ್ಯೋತಿ (25) ಮಕ್ಕಳಾದ ಚರಣ್ (7) ಹಾಗೂ ತೃಪ್ತಿ (5) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಯಾರಿಗೂ ಹೇಳದೇ ಹೋದವರು ವಾಪಾಸು ಬರದೇ ನಾಪತ್ತೆಯಾಗಿದ್ದಾರೆ. ಈ ಕುರಿತು ಗಣೇಶ ಎಂಬವರು ನೀಡಿದ ದೂರಿನಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಕಾರ್ಕಳ: ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ರೈಲಿನಿಂದ ಪತ್ನಿಯನ್ನು ಹೊರದಬ್ಬಿ ಹತ್ಯೆ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಜ. 14. ಚಲಿಸುತ್ತಿದ್ದ ರೈಲಿನಿಂದ ಪತ್ನಿಯನ್ನು ಹೊರದಬ್ಬಿ ಹತ್ಯೆಗೈದಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಮುಂಬೈನಲ್ಲಿ ಬಂಧಿಸಲಾಗಿದೆ‌. ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಇವರು ಸೋಮವಾರದಂದು ಪತಿ ಹಾಗೂ ತನ್ನ ಮೊದಲ ಗಂಡನಿಗೆ ಜನಿಸಿದ 7 ವರ್ಷದ ಮಗಳೊಂದಿಗೆ ರೈಲಿನಲ್ಲಿ ಚಲಿಸುತ್ತಿದ್ದ ವೇಳೆ ದಂಪತಿ ರೈಲಿನ ಬಾಗಿಲಿನ ಹತ್ತಿರ ನಿಂತಿದ್ದರು. ಈ ವೇಳೆ ಪತಿಯು ಪತ್ನಿಯನ್ನೇ ಹೊರದಬ್ಬಿದ್ದಾನೆ. ಇದನ್ನು ಗಮನಿಸಿದ ರೈಲಿನಲ್ಲಿದ್ದ ಮಹಿಳಾ ಪ್ರಯಾಣಿಕರೋರ್ವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ತಕ್ಷಣವೇ ಮಹಿಳೆಯನ್ನು

ಚಲಿಸುತ್ತಿದ್ದ ರೈಲಿನಿಂದ ಪತ್ನಿಯನ್ನು ಹೊರದಬ್ಬಿ ಹತ್ಯೆ..! ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುರಭಿ ಬಾರ್ ಗೆ ನುಗ್ಗಿದ ಕಳ್ಳರು ➤ ಮೂರು ಲಕ್ಷ ನಗದು ಹಾಗೂ ಮದ್ಯ ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.14. ಬಾರ್ ಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ನಗದು ಹಾಗೂ ಮದ್ಯದ ಬಾಟಲಿಗಳನ್ನು ಕಳವುಗೈದ  ಘಟನೆ ಮೆಲ್ಕಾರ್ ಸಮೀಪದ ಕಂದೂರು ಎಂಬಲ್ಲಿ ನಡೆದಿದೆ. ಬಂಟ್ವಾಳದ ಸುರಭಿ ಎಂಬ ಹೆಸರಿನ ಬಾರ್‌ ಗೆ ಶಟರ್‌ ನ ಬೀಗ ಮುರಿದು ನುಗ್ಗಿದ ಕಳ್ಳರು ಕೌಂಟರ್‌ನಲ್ಲಿದ್ದ ಸುಮಾರು ಮೂರು ಲಕ್ಷ ರೂ. ನಗದು ದೋಚಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ  ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ನೇತೃತ್ವದ ತಂಡ ಭೇಟಿ ನೀಡಿ ಪ್ರಕರಣ

ಸುರಭಿ ಬಾರ್ ಗೆ ನುಗ್ಗಿದ ಕಳ್ಳರು ➤ ಮೂರು ಲಕ್ಷ ನಗದು ಹಾಗೂ ಮದ್ಯ ದೋಚಿ ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕೊಟ್ಟಿಗೆಗೆ ಬೆಂಕಿ ಹಿಡಿದು ಮೂರು ಕ್ವಿಂಟಾಲ್ ಗೂ ಮಿಕ್ಕ ರಬ್ಬರ್ ಶೀಟ್ ಭಸ್ಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 14. ಕೊಟ್ಟಿಗೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮೂರು ಕ್ವಿಂಟಾಲ್ ಗೂ ಮಿಕ್ಕ ರಬ್ಬರ್ ಶೀಟ್, ಮನೆಯ ಅಗತ್ಯ ದಾಖಲೆ ಪತ್ರಗಳು ಹಾಗೂ ನಗದು ಬೆಂಕಿಗಾಹುತಿಯಾದ ಘಟನೆ ಕೊಕ್ಕಡದ ಪಿಜಿನಡ್ಕ ಎಂಬಲ್ಲಿ ನಡೆದಿದೆ. ಪಿಜಿನಡ್ಕದ ಚೀಂಕ್ರ ಎಂಬವರು ಹೊಸಮನೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಹೊಸಮನೆಯಲ್ಲಿಯೇ ವಾಸಿಸುತ್ತಿದ್ದ ಇವರು ಹಳೆ ಮನೆಯಲ್ಲಿ ಅಡಿಗೆ ಮಾಡುತ್ತಿದ್ದರು. ಕೊಟ್ಟಿಗೆಯು ಹಳೆ ಮನೆಗೆ ತಾಗಿಕೊಂಡಿದ್ದು, ಮನೆಯ ವಸ್ತುಗಳನ್ನೆಲ್ಲ ಅದರಲ್ಲಿ ಜೋಡಿಸಿಡಲಾಗಿತ್ತು. ಬೆಳಗ್ಗೆ ಏಳು ಗಂಟೆಯ ಸುಮಾರಿಗೆ ಮೆನೆಯ ಹೆಂಚು

ಬೆಳ್ತಂಗಡಿ: ಕೊಟ್ಟಿಗೆಗೆ ಬೆಂಕಿ ಹಿಡಿದು ಮೂರು ಕ್ವಿಂಟಾಲ್ ಗೂ ಮಿಕ್ಕ ರಬ್ಬರ್ ಶೀಟ್ ಭಸ್ಮ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top