ಕ್ರೈಮ್ ನ್ಯೂಸ್

ಕೈಕಾಲು ಕಟ್ಟಿಹಾಕಿ ಅತ್ಯಾಚಾರವೆಸಗಿದ ರೀತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಜಾರ್ಖಂಡ್, ಜ. 14. ಕೈಕಾಲು ಕಟ್ಟಿ ಹಾಕಿ ಅತ್ಯಾಚಾರ ನಡೆಸಿದ ಸ್ಥಿತಿಯಲ್ಲಿ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಮೃತದೇಹವು ರಾಮಘಡ ಜಿಲ್ಲೆಯ ಪತ್ರಾತು ಅಣೆಕಟ್ಟೆ ನೀರಿನಲ್ಲಿ ಪತ್ತೆಯಾಗಿದೆ. ಈ ವಿದ್ಯಾರ್ಥಿನಿ ಗೊಡ್ಡಾ ಜಿಲ್ಲೆಯವರಾಗಿದ್ದು, ಇಲ್ಲಿನ  ಹಜಾರಿಬಾಗ್  ವೈದ್ಯಕೀಯ  ಕಾಲೇಜಿನಲ್ಲಿ  ವ್ಯಾಸಂಗ ಮಾಡುತ್ತಿದ್ದರು.  ಯುವತಿಯ ಮೃತದೇಹವನ್ನು ಕಂಡ ದಾರಿಹೋಕರು ಪೊಲಿಸರಿಗೆ ವಿಚಾರ ತಿಳಿಸಿದ್ದಾರೆ. ಪ್ರಕರಣವನ್ನು ದಾಖಲಿಸಿದ ಪೊಲೀಸರು ಜಿಲ್ಲಾ ಪೊಲೀಸರ ವಿಶೇಷ ತನಿಖಾ ತಂಡವನ್ನು ರಚಿಸಿದ್ದು ತನಿಖೆ ನಡೆಸುತ್ತಿರುವುದಾಗಿ ಡಿಐಜಿ ಎ.ವಿ ಓಂಕಾರ್‌ ತಿಳಿಸಿದ್ದಾರೆ.

ಕೈಕಾಲು ಕಟ್ಟಿಹಾಕಿ ಅತ್ಯಾಚಾರವೆಸಗಿದ ರೀತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಿರಾಡಿ: ತುಳು ಚಿತ್ರನಟ ರೂಪೇಶ್ ಶೆಟ್ಟಿಯವರ ಕಾರು ಅಪಘಾತ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ.13. ತುಳು ಚಿತ್ರನಟ ರೂಪೇಶ್ ಶೆಟ್ಟಿಯವರ ಟೊಯೋಟಾ ಫಾರ್ಚ್ಯೂನರ್ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ನಡುವೆ ಢಿಕ್ಕಿಯಾದ ಘಟನೆ ಬುಧವಾರ ಸಂಜೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ನಡೆದಿದೆ. ಕಾರ್ಯಕ್ರಮದ ನಿಮಿತ್ತ ತನ್ನ ಗೆಳೆಯರ ಜೊತೆ ಬೆಂಗಳೂರಿಗೆ ತೆರಳುತ್ತಿದ್ದ ರೂಪೇಶ್‌ ಶೆಟ್ಟಿಯವರು ಸಂಚರಿಸುತ್ತಿದ್ದ ಕಾರು ಶಿರಾಡಿ ಘಾಟಿಯಲ್ಲಿ ಬುಧವಾರ ಸಂಜೆ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ರೂಪೇಶ್ ಶೆಟ್ಟಿ ಹಾಗೂ ಸ್ನೇಹಿತರು ಸಣ್ಣ ಪುಟ್ಟ ಗಾಯಗಳೊಂದಿಗೆ

ಶಿರಾಡಿ: ತುಳು ಚಿತ್ರನಟ ರೂಪೇಶ್ ಶೆಟ್ಟಿಯವರ ಕಾರು ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13. ತಾಲೂಕಿನ ಮಾರ್ನಬೈಲು ಸಮೀಪ ಪೆಲತ್ತಕಟ್ಟೆ ಎಂಬಲ್ಲಿ ಸೋಮವಾರದಂದು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಬೊಳ್ಳಾಯಿ ನಿವಾಸಿ ಇಮ್ರಾನ್(22) ಹಾಗೂ ಮುಬಶ್ಶಿರ್ (12) ಎಂದು ಗುರುತಿಸಲಾಗಿದೆ. ಮೂಲತಃ ಕಾಸರಗೋಡು ನಿವಾಸಿಯಾಗಿರುವ ಇಮ್ರಾನ್ ತನ್ನ ಸಂಬಂಧಿ ಹುಡುಗ ಮುಬಶ್ಶಿರ್ ಜೊತೆ ಡಿಯೋ ವಾಹನದಲ್ಲಿ ತೆರಳುತ್ತಿದ್ದ ವೇಳೆ ಪೆಲತ್ತಕಟ್ಟೆ ಎಂಬಲ್ಲಿ ಎರಡು ಆಕ್ಟಿವಾ ವಾಹನಗಳ ನಡುವೆ ಸರಣ ಅಪಘಾತ ಸಂಭವಿಸಿದ್ದು,

ಬಂಟ್ವಾಳ: ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಣಿಗಲ್ ಸಮೀಪ ರಸ್ತೆ ಅಪಘಾತ ➤ ಪುತ್ತೂರಿನ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜ.13. ರಸ್ತೆ ಅಪಘಾತದಲ್ಲಿ ಪುತ್ತೂರಿನ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಣಿಗಲ್ ಸಮೀಪ ಬುಧವಾರ ಬೆಳಗಿನ ಜಾವ ನಡೆದಿದೆ. ಮೃತ ಯುವಕನನ್ನು ಪುತ್ತೂರಿನ ಗಟ್ಟ ನಿವಾಸಿ ಬಿಲಾಲ್(20) ಎಂದು ಗುರುತಿಸಲಾಗಿದೆ. ಕುಣಿಗಲ್ ಸಮೀಪ ಈತ ಸಂಚರಿಸುತ್ತಿದ್ದ ಬೈಕ್ ಅಪಘಾತವಾಗಿದ್ದು, ಗಂಭೀರ ಗಾಯಗೊಂಡ ಯುವಕ ಮೃತಪಟ್ಟಿದ್ದಾರೆ. ಮೃತದೇಹವನ್ನು ನೆಲಮಂಗಲ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಕುಣಿಗಲ್ ಸಮೀಪ ರಸ್ತೆ ಅಪಘಾತ ➤ ಪುತ್ತೂರಿನ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಲಕ್ಷಾಂತರ ನಗದು ದೋಚಿದ ದುಷ್ಕರ್ಮಿಗಳು ➤ ರಾಜ್ಯ ರಾಜಧಾನಿಯಲ್ಲಿ ನಡೆಯಿತು ಬೆಚ್ಚಿಬೀಳಿಸುವ ಸುದ್ದಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.28. ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಲಕ್ಷಾಂತರ ನಗದು ದೋಚಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ವ್ಯವಹಾರ ನಿಮಿತ್ತ ಬಳ್ಳಾರಿಯ ಮುನೀರ್ ಎಂಬವರು ಬೆಂಗಳೂರಿಗೆ ಆಗಮಿಸಿದ್ದು, ಸೋಮವಾರ ರಾತ್ರಿ ಊರಿಗೆ ತೆರಳಲು ಬಸ್ ನಿಲ್ದಾಣಕ್ಕೆ  ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಮುನೀರ್ ಬಳಿಯಿದ್ದ 16 ಲಕ್ಷದ 60 ಸಾವಿರ ರೂ.ವನ್ನು ಕಿತ್ತು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪೆಪ್ಪರ್ ಸ್ಪ್ರೇ ಮಾಡಿದ್ದರಿಂದ ರಸ್ತೆಯಲ್ಲೇ

ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಲಕ್ಷಾಂತರ ನಗದು ದೋಚಿದ ದುಷ್ಕರ್ಮಿಗಳು ➤ ರಾಜ್ಯ ರಾಜಧಾನಿಯಲ್ಲಿ ನಡೆಯಿತು ಬೆಚ್ಚಿಬೀಳಿಸುವ ಸುದ್ದಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆಲಸದವನ ಲವ್ವಿಡವ್ವಿಗೆ ಮನಸೋತ ಮಾಯಾವಿ ➤ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪಾಪಿ ಪತ್ನಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11. ಮನೆಯ ಕೆಲಸದವನ ಜೊತೆ ಸೇರಿ ಮುದ್ದಿನ ಮಡದಿಯೇ ಗಂಡನನ್ನು ಕೊಲೆ ಮಾಡಿರುವ ವಿಚಿತ್ರ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು, ಪ್ರಕರಣವನ್ನು ತಡವಾಗಿ ಭೇದಿಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೆಂಗಳೂರು ಉತ್ತರದ ತೋಟದ ಗುಡ್ಡದಹಳ್ಳಿ ನಿವಾಸಿ ಶಿವಲಿಂಗಯ್ಯ ಎಂಬವರ ಪತ್ನಿ ಶೋಭಾ ಹಾಗೂ ಕೆಲಸದಾಳು ರಾಮ‌ ಎಂದು ಗುರುತಿಸಲಾಗಿದೆ. ಆರೋಪಿಗಳು ಅಕ್ರಮ ಸಂಬಂಧ ಹೊಂದಿದ್ದು, ಜೂನ್​ 1 ರಂದು ಶಿವಲಿಂಗಯ್ಯನನ್ನು ಕೊಲೆ ಮಾಡಿ ಮೃತದೇಹವನ್ನು ಕಸದ ರಾಶಿಯಲ್ಲಿ

ಕೆಲಸದವನ ಲವ್ವಿಡವ್ವಿಗೆ ಮನಸೋತ ಮಾಯಾವಿ ➤ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪಾಪಿ ಪತ್ನಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಲ್ಲೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೊಲ್ಲೂರು, ಜ. 11. ನೇಣು ಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಲ್ಲೂರಿನ ಜಡ್ಕಲ್ ಗ್ರಾಮದ ಹಾಲ್ಕಲ್ ಚಿಕ್ಕಪೇಟೆ ಎಂಬಲ್ಲಿ ನಡೆದಿದೆ. ಮೃತರನ್ನು ವೆಂಕಟೇಶ್ ಕಿಣಿ(62) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು, ವಿಪರೀತ ಕುಡಿತದ ಅಭ್ಯಾಸ ಹೊಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲ್ಲೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮೀನುಗಾರಿಕೆಯಲ್ಲಿ ತೊಡಗಿದ್ದ ಬೋಟ್ ನಲ್ಲಿ ಸಿಲಿಂಡರ್ ಸ್ಪೋಟ ➤ ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.11. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ತಮಿಳುನಾಡು ಮೂಲದ ಬೋಟ್‌ ಒಂದರಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಓರ್ವ ಗಂಭೀರ ಗಾಯಗೊಂಡು ಬೋಟ್‌ನಲ್ಲಿದ್ದ 11 ಮಂದಿ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆಯವರು ರಕ್ಷಿಸಿದ ಘಟನೆ ನಡೆದಿದೆ. ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲ್ ದೂರದಲ್ಲಿ ಈ ಬೋಟ್ ಮೀನುಗಾರಿಯಲ್ಲಿ ತೊಡಗಿದ್ದ ವೇಳೆ ಬೋಟ್‌ನಲ್ಲಿದ್ದ ಸಿಲಿಂಡರ್ ಏಕಾಏಕಿ ಸ್ಪೋಟಗೊಂಡಿದ್ದು, ವಿಷಯ ತಿಳಿದ ಕರಾವಳಿ ರಕ್ಷಣಾ ಪಡೆಯವರು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡು ಬೋಟ್‌ನಲ್ಲಿದ್ದ 11 ಮಂದಿಯನ್ನು ರಕ್ಷಿಸಿದ್ದಾರೆ. ಗಂಭೀರ

ಮಂಗಳೂರು: ಮೀನುಗಾರಿಕೆಯಲ್ಲಿ ತೊಡಗಿದ್ದ ಬೋಟ್ ನಲ್ಲಿ ಸಿಲಿಂಡರ್ ಸ್ಪೋಟ ➤ ಮೀನುಗಾರರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಸೀಮೆಎಣ್ಣೆ ಸೇವಿಸಿ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 11. ಸೀಮೆಎಣ್ಣೆ ಸೇವಿಸಿದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತ ಮಗುವನ್ನು ಋತಿಕ್ (1) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಆಟವಾಡುತ್ತಿದ್ದ ಮಗು ಗೊತ್ತಿಲ್ಲದೆ ಬಾಟಲಿಯಲ್ಲಿದ್ದ ಸೀಮೆಎಣ್ಣೆ ಸೇವಿಸಿದ್ದರಿಂದ ಅಸ್ವಸ್ಥವಾಗಿ ಬಿದ್ದಿದ್ದರಿಂದ ತಕ್ಷಣವೇ ಮಗುವನ್ನು ಸ್ಥಳೀಯ ಆಸ್ಪತ್ರೆಯೊಂದಕ್ಕೆ ಕೊಂಡೊಯ್ದು ಬಳಿಕ ಡಾಕ್ಟರ್ ಸಲಹೆಯಂತೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ.

ಕಾಸರಗೋಡು: ಸೀಮೆಎಣ್ಣೆ ಸೇವಿಸಿ ಮಗು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಹೊಳೆಯಲ್ಲಿ ಮುಳುಗಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 11. ಹೊಳೆಯಲ್ಲಿ ಮುಳುಗಿ ಬಾಲಕನೋರ್ವ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ‌ ಕಕ್ಕಿಂಜೆ ಸಮೀಪದ ಚಿಬಿದ್ರೆ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಇನಾಯತುಲ್ಲಾ(೮) ಎಂದು ಗುರುತಿಸಲಾಗಿದೆ. ರವಿವಾರದಂದು ಚಿಕ್ಕಮಗಳೂರಿನಿಂದ ಅಜ್ಜಿ ಮನೆಗೆಂದು ಬಂದಿದ್ದ ಈತ ಉಪಹಾರ ಮುಗಿಸಿ ಮನೆಯವರೊಂದಿಗೆ ಎಂದಿನಂತೆ ಮನೆಯ ಪಕ್ಕದಲ್ಲೇ ಇದ್ದ ನದಿಗೆ ಬಟ್ಟೆ ತೊಳೆಯಲು ಹಾಗೂ ಸ್ನಾನಕ್ಕೆಂದು ತೆರಳಿದ್ದರು. ಈ ವೇಳೆ ನದಿನೀರಿನಲ್ಲಿ ಆಟದಲ್ಲಿ ನಿರತನಾಗಿದ್ದ ಈತ ಎಲ್ಲರ ಕಣ್ಮುಂದೆಯೇ ಆಯತಪ್ಪಿ ನೀರಿನಲ್ಲಿ ಮುಳುಗಿದ್ದಾನೆ. ತಕ್ಷಣ ಬಾಲಕನನ್ನು

ಬೆಳ್ತಂಗಡಿ: ಹೊಳೆಯಲ್ಲಿ ಮುಳುಗಿ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top