ಕ್ರೈಮ್ ನ್ಯೂಸ್

ವಿಟ್ಲ: ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 07. ಮಹಿಳೆಯೋರ್ವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ಬಾಲಕೃಷ್ಣ ಎಂಬವರ ಪತ್ನಿ ವನಿತಾ ಎಂದು ಗುರುತಿಸಲಾಗಿದೆ. ಇವರು ಇತ್ತೀಚೆಗಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದು, ಜೊತೆಗೆ ಮೂರು ವರ್ಷದ ವಿಕಲಚೇತನ ಹೆಣ್ಣು ಮಗುವಿದೆ. ಮತ್ತಿಬ್ಬರು ಹೆಣ್ಣುಮಕ್ಕಳನ್ನು ಕನ್ಯಾನದ ಭಾರತ ಸೇವಾಶ್ರಮಕ್ಕೆ ದಾಖಲಿಸಲಾಗಿದೆ. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದು, ಪತಿ ಪತ್ನಿ ಇಬ್ಬರೂ ಕುಡಿತದ ಚಟ ಹೊಂದಿದ್ದು, ನಿನ್ನೆ ರಾತ್ರಿ ಇಬ್ಬರ […]

ವಿಟ್ಲ: ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನವಜಾತ ಶಿಶುವನ್ನು ಇಯರ್ ಫೋನ್ ವೈರ್ ಬಿಗಿದು ಹತ್ಯೆ..! ➤ ಪಾಪಿ ತಾಯಿಯ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ. 07. ನವಜಾತ ಶಿಶುವೊಂದನ್ನು ಕುತ್ತಿಗೆಗೆ ಇಯರ್ ಫೋನ್ ಬಿಗಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿಯನ್ನು ಬಂಧಿಸಿದ ಘಟನೆ ಕಾಸರಗೋಡಿನ ನೆಲ್ಲಿಕಟ್ಟೆ ಸಂಮೀಪದ ಚೇಡಕ್ಕಲ್ ಎಂಬಲ್ಲಿ ಬೆಳಕಿಗೆ ಬಂದಿದೆ. ಆರೋಪಿ ತಾಯಿಯನ್ನು ಶಹೀನಾ ಎನ್ನಲಾಗಿದೆ. ಡಿ. 16ರಂದು ಈ ಘಟನೆ ನಡೆದಿದ್ದು, ತೀವ್ರ ರಕ್ತಸ್ರಾವದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಗರ್ಭಿಣಿಯಾಗಿರುವ ವಿಷಯ ಮನೆಯವರಿಗೆ ತಿಳಿದಿರಲಿಲ್ಲ. ಮಗುವಿಗೆ ಜನ್ಮ ನೀಡಿದ್ದಾರೆಂದು ವೈದ್ಯರು ತಿಳಿಸಿದ ನಂತರ ಮನೆಯಲ್ಲಿ ಹುಡುಕಾಡಿದಾಗ ಮಂಚದ ಕೆಳಗಡೆ ಮಗುವಿನ

ನವಜಾತ ಶಿಶುವನ್ನು ಇಯರ್ ಫೋನ್ ವೈರ್ ಬಿಗಿದು ಹತ್ಯೆ..! ➤ ಪಾಪಿ ತಾಯಿಯ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೃಷ್ಣ ಮೃಗಗಳ ಮೇಲೆ ಬೀದಿನಾಯಿಗಳ ದಾಳಿ ➤ ನಾಲ್ಕು ಕೃಷ್ಣಮೃಗಗಳು ಮೃತ್ಯು

(ನ್ಯೂಸ್ ಕಡಬ) newskadaba.com ಪುಣೆ, ಜ. 07. ಬೀದಿನಾಯಿಗಳ ದಾಳಿಗೆ ನಾಲ್ಕು ಕೃಷ್ಣಮೃಗಗಳು ಬಲಿಯಾದ ಘಟನೆ ಪುಣೆ ರಾಜೀವ್ ಗಾಂಧಿ ಮೃಗಾಲಯದಲ್ಲಿ ನಡೆದಿದೆ. ಬೀದಿನಾಯಿಗಳು ಕಣ್ತಪ್ಪಿಸಿ ಮೃಗಾಲಯಕ್ಕೆ ಬಂದು ಕೃಷ್ಣಮೃಗಗಳಿರುವ ಆವರಣದೊಳಕ್ಕೆ ಹೊಕ್ಕಿವೆ. ಘಟನೆಯಲ್ಲಿ ನಾಲ್ಕು ಕೃಷ್ಣ ಮೃಗಗಳು ಮೃತಪಟ್ಟು ಒಂದು ಕೃಷ್ಣಮೃಗ ನಾಯಿ ಕಚ್ಚಿದ್ದರಿಂದ ತೀವ್ರತರದ ಗಾಯಗೊಂಡಿದೆ.

ಕೃಷ್ಣ ಮೃಗಗಳ ಮೇಲೆ ಬೀದಿನಾಯಿಗಳ ದಾಳಿ ➤ ನಾಲ್ಕು ಕೃಷ್ಣಮೃಗಗಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ಬದಿ ನಿಂತಿದ್ದ ಲಾರಿಗೆ ಓಮ್ನಿ ಢಿಕ್ಕಿ ➤ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಜ. 07. ನಿಂತಿದ್ದ ಲಾರಿಗೆ ಓಮ್ನಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ತಾಲೂಕಿನ ಕ್ಯಾದಿಗೆರೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ರೇಣುಕಮ್ಮಾ ಶಂಕರ್ ಪುಟ್ಟಲಿಂಗಯ್ಯ ಹಾಗೂ ಶಿವರಾಜ್ ಎಂದು ಗುರುತಿಸಲಾಗಿದೆ. ದಾವಣಗೆರೆಯಿಂದ ಬೆಂಗಳೂರಿಗೆ ಕಡೆಗೆ ತೆರಳುತ್ತಿದ್ದ ಓಮ್ನಿ ಕಾರೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಇನ್ನುಳಿದ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಚಿತ್ರದುರ್ಗ ಠಾಣಾ

ರಸ್ತೆ ಬದಿ ನಿಂತಿದ್ದ ಲಾರಿಗೆ ಓಮ್ನಿ ಢಿಕ್ಕಿ ➤ ಮೂವರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಡರಾತ್ರಿ ಹೆದ್ದಾರಿ ಬದಿ ಮದ್ಯ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್ ➤ ಪೊಲೀಸ್ ಆಯುಕ್ತರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಆರು ಮಂದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ಹೆದ್ದಾರಿ ಬದಿಯಲ್ಲಿ ತಡರಾತ್ರಿ ಪಾರ್ಟಿ ಮಾಡುತ್ತಿದ್ದ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್ ಅವರು ನಾಲ್ಕು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡಿರುವ ಶಶಿ ಕುಮಾರ್ ಅವರು ತಡರಾತ್ರಿ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಡರಾತ್ರಿ ವಿನಾಃಕಾರಣ ಸುತ್ತಾಡುವವರ ವಿರುದ್ದ ಕ್ರಮ ಕೈಗೊಳ್ಳುತ್ತಿದ್ದಾರೆ. ಬುಧವಾರ ತಡರಾತ್ರಿ ಅವರು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ

ತಡರಾತ್ರಿ ಹೆದ್ದಾರಿ ಬದಿ ಮದ್ಯ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್ ➤ ಪೊಲೀಸ್ ಆಯುಕ್ತರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಆರು ಮಂದಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಸಿಡಿಲು ಬಡಿದು ಬೆಂಕಿಗಾಹುತಿಯಾದ ಹೋಟೆಲ್

(ನ್ಯೂಸ್ ಕಡಬ) newskadaba.com ಉಡುಪಿ, ಜ. 07. ಬುಧವಾರದಂದು ಸಂಜೆ ಸುರಿದ ಭಾರೀ ಮಳೆಯ ಮರಿಣಾಮ ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಬ್ರಹ್ಮಾವರದ ಸಪ್ತಮಿ ಎಂಬ ಹೋಟೆಲೊಂದಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದೆ.

ಉಡುಪಿ: ಸಿಡಿಲು ಬಡಿದು ಬೆಂಕಿಗಾಹುತಿಯಾದ ಹೋಟೆಲ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸ್ನೇಹಿತನನ್ನೇ ಕೊಂದ ಯುವಕ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಸ್ನೇಹಿತನನ್ನೇ ಕೊಲೆ ಮಾಡಿ ನೀರಿನ ಸಂಪ್ ನಲ್ಲಿ ಹಾಕಿರುವ ಘಟನೆ ಬೆಂಗಳೂರಿನ ಅಶೋಕ ನಗರದಲ್ಲಿ ನಡೆದಿದೆ.    ಮೃತ ಯುವಕನನ್ನು ಮಿಸ್ಬಾ ಹುಸೇನ್ ಲಷ್ಕರ್ (20) ಎಂದು ಗುರುತಿಸಲಾಗಿದೆ. ಇವರಿಬ್ಬರೂ ರೂಂಮೇಟ್ ಗಳಾಗಿದ್ದು, ಇವರಿಬ್ಬರ ನಡುವೆ ಸಣ್ಣ ಜಗಳವಾಗಿ ಆತನನ್ನು ಕೊಲೆಗೈದಿದ್ದಾನೆ. ಮಿಸ್ಬಾ, ವಿಠಲ್ ಮಲ್ಯ ರಸ್ತೆಯ ಆದರ್ಶ ಡೆವಲಪರ್ಸ್‌ ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಜನವರಿ 2ರಿಂದಲೂ ಈತ ನಾಪತ್ತೆಯಾಗಿದ್ದು, ಕಬ್ಬನ್ ಪಾರ್ಕ್ ಠಾಣೆಯಲ್ಲಿ

ಸ್ನೇಹಿತನನ್ನೇ ಕೊಂದ ಯುವಕ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಕ್ಕಳಿಗೆ ವಿಷಕೊಟ್ಟು ನೇಣಿಗೇರಿದ ದಂಪತಿ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜ. 06. ಮಕ್ಕಳಿಗೆ ವಿಷಕೊಟ್ಟು ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗಾದಿಗನೂರು ಎಂಬಲ್ಲಿ ನಡೆದಿದೆ. ಮೃತರನ್ನು ನಂಜುಂಡೇಶ್ವರ, ಪತ್ನಿ ಪಾರ್ವತಿ ಹಾಗೂ ಮಕ್ಕಳಾದ ಗೌತಮಿ(3), ಸ್ವರೂಪ್ (2) ಎಂದು ಗುರುತಿಸಲಾಗಿದೆ. ನಂಜುಂಡೇಶ್ವರ ಅವರು ಜಿಂದಾಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆನ್ನಲಾಗಿದರೆ. ಡೆತ್ ನೋಟ್ ಬರೆದು ಮಕ್ಕಳಿಗೆ ವಿಷಕೊಟ್ಟು ದಂಪತಿಗಳು ನೇಣು ಬಿಗಿದು ಆತ್ಮಹತ್ಯೆ ಮಾಡಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕ ಗಾದಿಗನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ

ಮಕ್ಕಳಿಗೆ ವಿಷಕೊಟ್ಟು ನೇಣಿಗೇರಿದ ದಂಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೆಜಮಾಡಿ: ಬಾವಿಗೆ ಹಾರಿ ವೃದ್ದೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹೆಜಮಾಡಿ, ಜ. 06. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ದೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿದ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಮೃತ ವೃದ್ದೆಯನ್ನು ಕುಸುಮ ಎಚ್.ರಾವ್ (70) ಎಂದು ಗುರುತಿಸಲಾಗಿದೆ. ಪುತ್ತೂರಿನವರಾದ ಇವರ ಪತಿಯು ಎರಡು ವರ್ಷಗಳ ಹಿಂದೆ ತೀರಿಕೊಂಡಿದ್ದು, ಇವರಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ಎರಡು ತಿಂಗಳ ಹಿಂದೆ ಹೆಜಮಾಡಿಯ ಸಹೋದರನ ಮನೆಗೆ ಬಂದಿದ್ದು ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ ಬಳಲುತ್ತಿದ್ದ ಇವರು ಸೋಮವಾರದಂದು ನಾಪತ್ತೆಯಾಗಿದ್ದರು. ಬಳಿಕ ಹುಡುಕಾಟ ನಡೆಸಿದಾಗ ಶಿವನಗರ ರೋಹಿತ್ ರಾವ್

ಹೆಜಮಾಡಿ: ಬಾವಿಗೆ ಹಾರಿ ವೃದ್ದೆ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಯ ಗುಂಪು ಹತ್ಯಾಚಾರ..! ➤ ಅರ್ಚಕ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ ಜ. 06. ಮಹಿಳೆಯೋರ್ವರನ್ನುಸಾಮೂಹಿಕ ಅತ್ಯಾಚಾರ ನಡೆದ ಘಟನೆ ಉತ್ತರ ಪ್ರದೇಶದ ಬಾದೌನ್ ಜಿಲ್ಲೆಯ ಉಘೈತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಧ್ಯವಯಸ್ಕ ಮಹಿಳೆಯೋರ್ವರು ದೇವಸ್ಥಾನಕ್ಕೆ ಹೋಗಿದ್ದು, ಬಳಿಕ ಹಿಂದಿರುಗಲಿಲ್ಲ. ಸ್ಥಳೀಯರ ಪ್ರಕಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ರಕ್ತಸ್ರಾವವಾಗುತ್ತಿದ್ದ ಮಹಿಳೆಯನ್ನು ಬಿಟ್ಟು ಹೋಗಿರುವುದನ್ನು ಗಮನಿಸಿದ್ದಾರೆ. ಪೊಲೀಸರು ಇದನ್ನು ಅಪಘಾತದ ಪ್ರಕರಣ ಎಂದು ದಾಖಲಿಸಲು ಪ್ರಯತ್ನಿಸಿದ್ದು, ನಂತರ ನಡೆಸಿದ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ್ದು, ವರದಿಯ ಪ್ರಕಾರ ಮಹಿಳೆಯ

ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಯ ಗುಂಪು ಹತ್ಯಾಚಾರ..! ➤ ಅರ್ಚಕ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top