ಕ್ರೈಮ್ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು

(ನ್ಯೂಸ್ ಕಡಬ) newskadaba,ಮಂಗಳೂರು ಜ.04:ನಗರ ನೂತನ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿರುವವರಿಗೆ ಬಿಸಿ ಮುಟ್ಟಿಸಿ ವಶಕ್ಕೆ ಪಡೆದುಕೊಳ್ಳುವ ಮೂಲಕ ಅವರ ನಶೆ ಇಳಿಸುವ ಕಾರ್ಯ ಕೈಗೆತ್ತಿಕೊಂಡಿದ್ದಾರೆ. ನಿನ್ನೆ ರಾತ್ರಿ ನಗರದ ನೆಹರೂ ಮೈದಾನದ ಬಳಿ ನಡೆದುಕೊಂಡು ಹೋಗುತ್ತಿರುವಾಗಲೇ ಮದ್ಯಪಾನ ಮಾಡುತ್ತಿದ್ದ ಯುವಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಪಾಂಡೇಶ್ವರ ಹಾಗೂ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಹಾಗೂ ಧೂಮಪಾನ ಮಾಡುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿರುವ […]

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು Read More »

ಕರಾವಳಿ, ಕ್ರೈಮ್ ನ್ಯೂಸ್

ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನ ಕೊಂದ ಯುವತಿ

(ನ್ಯೂಸ್ ಕಡಬ) newskadaba.com ಚೆನ್ನೈ, ಜ.04. ಅತ್ಯಾಚಾರಕ್ಕೆ ಯತ್ನಿಸಿದ ದುಷ್ಕರ್ಮಿಯನ್ನು ಚಾಕುವಿನಿಂದ ಇರಿದು ಕೊಂದ ಘಟನೆ ತಮಿಲಕುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ. ಯುವತಿಯು ಶೋಲಾವರಂನಲ್ಲಿನ ಚಿಕ್ಕಮ್ಮನ ಮನೆಗೆ ತೆರಳಿದ್ದ ವೇಳೆ ಅಲ್ಲಿದ್ದ ಅಜಿತ್ ಎಂಬಾತನು ಆಕೆಯ ಅತ್ಯಾಚರಾಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈತನ ಕೃತ್ಯಕ್ಕೆ ಆಕೆ ವಿರೋಧಿಸಿದಾಗ ಚಾಕು ತೋರಿಸಿ ಬೆದರಿಕೆ ಹಾಕಿದ್ದು, ಈ ಸಂದರ್ಭ ಆತನಿಂದ ಚಾಕುವನ್ನು ಕಸಿದು ಆತನ ಕುತ್ತಿಗೆಗೆ ಇರಿದಿದ್ದಾಳೆ. ಪರಿಣಾಮ ಅಜಿತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನ ಕೊಂದ ಯುವತಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಬಸ್ ಹಾಗೂ ಓಮ್ನಿ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 04. ಓಮ್ನಿ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಧರ್ಮಸ್ಥಳ ಸಮೀಪದ ಕನ್ಯಾನದಲ್ಲಿ ನಡೆದಿದೆ. ಬೇಕರಿ ಲೈನ್ ಸೇಲ್ ಮಾಡುವ ಓಮ್ನಿ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಚಾಲಕನಿಗೆ ಗಂಭೀರ ಗಾಯಗೊಂಡಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳ್ತಂಗಡಿ: ಬಸ್ ಹಾಗೂ ಓಮ್ನಿ ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ➤ ಸುಟ್ಟು ಕರಕಲಾದ ಮೃತದೇಹ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ.04. ಯುವತಿಯೋರ್ವಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರದಂದು ನೆಲ್ಯಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ನೆಲ್ಯಾಡಿಯ ಉದ್ಯಮಿ ಬೇಬಿ ಎಂಬವರ ಪುತ್ರಿ ನವ್ಯಾ ನಯನ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿ ಡೆತ್ ನೋಟ್ ಬರೆದಿಟ್ಟು ತನ್ನ ಬೆಡ್ ರೂಂನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹವು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ

ನೆಲ್ಯಾಡಿ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ➤ ಸುಟ್ಟು ಕರಕಲಾದ ಮೃತದೇಹ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಫಲ್ಗುಣಿ ನದಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 03, ನವಜಾತ ಶಿಶುವಿನ ಮೃತದೇಹವೊಂದು ಫಲ್ಗುಣಿ ನದಿಯಲ್ಲಿ ತೇಲುತ್ತಿದ್ದುದನ್ನು ಕಂಡ ಮೀನುಗಾರರು ಈ ಕುರಿತು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೀನುಗಾರಿಕೆಯಿಂದ ಮರಳುತ್ತಿದ್ದ ಮೀನುಗಾರರಿಗೆ ನದಿಯು ಸಮುದ್ರವನ್ನು ಸೇರುವ ತೋಟ ಬೆಂಗ್ರೆಯಲ್ಲಿ ಮಗುವಿನ ಮೃತದೇಹ ಕಂಡುಬಂದಿದ್ದು, ಮೃತದೇಹವನ್ನು ಮೇಲಕ್ಕೆತ್ತಿದ ಮೀನುಗಾರರು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಫಲ್ಗುಣಿ ನದಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮರ್ಧಾಳ: ಚಲಿಸುತ್ತಿದ್ದ ಡಿಯೋ ವಾಹನದ ಹಿಂಬದಿ ಚಕ್ರ ಸ್ಫೋಟ ➤ ಸವಾರ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಜ.03. ಚಲಿಸುತ್ತಿದ್ದ ಹೋಂಡಾ ಡಿಯೋ ವಾಹನದ ಹಿಂಬದಿ ಚಕ್ರ ಸ್ಫೋಟಗೊಂಡ ಪರಿಣಾಮ ಡಿಯೋ ರಸ್ತೆಗೆಸೆಯಲ್ಪಟ್ಟು ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಗಾಯಾಳುವನ್ನು ಕಡಬ ತಾಲೂಕಿನ ಕಳಾರ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಅಶ್ರಫ್ ಹೋಂಡಾ ಡಿಯೋ ವಾಹನದಲ್ಲಿ ಕಡಬದಿಂದ ಮರ್ಧಾಳ ಕಡೆಗೆ ತೆಳುತ್ತಿದ್ದ ವೇಳೆ ವಾಹನದ ಹಿಂಬದಿ ಚಕ್ರ ಸ್ಫೋಟಗೊಂಡಿದೆ. ಘಟನೆಯಲ್ಲಿ

ಮರ್ಧಾಳ: ಚಲಿಸುತ್ತಿದ್ದ ಡಿಯೋ ವಾಹನದ ಹಿಂಬದಿ ಚಕ್ರ ಸ್ಫೋಟ ➤ ಸವಾರ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬವನ್ನು ತಲ್ಲಣಗೊಳಿಸಿದ್ದ ಸ್ಟೇಟಸ್ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಜ.03. ಜ್ಯೂಸ್ ಕುಡಿಯಲು ಬಂದ‌ ಹುಡುಗಿಯ ಫೋಟೋ ತೆಗೆದು ವಾಟ್ಸ್ಅಪ್ ಸ್ಟೇಟಸ್ ಹಾಕಿದ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಗೆ ಜಾಮೀನು ಮಂಜೂರಾಗಿದೆ. ಕಡಬವನ್ನು ತಲ್ಲಣಗೊಳಿಸಿದ್ದ ಈ ಪ್ರಕರಣದಲ್ಲಿ ಅಂಗಡಿ ಮಾಲಕನಿಗೆ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಯಫ್.ಸಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಆರೋಪಿಯ ಪರವಾಗಿ ಕಡಬದ ವಕೀಲ ಮುಸ್ತಾಫಾ ಎಂ. ವಾದಿಸಿದ್ದರು.

ಕಡಬವನ್ನು ತಲ್ಲಣಗೊಳಿಸಿದ್ದ ಸ್ಟೇಟಸ್ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ ಕಾಮಪಿಶಾಚಿ

(ನ್ಯೂಸ್ ಕಡಬ) newskadaba.com ಮುಂಬೈ, ಜ. 03. ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮುಂಬೈ ಸಮೀಪದ ವಡಾಲದಲ್ಲಿ ನಡೆದಿದೆ. ಪ್ರಿಯಕರನನ್ನು ಭೇಟಿ ಮಾಡಲೆಂದು ಯುವತಿಯೋರ್ವಳು ಮುಂಜಾನೆ ನಾಲ್ಕು ಗಂಟೆಯ ರೈಲಿನಲ್ಲಿ ಸಂಚರಿಸುತ್ತಿದ್ದ ವೇಳೆ ಮಹಿಳೆಯರ ಬೋಗಿಯಲ್ಲಿ ಒಬ್ಬಳೇ ಇರುವುದನ್ನು ಕಂಡ ಕಿರಾತಕ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದರಿಂದ ತಪ್ಪಿಸಿಕೊಳ್ಳಲು ಯುವತಿಯು ಪ್ರಯತ್ನಿಸಿದಾಗ ಸಿಟ್ಟಿಗೆದ್ದ ಕಿರಾತಕ ಆಕೆಯನ್ನು ರೈಲಿನಿಂದ ಹೊರದಬ್ಬಿ ಪರಾರಿಯಾಗಿದ್ದಾನೆ. ಯುವತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ದುಷ್ಕರ್ಮಿಯ ಬಂದನಕ್ಕೆ ತನಿಖೆ ಮುಂದುವರಿದಿದೆ.

ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ ಕಾಮಪಿಶಾಚಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಮದುವೆ ದಿಬ್ಬಣಕ್ಕೆ ಹೊರಟ ಬಸ್ ಪಲ್ಟಿ ➤ ಐವರು ಮೃತ್ಯು, 20 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 03. ಪುತ್ತೂರು ಕಡೆಯಿಂದ ಆಲೆಟ್ಟಿ ಮೂಲಕ ಪಾಣತ್ತೂರು ಕಡೆಗೆ ಮದುವೆಗೆಂದು ಹೋಗುತ್ತಿದ್ದ ದಿಬ್ಬಣದ ಖಾಸಗಿ ಬಸ್ಸೊಂದು ಕೇರಳದ ಪಾನತ್ತೂರು ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಪಾಣತ್ತೂರು ಬಳಿಯ ಗಡಿಗುಡ್ಡೆ ಪೆರಿಯಾರಂ ಎಂಬಲ್ಲಿಗೆ ತಲುಪುತ್ತಿದ್ದಂತೆಯೇ  ಮನೆಯೊಂದರ ಮೇಲೆ ಬಸ್ ಬಿದ್ದು ಈ ದುರಂತ ಸಂಭವಿಸಿದೆನ್ನಲಾಗಿದೆ. ಇದರಲ್ಲಿ ಸುಮಾರು 60 ಮಂದಿ ಪ್ರಯಾಣಿಸುತ್ತಿದ್ದು, ದುರಂತದಲ್ಲಿ ಒಂದು ಮಗು ಸೇರಿದಂತೆ ಐವರು ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿದೆ. ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾಂಞಂಗಾಡ್

ಸುಳ್ಯ: ಮದುವೆ ದಿಬ್ಬಣಕ್ಕೆ ಹೊರಟ ಬಸ್ ಪಲ್ಟಿ ➤ ಐವರು ಮೃತ್ಯು, 20 ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಂತರ್ಜಾತಿ ವಿವಾಹವಾದ ಯುವಕನ ಕೊಲೆ

(ನ್ಯೂಸ್ ಕಡಬ) newskadaba.com ಚಂಡೀಗಢ, ಜ. 03. ಅಂತರ್ ಜಾತಿ ವಿವಾಹವಾದ ಯುವಕನೋರ್ವನನ್ನು, ಉಗ್ರರು ಇರಿದು ಹತ್ಯೆ ಮಾಡಿದ ಘಟನೆ ಹರ್ಯಾಣದಲ್ಲಿ ನಡೆದಿದೆ. ಹತ್ಯೆಯಾದವನನ್ನು ನೀರಜ್ ಎಂದು ಗುರುತಿಸಲಾಗಿದೆ. ನೀರಜ್ ಮದುವೆಯಾದ ಹುಡುಗಿಯ ಸಹೋದರರೇ ಈ ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ. ಆರೋಪಿಗಳು ಯುವಕನಿಗೆ ಇರಿದು ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಅಂತರ್ಜಾತಿ ವಿವಾಹವಾದ ಯುವಕನ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top