ಕ್ರೈಮ್ ನ್ಯೂಸ್

ಬೈಕ್ ಶೋರೂಂ ನಲ್ಲಿ ಬೆಂಕಿ ಅವಘಡ…!

(ನ್ಯೂಸ್ ಕಡಬ) newskadaba.com ದೆಹಲಿ, ಜ. 01. ಹಾರ್ಲೆ ಡೇವಿಡ್ ಸನ್ ಬೈಕ್ ಶೋರೂಂ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ದೆಹಲಿಯ ಮೋತಿ ನಗರದಲ್ಲಿ ನಡೆದಿದೆ. ಮುಂಜಾನೆ ಹೊತ್ತಿಗೆ ಆಗ್ನಿ ಆವರಿಸಿದ್ದು, ಘಟನೆಯಲ್ಲಿ ಅಪಾರ ಹಾನಿಯುಂಟಾಗಿದೆ. 25 ಅಗ್ನಿ ಶಾಮಕ ವಾಹನಗಳ ಸತತ ಪರಿಶ್ರಮದಿಂದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ.

ಬೈಕ್ ಶೋರೂಂ ನಲ್ಲಿ ಬೆಂಕಿ ಅವಘಡ…! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಸ್ಕೂಟರ್- ಲಾರಿ ನಡುವೆ ಡಿಕ್ಕಿ ➤ ಸ್ಕೂಟರ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಜ. 02. ಸ್ಕೂಟರ್‌‌ ಹಾಗೂ ಮೀನಿನ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಲ್ಪೆಯ ತೊಟ್ಟಂ ಎಂಬಲ್ಲಿ ನಡೆದಿದೆ.   ಮೃತಪಟ್ಟವರನ್ನು ಹೂಡೆ ನಿವಾಸಿ ಐಸಾಕ್‌‌ ಎಂದು ಗುರುತಿಸಲಾಗಿದೆ. ಹೂಡೆ ಕಡೆಯಿಂದ ಮಲ್ಪೆ ಕಡೆಗೆ ಬರುತ್ತಿದ್ದ ಸ್ಕೂಟರಿಗೆ ಎದುರಿನಿಂದ ಬಂದ ಮೀನಿನ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಗಂಭೀರವಾಗಿ ಗಾಯಗೊಂಡ ಸ್ಕೂಟರ್‌ ಸವಾರ ಐಸಾಕ್‌ ಎಂಬವರನ್ನು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮಾರ್ಗದ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಉಡುಪಿ: ಸ್ಕೂಟರ್- ಲಾರಿ ನಡುವೆ ಡಿಕ್ಕಿ ➤ ಸ್ಕೂಟರ್ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಫೇಸ್ ಕ್ರೀಂ ಸೇವಿಸಿ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಜ. 01. ಮುಖಕ್ಕೆ ಹಚ್ಚುವ ಫೇಸ್ ಕ್ರೀಂ ತಿಂದು ಮಗುವೊಂದು ಮೃತಪಟ್ಟ ಘಟನೆ ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಬೆಳಗನಹಳ್ಳಿಯಲ್ಲಿ ನಡೆದಿದೆ. ಮಹೇಶ್ ಹಾಗೂ ಕನ್ಯಾ ದಂಪತಿಯ ಪುತ್ರ ಮನ್ವಿಷ್ ಮೃತಪಟ್ಟ ಮಗು. ಈತ ಸಂಜೆ ವೇಳೆ ಮನೆಯಲ್ಲಿ ಆಟವಾಡುತ್ತಿದ್ದಾಗ ಮುಖಕ್ಕೆ ಹಚ್ಚುವ ಕ್ರೀಂ ತಿಂದಿದ್ದು, ಪೋಷಕರು ಇದನ್ನು ಗಮನಿಸಿರಲಿಲ್ಲ. ರಾತ್ರಿ ಹತ್ತು ಗಂಟೆಯ ಸಮಯ ವಾಂತಿ ಮಾಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ.

ಫೇಸ್ ಕ್ರೀಂ ಸೇವಿಸಿ ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹೆಬ್ರಿ, ಜ. 01. ಇಲ್ಲಿನ ಬಡಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಖಾಸಗಿ ಕಾಲೇಜಿನ ಉಪನ್ಯಾಸಕರೋರ್ವರು ಡೆತ್ ನೋಟ್ ಬರೆದಿಟ್ಟು ಮನೆಯ ಕೊಠಡಿಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಹೆಬ್ರಿಯಲ್ಲಿ ನಡೆದಿದೆ.   ಐದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಇವರು ಪತ್ನಿಯೊಂದಿಗೆ ಹೆಬ್ರಿಯ ಬಾಡಿಗೆ ಮನೆಯೊಂದರಲ್ಲಿ ಅನ್ಯೋನ್ಯ ವಾಗಿ ವಾಸಿಸುತ್ತಿದ್ದರು. ಇವರ ಪತ್ನಿಯು ಹೆಬ್ರಿಯ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ದುಡಿಯುತ್ತಿದ್ದು, ಇವರು ಮೂಡಬಿದಿರೆಯಲ್ಲಿ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ

ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 01. ಗುಪ್ತಾಂಗದಲ್ಲಿ ಅಡಗಿಸಿಟ್ಟು ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು 1.26 ಕೆಜಿ ಚಿನ್ನ ಸಹಿತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆರೋಪಿಗಳನ್ನು ಮಹಮ್ಮದ್ ಜಹೀರ್ ಹಾಗೂ ವಾಸಿಂ ಮರ್ಜನ್ ಎಂದು ಗುರುತಿಸಲಾಗಿದೆ. ಇವರು ಡಿ. 30ರಂದು ಮಂಗಳೂರಿಗೆ ಆಗಮಿಸಿದ್ದು, ಈ ವೇಳೆ ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ.

ಮಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಸ್ತೆಯಲ್ಲಿ ‘ಹ್ಯಾಪಿ ನ್ಯೂ ಇಯರ್’ ಬರೆಯುತ್ತಿದ್ದ ವೇಳೆ ಢಿಕ್ಕಿ ಹೊಡೆದ ಕಾರು ➤ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 01. ರಸ್ತೆಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು ಬರೆಯುತ್ತಿದ್ದ ವೇಳೆ ಎದುರಿನಿಂದ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಮೃತಪಟ್ಟ ಘಟನೆ ತಾಲೂಕಿನ ಮಿಯ್ಯಾರಿನಲ್ಲಿ ನಡೆದಿದೆ. ಕಾಜರಬೈಲು ರಾ.ಹೆದ್ದಾರಿಯಲ್ಲಿ ಮುದ್ದೇಬಿಹಾಳ ಮೂಲದ ಶರಣು, ಸಿದ್ದು, ತೌಸೀಫ್ ಹಾಗೂ ಬಸವರಾಜು ಎಂಬವರು ಬರೆಯುತ್ತಿದ್ದ ವೇಳೆ ಬಂದ ಕಾರೊಂದು ಢಿಕ್ಕಿ ಹೊಡೆದಿದ್ದು, ಇವರ ಪೈಕಿ ಶರಣು ಹಾಗೂ ಸಿದ್ದು ಮೃತಪಟ್ಟಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಸ್ತೆಯಲ್ಲಿ ‘ಹ್ಯಾಪಿ ನ್ಯೂ ಇಯರ್’ ಬರೆಯುತ್ತಿದ್ದ ವೇಳೆ ಢಿಕ್ಕಿ ಹೊಡೆದ ಕಾರು ➤ ಇಬ್ಬರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಎರಡು ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತ ಯುವಕನನ್ನು ಸಿಪಿಸಿ ಕಾಂಪೌಂಡ್ ನಿವಾಸಿ ಹಸನ್ ತೈಶೀರ್ (18) ಎಂದು ಗುರುತಿಸಲಾಗಿದೆ. ಕಾಲೇಜು ವಿದ್ಯಾರ್ಥಿಯಾಗಿದ್ದ ಈತ ಬೈಕ್ ನಲ್ಲಿ‌ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಈ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿದ್ದು ಸಿಕ್ಕಿದ ಚಿನ್ನವನ್ನು ಹಿಂತಿರುಗಿಸಿ ಮಾನವೀಯತೆ ➤ ಕಡಬ ಠಾಣಾ ಪೊಲೀಸ್ ಕಾನ್ಸ್ಟೇಬಲ್ ಗೋವಿಂದರಾಜುಗೆ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com  ಕಡಬ, ಡಿ.28. ಗ್ರಾಮ ಪಂಚಾಯತ್ ಚುನಾವಣೆಯ ನಿಮಿತ್ತ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೋರ್ವರಿಗೆ ಸಿಕ್ಕಿದ ಎರಡು ಚಿನ್ನದ ಉಂಗುರಗಳನ್ನು ಪ್ರಾಮಾಣಿಕವಾಗಿ ವಾರಸುದಾರರಿಗೆ ಹಿಂತಿರುಗಿಸಿದ ಘಟನೆ ಕುಂತೂರಿನಲ್ಲಿ ನಡೆದಿದೆ. ಕುಂತೂರು ಹಿರಿಯ ಪ್ರಾಥಮಿಕ ಶಾಲೆಯ ಕುಂತೂರು ಪದವು ಎಂಬಲ್ಲಿ ಕರ್ತವ್ಯದಲ್ಲಿದ್ದ ಕಡಬ ಠಾಣಾ ಪೊಲೀಸ್ ಕಾನ್ಸ್ಟೇಬಲ್ ಗೋವಿಂದರಾಜುರವರಿಗೆ ಶಾಲಾ ಆವರಣದಲ್ಲಿ ಎರಡು ಚಿನ್ನದ ಉಂಗುರಗಳು ಸಿಕ್ಕಿದ್ದು, ಉಂಗುರಗಳನ್ನು ಕಡಬ ಠಾಣೆಗೆ ತಂದು ಒಪ್ಪಿಸಿದ್ದರು. ಇದು ಕುಂತೂರಿನ ಬಾಬುಗೌಡ ಎಂಬವರ ಪುತ್ರ ಸನತ್ ಎಂಬವರಿಗೆ ಸೇರಿದ್ದೆಂದು ಖಚಿತ

ಬಿದ್ದು ಸಿಕ್ಕಿದ ಚಿನ್ನವನ್ನು ಹಿಂತಿರುಗಿಸಿ ಮಾನವೀಯತೆ ➤ ಕಡಬ ಠಾಣಾ ಪೊಲೀಸ್ ಕಾನ್ಸ್ಟೇಬಲ್ ಗೋವಿಂದರಾಜುಗೆ ವ್ಯಾಪಕ ಪ್ರಶಂಸೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ :ಚಿಕ್ಕಪ್ಪನ‌ ಮಗಳನ್ನೇ ಅತ್ಯಾಚಾರಗೈದ ಪ್ರಕರಣ ➤ ಬಿಜೆಪಿ ಬೆಂಬಲಿತ ಗ್ರಾಪಂ ಅಭ್ಯರ್ಥಿ ಅರೆಷ್ಟ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಡಿ.27: ತನ್ನ ಚಿಕ್ಕಪ್ಪನ ಅಪ್ರಾಪ್ತ ಮಗಳನ್ನು ಅತ್ಯಾಚಾರ ಎಸಗಿದ ಆರೋಪದಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿಯೋರ್ವನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಲ್ಮಡ್ಕ ಗ್ರಾಮದ ವಾರ್ಡ್–1ರಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹುಕ್ರಪ್ಪ ಯಾನೆ ನಾರಾಯಣ ಪುಚ್ಚಮ ಎಂದು ಪೊಲೀಸ್ ಮೂಲಗಳು ಮಾಹಿತಿ‌ ನೀಡಿದೆ.ಆರೋಪಿ ತನ್ನ ಚಿಕ್ಕಪ್ಪನ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದು, ದೂರಿನನ್ವಯ ಪೊಲೀಸರು ಆರೋಪಿಯನ್ನು ಚುನಾವಣೆಯ

ಬೆಳ್ಳಾರೆ :ಚಿಕ್ಕಪ್ಪನ‌ ಮಗಳನ್ನೇ ಅತ್ಯಾಚಾರಗೈದ ಪ್ರಕರಣ ➤ ಬಿಜೆಪಿ ಬೆಂಬಲಿತ ಗ್ರಾಪಂ ಅಭ್ಯರ್ಥಿ ಅರೆಷ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕುತ್ತಾರು :ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಅಪಘಾತ ನಡೆಸಿ, ಚೂರಿಯಿಂದ ಇರಿದ ದುಷ್ಕರ್ಮಿಗಳು.?!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಇನ್ನೊಂದು ಬೈಕಿನಲ್ಲಿ ಬಂದ ತಂಡವೊಂದು ಅಪಘಾತ ನಡೆಸಿ, ಇಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿ ಎಂಬಲ್ಲಿ ಕಳೆದ ದಿನ ತಡರಾತ್ರಿ ಸಂಭವಿಸಿದೆ.   ಸೇವಂತಿಗುಡ್ಡೆ ನಿವಾಸಿ ಆದಿತ್ಯ (23) ಮತ್ತು ಪಂಡಿತ್ ಹೌಸ್ ನಿವಾಸಿ ಪವನ್ (27) ಚೂರಿ ಇರಿತಕ್ಕೊಳಗಾದವರು .ಆದಿತ್ಯ ಮತ್ತು ಪವನ್ ಅವರು ಕ್ಯಾಟ್ರಿಂಗ್ ನಲ್ಲಿ ಕೆಲಸಕ್ಕಿದ್ದ ಸ್ನೇಹಿತನನ್ನು ಕರೆ ತರಲು ಕುತ್ತಾರ್ ನಿಂದ

ಕುತ್ತಾರು :ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಅಪಘಾತ ನಡೆಸಿ, ಚೂರಿಯಿಂದ ಇರಿದ ದುಷ್ಕರ್ಮಿಗಳು.?! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top