ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಓಮ್ನಿ ಕಾರು ಬೆಂಕಿಗಾಹುತಿ…!

(ನ್ಯೂಸ್ ಕಡಬ) newskadaba.com ಅ.23. ಗ್ಯಾರೇಜ್ ನಲ್ಲಿ ರಿಪೇರಿಗೆಂದು ಇರಿಸಿದ್ದ ಓಮ್ನಿ ಕಾರನ್ನು ಮೆಕ್ಯಾನಿಕ್ ಟೆಸ್ಟ್ ಡ್ರೈವ್ ಮಾಡಲು ತೆಗೆದುಕೊಂಡು ಹೋಗುವ ವೇಳೆ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಂಗಳವಾರದಂದು ರಾತ್ರಿ ನಡೆದಿದೆ. ಓಮಿನಿ ಕಾರನ್ನು ಲಾಯಿಲದ ಗ್ಯಾರೇಜಿನ ಮೆಕ್ಯಾನಿಕ್ ಓರ್ವರು ಚಲಾಯಿಸಿಕೊಂಡು ಹೋಗುವಾಗ ಅಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಈ ವೇಳೆ ಓಮಿನಿ ಕಾರು ಚರಂಡಿಗೆ ಬಿದ್ದಿದೆ. ಕಾರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಾಳೂರು ನಿವಾಸಿ ಗೀತಾ ಎಂಬವರಿಗೆ ಸೇರಿದ್ದು ಎನ್ನಲಾಗಿದ್ದು, ರಿಪೇರಿಗಾಗಿ ಬೆಳ್ತಂಗಡಿಯ […]

ಚಲಿಸುತ್ತಿದ್ದ ಓಮ್ನಿ ಕಾರು ಬೆಂಕಿಗಾಹುತಿ…! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..!

(ನ್ಯೂಸ್ ಕಡಬ) newskadaba.com ಅ.23. ನಕಲಿ ಆಧಾರ್ ಕಾರ್ಡ್ ಬಳಸಿ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಜಿಲ್ಲಾ ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಬಂಧಿಸಿರುವ ಕುರಿತು ಶಿವಮೊಗ್ಗದಲ್ಲಿ ನಡೆದಿದೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ ಮತ್ತು ಅಕ್ಟಲ್ ಅಕ್ಕು ಎಂದು ಗುರುತಿಸಲಾಗಿದೆ. ಇವರು ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್‌ ಎಂಬವರ ಮನೆಯಲ್ಲಿ ವಾಸವಿದ್ದು, ಕಟ್ಟಡದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಪಶ್ಚಿಮ ಬಂಗಾಳದಲ್ಲಿ

ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ವಿಜಯಪುರ, ಅ.23. ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರ ಹೂರವಲಯದ ಇಲ್ಲಿನ ಎ ಪಿ ಜೆ ಕಲಾಂ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ನಿಖಿತಾ ಅರವಿಂದ ಬಿರಾದಾರ (21) ಎಂದು ಗುರುತಿಸಲಾಗಿದೆ. ಎಪಿಜೆ ಕಲಾಂ ರಸ್ತೆಯಲ್ಲಿರುವ ಫಿಶ್ ಟನಲ್ ಎಕ್ಸ್ಪೋದಲ್ಲಿ ಅ.20ರಂದು ಈ ಅವಘಡ ಸಂಭವಿಸಿದೆ. ಅಂದು ಸಂಜೆ ನಿಖಿತಾ ಇನ್ನಿಬ್ಬರು ಗೆಳೆಯತಿಯರ ಜೊತೆ ತಲೆ ಕೆಳಗಾಗಿ ತೂಗಾಡಿಸುವ ರೇಂಜರ್ ಸ್ವಿಂಗ್ ತೊಟ್ಟಿಲಿನಲ್ಲಿ ಕುಳಿತಿದ್ದರು. ತೊಟ್ಟಿಲು ತಲೆ ಕೆಳಗಾಗಿ

ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..!

(ನ್ಯೂಸ್ ಕಡಬ) newskadaba.com ಅ.23. ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಸುರತ್ಕಲ್  ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ನೀರುಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ನಿನ್ನೆ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಟ್ಟಡ ಕುಸಿತ ಅವಘಡ: ಮೃತರ ಸಂಖ್ಯೆ 5ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಕಮ್ಮನಹಳ್ಳಿ ಬಳಿಯ ಬಾಬು ಸಾಹೇಬ್ ಪಾಳ್ಯದಲ್ಲಿ ಮಂಗಳವಾರ ಕುಸಿತ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಅವಘಡದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇದುವರೆಗೂ ಐದು ಕಾರ್ಮಿಕರ ಮೃತದೇಹ ಹೊರಕ್ಕೆ ತೆಗೆಯಲಾಗಿದೆ. ಹರ್ಮನ್(26), ತ್ರಿಪಾಲ್(35) ಮತ್ತು ಮುಹಮ್ಮದ್ ಸಾಹಿಲ್(19) ಎಂಬವರ ಮೃತದೇಹಗಳನ್ನು ಕಟ್ಟಡಗಳ ಅವಶೇಷಗಳಡಿಯಿಂದ ರಕ್ಷಣಾ ತಂಡ ಹೊರತೆಗೆದಿದೆ. ಸತ್ಯರಾಜು ಮತ್ತು ಶಂಕರ್ ಎಂಬರ ಮೃತದೇಹಗಳನ್ನು ಮಂಗಳವಾರ ಹೊರತೆಗೆಯಲಾಗಿತ್ತು. ಅಗ್ನಿಶಾಮಕ ದಳ ಹಾಗೂ ಎನ್ಡಿಆರ್ಎಫ್ ಸಿಬ್ಬಂದಿ ರಾತ್ರಿ ಇಡೀ

ಕಟ್ಟಡ ಕುಸಿತ ಅವಘಡ: ಮೃತರ ಸಂಖ್ಯೆ 5ಕ್ಕೆ ಏರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಗಾಂಜಾ ಮಾರಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.23. ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉಳ್ಳಾಲ ಓಲಪೇಟೆಯ ಟಿ.ಸಿ.ರಸ್ತೆ ನಿವಾಸಿ ಸಲೀಂ ಅಲಿಯಾಸ್ ಮಹಮ್ಮದ್ ಸಲೀಂ (38) ಎಂದು ಗುರುತಿಸಲಾಗಿದೆ. ಆರೋಪಿಯು 2019ರಲ್ಲಿ ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ನಾಲ್ಕು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಸಲೀಂ ಬಂಧನದಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

ಗಾಂಜಾ ಮಾರಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಬಕಾರಿ ಕಾರ್ಯಾಚರಣೆ: ಮದ್ಯ, ಗಾಂಜಾ ವಶ

(ನ್ಯೂಸ್ ಕಡಬ) newskadaba.com ಅ.23. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 5.051 ಗಾಂಜಾ ಹಾಗೂ ಒಟ್ಟು 9.460 ಗ್ರಾಂ MDMA (Methylene dioxy- Methyl amphetamine) ಜಪ್ತಿ ಮಾಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅಕ್ಟೋಬರ್ 18ರಂದು ಕೆ.ಎಸ್.ಬಿ.ಸಿ.ಎಲ್ ಡಿಪೊ-2, ಬೈಕಂಪಾಡಿ, ಇಲ್ಲಿಗೆ ಹಾಸನದಿಂದ ಒಟ್ಟು 1100 ಪೆಟ್ಟಿಗೆ (10,680 ಲೀ) ಬಿಯರ್ ಅವಧಿ ಮೀರಿದ ರಹದಾರಿ

ಅಬಕಾರಿ ಕಾರ್ಯಾಚರಣೆ: ಮದ್ಯ, ಗಾಂಜಾ ವಶ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಬಕಾರಿ ದಾಳಿ- ಕಳ್ಳಬಟ್ಟಿ ಸಾರಾಯಿ ವಶಕ್ಕೆ

(ನ್ಯೂಸ್ ಕಡಬ) newskadaba.com ಅ.23. ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಕಳ್ಳಬಟ್ಟಿ ಸಾರಾಯಿಯನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಕನ್ಯಾಡಿ ಗ್ರಾಮದ ಗುರಿಪಳ್ಳ ಎಂಬಲ್ಲಿ ನಡೆದಿದೆ. ದಾಳಿಯ ವೇಳೆ ಪ್ರವೀಣ್ ರೋಡ್ರಿಗಸ್ ಎಂಬಾತ ಮನೆಯಲ್ಲಿ ಅಕ್ರಮವಾಗಿ ತಯಾರಿಸಿ ಪ್ಲಾಸ್ಟಿಕ್‍ ಕ್ಯಾನ್ ನಲ್ಲಿ ಸಂಗ್ರಹಿಸಿಟ್ಟಿದ್ದ 18.75 ಲೀಟರ್ ಕಳ್ಳಬಟ್ಟಿ ಸಾರಾಯಿ ಹಾಗೂ ಕಳ್ಳಬಟ್ಟಿ ತಯಾರಿಸಲು ಪ್ಲಾಸ್ಟಿಕ್ ಡ್ರಮ್ ನಲ್ಲಿ ಶೇಖರಿಸಿ ಇಟ್ಟಿರುವ 37 ಲೀಟರ್ ವಾಶ್ ಅನ್ನು ಮತ್ತು ಕಳ್ಳಬಟ್ಟಿ

ಅಬಕಾರಿ ದಾಳಿ- ಕಳ್ಳಬಟ್ಟಿ ಸಾರಾಯಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ 5 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಅ.23. ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ ಐವರು ಮೃತಪಟ್ಟಿರುವ ಶಂಕೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಗ್ರಾಮದ ಸುರೇಶ್(30), ಮಹಾಂತೇಶ್(45)ಗೌರಮ್ಮ(60), ಹನುಮಂತಪ್ಪ(38), 8 ತಿಂಗಳ ಗಂಡು ಮಗು ಎಂದು ಗುರುತಿಸಲಾಗಿದೆ. ಐವತ್ತಕ್ಕೂ ಹೆಚ್ಚು ಜನರು ಭೇದಿಯಿಂದ ಬಳಲುತ್ತಿದ್ದು, ಒಂದೇ ದಿನ ಇಬ್ಬರ ಸಾವಾಗಿದೆ. ಕಳೆದ ವಾರ ಮೂವರು ಮೃತಪಟ್ಟಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. ಶುದ್ಧ ನೀರು ಕೊಡದ ಅಧಿಕಾರಿಗಳ

ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ 5 ಮಂದಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಲ್ಮೆಟ್‌ ಕಳವು: ಸಿಸಿ ಕೆಮರಾದಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.23. ನಗರದ ಹಲವೆಡೆ ಹೆಲ್ಮೆಟ್‌ ಕಳವು ಮಾಡಲಾಗುತ್ತಿದ್ದು, ಓರ್ವ ಹೆಲ್ಮೆಟ್‌ ಕಳ್ಳನ ಕೈ ಚಳಕದ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ನಗರದ ವಾಣಿಜ್ಯ ಕಟ್ಟಡವೊಂದರ ಸಮೀಪ ನಿಲ್ಲಿಸಿದ್ದ ಬೈಕ್‌ನಲ್ಲಿದ್ದ ಹೊಸ ಹೆಲ್ಮೆಟನ್ನು ಕಳ್ಳ ಕಳವು ಮಾಡಿದ್ದು, ಆತನ ಬಳಿ ಇದ್ದ ಹಳೆಯ ಹೆಲ್ಮೆಟನ್ನು ಬೈಕ್‌ನ ಮೇಲಿಟ್ಟು ಹೋಗಿದ್ದಾನೆ. ಬಳಿಕ ತಾನು ಬಂದಿದ್ದ ಸ್ಕೂಟರ್‌ನಲ್ಲಿ ಮರಳಿದ್ದಾನೆ. ಈತ ಇದೇ ರೀತಿ ಹಲವೆಡೆ ಹೆಲ್ಮೆಟ್‌ ಕದ್ದಿರುವ ಶಂಕೆ ವ್ಯಕ್ತವಾಗಿದೆ.  

ಹೆಲ್ಮೆಟ್‌ ಕಳವು: ಸಿಸಿ ಕೆಮರಾದಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top