ಕ್ರೈಮ್ ನ್ಯೂಸ್

ಲಾರಿ- ಬೈಕ್ ಡಿಕ್ಕಿ: ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಅ. 21. ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಯರಗೇರಾದ ಮಂತ್ರಾಲಯ ರಸ್ತೆಯ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ ಮಾಧವರಂನ ಮದನಪಲ್ಲಿ ಗ್ರಾಮದ ರೆಡ್ಡಿ(37) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಯಚೂರಿನಿಂದ ಮಾಧವರಂಗೆ ತೆರಳುತ್ತಿದ್ದ. ಈ ವೇಳೆ ಆಂಧ್ರಪ್ರದೇಶದಿಂದ ರಾಯಚೂರು ಕಡೆಗೆ ಬರುತ್ತಿದ್ದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ಬಳಿಕ ಲಾರಿ ಚಾಲಕ […]

ಲಾರಿ- ಬೈಕ್ ಡಿಕ್ಕಿ: ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಅ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗ-ನಗದು ಕದ್ದೊಯ್ದ ಘಟನೆ ಸುಬ್ರಹ್ಮಣ್ಯ ವ್ಯಾಪ್ತಿಯ ಬಳ್ಪ ಗ್ರಾಮದಲ್ಲಿ ನಡೆದಿದೆ. ಬಳ್ಪ ಗ್ರಾಮದ ಅಕ್ಕೇಣಿ ಸುಂದರ ಗೌಡ ಎಂಬವರು ತಮ್ಮ ಕುಟುಂಬದೊಂದಿಗೆ ಅ. 17ರಂದು ಸಂಜೆ ಮನೆಗೆ ಬೀಗ ಹಾಕಿ ತಮ್ಮ ಮಗಳ ಮನೆಗೆ ಹೋಗಿದ್ದರು. ರವಿವಾರ ಮಧ್ಯಾಹ್ನ ಮನೆಗೆ ಹಿಂತಿರುಗಿ ಬಂದಾಗ ಮನೆಯ ಎದುರು ಬಾಗಿಲಿನ ಬೀಗ ಮುರಿದಿರುವುದನ್ನು ಗಮನಿಸಿ ಮನೆಯೊಳಗೆ ಹೋಗಿ ನೋಡಿದಾಗ

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ನಗ-ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ: ಓರ್ವ ವಶಕ್ಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 21. ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಎನ್‌.ಟಿ.ರಸ್ತೆ ಜಂಕ್ಷನ್‌ನಲ್ಲಿರುವ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ‌ ನಡೆದಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದ್ದು, ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಬೆಂಕಿ ಆವರಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ಸಂಬಂಧ ಮಾಜಿ ಉದ್ಯೋಗಿಯೇ ಶೋ ರೂಂಗೆ ಬೆಂಕಿ ಹಚ್ಚಿದ್ದಾನೆ

ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ: ಓರ್ವ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಮೆಡಿಕಲ್ ಶಾಪ್ ಮಾಲಕನಿಗೆ ಹಲ್ಲೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಅ. 21. ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ವಿಷಯಕ್ಕೆ ಸಂಬಂಧಿಸಿ ವಾಟ್ಸ್‌ ಆ್ಯಪ್‌ ನಲ್ಲಿ ಮೆಸೇಜ್ ಮಾಡಿದ್ದಕ್ಕಾಗಿ ಮೆಡಿಕಲ್ ಮಾಲೀಕನಿಗೆ ತಂಡವೊಂದು ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ದೇರಳಕಟ್ಟೆಯಲ್ಲಿ ರವಿವಾರ ನಡೆದಿರುವುದು ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದವರನ್ನು ದೇರಳಕಟ್ಟೆಯ ಮೆಡಿಕಲ್ ಶಾಪ್‌ ಮಾಲಕ ಅಬ್ದುಲ್ ಜಲೀಲ್ ಎಂದು ಗುರುತಿಸಲಾಗಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಯುವಕನೊಬ್ಬ ಇತ್ತೀಚೆಗೆ ಮಂಗಳೂರಿನ ಬಂದರ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆಗೈದಿದ್ದ ಎನ್ನಲಾಗಿದ್ದು, ಈ ವಿಚಾರವಾಗಿ ಅಬ್ದುಲ್ ಜಲೀಲ್ ವಾಟ್ಸ್‌ ಆ್ಯಪ್ ಮೂಲಕ ವೈಯಕ್ತಿಕವಾಗಿ

ಮೆಡಿಕಲ್ ಶಾಪ್ ಮಾಲಕನಿಗೆ ಹಲ್ಲೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮೂರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಲಬುರಗಿ, ಅ. 21. ಕ್ಷುಲ್ಲಕ ವಿಷಯಕ್ಕೆ ತಾಯಿಯೊಬ್ಬಳು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಂಚೋಳಿ ತಾಲೂಕಿನ ಜಂಗ್ಲಿ ಪೀರ್ ತಾಂಡಾದಲ್ಲಿ ಇಂದು ನಡೆದಿರುವುದಾಗಿ ವರದಿಯಾಗಿದೆ. ಮೂವರನ್ನೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗೀತಾಬಾಯಿ ಸಂತೋಷ ರಾಠೋಡ್ (30) ಎಂಬವರು ಈ ಕೃತ್ಯ ಎಸಗಿದ ಮಹಿಳೆ. ಮಕ್ಕಳಾದ ಚೈತನ್ಯ (4) ಧನುಷ್ (3) ಮತ್ತು ಲಕ್ಷ್ಮೀ (ಒಂದೂವರೆ ತಿಂಗಳ ಮಗು)ಗೆ ವಿಷ ಕುಡಿಸಿದ ಗೀತಾಬಾಯಿ ಸಹ ವಿಷ

ಮೂರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಅ. 21. ಮದ್ದೂರು ತಾಲೂಕಿನ ದೇಶಹಳ್ಳಿ (ಮದ್ದೂರು) ಕೆರೆಯಲ್ಲಿ ಈಜುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ. ಮೃತಪಟ್ಟ ಬಾಲಕರನ್ನು ಮದ್ದೂರು ತಾಲೂಕಿನ ಶಂಕರಪುರ ಗ್ರಾಮದ ಸೋಮು ಅವರ ಪುತ್ರ ಮುತ್ತುರಾಜು(14) ಮತ್ತು ತೇಜಸ್ ಅವರ ಪುತ್ರ ರಂಜು(17) ಎಂದು ಗುರುತಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತ ಯುವಕ ಮುತ್ತು ರಾಜು ಎಸೆಸ್ಸಲ್ಸಿ ವ್ಯಾಸಂಗ ಮಾಡುತ್ತಿದ್ದು, ರಂಜು

ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಗೂಢ ಕಾಯಿಲೆಗೆ ಒಂದೇ ತಿಂಗಳಲ್ಲಿ 17 ಮಕ್ಕಳು ಬಲಿ..!

(ನ್ಯೂಸ್ ಕಡಬ) newskadaba.com ಜೈಪುರ, ಅ. 21. ನಿಗೂಢ ಕಾಯಿಲೆಯಿಂದ ಭಾನುವಾರ ಎರಡು ವರ್ಷದ ಗಂಡುಮಗು ಮೃತಪಟ್ಟಿದ್ದು, ಕಳೆದ 30 ದಿನಗಳಲ್ಲಿ ರಾಜಸ್ಥಾನದ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಕೋಟ್ರಾ ಮತ್ತು ಉದಯಪುರ ಜಿಲ್ಲೆಗಳಲ್ಲಿ ಈ ಕಾಯಿಲೆಗೆ ಬಲಿಯಾದ ಮಕ್ಕಳ ಸಂಖ್ಯೆ 17ಕ್ಕೇರಿದೆ. ಜ್ವರ, ಶೀತ ಮತ್ತು ಕಫದಿಂದ ಬಳಲುತ್ತಿದ್ದ ಎರಡು ವರ್ಷದ ಮಗು ರೋಗ ಲಕ್ಷಣ ಕಾಣಿಸಿಕೊಂಡ ಎರಡು ಮೂರು ದಿನಗಳಲ್ಲೇ ಕೊನೆಯುಸಿರೆಳೆದಿದೆ. ಇದು ಗ್ರಾಮದಲ್ಲಿ ಕಳೆದ 30 ದಿನಗಳಿಂದಲೂ ಆಗುತ್ತಿದೆ. ಈ ಗ್ರಾಮದಲ್ಲಿ 17 ಮಕ್ಕಳು

ನಿಗೂಢ ಕಾಯಿಲೆಗೆ ಒಂದೇ ತಿಂಗಳಲ್ಲಿ 17 ಮಕ್ಕಳು ಬಲಿ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ. ಮಧ್ಯಾಹ್ನ 12:35 ರ ಸುಮಾರಿಗೆ ಸ್ಕಿಜೋಫ್ರೇನಿಯಾ 111 ಎಂಬ ಖಾತೆಯಿಂದ ಟ್ವಿಟರ್‌ನಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಭಾರತದ ವಿವಿಧ ಭಾಗಗಳಲ್ಲಿ ಆರು ಏರ್ ಇಂಡಿಯಾ ವಿಮಾನಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ. ಮಂಗಳೂರಿನ ಏರ್ ಇಂಡಿಯಾ

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ವಿಶೇಷ ಆರ್ಥಿಕ ವಲಯದಲ್ಲಿರುವ ಎಂಆರ್‌ಪಿಎಲ್ ಅಧೀನ ಸಂಸ್ಥೆ ಒಎಂಪಿಎಲ್ ಕಂಪೆನಿಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಶನಿವಾರ ಒಎಂಪಿಎಲ್ ನ ಒಡಿಸಿ ಗೇಟ್‌ ಬಳಿ ಪತ್ತೆಯಾಗಿದೆ. ಮೃತ ಯುವಕನನ್ನು ಅಸ್ಸಾಂ ಮೂಲದ ಶಮಾನ್ ಅಲಿ (26) ಎಂದು ಗುರುತಿಸಲಾಗಿದೆ. ಒಎಂಪಿಎಲ್ ಸುಮಾರು 15 ಅಡಿ ಎತ್ತರದ ಕಾಂಪೌಂಡ್‌ ಹಾರಿ ಸುಮಾರು 300-400 ಮೀಟರ್‌ ದೂರಕ್ಕೆ ನಡೆದು ಬಂದು ಬಳಿಕ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ತದನಂತರ ಆತ ನಾಪತ್ತೆಯಾಗಿದ್ದು,

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 21. ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಬೆಳಗ್ಗೆ ಬೆಂಗಳೂರಿನ ಆರ್ ಕೆ ಭಟ್ಟರ ಮನೆಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top