ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಮತ್ತೆ ಮುಂದುವರಿದ ಸರಣಿ ಹತ್ಯೆ ➤ ಬಂಟ್ವಾಳದಲ್ಲಿ ಮತ್ತೋರ್ವ ರೌಡಿ ಶೀಟರ್ ನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 23. ಕರಾವಳಿಯಲ್ಲಿ ರೌಡಿ ಶೀಟರ್ ಗಳ ಹತ್ಯೆಯ ಸರಣಿ ಮುಂದುವರಿದಿದ್ದು, ಇಂದು ಕೂಡಾ ಮೆಲ್ಕಾರ್ ಬಳಿಯ ಗುಡ್ಡೆಯಂಗಡಿ ಎಂಬಲ್ಲಿ ಯುವಕನೊಬ್ಬನನ್ನು ಹತ್ಯೆಗೈಯಲಾಗಿದೆ. ಮೃತ ಯುವಕನನ್ನು ಕಲ್ಲಡ್ಕ ನಿವಾಸಿ ರೌಡಿ ಶೀಟರ್ ಚೆನ್ನಾ ಫಾರೂಕ್ ಅಲಿಯಾಸ್ ಉಮ್ಮರ್ ಫಾರೂಕ್ (35) ಎಂದು ಗುರುತಿಸಲಾಗಿದೆ. ಈತ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಈತನ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿರುವ ತಂಡವೊಂದು ಕಡಿದು ಕೊಲೆಗೈದು ಪರಾರಿಯಾಗಿದೆ. ಈತ ಬೈಕ್ ನಲ್ಲಿ ತೆರಳುತಿದ್ದ ವೇಳೆ ಕಾರಿನಲ್ಲಿ […]

ಕರಾವಳಿಯಲ್ಲಿ ಮತ್ತೆ ಮುಂದುವರಿದ ಸರಣಿ ಹತ್ಯೆ ➤ ಬಂಟ್ವಾಳದಲ್ಲಿ ಮತ್ತೋರ್ವ ರೌಡಿ ಶೀಟರ್ ನ ಬರ್ಬರ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ : ನಾಲ್ವರು ಅಂತರರಾಜ್ಯ ಕಳ್ಳರ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಅ. 23: ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನಾಭರಣ, ನಗದು ದೋಚಿ ಪರಾರಿಯಾಗುತ್ತಿದ್ದ ಇರಾನಿ ಗ್ಯಾಂಗ್‌ನ ನಾಲ್ವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ.ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಆರೋಪಿಗಳು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಡುಪಿ ಡಿಸಿಐಬಿ ಇನ್‌ಸ್ಪೆಕ್ಟರ್ ಡಿ.ಆರ್. ಮಂಜಪ್ಪ ನೇತೃತ್ವದ ತಂಡ ದಾಳಿ ನಡೆಸಿ ಅಂತರರಾಜ್ಯ ಕಳ್ಳರನ್ನು ಬಂಧಿಸಿದೆ. ಮಹಾರಾಷ್ಟ್ರದ ಅಹಮದ್ ನಗರ ಜಿಲ್ಲೆಯ ಇರಾನಿ ಮೊಹಲ್ಲಾದ ಜಾಕೀರ್ ಹುಸೇನ್‌, ಶ್ರೀರಾಮಪುರದ ಕಂಬರ್, ಸಂಜಯ್ ನಗರದ ಅಕ್ಷಯ್ ಗೋಸಾವಿ, ಸೈನಿಕ್‌

ಉಡುಪಿ : ನಾಲ್ವರು ಅಂತರರಾಜ್ಯ ಕಳ್ಳರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಭಾರೀ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.23: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ರವಿಕುಮಾರ್(45) ಮತ್ತು ಅವರ ಪುತ್ರ ರಾಹುಲ್(15) ಎಂದು ಗುರುತಿಸಲಾಗಿದೆ.     ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಸಿಯಾಗಿದ್ದ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿ ಮಲಗಿದ್ದವರ ಮೇಲೆ ಗೋಡೆ ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರವಿಕುಮಾರ್ ಪತ್ನಿ ಮತ್ತು ಪುತ್ರಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ

ಭಾರೀ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್

ಸುಳ್ಯ: ನೇಣು ಬಿಗಿದು ಯುವತಿ ಆತ್ಮ ಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.23: ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಎಂಬಲ್ಲಿ ಕಳೆದ ದಿನ ರಾತ್ರಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಳನ್ನು ಗಂಗಾಧರ ನಾಯ್ಕರವರ ಪುತ್ರಿ ಪ್ರಸನ್ನ ಎಂದು ಗುರುತಿಸಲಾಗಿದೆ.     ಆತ್ಮಹತ್ಯೆಗೆ ಕಾರಣ ಏನು ಎಂಬುದಾಗಿ ತಿಳಿದು ಬಂದಿಲ್ಲ. ಮೃತಳು ತಂದೆ, ತಾಯಿ ಪುಷ್ಪ, ಸಹೋದರ ಶಿವಪ್ರಸಾದ್‌ ರವರನ್ನು ಅಗಲಿದ್ದಾರೆ.  

ಸುಳ್ಯ: ನೇಣು ಬಿಗಿದು ಯುವತಿ ಆತ್ಮ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದಲ್ಲಿ ಯುವತಿಯ ಮೊಬೈಲ್ ಎಗರಿಸಿ ಎಸ್ಕೇಪ್ ➤ಕಳ್ಳನ ಗುರುತು ಪತ್ತೆಗಾಗಿ ಮನವಿ

(ನ್ಯೂಸ್ ಕಡಬ) newskadaba.com  ಕಡಬ ಅ. 23: ಅ. 22 ಗುರುವಾರ ಮಧ್ಯಾಹ್ನ 12.45 ರ ವೇಳೆಗೆ ಸುಬ್ರಹ್ಮಣ್ಯದಿಂದ ಉಪ್ಪಿನಂಗಡಿಯತ್ತ ಹೋಗುವ ಸರಕಾರಿ ಬಸ್ ಗೆ ಕಡಬ ಪೇಟೆಯ ಪಂಜ ಕ್ರಾಸ್ ಬಳಿ (ಟಿಸಿ ಪಾಯಿಂಟ್ ಹತ್ತಿರ) ಯ ಬಸ್ ಸ್ಟ್ಯಾಂಡ್ ನಲ್ಲಿ ಹತ್ತಿದ ಯುವತಿಯ ಬ್ಯಾಗ್ ನಿಂದ ಬೆಲೆಬಾಳುವ ಮೊಬೈಲ್ ಸೆಟ್ ನ್ನು ಖದೀಮನೊಬ್ಬ ಎಗರಿಸಿದ್ದಾನೆ.     ಯುವತಿಯ ಹಿಂದಿನಿಂದ ಬಸ್ ಏರಿದ ಕಳ್ಳ (ಕೆಂಪು ಚೆಕ್ಸ್ ಶರ್ಟ್ ಧರಿಸಿ ಕೈಯಲ್ಲಿ ಬ್ಯಾಗ್ ಹಿಡಿದಾತ) ಮೊಬೈಲ್

ಕಡಬದಲ್ಲಿ ಯುವತಿಯ ಮೊಬೈಲ್ ಎಗರಿಸಿ ಎಸ್ಕೇಪ್ ➤ಕಳ್ಳನ ಗುರುತು ಪತ್ತೆಗಾಗಿ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್

ತುಳು ನಟ ಸುರೇಂದ್ರನನ್ನು ಕೊಲೆಗೈದಿದ್ದು ನಾನೇ ➤ ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ ಎಂದ ಆರೋಪಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 23: ತುಳು ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ ಸತೀಶ್ ಕುಲಾಲ್ ತಪ್ಪೊಪ್ಪಿಕೊಂಡಿದ್ದಾನೆ. ಕಳೆದ ನಿನ್ನೆ ಬಂಟ್ವಾಳದ ಬಿಸಿ ರೋಡ್ ನಲ್ಲಿದ್ದಂತ ತುಳು ನಟ ಹಾಗೂ ರೌಡಿ ಶೀಟರ್ ಸುರೇಂದ್ರ ಬಂಟ್ವಾಳ ಅವರನ್ನು ಅವರದ್ದೇ ಫ್ಲಾಟ್ ನಲ್ಲಿ ಬರ್ಬರವಾಗಿ ಕೊಲೆ ಗೈಯ್ಯಲಾಗಿತ್ತು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕೊಲೆಯ ಆರೋಪಿಗಾಗಿ ಬಲೆ ಕೂಡ ಬೀಸಿದ್ದರು. ಇದರ ಮಧ್ಯೆ  ಪೊಲೀಸರಿಗೆ ಆಡಿಯೋ ಸಂದೇಶವೊಂದನ್ನು ಕಳುಹಿಸಿರುವ

ತುಳು ನಟ ಸುರೇಂದ್ರನನ್ನು ಕೊಲೆಗೈದಿದ್ದು ನಾನೇ ➤ ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ ಎಂದ ಆರೋಪಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಿಲಾಡಿ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು .!

(ನ್ಯೂಸ್ ಕಡಬ) newskadaba.com ಉಡುಪಿ ಅ. 23: ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ನಗದು ಸಹಿತ ಪರ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕೇವಲ 12 ಗಂಟೆಯೊಳಗೆ ಆರೋಪಿಗಳಾದ ಮೂವರು ಮಹಿಳೆಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಬಳ್ಳಾರಿಯ ಸಬಿತಾ, ಲತಾ, ಕವಿತಾ ಬಂಧಿತ ಆರೋಪಿಗಳು. ಇವರಿಂದ 32,400 ರೂ. ನಗದು, ಎರಡು ಮೊಬೈಲ್, ಎರಡು ಎಟಿಎಂ ಕಾರ್ಡ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಬೆಂಗಳೂರು ಉತ್ತರಹಳ್ಳಿ ಅರ್ಚನಾ ರಾವ್ (39) ಎಂಬವರು ಸಂಜೆ ಸಿಟಿಬಸ್ನಲ್ಲಿ ಉಡುಪಿ ಸಿಟಿಬಸ್ ನಿಲ್ದಾಣದಿಂದ ಕುಂಜಿಬೆಟ್ಟುವಿಗೆ ಪ್ರಯಾಣಿಸುತ್ತಿದ್ದರು.

ಕಿಲಾಡಿ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು .! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಯಾತ್ರಿಕರ ಕಾರಿನಿಂದ ಬೆಲೆಬಾಳುವ ವಸ್ತುಳನ್ನ ಎಗರಿಸಿದ ಕಳ್ಳರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 22: ಬೆಂಗಳೂರಿನಿಂದ -ಬೆಳ್ತಂಗಡಿ ಗೆ ಬಂದಿದ್ದ ಯಾತ್ರಿಕರೊಬ್ಬರ ಕಾರಿನಿಂದ ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ಕಳ್ಳರು ಕಳವು ಗೈದಿದ್ದಾರೆ.   ಬೆಳ್ತಂಗಡಿಯ ಸುರ್ಯ ದೇವಾಸ್ಥನಕ್ಕೆ ಬೆಂಗಳೂರಿನಿಂದ ಬಂದ ಭಕ್ತರೊಬ್ಬರು ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನಿಂದ ರೂ. 20,000 ಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ಖದೀಮರು ಕಳವು ಮಾಡಿದ್ದಾರೆ. ಓಮ್ನಿ ಕಾರಿನಲ್ಲಿ ಬಂದ ಇಬ್ಬರು ದುಷ್ರ್ಕಮಿಗಳು ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಅಸ್ಪಷ್ಟವಾಗಿ ಸೆರೆಯಾಗಿದೆ. ಈಗಾಗಲೇ ಇಂತಹ ಹಲವಾರು ಪ್ರಕರಣಗಳು

ಬೆಳ್ತಂಗಡಿ : ಯಾತ್ರಿಕರ ಕಾರಿನಿಂದ ಬೆಲೆಬಾಳುವ ವಸ್ತುಳನ್ನ ಎಗರಿಸಿದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಿನಿಮಾ ಪೈರಸಿ ಹಿನ್ನಲೆ ➤ ತಮಿಳ್ ರಾಕರ್ಸ್ ವೈಬ್‍ಸೈಟ್ ಸಂಪೂರ್ಣ ಬ್ಲಾಕ್

(ನ್ಯೂಸ್ ಕಡಬ) newskadaba.com ದೆಹಲಿ ಅ. 22: ಸಿನಿಮಾ ಪೈರಸಿ ವಿಚಾರವಾಗಿ ನಿರ್ಮಾಪಕರಿಗೆ ದೊಡ್ಡ ತಲೆನೋವಾಗಿದ್ದ ತಮಿಳ್ ರಾಕರ್ಸ್ ವೈಬ್‍ಸೈಟ್ ಅನ್ನು ಸಂಪೂರ್ಣವಾಗಿ ಬ್ಲಾಕ್ ಮಾಡಲಾಗಿದೆ. ಇತ್ತೀಚೆಗೆ ಅಮೆಜಾನ್ ಇಂಟರ್ ನ್ಯಾಷನಲ್ ಈ ಪೈರಸಿ ವೆಬ್‍ಸೈಟ್ ವಿರುದ್ಧ ಎರಡು ಬಾರಿ ಡಿಜಿಟಲ್ ಮಿಲೇನಿಯಮ್ ಕಾಪಿರೈಟ್ ಆಕ್ಟ್ಗೆ ವರದಿಗಳನ್ನು ಸಲ್ಲಿಸಿತ್ತು. ಈ ಕಾರಣದಿಂದ ಈ ಪೈರಸಿ ವೆಬ್‍ಸೈಟ್ ಅನ್ನು ಅಂತರ್ಜಾಲ ನಿರ್ದಿಷ್ಟ ಹೆಸರು ಮತ್ತು ಸಂಖ್ಯೆಯ ಕಾರ್ಪೊರೇಷನ್ (ಐಸಿಎಎನ್‍ಎನ್) ನೋಂದಾವಣೆಯಿಂದ ತೆಗೆದುಹಾಕಲಾಗಿದೆ.ಸಿನಿಮಾಗಳು ಬಿಡುಗಡೆಯಾದ ಮರುದಿನವೇ ಪೈರಸಿ ಮಾಡುತ್ತಿದ್ದ ತಮಿಳ್

ಸಿನಿಮಾ ಪೈರಸಿ ಹಿನ್ನಲೆ ➤ ತಮಿಳ್ ರಾಕರ್ಸ್ ವೈಬ್‍ಸೈಟ್ ಸಂಪೂರ್ಣ ಬ್ಲಾಕ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಾಟ ನೀಡಿದ ಪಾಪಿಪತಿ ➤ ರೊಚ್ಚಿಗೆದ್ದ ಪತ್ನಿ ಮಾಡಿದ್ದೇನು ಗೊತ್ತೆ.!?

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಪತ್ನಿ, ಪತಿಯ ವಿರುದ್ಧ ಕೇಸ್ ದಾಖಲಿಸಿದ್ದು, ಪತಿ ಲತೀರ್ ರೆಹಮಾನ್ ವಿರುದ್ಧ FIR ದಾಖಲಾಗಿದೆ. ಪತಿ ಕಿರುಕುಳ ತಾಳಲಾರದೆ ಸಂತ್ರಸ್ಥೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಆರೋಪಿ ಪತಿ ವಿರುದ್ದ ಎಫ್‌ಐಆರ್ ದಾಖಲಾಗಿದೆ. ವೃತ್ತಿಯಲ್ಲಿ ವೈದ್ಯೆಯಾಗಿರುವ ದೂರುದಾರ ಸಂತ್ರಸ್ಥೆ. 2019 ರ ಜೂನ್​ನಲ್ಲಿ ಲತೀರ್ ರೆಹಮಾನ್ ಜತೆ ವಿವಾಹವಾಗಿದ್ದರು. ವಿವಾಹ ಬಳಿಕ ವರದಕ್ಷಿಣೆಗಾಗಿ ಲತೀರ್

ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಾಟ ನೀಡಿದ ಪಾಪಿಪತಿ ➤ ರೊಚ್ಚಿಗೆದ್ದ ಪತ್ನಿ ಮಾಡಿದ್ದೇನು ಗೊತ್ತೆ.!? Read More »

ಕ್ರೈಮ್ ನ್ಯೂಸ್
Scroll to Top