ಕ್ರೈಮ್ ನ್ಯೂಸ್

ಅಕ್ರಮವಾಗಿ ಸಾಗಿಸುತ್ತಿದ್ದ 30 ಕೋಣಗಳ ರಕ್ಷಣೆ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಸಕಲೇಶಪುರ ಅ. 20: ಅಕ್ರಮವಾಗಿ ಸಾಗಿಸುತ್ತಿದ್ದ 30 ಕೋಣಗಳನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಇಂದು ಬಂಧಿಸಿದ್ದಾರೆ.  ಹರಿಯಾಣ ರಾಜ್ಯದ ನೋಂದವಣಿಯ ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 30 ಕೋಣಗಳನ್ನು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು ಸಕಲೇಶಪುರದ ಮಾರನಹಳ್ಳಿ ಬಳಿ ನಡೆದಿದೆ. ಆರೋಪಿಗಳು ಹರಿಯಾಣ ಮೂಲದ ವಿಕಾಸ್ (25) ಹಾಗೂ ಅನಿಲ್ ಕುನಾರ್ (30) ಎಂದು ತಿಳಿದು ಬಂದಿದೆ.ಇನ್ನು ಯಾರಿಗೂ ಅನುಮಾನ ಬಾರದಂತೆ ಲಾರಿಯಲ್ಲಿ ಟಾರ್ಪಲ್ ಹಾಕಿ ಕೋಣಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಗ್ರಾಮಾಂತರ […]

ಅಕ್ರಮವಾಗಿ ಸಾಗಿಸುತ್ತಿದ್ದ 30 ಕೋಣಗಳ ರಕ್ಷಣೆ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕ್ರೈಮ್ ನ್ಯೂಸ್

ಐಎಂಎ ವಂಚನೆ ಪ್ರಕರಣ ➤ ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 20: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಮೂವರು ಪೊಲೀಸ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಸೋಮವಾರ ಅಮಾನತುಗೊಳಿಸಿದೆ.   ಸಿಐಡಿ ಡಿವೈಎಸ್‌ಪಿ ಆಗಿದ್ದ ಇ.ಬಿ.ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದ ರಮೇಶ್, ಪಿಎಸ್‌ಐ ಗೌರಿಶಂಕರ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಅಮಾನತುಗೊಂಡ ಅಧಿಕಾರಿಗಳು ಐಎಂಎ ವಂಚನೆ ಪ್ರಕರಣದ ಬಗ್ಗೆ ಸಮರ್ಪಕವಾಗಿ ತನಿಖೆ ಮಾಡಿಲ್ಲ. ವಂಚನೆ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂಬ ಆರೋಪ ಇದೆ.

ಐಎಂಎ ವಂಚನೆ ಪ್ರಕರಣ ➤ ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಎಸ್‍ಐಯನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು.!

(ನ್ಯೂಸ್ ಕಡಬ) newskadaba.com ಜಮ್ಮು ಅ. 20: ಪೊಲೀಸ್ ಇನ್ಸ್ ಪೆಕ್ಟರ್ ಓರ್ವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಬಿಜ್‍ಬೆಹರಾ ಪ್ರದೇಶದಲ್ಲಿ ನಡೆದಿದೆ.ಮೃತ ಇನ್ಸ್ ಪೆಕ್ಟರ್ ಅನ್ನು ಅನಂತ್‍ನಾಗ್ ಜಿಲ್ಲೆಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಅನಂತ್‍ನಾಗ್ ಜಿಲ್ಲೆಯ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದಾಗ ಮೊಹಮ್ಮದ್ ಅಶ್ರಫ್ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ.ಈ ಗುಂಡಿನ ದಾಳಿಯಲ್ಲಿ ಅಶ್ರಫ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಬಿಜ್‍ಬೆಹರಾ ಉಪ

ಜಮ್ಮು ಕಾಶ್ಮೀರದಲ್ಲಿ ಎಸ್‍ಐಯನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ➤ ಐವರು ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ ಅ. 20: ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ಮಾಡಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್‍ನಲ್ಲಿ ನಡೆದಿದೆ.ಮೃತ ಐವರನ್ನು ರಾಮನ್ (61), ಅಯ್ಯಪ್ಪನ್ (55), ಅರುಣ್ (22), ಶಿವನ್ (45) ಮತ್ತು ಮೂರ್ತಿ (24) ಎಂದು ಗುರುತಿಸಲಾಗಿದೆ.   ಮೃತರು ಒಂದೇ ಬುಡಕಟ್ಟು ಕಾಲೊನಿಯಲ್ಲಿ ವಾಸಿಸುತ್ತಿದ್ದರು, ಭಾನುವಾರ ಸಂಜೆ ಒಟ್ಟಿಗೆ ಮದ್ಯ ಸೇವಿಸಿ ಅಂದೇ ರಾತ್ರಿಯಲ್ಲಿ ಕುಸಿದು ಬಿದ್ದಿದ್ದಾರೆ, ಆದರೆ ಸೋಮವಾರದಂದು ಐವರು ಮೃತಪಟ್ಟಿದ್ದಾರೆ.ಇವರ ಜೊತೆ ಮದ್ಯ

ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ➤ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಗಿಣಿ, ಸಂಜನಾಗೆ ಬೇಲ್ ಸಿಗದಿದ್ರೆ ಕಮಿಷನರ್ ಕಚೇರಿ ಬ್ಲಾಸ್ಟ್ ಆಗುತ್ತೆ.!? ➤ ನ್ಯಾಯಾಧೀಶರು ಸೇರಿ ಸಿಸಿಬಿ ತನಿಖಾಧಿಕಾರಿಗಳಿಗೆ ಬೆದರಿಕೆ ಪತ್ರ ರವಾನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 20: ಡ್ರಗ್ಸ್ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಸಿಗದಿದ್ರೆ ಕಮಿಷನರ್ ಕಚೇರಿ ಮತ್ತು ಸಿಟಿ ಸಿವಿಲ್ ಕೋರ್ಟಿಗೆ ಬೆದರಿಕೆ ಪತ್ರ ಬಂದಿದೆ. ಪತ್ರದ ಜೊತೆಗೆ ಕಮೀಷನರ್ ಕಚೇರಿಗೆ ಬಂಡೆ ಒಡೆಯುವ ಸ್ಫೋಟಕ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಡ್ರಗ್ಸ್ ಕೇಸ್ ನಲ್ಲಿ ನಟಿ ಸಂಜನಾ, ರಾಗಿಣಿ ಸೇರಿದಂತೆ 15ಕ್ಕೂ ಅಧಿಕ ಮಂದಿ ಜೈಲು ಪಾಲಾಗಿದ್ದಾರೆ. ಇತ್ತ ಎನ್.ಡಿ.ಪಿ.ಎಸ್ ಕೋರ್ಟ್ ನಲ್ಲಿ ಜಾಮೀನು ಸಿಗದೇ ಸಂಜನಾ ಹಾಗೂ ರಾಗಿಣಿ

ರಾಗಿಣಿ, ಸಂಜನಾಗೆ ಬೇಲ್ ಸಿಗದಿದ್ರೆ ಕಮಿಷನರ್ ಕಚೇರಿ ಬ್ಲಾಸ್ಟ್ ಆಗುತ್ತೆ.!? ➤ ನ್ಯಾಯಾಧೀಶರು ಸೇರಿ ಸಿಸಿಬಿ ತನಿಖಾಧಿಕಾರಿಗಳಿಗೆ ಬೆದರಿಕೆ ಪತ್ರ ರವಾನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ: ಬೆಳ್ಳಂಬೆಳಗ್ಗೆಯೇ ಅಗ್ನಿ ದುರಂತ ➤ ಎರಡು ಅಂಗಡಿಗಳು ಭಸ್ಮ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 20. ಬೆಳ್ಳಂಬೆಳಗ್ಗೆ ಸಂಭವಿಸಿದ ಅಗ್ನಿಅವಘಡದಲ್ಲಿ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಇಲ್ಲಿನ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣದ ಬಳಿಯ ಕೆ.ಜೆ.ಟವರ್ಸ್ ನಲ್ಲಿರುವ ಎಂ.ಪಿ. ಹಾರ್ಡ್ ವೇರ್ ಮತ್ತು ಪೈಂಟ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ ಅಂಗಡಿಗಳು ಸುಟ್ಟು ಕರಕಲಾಗಿವೆ. ಮೊದಲಿಗೆ ಪೈಂಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಪಕ್ಕದಲ್ಲಿದ್ದ ಬೇಕರಿಗೂ ಬೆಂಕಿ ವ್ಯಾಪಿಸಿದೆ. ಇದನ್ನು ಗಮನಿಸಿದ ಸ್ಥಳೀಯರು ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದ್ದು, ಬೆಂಕಿ

ವಿಟ್ಲ: ಬೆಳ್ಳಂಬೆಳಗ್ಗೆಯೇ ಅಗ್ನಿ ದುರಂತ ➤ ಎರಡು ಅಂಗಡಿಗಳು ಭಸ್ಮ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ :ವಸತಿಗೃಹವೊಂದರಲ್ಲಿ ಯುವಕ-ಯುವತಿ ಆತ್ಯಹತ್ಯೆಗೆ ಶರಣು.!

(ನ್ಯೂಸ್ ಕಡಬ) newskadaba.com ಸುಳ್ಯ  ಅ. 19: ಸುಳ್ಯ ನಗರದ ವಸತಿಗೃಹವೊಂದರಲ್ಲಿ ಯುವಕ ಹಾಗೂ ಯುವತಿಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್ ಎಂದು ತಿಳಿದು ಬಂದಿದೆ.   ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದೆ .ಇನ್ನು ಆತ್ಮಹತ್ಯೆಗೆ ಶರಣಾಗಿರುವ ಯುವತಿ ಬೆಳ್ತಂಗಡಿ ನಿವಾಸಿ ಎಂದು ತಿಳಿದು ಬಂದಿದೆ. ಆದರೆ ಯುವಕ ಹಾಗೂ ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ

ಸುಳ್ಯ :ವಸತಿಗೃಹವೊಂದರಲ್ಲಿ ಯುವಕ-ಯುವತಿ ಆತ್ಯಹತ್ಯೆಗೆ ಶರಣು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಎಂಟು ತಿಂಗಳ ಹೆಣ್ಣು ಮಗು ನೀರಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.19: ಅರಸಿನಮಕ್ಕಿಯ ಕಲ್ಲಕೋಟೆ ಎಂಬಲ್ಲಿ ಎಂಟು ತಿಂಗಳ ಹೆಣ್ಣು ಮಗು ಬಕೆಟ್ ನಲ್ಲಿದ್ದ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.  ಮೃತಪಟ್ಟ ಮಗು ಅರಸಿನಮಕ್ಕಿಯ ಕಲ್ಲಕೋಟೆ ನಿವಾಸಿ ಜಗದೀಶ್ ಹಾಗೂ ವಿದ್ಯಾ ದಂಪತಿಯ ಪುತ್ರಿ.     ತಾಯಿ ಮನೆಯ ಸಮೀಪದಲ್ಲೇ ಬಟ್ಟೆ ಒಗೆಯುತ್ತಿದ್ದರು. ಈ ಸಂದರ್ಭದಲ್ಲಿ ಮಗು ಮನೆಯಿಂದ ಹೊರ ಬಂದಿದ್ದು, ಕೈಯಲ್ಲಿದ್ದ ಲೋಟ ಬಕೆಟ್ ಗೆ ಮುಳುಗಿಸಿದ್ದು, ಇದೇ ಸಂದರ್ಭದಲ್ಲಿ ಮಗು ಬಕೆಟ್ ನೊಳಗೆ ಬಿದ್ದಿದೆ ಎಂದು ತಿಳಿದುಬಂದಿದೆ. ಬಳಿಕ

ಬೆಳ್ತಂಗಡಿ: ಎಂಟು ತಿಂಗಳ ಹೆಣ್ಣು ಮಗು ನೀರಿಗೆ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ : ಸುಳ್ಳು ದಾಖಲೆ ಕೊಟ್ಟು ಬ್ಯಾಂಕ್‌ನಿಂದ ಸಾಲ ಪಡೆದ ದಂಪತಿ.!

(ನ್ಯೂಸ್ ಕಡಬ) newskadaba.com ಕುಂದಾಪುರ  ಅ. 19: ಸುಳ್ಳು ದಾಖಲೆಗಳು ಮತ್ತು ಲೆಕ್ಕಪರಿಶೋಧನಾ ವರದಿ ನೀಡಿ ಬ್ಯಾಂಕಿಗೆ ಮೋಸ ಮಾಡಿದ ಆರೋಪದ ಮೇಲೆ ದಂಪತಿಗಳ ವಿರುದ್ಧ ಕರ್ನಾಟಕ ಬ್ಯಾಂಕ್ ಸಿದ್ಧಾಪುರ ಶಾಖೆಯ ವ್ಯವಸ್ಥಾಪಕರು ಪ್ರಕರಣ ದಾಖಲಿಸಿದ್ದಾರೆ.ರಾಘವೇಂದ್ರ ಹೆಮ್ಮಣ್ಣ, ಮತ್ತು ಅವರ ಪತ್ನಿ ಆಶಾಕಿರಣ್ ಹೆಮ್ಮಣ್ಣ ಈ ಪ್ರಕರಣದ ಪ್ರಮುಖ ಆರೋಪಿಗಳು. 2015 ರ ಜೂನ್ 13 ರಂದು ಕುಂದಾಪುರದ ಶಂಕರನಾರಾಯಣದಲ್ಲಿ ಹೆಮ್ಸ್ ಫುಡ್ಸ್ ಖಾಸಗಿ ಲಿಮಿಟೆಡ್ ಅನ್ನು ತೆರೆದಿದ್ದು ಬ್ಯಾಂಕಿನಿಂದ ಸಾಲ ಪಡೆದಿದ್ದಾರೆ. ಬ್ಯಾಂಕಿಗೆ ಸಲ್ಲಿಸಿದ ಲೆಕ್ಕಪರಿಶೋಧನಾ

ಕುಂದಾಪುರ : ಸುಳ್ಳು ದಾಖಲೆ ಕೊಟ್ಟು ಬ್ಯಾಂಕ್‌ನಿಂದ ಸಾಲ ಪಡೆದ ದಂಪತಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಅ.19: ನಂಜನಗೂಡು-ಊಟಿ ಹೆದ್ದಾರಿಯ ಎಲಚಗೆರೆ ಗೇಟ್ ಬಳಿ ಬೆಳ್ಳಂಬೆಳಗ್ಗೆ ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.     ಮೃತರನ್ನು ನಂಜನಗೂಡಿನ ಕೂಡ್ಲಾಪುರ ಗ್ರಾಮದ ನಾಗರಾಜು(38), ಪುಟ್ಟಸ್ವಾಮಿ (56) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಬೊಲೆರೊ ವಾಹನದ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.  

ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top