ಕ್ರೈಮ್ ನ್ಯೂಸ್

ನಟ ದರ್ಶನ್‌ಗೆ ಎದುರಾದ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಮರು ಜೀವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದು, ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಇದೀಗ ಮರುಜೀವ ಪಡೆದುಕೊಂಡಿದೆ. ಕೆಲ ವರ್ಷಗಳ ಹಿಂದೆ ದರ್ಶನ್, ಯುವ ನಿರ್ಮಾಪಕ ಭರತ್ ಅವರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದೂರು ದಾಖಲಾಗಿತ್ತು. ಇದೀಗ 2022ರಲ್ಲಿ ದಾಖಲಾಗಿದ್ದ ಈ ಪ್ರಕರಣಕ್ಕೆ ಮತ್ತೆ ಮರು ಜೀವ ಸಿಕ್ಕಂತಾಗಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತಾಗಿ ಹೊಸದಾಗಿ ಎನ್‌ಸಿಆರ್ ದಾಖಲಾಗಿದ್ದು, ತನಿಖೆ ನಡೆಯುವ […]

ನಟ ದರ್ಶನ್‌ಗೆ ಎದುರಾದ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಮರು ಜೀವ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

(ನ್ಯೂಸ್ ಕಡಬ) newskadaba.com ಮುಂಬೈ, ಅ.18. ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದ್ದು, ಐದು ಕೋಟಿ ಹಣ ಕೊಡಿ ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ. ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು ₹ 5 ಕೋಟಿ ಪಾವತಿಸಬೇಕಾಗುತ್ತದೆ. ಹಣ ನೀಡದಿದ್ದರೆ ಸಲ್ಮಾನ್ ಖಾನ್ ಸ್ಥಿತಿ ಬಾಬಾ ಸಿದ್ದಿಕ್ ಗಿಂತ ಕೆಟ್ಟದಾಗಿರುತ್ತದೆ ಎಂದು ಕಳುಹಿಸಿದವರು

ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೋಟ್ ದುರಂತದಲ್ಲಿ ನಾಪತ್ತೆಯಾದ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.18. ಪಡನ್ನ ಆಯಿತ್ತಲ ಸಮುದ್ರದಲ್ಲಿ ಬೋಟ್ ದುರಂತದಲ್ಲಿ ನಾಪತ್ತೆಯಾದ ಬೆಸ್ತನ ಮೃತದೇಹ ಪೂಂಜಾವಿ ತೀರದಲ್ಲಿ ಗುರುವಾರ ಪತ್ತೆಯಾಗಿದೆ. ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್, ಎಂ.ರಾಜ ಗೋಪಾಲ್, ಜಿಲ್ಲಾ ಪೊಲೀಸ್ ಮುಖ್ಯಸ್ಥ ಡಿ.ಶಿಲ್ಪಾ ನೇತೃತ್ವ ನೀಡಿದ್ದರು. ದುರಂತದಲ್ಲಿ ಮೃತಪಟ್ಟ ಅಬೂಬಕ್ಕರ್ ರವರ ಮೃತ ದೇಹ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು. ಬುಧವಾರ ಮಧ್ಯಾಹ್ನ ಆಯಿತ್ತಲ ಸಮುದ್ರದಲ್ಲಿ ಫೈಬರ್ ಬೋಟ್ ದುರಂತಕ್ಕೀಡಾಗಿತ್ತು. ದೋಣಿಯಲ್ಲಿದ್ದ 37 ಮಂದಿಯಲ್ಲಿ 35 ಮಂದಿಯನ್ನು ರಕ್ಷಿಸಲಾಗಿತ್ತು. ಓರ್ವ

ಬೋಟ್ ದುರಂತದಲ್ಲಿ ನಾಪತ್ತೆಯಾದ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಲುವೆ ನೀರಲ್ಲಿ ಕೊಚ್ಚಿ ಹೋಗಿ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಹಾವೇರಿ, ಅ. 17. ಭಾರೀ ಮಳೆಯ ವೇಳೆ ಬಾಲಕನೋರ್ವ ಕಾಲುವೆಗೆ ಬಿದ್ದು ಕೊಚ್ಚಿಕೊಂಡು ಹೋಗಿ ಮೃತಪಟ್ಟ ಘಟನೆ ನಗರದ ಹಳೇ ಪಿ.ಬಿ.ರಸ್ತೆಗೆ ಹೊಂದಿಕೊಂಡಿರುವ ಶಿವಾಜಿ ನಗರದ 3ನೇಕ್ರಾಸ್ ನಲ್ಲಿ ಸಂಭವಿಸಿದೆ. ಮೃತನನ್ನು ನಿವೇದನ್ ಗುಡಗೇರಿ(10) ಎಂದು ಗುರುತಿಸಲಾಗಿದೆ. ನಗರದಲ್ಲಿ ಬುಧವಾರ ರಾತ್ರಿಯಿಂದ ಇಂದು ನಸುಕಿನ ವರೆಗೆ ಭಾರೀ ಮಳೆಯಾಗಿದೆ. ಮಳೆಯಬ್ಬರಕ್ಕೆ ಕಾಲುವೆ ಹಾಗೂ ರಸ್ತೆಯಲ್ಲಿ ನೀರು ಹರಿದಿದೆ. ರಸ್ತೆ ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ. ಸುಮಾರು

ಕಾಲುವೆ ನೀರಲ್ಲಿ ಕೊಚ್ಚಿ ಹೋಗಿ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ನಿಧನ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 17. ರೆಂಜಾಳ ನಾಯಕ ಮನೆತನದ ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್(76) ಅವರು ಅಕ್ಟೋಬರ್ 16 ರಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ರೆಂಜಾಳ ಲಕ್ಷ್ಮಣ ಅವರು ಗ್ರಾಮದಲ್ಲಿ ಆಸ್ಪತ್ರೆಯ ಕೊರತೆಯಿದ್ದ ಸಮಯದಲ್ಲಿ, ಅವರು ಹಿಂದುಳಿದವರಿಗೆ, ವಿಶೇಷವಾಗಿ ಕಾಮಾಲೆ ಮತ್ತು ಹಾವು ಕಡಿತದಂತಹ ಕಾಯಿಲೆಗಳಿಗೆ ಉಚಿತ ಗಿಡಮೂಲಿಕೆ ಪರಿಹಾರಗಳನ್ನು ಒದಗಿಸಿದರು. ತಮ್ಮ ನೆರೆಹೊರೆಯವರ ಕಲ್ಯಾಣಕ್ಕಾಗಿ ಅವರು ಶ್ರಮಿಸಿದ್ದಾರೆ. ರೆಂಜಾಳ ಲಕ್ಷ್ಮಣ ಅವರು ಗ್ರಾಮದಲ್ಲಿ ಶೈಕ್ಷಣಿಕ ಸೌಲಭ್ಯಗಳ ಕೊರತೆಯನ್ನು ಅರಿತು ಸರ್ಕಾರಿ ಅಂಗನವಾಡಿ ನಿರ್ಮಿಸಲು

ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ರಿಟನ್‌ನ ಖ್ಯಾತ ಪಾಪ್ ಗಾಯಕ ಲಿಯಾಮ್ ಪಾಯ್ನ್ ನಿಧನ

(ನ್ಯೂಸ್ ಕಡಬ) newskadaba.com ಬೋನಸ್ ಐರಿಸ್, ಅ. 17. ಬ್ರಿಟನ್‌ನ ಖ್ಯಾತ ಪಾಪ್ ಗಾಯಕ, ಲಿಯಾಮ್ ಪಾಯ್ನ್(31) ಅವರು ಅರ್ಜೆಂಟೀನಾದ ರಾಜಧಾನಿ ಬೋನಸ್ ಐರಿಸ್‌ನಲ್ಲಿ ತಂಗಿದ್ದ ಹೋಟೆಲ್ ಕೊಠಡಿಯ ಬಾಲ್ಕನಿಯಿಂದ ಬಿದ್ದು ಮೃತಪಟ್ಟಿದ್ದಾರೆ. ಲಿಯಾಮ್, ನಗರದ ಕಾಸಾ ಸರ್ ಹೋಟೆಲ್ ನ ಮೂರನೇ ಮಹಡಿಯ ತನ್ನ ಕೋಣೆಯ ಬಾಲ್ಕನಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಳಗೆ ಹಾರಿದ ಕೂಡಲೇ ಲಿಯಾಮ್ ಮೃತಪಟ್ಟಿದ್ದಾರೆ ಎಂದು ಬೋನಸ್ ಐರಿಸ್ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಬೋನಸ್ ಐರಿಸ್

ಬ್ರಿಟನ್‌ನ ಖ್ಯಾತ ಪಾಪ್ ಗಾಯಕ ಲಿಯಾಮ್ ಪಾಯ್ನ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
crime, arrest, suspected

ಬೆಳ್ಳಾರೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಅ. 17. ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಶಂಕರ ನಾಯಕ್ ಎಂದು ಗುರುತಿಸಲಾಗಿದೆ. ಕಳೆದ ವಾರ ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ಅತ್ತಿಗೆ ಮೇಲೆ ಆರೋಪಿ ಶಂಕರ ನಾಯಕ್‌ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದ ಘಟನೆ ನಡೆದಿತ್ತು. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಮಹಿಳೆ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಕೊಲೆ ಮಾಡುವ ಉದ್ದೇಶದಿಂದ ಈ ಕೃತ್ಯ

ಬೆಳ್ಳಾರೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ..!

(ನ್ಯೂಸ್ ಕಡಬ) newskadaba.com  ಕಾಸರಗೋಡು, ಅ. 17. ಎರಡು ವಾರಗಳ ಹಿಂದೆಯಷ್ಟೇ ಕೊಲ್ಲಿ ರಾಷ್ಟ್ರದಿಂದ ಊರಿಗೆ ಮರಳಿದ್ದ ಯುವಕನೊಬ್ಬನ ಮೃತದೇಹ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟ ಯುವಕನನ್ನು ತೂಮಿನಾಡು ಕುಚ್ಚಿಕ್ಕಾಡ್‌ನ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಕೆ.ಎಚ್. ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಅನ್ಸಾರ್ (32) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ 11 ರ ಸುಮಾರಿಗೆ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮುಹಮ್ಮದ್ ಅನ್ಸಾರ್ ಪತ್ತೆಯಾಗಿದ್ದರೆನ್ನಲಾಗಿದ್ದು, ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವವನ್ನು ರಕ್ಷಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮೃತಪಟ್ಟ ಸ್ಥಿತಿಯಲ್ಲಿ ಕಾಡಾನೆ ಪತ್ತೆ – ವಿದ್ಯುತ್ ಸ್ಪರ್ಶ ಶಂಕೆ

(ನ್ಯೂಸ್ ಕಡಬ) newskadaba.com ಅ. 17. ಆಕಸ್ಮಿಕವಾಗಿ ವಿದ್ಯುತ್‌ ತಂತಿ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ತಾಲೂಕಿನ ಬಾಳ್ಳುಪೇಟೆ ಬನವಾಸೆ ಗ್ರಾಮದ ಬಿಎಸ್‌ಎನ್‌ಎಲ್‌ ಕಚೇರಿ ಸಮೀಪ ಪತ್ತೆಯಾಗಿದೆ. ಆನೆಯ ಸೊಂಡಿಲು ವಿದ್ಯುತ್ ತಂತಿಗೆ ತಾಗಿ, ವಿದ್ಯುತ್ ಶಾಕ್ ಸಂಭವಿಸಿರಬಹುದು ಎಂದು ಅರಣ್ಯಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ವಲಯ ಅರಣ್ಯಾಧಿಕಾರಿ ಹೇಮಂತ್ ಘಟನೆಯನ್ನು ದೃಢಪಡಿಸಿದ್ದು, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ತಿಳಿಸಿದ್ದಾರೆ.

ಮೃತಪಟ್ಟ ಸ್ಥಿತಿಯಲ್ಲಿ ಕಾಡಾನೆ ಪತ್ತೆ – ವಿದ್ಯುತ್ ಸ್ಪರ್ಶ ಶಂಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೀದಿನಾಯಿಗಳ ದಾಳಿಗೆ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಚಿತ್ರದುರ್ಗ, ಅ. 17. ಬೀದಿನಾಯಿಗಳ ದಾಳಿಗೆ ಒಳಗಾಗಿ 11 ವರ್ಷದ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ. ಮೃತಪಟ್ಟ ಬಾಲಕನನ್ನು ರಾಂಪುರ ಗ್ರಾಮದ ಮಿಥುನ್(11) ಎಂದು ಗುರುತಿಸಲಾಗಿದೆ. ಮಿಥುನ್ ಟ್ಯೂಷನ್ ಗೆ ತೆರಳುತ್ತಿದ್ದ ವೇಳೆ ದಾರಿಮಧ್ಯೆ ಬೀದಿನಾಯಿಗಳು ದಾಳಿ ಮಾಡಿವೆ. ಬೀದಿನಾಯಿಗಳು ಮಿಥುನ್ ತಲೆ, ಕೆನ್ನೆ, ಮೈಯೆಲ್ಲಾ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದವು. ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಆಟೋ ಚಾಲಕ ರಾಜಪ್ಪ ಎಂಬವರು ಮಿಥುನ್ ನನ್ನು ನಾಯಿಗಳಿಂದ

ಬೀದಿನಾಯಿಗಳ ದಾಳಿಗೆ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top