ಕ್ರೈಮ್ ನ್ಯೂಸ್

ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ- ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಅ.16. ಪಾದಚಾರಿಗಳಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನಿಡಗಲ್ ಬಳಿ ಬುಧವಾರದಂದು ನಡೆದಿದೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಗಾಯಗೊಂಡ ಪಾದಚಾರಿಯ ಗುರುತು ಕೂಡ ಇನ್ನೂ ದೃಢಪಟ್ಟಿಲ್ಲ.

ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ- ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮರಕ್ಕೆ ಸ್ಕೂಟರ್ ಢಿಕ್ಕಿ- ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.16. ಸವಾರನ ನಿಯಂತ್ರನ ತಪ್ಪಿದ ಸ್ಕೂಟರ್ ಒಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮದ್ದೂರಿನ ಶಾರದಾ ನಗರದಲ್ಲಿ ಬುಧವಾರದಂದು ನಡೆದಿದೆ. ಮೃತರನ್ನು ಮಡೂರು ನಿವಾಸಿ ನಾಗೇಶ್ (51) ಎಂದು ಗುರುತಿಸಲಾಗಿದೆ. ಖಾಸಗಿ ಆಸ್ಪತ್ರೆಯೊಂದರಲ್ಲಿ ಉದ್ಯೋಗಿಯಾಗಿದ್ದ ನಾಗೇಶ್, ರಜೆಯ ಮೇಲೆ ಬೀರಿ ಮಾರುಕಟ್ಟೆಯಿಂದ ತೆಂಗಿನಕಾಯಿ ಖರೀದಿಸಿ ಮನೆಗೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆನ್ನಲಾಗಿದೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಠಾಣೆ ಎಎಸ್‌ಐ ಯಶವಂತ್ ಭೇಟಿ

ಮರಕ್ಕೆ ಸ್ಕೂಟರ್ ಢಿಕ್ಕಿ- ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಸೂಕ್ತ ಪರವಾನಗಿ ಇಲ್ಲದೇ ಸಂಗ್ರಹಿಸಿಡಲಾದ್ದ 40 ಕೆ.ಜಿ ಪಟಾಕಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಅ.16. ಸೂಕ್ತ ಪರವಾನಗಿ ಇಲ್ಲದೆ ಸಂಗ್ರಹಿಸಿಡಲಾಗಿದ್ದ 40 ಕೆ.ಜಿ. ಪಟಾಕಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ನಗರ ಪೊಲೀಸ್ ಉಪನಿರೀಕ್ಷಕ ಪುನೀತ್ ಕುಮಾರ್ ಅವರು ನೀಡಿದ ಮಾಹಿತಿಯ ಮೇರೆಗೆ ಕಬ್ರಾಲ್ ಗನ್ ಹೌಸ್ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಸೂಕ್ತ ಪರವಾನಗಿ ಇಲ್ಲದೇ ಸಂಗ್ರಹಿಸಿಡಲಾಗಿದ್ದ ಪಟಾಕಿಗಳ ದಾಸ್ತಾನು ಪತ್ತೆಯಾಗಿದೆ. ದಾಳಿ ವೇಳೆ ಸ್ಥಳದಲ್ಲಿದ್ದ ರೊನಾಲ್ಡ್ ಜಿ ಕ್ಯಾಬ್ರಾಲ್ ಎಂಬವರನ್ನು ವಿಚಾರಣೆ ನಡೆಸಿದಾಗ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳನ್ನು

ಸೂಕ್ತ ಪರವಾನಗಿ ಇಲ್ಲದೇ ಸಂಗ್ರಹಿಸಿಡಲಾದ್ದ 40 ಕೆ.ಜಿ ಪಟಾಕಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ ತಡೆದು 1.64 ಲಕ್ಷ ರೂ. ದರೋಡೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಅ. 16. ಲಾರಿ ತಡೆದು ಚಾಲಕನಿಗೆ ಚಾಕು ತೋರಿಸಿ ಬೆದರಿಕೆಯೊಡ್ಡಿ 1.64 ಲಕ್ಷ ರೂ. ದರೋಡೆ ಗೈದ ಘಟನೆ ಇಂದು ಮುಂಜಾನೆ ಪೈವಳಿಕೆ ಸಮೀಪದ ಅಟ್ಟೆಗೋಳಿಯಲ್ಲಿ ನಡೆದಿದೆ. ಮೀನು ತರಲು ತೆರಳುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ಲಾರಿ ಚಾಲಕ ಯೂಸಫ್ ನನ್ನು ತಡೆದು ಚಾಕು ತೋರಿಸಿ ಹಣವನ್ನು ದರೋಡೆ ಮಾಡಿರುವುದಾಗಿ ಮಂಜೇಶ್ವರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೋಲಿಸರು ತನಿಖೆ ಆರಂಭಿಸಿದ್ದು, ಸಿ ಸಿ ಟಿ ವಿ ಕ್ಯಾಮರಾ ತಪಾಸಣೆ ನಡೆಸಿದ್ದಾರೆ.

ಲಾರಿ ತಡೆದು 1.64 ಲಕ್ಷ ರೂ. ದರೋಡೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಆಟೋ ರಿಕ್ಷಾದಲ್ಲಿ ಅಕ್ರಮ ದನ ಸಾಗಾಟ – ತಡೆಹಿಡಿದ ಬಜರಂಗದಳ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಅ. 16. ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದನ್ನು ಬಜರಂಗದಳ ಕಾರ್ಯಕರ್ತರು ತಡೆಹಿಡಿದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬುಧವಾರದಂದು ಮಧ್ಯಾಹ್ನ ದರ್ಬೆಯಿಂದ ನೆಹರೂನಗರ ಕಡೆಗೆ ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ರಿಕ್ಷಾದಲ್ಲಿ ದನವೊಂದನ್ನು ಸಾಗಾಟ ಮಾಡಲಾಗುತ್ತಿರುವ ಬಗ್ಗೆ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಿಕ್ಷಾದಲ್ಲಿ ಇಬ್ಬರು ಮಹಿಳೆಯರಿದ್ದರು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಆಟೋ ರಿಕ್ಷಾದಲ್ಲಿ ಅಕ್ರಮ ದನ ಸಾಗಾಟ – ತಡೆಹಿಡಿದ ಬಜರಂಗದಳ ಕಾರ್ಯಕರ್ತರು Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ನಿರ್ವಹಕನ ಶವ ಪತ್ತೆ: ಕೊಲೆ ಶಂಕೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ಬಸ್ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಶವ ನೆಹರೂ ಮೈದಾನದ ಇಂದಿರಾ ಕ್ಯಾಂಟಿನ್ ಪರಿಸರದಲ್ಲಿ ಪತೆಯಾಗಿದೆ. ಮೃತ ವ್ಯಕ್ತಿಯನ್ನು ಮಂಗಳೂರು-ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್(30) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್ ರಾಜೇಶನ ಜರ್ಜರಿತವಾದ ಮೃತದೇಹ ಪತ್ತೆಯಾಗಿತ್ತು. ಸ್ಥಳಕ್ಕಾಗಮಿಸಿದ ಪಾಂಡೇಶ್ವರ ಠಾಣಾ ಪೊಲೀಸರು ಮೃತದೇಹವನ್ನು ವಾರೀಸುದಾರರು ಯಾರೂ ಬಂದಿಲ್ಲದ ಕಾರಣ ವೆನ್ಲಾಕ್ ಶವಾಗಾರದಲ್ಲಿ ಇರಿಸಿದ್ದಾರೆ.

ಬಸ್ ನಿರ್ವಹಕನ ಶವ ಪತ್ತೆ: ಕೊಲೆ ಶಂಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಸತಿ ಕಟ್ಟಡದಲ್ಲಿ ಬೆಂಕಿ, ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಅ.16. 14 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ಮೃತಪಟ್ಟ ಘಟನೆ ಮುಂಬೈನ ಉನ್ನತ ಮಟ್ಟದ ಲೋಖಂಡವಾಲಾ ಕಾಂಪ್ಲೆಕ್ಸ್ ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಚಂದ್ರಪ್ರಕಾಶ್‌ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ. ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್ ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್‌‍ ಕಟ್ಟಡದ 10ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಮೂವರಿಗೆ ಗಾಯಗಳಾಗಿದ್ದು,

ವಸತಿ ಕಟ್ಟಡದಲ್ಲಿ ಬೆಂಕಿ, ಮೂವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಮಾನಗಳಿಗೆ ಬಾಂಬ್‌ ಬೆದರಿಕೆ- ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಅ.16. ಮೂರು ವಿಮಾನಗಳನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬಾಂಬ್‌ ಬೆದರಿಕೆ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ, ಆತನ ತಂದೆ ಮತ್ತು ಇನ್ನೋರ್ವ ವ್ಯಕ್ತಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಕಳೆದ ಅ.14 ರಂದು ಮುಂಬೈನಿಂದ ನ್ಯೂಯಾರ್ಕ್ ಗೆ ಹೊರಟಿದ್ದ ಮೂರು ಅಂತಾರಾಷ್ಟ್ರೀಯ ವಿಮಾನಗಳಿಗೆ ಬಾಂಬ್‌ ಬೆದರಿಕೆ ಬಂದಿದ್ದ ಹಿನ್ನೆಲೆ ಏರ್‌ ಇಂಡಿಯಾ ವಿಮಾನವನ್ನು ನವದೆಹಲಿಯಲ್ಲಿ ಇಳಿಸಿ ತಪಾಸಣೆ ನಡೆಸಲಾಗಿತ್ತು. ಆದರೆ, ವಿಮಾನದಲ್ಲಿ ಯಾವುದೇ ಅನುಮಾನಾಸ್ಪದವಾದ

ವಿಮಾನಗಳಿಗೆ ಬಾಂಬ್‌ ಬೆದರಿಕೆ- ಮೂವರು ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಬಸ್ ಪಲ್ಟಿ- ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಅ.16. ಚಾಲಕನ ನಿಯಂತ್ರಣ ತಪ್ಪಿದ ಸಿಟಿ ಬಸ್‌ ಚರಂಡಿಗೆ ಪಲ್ಟಿಯಾದ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆ ರೈಲ್ವೆ ಗೇಟ್‌ ಬಳಿ ಬುಧವಾರದಂದು ಬೆಳಿಗ್ಗೆ ನಡೆದಿದೆ. ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ ಬಳಿಕ ಫೆನ್ಸ್‌ ಗೆ ಅಪ್ಪಳಿಸಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ನಿಯಂತ್ರಣ ತಪ್ಪಿ ಬಸ್ ಪಲ್ಟಿ- ಪ್ರಯಾಣಿಕರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಮಂಜನಾಡಿಯ ಬದ್ರಿಯಾ ನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಕೊಣಾಜೆ, ಉಳ್ಳಾಲ, ಕಡಬ, ಬರ್ಕೆ, ಉಪ್ಪಿನಂಗಡಿ, ಪುತ್ತೂರು, ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಸುಮಾರು 24 ಪ್ರಕರಣಗಳು ದಾಖಲಾಗಿವೆ. ಆರೋಪಿಯ ಬಗ್ಗೆ ದೊರೆತ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top