ಕ್ರೈಮ್ ನ್ಯೂಸ್

ಅನ್ನ ಭಾಗ್ಯದ ಅಕ್ಕಿಗೆ ಖದೀಮರಿಂದ ಕನ್ನ ➤ ಪಡಿತರ ಅಕ್ಕಿ ದಾಸ್ತಾನು, ಆರೋಪಿಗಳು ಪೋಲಿಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ . ಆ,28:  ಸರಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತವಾಗಿ ವಿತರಿಸುವ ಅನ್ನಭಾಗ್ಯದ ಅಕ್ಕಿಗೆ ಕನ್ನ ಹಾಕಿದ ಘಟನೆ ಕುಂದಾಪುರ ತಾಲೂಕು ಕೋಟೇಶ್ವರದಲ್ಲಿ ನಡೆದಿದೆ. ಕೋಟೇಶ್ವರದ ನೇಂಪು ಎಂಬಲ್ಲಿ ಅಬ್ದುಲ್ ಸತ್ತಾರ್ ಅವರಿಗೆ ಸೇರಿದ ಹೋಲೋ ಬ್ಲಾಕ್ಸ್ ಕಟ್ಟಡದಲ್ಲಿ ಕ್ರಮವಾಗಿ ಸುಮಾರು 55 ಟನ್ ಪಡಿತರ ಅಕ್ಕಿ ಸಂಗ್ರಹಿಸಲಾಗಿದ್ದು ಉಡುಪಿ ಜಿಲ್ಲಾ ಅಪರಾಧ ಪತ್ತೆ ದಳ ಹಾಗೂ ಕುಂದಾಪುರ ಠಾಣೆ ಪೋಲಿಸರು ಪಡೆದಿದ್ದಾರೆ.   ಪ್ರಕರಣಕ್ಕೆ ಸಂಬಂಧಿಸಿದಂತೆ  ಖದೀಮರನ್ನ ಬಂಧಿಸಲಾಗಿದೆ. ಖದೀಮರು ಅಕ್ಕಿಯನ್ನು […]

ಅನ್ನ ಭಾಗ್ಯದ ಅಕ್ಕಿಗೆ ಖದೀಮರಿಂದ ಕನ್ನ ➤ ಪಡಿತರ ಅಕ್ಕಿ ದಾಸ್ತಾನು, ಆರೋಪಿಗಳು ಪೋಲಿಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.28. ಐಸ್ ಕ್ರೀಮ್ ಫ್ಯಾಕ್ಟರಿಗೆ ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿ ಪ್ರತ್ಯಕ್ಷಳಾಗಿದ್ದಾಳೆ. ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ದೇವಸ್ಯ ನಿವಾಸಿ ತೀರ್ಥಲತಾ(20) ಎಂಬಾಕೆ ಮಂಗಳೂರಿನ ಐಸ್ ಕ್ರೀಮ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆಂದು ಆಗಸ್ಟ್ 22 ರಂದು ತೆರಳಿದ್ದು, ಆ ಬಳಿಕ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದಳು ಎನ್ನಲಾಗಿದೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಕಡಬ ಠಾಣೆಗೆ ದೂರು ನೀಡಿದ್ದರು. ಗುರುವಾರದಂದು ಆಕೆಯ ಪ್ರಿಯಕರನೊಂದಿಗೆ ಮದುವೆಯಾಗಿದ್ದು, ಜೋಡಿಯನ್ನು

ಕಡಬ: ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಪತ್ತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಠದ ಆಡಳಿತಾಧಿಕಾರಿ ಬಗ್ಗೆ ನಿಂದನಾತ್ಮಕ ಪೋಸ್ಟ್ ➤ ಪ್ರಶಾಂತ್ ಮಾಣಿಲ ವಿರುದ್ಧ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ. ಆ,28:  ಸಾಮಾಜಿಕ ಜಾಲತಾಣದಲ್ಲಿ ಸುಬ್ರಹ್ಮಣ್ಯ ಮಠದ ಆಡಳಿತಾಧಿಕಾರಿಯವರ ಬಗ್ಗೆ ಮಾನಹಾನಿ ಪೋಸ್ಟ್ ಹಾಕಿರುವ ಆರೋಪದಡಿ ಸುಬ್ರಹ್ಮಣ್ಯ ವ್ಯಕ್ತಿಯೊಬ್ಬರ ಮೇಲೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಸುಬ್ರಹ್ಮಣ್ಯದ ಪ್ರಶಾಂತ್ ಭಟ್ ಮಾಣಿಲ ಎಂಬುವವರು ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿಯವರಾದ ಸುದರ್ಶನ ಜೋಯಿಸರ ಬಗ್ಗೆ ಕೆಟ್ಟದಾಗಿ ಬರೆದು ಸಾಮಾಜಿಕ ಜಾಲಾಣದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಸುಬ್ರಹ್ಮಣ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  

ಮಠದ ಆಡಳಿತಾಧಿಕಾರಿ ಬಗ್ಗೆ ನಿಂದನಾತ್ಮಕ ಪೋಸ್ಟ್ ➤ ಪ್ರಶಾಂತ್ ಮಾಣಿಲ ವಿರುದ್ಧ ಪೋಲಿಸ್ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಹುಡುಗಿಯರಿಂದ ಧರ್ಮದೇಟು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,27:  ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಕೊನೆಗೆ ಹುಡುಗಿಯರೇ ಧರ್ಮದೇಟು ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದ ಹಿನ್ನಲೆ ಯುವತಿಯರೇ ವಿಕೃತ ಕಾಮಿಗೆ ಬುದ್ದಿ ಕಲಿಸಿದ್ದಾರೆ.   ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನ ಬಳಿಯ ಲೇಡಿಸ್ ಪಿಜಿಗೆ ಕಳೆದ ನಾಲ್ಕೈದು ತಿಂಗಳುಗಳಿಂದ ವಿಕೃತ ಕಾಮಿಯೊಬ್ಬ ಬಂದು ಯುವತಿಯರ ಬಟ್ಟೆ ಕದಿಯುತ್ತಿದ್ದ. ಈ ಹಿಂದೆ ಎರಡು ಬಾರಿ ಈತನನ್ನು ಹಿಡಿದು ಪೊಲೀಸರ ವಶಕ್ಕೆ

ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಹುಡುಗಿಯರಿಂದ ಧರ್ಮದೇಟು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕರ ನಡುವೆ ಮಾರಾಮಾರಿ ➤ ಇಬ್ಬರ ಕೊಲೆ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ. 27.  ನಗರದ ಗೋಪನಕೊಪ್ಪ ಎಂಬಲ್ಲಿ ಬಸ್ ನಿಲ್ದಾಣದ ಬಳಿ ಬುಧವಾರ ತಡರಾತ್ರಿ ಮಾರಕಾಸ್ತ್ರಗಳಿಂದ ಹೊಡೆದು ಇಬ್ಬರನ್ನು ಕೊಲೆಗೈಯ್ಯಲಾಗಿದೆ.   ಕೊಲೆಯಾದ ಯುವಕರನ್ನು ಮಂಜುನಾಥ ಕಬ್ಬಿನ ಹಾಗೂ ನಿಯಾಜ್ ಎಂದು ಗುರುತಿಸಲಾಗಿದೆ. ಹಳೆಯ‌ ವೈಷ್ಯಮದ ಹಿನ್ನೆಲೆಯಲ್ಲಿ ಹೊಡೆದಾಟ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವುದರಿಂದ ಇಬ್ಬರು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್ ದಿಲೀಪ್ ಗುರುವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಯುವಕರ ನಡುವೆ ಮಾರಾಮಾರಿ ➤ ಇಬ್ಬರ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರಿಯಕರನ ಮನೆಯ ಹತ್ತಿರ ಪ್ರಿಯತಮೆ ಆತ್ಮಹತ್ಯೆಗೆ ಶರಣು ➤ ಡೆತ್ ನೋಟ್‍ನಲ್ಲಿತ್ತು ಪ್ರಿಯಕರನ ಅಸಲಿ ಮುಖವಾಡ..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ. ಆ,27:  ಪ್ರೀತಿಸಿ ಕೈಕೊಟ್ಟ ಯುವಕನ ಮನೆಯ ಪರಿಸರದಲ್ಲೇ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅನಿಷಾ ಮೃತ ದುರ್ದೈವಿ. ಕುಂದಾಪುರದ ಸಾಯಿಬ್ರಕಟ್ಟೆ ಸಮೀಪ ಇರುವ ಕಾಜರಹಳ್ಳಿ ಎಂಬ ಕುಗ್ರಾಮದಲ್ಲಿನ ಪ್ರತಿಭಾವಂತೆ ಯುವತಿ ಅನಿಷಾ. ಬಾಲ್ಯದಿಂದಲೂ ಕಲಿಕೆಯಲ್ಲಿ ಮುಂದಿದ್ದ ಅನಿಷಾ ಎಲ್ಲಾ ಸವಾಲುಗಳನ್ನು ಮೆಟ್ಟಿ ಎಂಬಿಎ ಮಾಡಿ ಊರಿಗೆ ಮಾದರಿಯಾಗಿದ್ದಳು. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದರೂ ಕೂಡ ಈಕೆಯ ತಾಯಿ ತನ್ನ ಐವರು ಮಕ್ಕಳಿಗೂ ಉತ್ತಮ ವಿದ್ಯಾಭ್ಯಾಸ

ಪ್ರಿಯಕರನ ಮನೆಯ ಹತ್ತಿರ ಪ್ರಿಯತಮೆ ಆತ್ಮಹತ್ಯೆಗೆ ಶರಣು ➤ ಡೆತ್ ನೋಟ್‍ನಲ್ಲಿತ್ತು ಪ್ರಿಯಕರನ ಅಸಲಿ ಮುಖವಾಡ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು. ಆ. 27.  ನೀರು ತುಂಬಿಸಿಡಲಾಗಿದ್ದ ಬಕೇಟ್‌ ಒಂದಕ್ಕೆ ಎಳೆ ಹಸುಗೂಸು ಬಿದ್ದು, ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕೊಂಬೆಟ್ಟುವಿನಲ್ಲಿ ನಡೆದಿದೆ.     ಕೊಂಬೆಟ್ಟವಿನ ಬಾಡಿಗೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಆ. 26ರಂದು ಸಂಜೆ ಹೆಣ್ಣು ಮಗುವೊಂದು ನೀರು ತುಂಬಿಸಿಟ್ಟ ಬಕೇಟ್‌ಗೆ ಬಿದ್ದಿರುವುದನ್ನು ತಡವಾಗಿ ಗಮನಿಸಿದ ಮನೆ ಮಂದಿ ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಕರೆದೊಯ್ದರಾದರೂ ಆಗಲೇ ಮಗು ಮೃತಪಟ್ಟಿದೆ ಎನ್ನಲಾಗಿದೆ.

ಪುತ್ತೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ತಂದೆಯನ್ನ ಹತ್ಯೆ ಮಾಡಿದ್ದ ಮಗ ಈಗ ಪೋಲಿಸರ ಅತಿಥಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ . ಆ,27:  ದಕ್ಷಿಣ ಕನ್ನಡವನ್ನು ಬೆಚ್ಚಿ ಬೀಳಿಸಿದ್ದ,  ಬೆಳ್ತಂಗಡಿಯ ನಗರದ ಕುತ್ಯಾರು ರಸ್ತೆ ನಿವಾಸಿ ಹಿರಿಯ ಕಾರು ಚಾಲಕ ವಾಸು ಸಪಲ್ಯ(66) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಗ ದಯಾನಂದನ್ನು (32) ಪೊಲೀಸರು ಬುಧವಾರ ರಾತ್ರಿ ಮಂಗಳೂರು ಸ್ಟೇಟ್ ಬ್ಯಾಂಕ್ ಬಳಿ ವಶಕ್ಕೆ ಪಡೆದಿದ್ದಾರೆ. ಆ.24 ರಂದು ವಾಸು ಸಪಲ್ಯ ಅವರು ಬೆಳಗ್ಗೆ ವಾಕಿಂಗ್ ತೆರಳಿದ್ದಾಗ ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಕಡಿದು ಕೊಲೆಮಾಡಲಾಗಿತ್ತು. ಕೃತ್ಯದ ಬಳಿಕ ಇವರ ಮೂರನೇ ಮಗ

ಬೆಳ್ತಂಗಡಿ : ತಂದೆಯನ್ನ ಹತ್ಯೆ ಮಾಡಿದ್ದ ಮಗ ಈಗ ಪೋಲಿಸರ ಅತಿಥಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿರ್ಗತಿಕ ಮಹಿಳೆಯ ಮೇಲೆ ಕಾಮುಕನ ಅಟ್ಟಹಾಸ ➤ ವಿಕೃತಕಾಮಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಹಾಸನ. ಆ,26:  ಆಶ್ರಯವಿಲ್ಲದ ಆಕೆ ಹಾಸನದ ಬಿಎಂ ರಸ್ತೆಯ ಪಕ್ಕದಲ್ಲೇ ಇದ್ದ ಅಂಗಡಿಯೊಂದರ ಮುಂದೆ ಅನಾಥವಾಗಿ ಮಲಗಿದ್ದಳು. ಹೀಗೆ ಅನಾಥವಾಗಿ ಮಲಗಿದ್ದವಳ ಮೇಲೆ ಕಾಮುಕನ ಕಣ್ಣು ಬಿದ್ದಿತ್ತು. ಮೊದಲು ಆಕೆಯನ್ನು ಅತ್ಯಾಚಾರ ಮಾಡಲು ಯತ್ನಿಸಿದ ಕಾಮುಕ ಆಕೆ ಒಪ್ಪದಿದ್ದಾಗ ಆಕೆಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಸಾಯಿಸಿ ಸತ್ತವಳ ದೇಹದ ಮೇಲೆ ಮೃಗದ ರೀತಿ ಅತ್ಯಾಚಾರ ಎಸಗಿದ್ದಾನೆ. ಇಡೀ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಾಸನ ನಗರದ ಜನ ಬೆಚ್ಚಿಬಿದ್ದಿದ್ದಾರೆ.     ಸೋಮವಾರ

ನಿರ್ಗತಿಕ ಮಹಿಳೆಯ ಮೇಲೆ ಕಾಮುಕನ ಅಟ್ಟಹಾಸ ➤ ವಿಕೃತಕಾಮಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

OTP ಕೊಟ್ಟು ಮೋಸ ಹೋದ ಯುವತಿ ➤ ಗ್ರಾಹಕರೇ ಎಚ್ಚರ ವಹಿಸಿ..!!

(ನ್ಯೂಸ್ ಕಡಬ) newskadaba.com ಮೂಡಬಿದಿರೆ . ಆ,26:  OTP ನಂಬರ್ ಪಡಕೊಂಡ ವಂಚಕನೊಬ್ಬ ಯುವತಿಯೊಬ್ಬಳ ಬ್ಯಾಂಕ್ ಖಾತೆಯಿಂದ 6 ಸಾವಿರ ರೂಪಾಯಿ ಹಣ ಕೊಳ್ಳೆ ಹೊಡೆದ  ಪ್ರಕರಣ ಮೂಡಬಿದಿರೆಯಲ್ಲಿ ನಡೆದಿದೆ.6 ಸಾವಿರ ರೂಪಾಯಿ  ಕಳೆದುಕೊಂಡ ಅಲಂಗಾರಿನ ಯುವತಿ ಕಂಗಾಲಾಗಿದ್ದಾಳೆ. ಸೋಮವಾರ ಬೆಳಿಗ್ಗೆ ಈಕೆಯ ಮೊಬೈಲ್‍ಗೆ ಕರೆ ಮಾಡಿ ತನ್ನನ್ನು ಬ್ಯಾಂಕ್ ಅಧಿಕಾರಿಯೆಂದು ಪರಿಚಯಿಸಿಕೊಂಡ ವ್ಯಕ್ತಿ `ನಿಮ್ಮ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗುತ್ತಿದೆ. ರಿನೀವಲ್ ಮಾಡಬೇಕಾದಲ್ಲಿ ನಿಮ್ಮ ಮೊಬೈಲ್‍ಗೆ ನಾನು ಒಟಿಪಿ ಕಳಿಸುತ್ತೇನೆ, ಅದನ್ನು ತಿಳಿಸಿ ಎಂದಿದ್ದ. ಆತ

OTP ಕೊಟ್ಟು ಮೋಸ ಹೋದ ಯುವತಿ ➤ ಗ್ರಾಹಕರೇ ಎಚ್ಚರ ವಹಿಸಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top