ಕ್ರೈಮ್ ನ್ಯೂಸ್

ಬೆಳ್ತಂಗಡಿ: ಎಂ.ಆರ್.ಎಫ್ ಟಯರ್ ಶೋರೂಂ ಮಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.12, ನಗರದ ಎಮ್.ಆರ್.ಎಫ್ ಟಯರ್ ಶೋ ರೂಮ್ ನ ಮಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತರನ್ನು ಟಯರ್ ಶೋರೂಂ ಮಾಲಕ ಪ್ರಕಾಶ್ ತುಳುಪುಳೆ(50.ವ) ಎಂದು ಗುರುತಿಸಲಾಗಿದೆ. ತಮ್ಮ ಉದ್ಯಮದ ಮೂಲಕ ಬೆಳ್ತಂಗಡಿ ಜನತೆಗೆ ಚಿರಪರಿಚಿತರಾಗಿದ್ದ ಪ್ರಕಾಶ್ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಬೆಳ್ತಂಗಡಿ: ಎಂ.ಆರ್.ಎಫ್ ಟಯರ್ ಶೋರೂಂ ಮಾಲಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಡಹಗಲೇ ಶಸ್ತ್ರಾಸ್ತ್ರ ತೋರಿಸಿ ಚಿನ್ನದ ಅಂಗಡಿಯಲ್ಲಿ ದರೋಡೆ

(ನ್ಯೂಸ್ ಕಡಬ) newskadaba.com, ಚಿಕ್ಕಮಗಳೂರು, ಆ. 12. ಲಾಂಗ್ ಹಿಡಿದು ಬೆದರಿಸಿ ಚಿನ್ನದ ಅಂಗಡಿಗೆ ನುಗ್ಗಿ ಮೂರು ಚಿನ್ನದ ಸರಗಳನ್ನು ಎಗರಿಸಿ ಪರಾರಿಯಾದ ಘಟನೆ ಶೃಂಗೇರಿ ನಗರದಲ್ಲಿ ಇಂದು ನಡೆದಿದೆ. ಮುಖಕ್ಕೆ ಮಾಸ್ಕ್ ಧರಿಸಿದ್ದ ಚಿನ್ನದ ಅಂಗಡಿಗೆ ಬಂದ ವ್ಯಕ್ತಿಯೋರ್ವರು ನಾಗಪ್ಪ ಶೆಟ್ಟಿ ಎಂಬುವವರ ಅಂಗಡಿಯಲ್ಲಿ ಕೆಲಸ ಮಾಡುತಿದ್ದ ಮಹಿಳಾ ಸಿಬ್ಬಂದಿಗಳಿಗೆ ಮಾರಕಾಸ್ತ್ರವನ್ನು ತೋರಿಸಿ, ದರೋಡೆ ನಡೆಸಲು ಮುಂದಾಗಿದ್ದಾನೆ. ಅಷ್ಟು ಹೊತ್ತಿಗೆ ಇನ್ನೋರ್ವ ಮಹಿಳಾ ಸಿಬ್ಬಂದಿಯು ದರೋಡೆಕೋರನ ಮೇಲೆ ಚೇರ್ ನಿಂದ ಹೊಡೆಯಲು ಯತ್ನಿಸಿದ್ದು, ಈ ವೇಳೆ

ಹಾಡಹಗಲೇ ಶಸ್ತ್ರಾಸ್ತ್ರ ತೋರಿಸಿ ಚಿನ್ನದ ಅಂಗಡಿಯಲ್ಲಿ ದರೋಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂಡಬಿದ್ರೆ: ಬೈಕ್ ಅಪಘಾತ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com, ಮೂಡಬಿದ್ರೆ, ಆ. 12, ಬೈಕ್ ಸ್ಕಿಡ್ ಆದ ಪರಿಣಾಮ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ವಾಲ್ಪಾಡಿಯ ಕ್ವಾಯಕುಡೆ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ಅಳಿಯೂರಿನ ವಿಕಾಸ್ ನಗರದ ನಿವಾಸಿ ತಿಮ್ಮಪ್ಪ ಮಡಿವಾಳ(55) ಎಂದು ಗುರುತಿಸಲಾಗಿದೆ. ಇವರು ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ತನ್ನ ಬೈಕ್ ನಲ್ಲಿ ಶಿರ್ತಾಡಿಯಲ್ಲಿರುವ ತಮ್ಮ ಹೊಟೇಲ್ ಕಡೆಗಡ ಹೋಗುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ.

ಮೂಡಬಿದ್ರೆ: ಬೈಕ್ ಅಪಘಾತ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಂಬಂಧಿಯಿಂದ ಅವಹೇಳನಕಾರಿ ಪೋಸ್ಟ್ ➤ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.12, ವ್ಯಕ್ತಿಯೊಬ್ಬ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಧಾರ್ಮಿಕ ಅವಹೇಳನ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಕಾವಲ್‌ ಬೈರಸಂದ್ರದಲ್ಲಿರುವ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮತ್ತು ಕಚೇರಿ ಮೇಲೆ ಉದ್ರಿಕ್ತ ಗುಂಪೊಂದು ಮಂಗಳವಾರ ರಾತ್ರಿ ದಾಳಿ ನಡೆಸಿ ಬೆಂಕಿ ಹಚ್ಚಿದೆ. ಜತೆಗೆ ಕಾಡಗೊಂಡನಹಳ್ಳಿ ಪೊಲೀಸ್‌ ಠಾಣೆಗೆ ದಿಗ್ಬಂಧನ ಹಾಕಿರುವ ಗುಂಪು, ಶಾಸಕರು ಹಾಗೂ ಅವರ ಸಂಬಂಧಿ ನವೀನ್‌ ಮನೆ ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ಬೆಂಕಿ ಹಚ್ಚಿದೆ. ಪೊಲೀಸರತ್ತ ಕಲ್ಲು

ಸಂಬಂಧಿಯಿಂದ ಅವಹೇಳನಕಾರಿ ಪೋಸ್ಟ್ ➤ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಂತಿಕಲ್ಲು: ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ ➤ ಬೈಕ್ ಸವಾರ ಸಜೀವ ದಹನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.11. ರಸ್ತೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು ಆ ರಸ್ತೆಯಾಗಿ ಹೋದ ಬೈಕ್ ಸವಾರನಿಗೆ ತಂತಿ ತಾಗಿ ವಿದ್ಯುತ್ ಪ್ರವಹಿಸಿ ಬೈಕ್ ಸವಾರ ಸಜೀವ ದಹನಗೊಂಡ ಘಟನೆ ನಿಂತಿಕಲ್ಲು ಬಳಿಯ ಕಲ್ಲೇರಿ ಗುಳಿಗನ ಕಟ್ಟೆ ಬಳಿ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ಸವಾರ ಮತ್ತು ವಾಹನ ಎರಡೂ ಬೆಂಕಿಗಾಹುತಿಯಾಗಿದೆ. ಸಜೀವ ದಹನಗೊಂಡ ವ್ಯಕ್ತಿಯನ್ನು ಮಂಡೆಕೋಲು ಮೂಲದವರು ಎಂದು ಹೇಳಲಾಗಿದೆ. ರಸ್ತೆಯಲ್ಲಿ ಬಾಗಿದ್ದ ಎಚ್.ಟಿ. ಲೈನ್ ಗೆ ಬೈಕ್ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಆ

ನಿಂತಿಕಲ್ಲು: ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ ➤ ಬೈಕ್ ಸವಾರ ಸಜೀವ ದಹನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುಂಚತ್ತಾರು: ನೇಣು ಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 09, ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಚತ್ತಾರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪುಂಚತ್ತಾರು ರಾಮಣ್ಣ ಗೌಡ ಎಂಬವರ ಪುತ್ರಿ ನಳಿನಾಕ್ಷಿ (30) ಎಂದು ಗುರುತಿಸಲಾಗಿದೆ. ಇವರು ಮನೆಯ ಸಮೀಪದ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಿಗ್ಗೆ ಮನೆಯವರು ಹುಡುಕಾಡಿದಾಗ ನೇಣು ಬಿಗಿದುಕೊಂಡಿದ್ದು ತಿಳಿದು ಬಂದಿದೆ. ಬೆಳ್ಳಾರೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುಂಚತ್ತಾರು: ನೇಣು ಬಿಗಿದು ಯುವತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಶರತ್ ಮಡಿವಾಳ ಕೊಲೆ ಆರೋಪಿಯ ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಡಬ, ಆ.07:  ದ. ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿ ಶರೀಫ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ ವರದಿಯಾಗಿದೆ.   ಆದರೆ ಆತ ಓಡಿ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಂಪಾಡಿ ಶಾರದಾ ನಗರದ ನಿವಾಸಿಯಾದ

ಬಂಟ್ವಾಳ: ಶರತ್ ಮಡಿವಾಳ ಕೊಲೆ ಆರೋಪಿಯ ಕೊಲೆಗೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೇತ್ರಾವತಿ ಸೇತುವೆಯ ಮೇಲೆ ಬೈಕ್ ಪತ್ತೆ ➤ ಬೈಕ್ ಸವಾರ ನಾಪತ್ತೆ, ದೂರು ದಾಖಲು

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ.06:  ನೇತ್ರಾವತಿ ಸೇತುವೆಯ ಮೇಲೆ  ಬುಧವಾರ ಬೈಕ್‌ ಒಂದು ಪತ್ತೆಯಾಗಿದ್ದು ಬೈಕ್‌ ಸವಾರ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇವರು ನಾಪತ್ತೆಯಾಗಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪತ್ನಿ ನಾಪತ್ತೆ ದೂರು ದಾಖಲಿಸಿದ್ದಾರೆ.   ನಾಪತ್ತೆಯಾದವರನ್ನ 32 ಎರಡು ವರ್ಷ ಪ್ರಾಯದ ಎಂ. ರಘು ಎಂದು ಗುರುತಿಸಲಾಗಿದೆ. ಮೊಗವೀರಪಟ್ನದ ಪತ್ನಿ ಮನೆಯಿಂದ ಪಿಲಾರು ಲಕ್ಷ್ಮೀಗುಡ್ಡೆಯ ಖಾಸಗಿ ಆಹಾರ ಸಂಸ್ಥೆಗೆ ರಾತ್ರಿ ಪಾಳಯದ ಉದ್ಯೋಗಕ್ಕೆ ತೆರಳಿದವರು ಮರಳಿ ವಾಪಸ್ಸಾಗದೆ ನಾಪತ್ತೆಯಾಗಿದ್ದಾರೆ. ಮರುದಿನ ಉಳ್ಳಾಲ ನೇತ್ರಾವತಿ

ನೇತ್ರಾವತಿ ಸೇತುವೆಯ ಮೇಲೆ ಬೈಕ್ ಪತ್ತೆ ➤ ಬೈಕ್ ಸವಾರ ನಾಪತ್ತೆ, ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಪರವಾನಿಗೆ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿ ➤ ಎರಡು ಪಿಸ್ತೂಲ್, ರಂಜಕ, ಪೊಟ್ಯಾಸಿಯಂ ಸಹಿತ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ.05. ಯಾವುದೇ ಪರವಾನಗಿ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯನ್ನು ಬಂಧಿಸಿರುವ ಕಡಬ ಪೊಲೀಸರು, ಎರಡು ಪಿಸ್ತೂಲು ಹಾಗೂ 02 ಖಾಲಿ ತೋಟೆ ಹಾಗೂ ರಂಜಕ, ಪೊಟ್ಯಾಶಿಯಂನ್ನು ವಶಪಡಿಸಿಕೊಂಡಿದ್ದಾರೆ‌. ಬಂಧಿತ ಆರೋಪಿಯನ್ನು ಕಡಬ ತಾಲೂಕು ಕಡಬ ಗ್ರಾಮದ ಪಾಲೋಳಿ ನಿವಾಸಿ ಜನಾರ್ಧನ್ ಗೌಡ ಎಂದು ಗುರುತಿಸಲಾಗಿದೆ. ಆರೋಪಿಯು ಯಾವುದೇ ಪರವಾನಿಗೆ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಆರೋಪಿಯ ಮನೆಯ ಮೇಲೆ ದಾಳಿ ಮಾಡಿ 02 ನಕಲಿ

ಕಡಬ: ಪರವಾನಿಗೆ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿ ➤ ಎರಡು ಪಿಸ್ತೂಲ್, ರಂಜಕ, ಪೊಟ್ಯಾಸಿಯಂ ಸಹಿತ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ➤ ಕಾರು ಸಂಪೂರ್ಣ ನಜ್ಜುಗುಜ್ಜು

(ನ್ಯೂಸ್ ಕಡಬ) newskadaba.com ಮಾಣಿ, ಆ.04. ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರ ಆಲದ ಮರವೊಂದು ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಬಂಟ್ವಾಳದಿಂದ ಉಪ್ಪಿನಂಗಡಿ‌ ಕಡೆಗೆ ತೆರಳುತ್ತಿದ್ದ ಮಾರುತಿ ಸುಝುಕಿ ರಿಟ್ಝ್ ಕಾರು ಸೂರಿಕುಮೇರು ಬಳಿ ತಲುಪಿದಾಗ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಆಲದ ಮರ ಕಾರಿನ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಡಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ‌.

ಉಪ್ಪಿನಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ➤ ಕಾರು ಸಂಪೂರ್ಣ ನಜ್ಜುಗುಜ್ಜು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top