ಕ್ರೈಮ್ ನ್ಯೂಸ್

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ,ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು,ಜು.14: ಕಾರಿನಲ್ಲಿ ಅಕ್ರಮವಾಗಿ ಭಾರೀ ಪ್ರಮಾಣದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೀಯಪದವು ನಿವಾಸಿ 28 ವರ್ಷದ ಕೂಳೂರಿನ ನವೀನ್ ಶೆಟ್ಟಿ ಎಂದು ಗುರುತಿಸಲಾಗಿದೆ.   ಇನ್ನು, ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಅಂಗಡಿಮೊಗರು ಸೇತುವೆಯಲ್ಲಿ ಇನ್ನೋವಾಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ.  ಕಾರಿನಲ್ಲಿ 51 ಬಾಕ್ಸ್ ಗಳಲ್ಲಿ 2668 ಬಾಟಲ್‌ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕದಿಂದ ಅಕ್ರಮ ಮದ್ಯ ತಂದು ದಾಸ್ತಾನಿಟ್ಟು ವಿವಿದೆಡೆಗೆ ಪೂರೈಕೆ […]

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ,ಓರ್ವನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ತಡರಾತ್ರಿ ತಲವಾರ್ ಹಿಡಿದು ದಾಂಧಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.14: ತಲವಾರು ಹಿಡಿದ ಯುವಕರ ತಂಡ ಇನ್ನೊಂದು ಕೋಮಿನ ಮನೆಯೊಂದಕ್ಕೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ‌. ಮಂಗಳೂರು  ತಡರಾತ್ರಿ ಮಂಗಳೂರು ನಗರದ ಬಜಿಲಕೇರಿ ಎಂಬಲ್ಲಿ ಘಟನೆ ನಡೆದಿದ್ದು ಎರಡು ಕಾರಿನಲ್ಲಿ ಬಂದಿದ್ದ ಆರೇಳು ಮಂದಿ ಗಾಂಜಾ ವ್ಯಸನಿಗಳು ಕೃತ್ಯ ಎಸಗಿದ್ದಾರೆ. ಅಜಯ್ ಎಂಬಾತನ ಮನೆಗೆ ನುಗ್ಗಿದ ಯುವಕರ ತಂಡ  ದಾಂಧಲೆ ಮಾಡಿದೆ. ಈ ವೇಳೆ, ಅಜಯ್ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಆಗಮಿಸಿ ಸ್ಥಳದಲ್ಲಿ ಸೇರಿದ್ದ ಎರಡೂ

ಮಂಗಳೂರು : ತಡರಾತ್ರಿ ತಲವಾರ್ ಹಿಡಿದು ದಾಂಧಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಾಣೆಮಂಗಳೂರು ಸೇತುವೆಯಿಂದ ಹಾರಿದ್ದ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 13, ಶನಿವಾರದಂದು ಬೆಳಗ್ಗಿನಿಂದ ನಾಪತ್ತೆಯಾಗಿದ್ದ ಮೂಡ ಗ್ರಾಮದ ಮಹಿಳೆಯೋರ್ವರ ಮರಥದೇಹವು ತುಂಬೆ ಸಮೀಪದ ನೇತ್ರಾವತಿ ನದಿಯಲ್ಲಿ ಇಂದು ಪತ್ತೆಯಾಗಿದೆ. ಮೃತರನ್ನು ಗೋಪಿ ಪೂಜಾರಿ(49) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಚಿಕ್ಕಯ್ಯಮಠ ಎಂಬಲ್ಲಿ ತನ್ನ ಸಹೋದರಿಯ ಮನೆಗೆ ಕಳೆದ ಕೆಲ ದಿನಗಳ ಹಿಂದೆ ಬಂದಿದ್ದು, ಜೂ.10 ರ ಶುಕ್ರವಾರದಂದು ರಾತ್ರಿ ಊಟ ಮಾಡಿ ಮಲಗಿದ್ದ ಇವರು ಶನಿವಾರ ಮುಂಜಾನೆ ಕಾಣೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಿಕರು ಹುಡುಕಾಟ ನಡೆಸಿದಾಗ ಪಾಣೆಮಂಗಳೂರು ನೂತನ ಸೇತುವೆ ಬಳಿ

ಪಾಣೆಮಂಗಳೂರು ಸೇತುವೆಯಿಂದ ಹಾರಿದ್ದ ಮಹಿಳೆಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಬೀಡಿ ಕೊಡಲೆಂದು ತೆರಳಿದ್ದ ಮಹಿಳೆ ನಾಪತ್ತೆ ➤ ಪಕ್ಕದ ಮನೆಯ ಯುವಕನೊಂದಿಗೆ ಪರಾರಿ ಶಂಕೆ

(ನ್ಯೂಸ್ ಕಡಬ) newskadaba.com ಕಡಬ, ಜು.13. ಬೀಡಿ ಬ್ರ್ಯಾಂಚ್ ಗೆಂದು ತೆರಳಿದ ವಿವಾಹಿತ ಮಹಿಳೆಯೋರ್ವರು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ದಾಸರಗುಡ್ಡೆ ನಿವಾಸಿ ಬಾಬು ಎಂಬವರ ಪತ್ನಿ ಸುಮತಿ ಎಂದು ಗುರುತಿಸಲಾಗಿದೆ. ಶನಿವಾರದಂದು ಬೀಡಿ ಕೊಡಲೆಂದು ತೆರಳಿದ್ದ ಸುಮತಿ ನಾಪತ್ತೆಯಾಗಿದ್ದು, ರಾತ್ರಿಯಾದರೂ ಮನೆಗೆ ಹಿಂತಿರುಗದೆ ಇದ್ದುದರಿಂದ ಹುಡುಕಾಡಿದ ಆಕೆಯ ಮನೆಯವರು ಪಕ್ಕದ ಮನೆಯ ವಿನಯ್ ಎಂಬಾತನ ಜೊತೆ ತೆರಳಿರುವ ಶಂಕೆ ವ್ಯಕ್ತಪಡಿಸಿ ಕಡಬ

ಕಡಬ: ಬೀಡಿ ಕೊಡಲೆಂದು ತೆರಳಿದ್ದ ಮಹಿಳೆ ನಾಪತ್ತೆ ➤ ಪಕ್ಕದ ಮನೆಯ ಯುವಕನೊಂದಿಗೆ ಪರಾರಿ ಶಂಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ನೇತ್ರಾವತಿ ಸೇತುವೆಯಲ್ಲಿ ಸ್ಕೂಟರ್ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಮದುಮಗ ಸಾವನ್ನಪ್ಪಿದ್ದು ಕಾರು ಚಲಾಯಿಸುತ್ತಿದ್ದ ಸೋಮೇಶ್ವರ ಪುರಸಭೆ ವ್ಯವಸ್ಥಾಪಕ ಕೃಷ್ಣ ಪರಾರಿಗೆ ಯತ್ನಿಸಿದ್ದಾರೆ. ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸ್ಕೂಟರ್ ಸವಾರ ಉಳ್ಳಾಲ ಬಂಡಿಕೊಟ್ಯ ನಿವಾಸಿ ಸುಬೇದ್ (28) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಸುಬೇದ್ ಹಾಗೂ ಮಹಮ್ಮದ್ ಶಾಕೀರ್ ಆಕ್ಟಿವಾ ಸ್ಕೂಟರಿನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಲಕ್ಷ್ಮೀನಗರ ನಿವಾಸಿ ಯೋಗೀಶ್ ಮನೆಗೆ ಶಾಸಕ ಕೆ. ರಘುಪತಿ ಭಟ್ ಶುಕ್ರವಾರ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಾಸಕರು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜುಲೈ 6 ರ ಭಾನುವಾರ ರಾತ್ರಿ 11.30 ರ ಸುಮಾರಿಗೆ ಕಾರಿನಲ್ಲಿ ಆಗಮಿಸಿದ ಗ್ಯಾಂಗ್‌ನಿಂದ ಯೋಗೀಶ್ ಮೇಲೆ ಮಾರಣಾಂತಿಕ ಆಯುಧದಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು.ಕೊಲೆ ಬಗ್ಗೆ ಮಾಹಿತಿ ದೊರೆತ

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಕೂಬ್ ಮೇಲೆ ದಾಳಿ ನಡೆಸಿ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ಅಡ್ಯಾರ್ ಸಮೀಪದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಅಡ್ಯಾರ್‌ ಸಮೀಪದಲ್ಲಿ ತಂಡವೊಂದು ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯರಾಗಿರುವ ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಫಳ್ನೀರ್‌ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಯಾಕೂಬ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಇನ್ನು ಕೊಲೆಗೆ ವೈಯಕ್ತಿಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗಲಾಟೆ ತಡೆಯಲು ಬಂದ ಪೊಲೀಸರಿಗೆ ಹಲ್ಲೆ ➤ ಆರೋಪಿಗೆ ಥಳಿಸಿದ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜು.10: ಗುರುವಾರ ರಾತ್ರಿ ಲಾರಿ ಚಾಲಕರಿಗೆ ಮತ್ತು ಸಾರ್ವಜನಿಕರ ನಡುವಿನ ಗಲಾಟೆ ತಪ್ಪಿಸಲು ಬಂದ ಪೊಲೀಸರಿಗೆ ವ್ಯಕ್ತಿಯೊಬ್ಬ ಕಬ್ಬಿಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಿದ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಮೆಲ್ಕಾರ್ ನಲ್ಲಿ ನಡೆದಿದೆ.  ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಗೋಳ್ತಮಜಲು ಗ್ರಾಮದ ಅಬ್ದುಲ್ ಸಲಾಂ (28) ಎಂದು ಗುರುತಿಸಲಾಗಿದೆ.   ಪೊಲೀಸರ ಮೇಲೆ ಹಲ್ಲೆ ಮಾಡಿದ ಕಾರಣ ನೆರೆದಿದ್ದ ಸ್ಥಳೀಯರು ಆತನಿಗೆ ಥಳಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಲಾಟೆ ತಡೆಯಲು ಬಂದ ಪೊಲೀಸರಿಗೆ ಹಲ್ಲೆ ➤ ಆರೋಪಿಗೆ ಥಳಿಸಿದ ಸಾರ್ವಜನಿಕರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗ್ಯಾಂಗ್​ಸ್ಟರ್ ವಿಕಾಸ್ ದುಬೆ ಪೊಲೀಸರ ಗುಂಡೇಟಿಗೆ ಬಲಿ

(ನ್ಯೂಸ್ ಕಡಬ) newskadaba.com ನವದೆಹಲಿ,ಜು.10:  8 ಮಂದಿ ಪೊಲೀಸರ ಹತ್ಯೆಕೋರ, ಗ್ಯಾಂಗ್​ಸ್ಟರ್​ ವಿಕಾಸ್​ ದುಬೆಯನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಪೊಲೀಸ್​ ಕಾರು ಇಂದು ಬೆಳಗ್ಗೆ ಕಾನ್ಪುರದ ಬಳಿ ಪಲ್ಟಿಯಾಗಿತ್ತು.   ಬಂಧಿತ ಆರೋಪಿ ವಿಕಾಸ್​ ದುಬೆಯನ್ನು ಮಧ್ಯ ಪ್ರದೇಶದ ಉಜ್ಜಯಿನಿಯಿಂದ ಉತ್ತರ ಪ್ರದೇಶದ ಶಿವ್ಲಿಗೆ ಕರೆದೊಯ್ಯಲಾಗುತ್ತಿತ್ತು. ಕಾನ್ಪುರದ ಸಮೀಪ ಟೋಲ್​ ಪ್ಲಾಜಾ ಕ್ರಾಸ್​ ಮಾಡಿದ ಬಳಿಕ ಕಾರು ಪಲ್ಟಿಯಾಗಿತ್ತು ಎಂದು ತಿಳಿದು ಬಂದಿದೆ. ಈ ವೇಳೆ ವಿಕಾಸ್​ ದುಬೆ ಪೊಲೀಸರ ಬಳಿ ಇದ್ದ ಗನ್​ ಕಿತ್ತುಕೊಂಡು,ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

ಗ್ಯಾಂಗ್​ಸ್ಟರ್ ವಿಕಾಸ್ ದುಬೆ ಪೊಲೀಸರ ಗುಂಡೇಟಿಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ

(ನ್ಯೂಸ್ ಕಡಬ)newskadaba.com ಮಂಗಳೂರು: ಜು.9, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು ಇಂದು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 48 ವರ್ಷದ ಬೋಳೂರು ನಿವಾಸಿ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.      

ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top