ಕ್ರೈಮ್ ನ್ಯೂಸ್

ಕಾರಿನ ಡೋರ್ ಲಾಕ್ ಆದ ಪರಿಣಾಮ ಮಕ್ಕಳಿಬ್ಬರು ಉಸಿರುಗಟ್ಟಿ ಮೃತ್ಯು

(ನ್ಯೂಸ್ ಕಡಬ)newskadaba.com ಲಕ್ನೊ, ಜೂ. 17, ಕಾರಿನೊಳಗೆ ಆಟವಾಡುತ್ತಿದ್ದ ವೇಳೆಯಲ್ಲಿ ಆಕಸ್ಮಿಕವಾಗಿ ಕಾರಿನ ಬಾಗಿಲು ಲಾಕ್ ಆದ ಕಾರಣ ಉಸಿರುಗಟ್ಟಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಉತ್ತರಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಮಕ್ಕಳೆಲ್ಲರೂ ನಾಲ್ಕರಿಂದ 7 ವರ್ಷದೊಳಗಿನವರಾಗಿದ್ದು, ಕಾರಿನೊಳಗೆ ಆಟವಾಡುತ್ತಿದ್ದರು. ಈ ಸಂದರ್ಭ ಕಾರಿನ ಬಾಗಿಲು ಆಕಸ್ಮಿಕವಾಗಿ ಲಾಕ್ ಆಗಿದ್ದು, ಲಾಕ್ ತೆಗೆಯಲು ಗೊತ್ತಿಲ್ಲದ ಮಕ್ಕಳು ಬೊಬ್ಬೆ ಹೊಡೆದರೂ ಯಾರಿಗೂ ತಿಳಿಯಲಿಲ್ಲ. ಸ್ವಲ್ಪ ಸಮಯದ ನಂತರ ಮಕ್ಕಳನ್ನು ಹುಡುಕುತ್ತಾ ಬಂದ ಮನೆಯವರು ಕಾರಿನೊಳಗೆ ಪ್ರಜ್ಞೆ ತಪ್ಪಿ ಬಿದ್ದಿದ್ದ ನಾಲ್ವರು […]

ಕಾರಿನ ಡೋರ್ ಲಾಕ್ ಆದ ಪರಿಣಾಮ ಮಕ್ಕಳಿಬ್ಬರು ಉಸಿರುಗಟ್ಟಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡೆಂಗ್ಯೂ ಜ್ವರಕ್ಕೆ ಓರ್ವ ಬಲಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜೂ.17, ಕಡಿರುದ್ಯಾವರ ಗ್ರಾಮದ ಆಲಂದಡ್ಕ ನಿವಾಸಿ ವಿನಾಯಕ ಪ್ರಭು(60) ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ನಡೆದಿದೆ. ಇವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ವರದಿಯಲ್ಲಿ ಡೆಂಗ್ಯೂ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೂ ಚಿಕಿತ್ಸೆ ಸ್ಪಂದಿಸಿದ ಇವರು ಮಂಗಳವಾರ ಮೃತಪಟ್ಟಿದ್ದಾರೆ. ಇವರು ವೃತ್ತಿಯಲ್ಲಿ ಕೃಷಿಕರಾಗಿದ್ದು, ಸಾಮಾಜಿಕ ಚಟುವಟಿಕೆಯಲ್ಲಿಯೂ ತೊಡಗಿಸಿಕೊಂಡಿದ್ದರು. ಮೃತರು ತಾಯಿ, ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ಡೆಂಗ್ಯೂ ಜ್ವರಕ್ಕೆ ಓರ್ವ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ – ಸ್ಕೂಟರ್ ಢಿಕ್ಕಿ ➤ ಸ್ಕೂಟರ್ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜೂ. 17, ಲಾರಿ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತರನ್ನು ಪೂಂಜರಕೋಡಿ ನಿವಾಸಿ ರಿತೇಶ್ (30) ಎಂದು ಗುರುತಿಸಲಾಗಿದೆ. ಬಿಸಿರೋಡಿನ ಸರ್ಕಲ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಇವರು ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ಈ ಘಟನೆ ನಡೆದಿದೆ ಸಂಭವಿಸಿದ್ದು, ತಕ್ಷಣವೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಕೂಡ ತಲೆಗೆ ಗಂಭೀರ ಗಾಯವಾದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ

ಲಾರಿ – ಸ್ಕೂಟರ್ ಢಿಕ್ಕಿ ➤ ಸ್ಕೂಟರ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಶಾಕ್ ಗೆ ಕೃಷಿಕ ಬಲಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜೂ. 17, ವಿದ್ಯುತ್ ಶಾಕ್ ಹೊಡೆದು ಕೃಷಿಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಗುಂಡಿಮಜಲು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಗುಂಡಿಮಜಲು ನಿವಾಸಿ ಬಾಸ್ಕರ್ ಗೌಡ ಎಂದು ಗುರುತಿಸಲಾಗಿದೆ. ಅವರು ಮನೆಗೆ ನೀರು ಸಂಗ್ರಹಕ್ಕಾಗಿ ತೋಟದಲ್ಲಿರುವ ಕೃಷಿ ಪಂಪ್ ಸೆಟ್ ನ ಸ್ವಿಚ್ ಹಾಕಲು ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆನ್ನಲಾಗಿದೆ. ಇವರು ಸುಮಾರು ಹೊತ್ತು ಆದರೂ ಮನೆಗೆ ಬಾರದೆ ಇದ್ದುದ್ದರಿಂದ ಅವರ ಪತ್ನಿ ಪ್ರಿಯಾಂಕ ಅವರು ಪಂಪ್ ಹೌಸ್ ಬಳಿ ತೆರಳಿ

ವಿದ್ಯುತ್ ಶಾಕ್ ಗೆ ಕೃಷಿಕ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಟಾಟಾಎಸ್

(ನ್ಯೂಸ್ ಕಡಬ) newskadaba.com ಕಡಬ, ಜೂ.16. ಮರ್ಧಾಳದಿಂದ ಕಡಬ ಕಡೆಗೆ ತೆರಳುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಅಪ್ಪಳಿಸಿ ಚರಂಡಿಗೆ ಬಿದ್ದ ಘಟನೆ ಮಂಗಳವಾರದಂದು ನಡೆದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಚಾಲಕನಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಟಾಟಾಎಸ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

(ನ್ಯೂಸ್ ಕಡಬ)newskadaba.com ಜಮ್ಮು- ಕಾಶ‍್ಮೀರ. ಶೋಪಿಯಾನ್ ಪ್ರದೇಶದ ಗ್ರಾಮವೊಂದರಲ್ಲಿ ಇಂದು ಸೇನಾ ಪಡೆ, ಪೊಲೀಸ್ ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಚರಣೆಯ ಮೂಲಕ ಮೂವರು ಉಗ್ರರನ್ನು ಎನ್ ಕೌಂಟರ್ ಮೂಲಕ ಸದೆಬಡಿಯುವಲ್ಲಿ ಯಶಸ್ವಿಯಾಗಿದೆ. ಟುರ್ಕು ವಂಗಮ್ ಗ್ರಾಮದಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆಸಿದ್ದರು ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಸ್ಥಳದಿಂದ ಏಕೆ-47, ಐಎನ್ ಎಸ್ ಎಎಸ್ ರೈಫಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನೂ ಮೂವರು

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು. ಜೂ. 14, ವಿದ್ಯುತ್ ಶಾಕ್ ತಗುಲಿ ಯುವಕರೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೈಯೂರಿನಿಂದ ವರದಿಯಾಗಿದೆ. ಮೃತರನ್ನು ಕೈಯೂರು ಉದ್ದೋಳೆ ಕಾಂಪ್ಲೆಕ್ಸ್ ಮಾಲಕ ರಮೇಶ್ ಗೌಡ ಎಂದು ತಿಳಿದು ಬಂದಿದೆ. ಇವರು ತನ್ನ ತೋಟದಲ್ಲಿರುವ ಪಂಪ್ ಅನ್ನು ಚಾಲು ಮಾಡಲು ಸ್ವಿಚ್ ಹಾಕುವ ಸಂದರ್ಭ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಇವರು ಕೈಯೂರು ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರೂ ಆಗಿದ್ದರು.

ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಟಿಕ್-ಟಾಕ್ ಅವಾಂತರ ➤ ಜೀವಂತ ಮೀನು ನುಂಗಿ ಯುವಕ ದುರ್ಮರಣ

(ನ್ಯೂಸ್ ಕಡಬ)newskadaba.com ಟಿಕ್‍ಟಾಕ್ ವಿಡಿಯೋ ಮಾಡಲು ಹೋಗಿ ಜೀವಂತ ಮೀನು ನುಂಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಹೊಸೂರಿನ ಪಾರ್ವತಿ ನಗರದ ನಿವಾಸಿ ವೆಟ್ರಿವೆಲ್ (22) ಎಂದು ಗುರುತಿಸಲಾಗಿದೆ. ಇವರು ತನ್ನ ಇಬ್ಬರು ಸ್ನೇಹಿತರ ಜೊತೆ ಕೆರೆಗೆ ಮೀನು ಹಿಡಿಯಲು ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವೆಟ್ರಿವೆಲ್ ಮತ್ತು ಆತನ ಇಬ್ಬರು ಸ್ನೇಹಿತರು ಮದ್ಯಪಾನ ಮಾಡಿದ್ದರು. ಈ ವೇಳೆ ವೆಟ್ರಿವೆಲ್ ತನ್ನ ಸ್ನೇಹಿತರೊಂದಿಗೆ

ಟಿಕ್-ಟಾಕ್ ಅವಾಂತರ ➤ ಜೀವಂತ ಮೀನು ನುಂಗಿ ಯುವಕ ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧಾರ್ಮಿಕ ನಂಬಿಕೆಗೆ ಘಾಸಿ ➤ ವಿಡಿಯೋ ಹರಿಬಿಟ್ಟ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.14: ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ಇರುವ ಧಾರ್ಮಿಕ ಸ್ಥಳದಲ್ಲಿ ಧಾರ್ಮಿಕ ನಂಬಿಕೆಗೆ ಘಾಸಿಯಾಗುವಂತ ಕೃತ್ಯವೆಸಗಿ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿರುವ ಹಿನ್ನೆಲೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.   ಬಂಧಿತ ಆರೋಪಿಗಳನ್ನ ಸಜೀಪನಡು ಗ್ರಾಮದ ನಿವಾಸಿಗಳಾದ ಮೊಹಮ್ಮದ್ ಮಸೂದ್ (20), ಮೊಹಮ್ಮದ್ ಅಜೀಮ್ (20), ಅಬ್ದುಲ್ ಲತೀಫ್ (20), ಮೊಹಮ್ಮದ್ ಅರ್ಫಾಜ್ (20) ಎಂದು ಗುರುತಿಸಲಾಗಿದೆ.  ಶನಿವಾರದಂದು ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿನ ಧಾರ್ಮಿಕ

ಧಾರ್ಮಿಕ ನಂಬಿಕೆಗೆ ಘಾಸಿ ➤ ವಿಡಿಯೋ ಹರಿಬಿಟ್ಟ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮತ್ತೆ ಕಾರ್ಯಾಚರಣೆಗೆ ಇಳಿದ ಭಜರಂಗದಳ..! ➤ ಟೆಂಪೊ ಅಡ್ಡಹಾಕಿ 4 ಕೋಣಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಜೂ.14 : ಇಂದು ನಸುಕಿನ ಜಾವ ಮಂಗಳೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ನಡೆಯುತ್ತಿದ್ದುದನ್ನು ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ ಪತ್ತೆಹಚ್ಚಿದ್ದಾರೆ. ಕಳೆದ ಕೆಲ ಸಮಯದಿಂದ ಸೈಲೆಂಟ್ ಆಗಿದ್ದ ಭಜರಂಗ ದಳ ಇದೀಗ ಮತ್ತೆ ಎಕ್ಟಿವ್ ಆಗಿದೆ.   ಕೊಟ್ಟಾರ ಬಳಿ ಮಿನಿ ಟೆಂಪೋ ತಡೆದು 4 ಕೋಣಗಳನ್ನು ರಕ್ಷಣೆ ಮಾಡಿ ಒಬ್ಬ ಆರೋಪಿಯನ್ನು ಹಿಡಿದು ಸಂಘಟನೆಯ ಕಾರ್ಯಕರ್ತರು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ. ಉರ್ವ ಪೊಲೀಸ್ ಠಾಣೆಗೆ ಸಮೀಪದಲ್ಲೇ ಘಟನೆ ನಡೆದಿದೆ, ಉಡುಪಿ ಯಿಂದ

ಮತ್ತೆ ಕಾರ್ಯಾಚರಣೆಗೆ ಇಳಿದ ಭಜರಂಗದಳ..! ➤ ಟೆಂಪೊ ಅಡ್ಡಹಾಕಿ 4 ಕೋಣಗಳ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top