ಕ್ರೈಮ್ ನ್ಯೂಸ್

ಮಾಣಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ವಿಟ್ಲ. ಜೂ.13, ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ‌ ಪಳಿಕೆ‌ ಎಂಬಲ್ಲಿನ ಮರದ ಬುಡದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಮರದಲ್ಲಿ ಪ್ಯಾಂಟು ನೇತಾಡುತ್ತಿದ್ದು, ಪ್ಯಾಂಟಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ‌ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ‌. ಮೃತನ ಹೆಸರು ಹಾಗೂ ವಿಳಾಸ ಪತ್ತೆಯಾಗದ‌ ಹಿನ್ನೆಲೆಯಲ್ಲಿ ಈ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದರೆ ವಿಟ್ಲ ಪೊಲೀಸ್ ಠಾಣೆಗೆ ಅಥವಾ ಸ್ಥಳೀಯ ಪೊಲೀಸ್ […]

ಮಾಣಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

(ನ್ಯೂಸ್ ಕಡಬ)newskadaba.com ಕೊಳ್ಳೇಗಾಲ, ತಾಯಿಯೋರ್ವಳು ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ.   ಮೃತರನ್ನು ಸಂಗೀತಾ (23) ಎಂದು ಗುರುತಿಸಲಾಗಿದೆ. 3 ವರ್ಷದ ಮಗ ಕರಣ್ ನನ್ನು ಹತ್ಯೆಗೈದ ಈಕೆ ಬಳಿಕ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಗ್ರಾಮದ ದೇಗುಲಕ್ಕೆ ತೆರಳುತ್ತೇನೆಂದು ಹೇಳಿ ಹೋದ ಸಂಗೀತಾ ಮನೆಯಿಂದ ತೆರಳಿದ್ದಾಳೆ ಎನ್ನಲಾಗಿದ್ದು, ಬಳಿಕ ಕೃತ್ಯ ಎಸಗಿದ್ದಾಳೆ ಎಂದು ತಿಳಿದುಬಂದಿದೆ. ಸಾವಿಗೆ ಕಾರಣ ನಿಗೂಢವಾಗಿದ್ದು, ಘಟನೆ ಸಂಬಂಧ ಕೊಳ್ಳೇಗಾಲ

ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರೀ ಗಾಳಿ ಮಳೆಗೆ ಮನೆಯ ಕಾಂಪೌಂಡ್ ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.12, ಧಾರಾಕಾರ ಮಳೆಯಿಂದಾಗಿ ತನ್ನದೇ ಮನೆಯ ಕಂಪೌಂಡ್ ಗೋಡೆ ಕುಸಿದು ಗಂಭೀರ ಗಾಯಗೊಂಡ ಗುರುಪುರದ ಮಠದಗುಡ್ಡೆ ನಿವಾಸಿ ನಾರಾಯಣ ನಾಯ್ಕ (52) ಎಂಬವರು ಮೃತಪಟ್ಟಿದ್ದಾರೆ. ಶುಕ್ರವಾರ ಧಾರಾಕಾರ ಮಳೆಯಾಗುತ್ತಿದ್ದುದರಿಂದ ಮಧ್ಯಾಹ್ನ 1:30ರ ವೇಳೆಗೆ ನೀರು ಹೋಗಲು ಮನೆಯ ಪಕ್ಕದಲ್ಲಿ ಚಿಕ್ಕ ತೋಡು ಬಿಡಿಸುವ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಮಳೆಯಿಂದ ತೇವಗೊಂಡಿದ್ದ ಅವರದೇ ಮನೆಯ ಮುರಕಲ್ಲಿನ ಆಳೆತ್ತರದ ಕಂಪೌಂಡ್ ನಾರಾಯಣ ನಾಯ್ಕರ ಮೇಲೆ ಬಿದ್ದಿದೆ. ತೀವ್ರ ರಕ್ತಸ್ರಾವಗೊಂಡ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ

ಭಾರೀ ಗಾಳಿ ಮಳೆಗೆ ಮನೆಯ ಕಾಂಪೌಂಡ್ ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕೊರೊನಕ್ಕೆ ರಾಜ್ಯ ತತ್ತರ ➤ ಒಂದೇ ದಿನ 271 ಪಾಸಿಟಿವ್ ಕೇಸ್, 7 ಸೋಂಕಿತರ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು. ಜೂ. 12, ರಾಜ್ಯದಲ್ಲಿ ಕಳೆದ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ 271 ಜನರಿಗೆ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6,516ಕ್ಕೆ ಏರಿಕೆ ಕಂಡಂತಾಗಿದೆ. ಇಂದು ಬಳ್ಳಾರಿಯಲ್ಲಿ 97, ಬೆಂಗಳೂರು ನಗರದಲ್ಲಿ 36 ಜನರಿಗೆ ಸೋಂಕು ತಗುಲಿದ್ದರೆ, ಉಡುಪಿ 22, ಕಲಬುರಗಿಯಲ್ಲಿ 20, ಧಾರವಾಡದಲ್ಲಿ 19, ದಕ್ಷಿಣ ಕನ್ನಡದಲ್ಲಿ 17 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು ರಾಜ್ಯದಲ್ಲಿ ಇಂದು ಕೊರೋನಾ

ಕೊರೊನಕ್ಕೆ ರಾಜ್ಯ ತತ್ತರ ➤ ಒಂದೇ ದಿನ 271 ಪಾಸಿಟಿವ್ ಕೇಸ್, 7 ಸೋಂಕಿತರ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ತೆಂಗಿನಮರ ➤ ಅಪಾರ ಹಾನಿ, ಓರ್ವ ಗಂಭೀರ

(ನ್ಯೂಸ್ ಕಡಬ)newskadaba.com ಮಂಗಳೂರು. ಜೂ.12, ಇಂದು ಮಧ್ಯಾಹ್ನ ಸುರಿದ ಭಾರೀ ಮಳೆಗೆ ಮನೆಯೊಂದರ ಮಾಡಿನ ಮೇಲೆ ತೆಂಗಿನ ಮರ ಉರುಳಿಬಿದ್ದು ಭಾರೀ ಹಾನಿ ಸಂಭವಿಸಿದ ಘಟನೆ ನಗರದ ಹೊರವಲಯದ ಬೆಂಗ್ರೆ ಮೂಳೂರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆನ್ನಲಾಗಿದೆ. ಹೆಂಚಿನ ಮನೆಯ ಮಾಡು ಕುಸಿದು ಲಕ್ಷಾಂತರ ರೂ. ಹಾನಿ ಸಂಭವಿಸಿದ್ದರೆ, ಇಲ್ಲೇ ಪಕ್ಕದ ಮನೆಯ ಕಂಪೌಂಡ್ ಗೋಡೆ ಕುಸಿದು ಹಾನಿ ಸಂಭವಿಸಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ತೆಂಗಿನಮರ ➤ ಅಪಾರ ಹಾನಿ, ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬದ ಆಶಾ ಕಾರ್ಯಕರ್ತೆ ನಾಪತ್ತೆ ➤ ಕರುಳ ಕುಡಿಗಳ ಆಕ್ರಂದನ

(ನ್ಯೂಸ್ ಕಡಬ) newskadaba.com ಕಡಬ,ಜೂ.10: ಆಶಾ ಕಾರ್ಯಕರ್ತೆಯೋರ್ವರು ತನ್ನಿಬ್ಬರು ಮಕ್ಕಳನ್ನು ಮನೆಯಲ್ಲೇ ಬಿಟ್ಟು ನಾಪತ್ತೆಯಾದ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಐತ್ತೂರು ಗ್ರಾಮದ ಆಶಾ ಕಾರ್ಯಕರ್ತೆ ಸೌಮ್ಯಾ ಸೋಮವಾರದಂದು ಮಂಗಳೂರು ಆಸ್ಪತ್ರೆಗೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದು, ಆ ಬಳಿಕ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಮನೆಮಂದಿಯನ್ನು ಆತಂಕಕ್ಕೆ ಒಳಪಡಿಸಿದೆ. ಇತ್ತ ತನ್ನಿಬ್ಬರು ಕರುಳ ಕುಡಿಗಳನ್ನು ಮನೆಯಲ್ಲೇ ಬಿಟ್ಟು ತೆರಳಿರುವ ಸೌಮ್ಯಾರ ಆಗಮನಕ್ಕಾಗಿ ಮಕ್ಕಳು ಕಾಯುತ್ತಿದ್ದಾರೆ. ಈ ಬಗ್ಗೆ ಆಕೆಯ

ಕಡಬದ ಆಶಾ ಕಾರ್ಯಕರ್ತೆ ನಾಪತ್ತೆ ➤ ಕರುಳ ಕುಡಿಗಳ ಆಕ್ರಂದನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಯುವ ಜೋಡಿ ಮದುವೆಯಾಗಿ ಪತ್ತೆ ➤ ಜೋಡಿಯನ್ನ ಕರೆ ತಂದ ಸುಬ್ರಹ್ಮಣ್ಯ ಪೊಲೀಸರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.10: ಯುವ ಜೋಡಿಯೊಂದು ನಾಪತ್ತೆಯಾದ ಬಗ್ಗೆ ಪ್ರಕರಣ ದಾಖಲಾಗಿ 24 ಗಂಟೆಗಳಲ್ಲಿ ಸುಬ್ರಹ್ಮಣ್ಯ ಪೊಲೀಸರು ಜೋಡಿಯನ್ನು ಪತ್ತೆಹಚ್ವಿ ಕರೆತಂದಿದ್ದಾರೆ. ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿ ಲಿಖಿತಾ ಹಾಗೂ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಯುವಕ, ಸುಬ್ರಹ್ಮಣ್ಯದಲ್ಲಿ ಹೋಮ್ ಗಾರ್ಡ್ ಆಗಿ ಕರ್ತವ್ಯದಲ್ಲಿದ್ದ ಅಭಿಲಾಷ್ ವಾರದ ಹಿಂದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಸೋಮವಾರದಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳವಾರದಂದು ಪ್ರೇಮಿಗಳನ್ನು ಬೆಂಗಳೂರಿನಲ್ಲಿ ಪತ್ತೆಹಚ್ಚಿರುವ ಸುಬ್ರಹ್ಮಣ್ಯ ಪೊಲೀಸರು, ಬುಧವಾರ ಬೆಳಿಗ್ಗೆ ಕರೆತಂದಿದ್ದಾರೆ.

ನಾಪತ್ತೆಯಾಗಿದ್ದ ಯುವ ಜೋಡಿ ಮದುವೆಯಾಗಿ ಪತ್ತೆ ➤ ಜೋಡಿಯನ್ನ ಕರೆ ತಂದ ಸುಬ್ರಹ್ಮಣ್ಯ ಪೊಲೀಸರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.10: ಮಂಗಳೂರು ಹೊರವಲಯದ ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ ನಿಗೂಢ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಈ ಶವ ಪತ್ತೆಯಾಗಿದೆ. ಶವದ ಗುರುತು ಪತ್ತೆ ಮಾಡಲಾಗಿದ್ದು ಕೊಲ್ಯ ಸಾರಸ್ವತ ಕಾಲೊನಿ ನಿವಾಸಿ ಚೇತನ್ ಆಚಾರ್ಯ (33) ಎಂದು ಗುರುತ್ತಿಸಲಾಗಿದೆ.ಎರಡು ದಿನದ ಹಿಂದೆ ಮನೆಯಿಂದ ಹೊರಟಿದ್ದ ಚೇತನ್ ಬಳಿಕ ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ  ಇಂದು ಬೆಳಿಗ್ಗೆ ಚೇತನ್ ನಾಪತ್ತೆ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾನಸಿಕ ಖಿನ್ನತೆಯಿಂದ

ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮುಳ್ಳು ಹಂದಿ ದಾಳಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜೂ.10, ಯುವಕನೋರ್ವ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಮುಳ್ಳು ಹಂದಿ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ನಡೆದಿದೆ. ದಾಳಿಗೊಳಗಾದ ಯುವಕನನ್ನು ಶಫೀಕ್ (16) ಎಂದು ಗುರುತಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತನ್ನ ಸ್ನೇಹಿತನ ಜತೆ ಸಾಲೆತ್ತೂರಿನಿಂದ ಕರೈಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮುಳ್ಳು ಹಂದಿ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು,ಜೂ.6: ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತದ ನಡುವೆಯೇ ರಾಜ್ಯದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಕೊಂದಿರುವ ಅಮಾನೀಯ ಘಟನೆ ವರದಿಯಾಗಿದೆ.  ಹಲಸಿನ ಹಣ್ಣಿಗೆ ವಿಷ ಬೇರೆಸಿ ಮೂರು ದನಗಳನ್ನು ಕೊಂದಿರುವ ಪ್ರಕರಣ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.   ತೋಟಕ್ಕೆ ದನಗಳು ಬೇಕಾಬಿಟ್ಟಿ ನುಗ್ಗುತ್ತಿವೆ ಎಂಬ ಕಾರಣಕ್ಕೆ

ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top