ಕ್ರೈಮ್ ನ್ಯೂಸ್

ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ

(ನ್ಯೂಸ್ ಕಡಬ) newskadaba.com ಮುಲ್ಕಿ, ಜೂ.6:  ಮೂಡಬಿದ್ರೆಯಲ್ಲಿ ಚಿನ್ನದ ಮಳಿಗೆ ಹೊಂದಿದ್ದ ಕಾಣಿಯೂರು ಸಮೀಪದ ಮುರುಳ್ಯ ಗ್ರಾಮದ ಯುವಕ ಅಬ್ದುಲ್ ಲತೀಫ್ ರವರನ್ನ ದುಷ್ಕರ್ಮಿಗಳ ತಂಡವೊಮದು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಜೂ.5 ರಂದು ಮುಲ್ಕಿಯಲ್ಲಿ ನಡೆದಿದೆ.   ಮೂಡ ಬಿದಿರೆಯ ಅಮರಶ್ರೀ ಚಿತ್ರ ಮಂದಿರದ ಬಳಿ ಅಲೈನ್ ಗೋಲ್ಡ್ ಎಂಬ ಹೆಸರಿನ ಚಿನ್ನದ ಮಳಿಗೆ ನಡೆಸುತ್ತಿದ್ದ ಯುವ ಉದ್ಯಮಿ ಅಬ್ದುಲ್ ಲತೀಫ್ ಅವರು, ತನ್ನ ಮಾನ ಮುನೀರ್ ಹಾಗೂ ಅವರ ಪುತ್ರ ಹಯಾತ್ ಎಂಬುವರ […]

ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೇರಳದಲ್ಲಿ ಆನೆಯ ಹತ್ಯೆ ಪ್ರಕರಣ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com  ಕೇರಳ,ಜೂ 05: ಕೇರಳದಲ್ಲಿ ಗರ್ಭಿಣಿ ಆನೆಯ ಹತ್ಯೆಯಲ್ಲಿ ಭಾಗಿಯಾದ ಆರೋಪದಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ರಾಜ್ಯ ಅರಣ್ಯ ಸಚಿವರು ತಿಳಿಸಿದ್ದಾರೆ. ಗರ್ಭಿಣಿ ಆನೆಯನ್ನು ಪೈನಾಪಲ್ನಲ್ಲಿ ಸ್ಫೋಟಕ ಇರಿಸಿ ಹತ್ಯೆಗೈದಿರುವ ಘಟನೆಯ ಬಗ್ಗೆ ದೇಶದೆಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆನೆಯ ಹತ್ಯೆಯನ್ನು ಖಂಡಿಸಿದ್ದಲ್ಲದೆ, ತನಿಖೆಗೆ ಆದೇಶಿಸಿದ್ದರು.   ಸ್ಫೋಟಕವಿದ್ದ ಪೈನಾಪಲ್ ಸೇರಿದಂತೆ ಹಲವು ಹಣ್ಣುಗಳನ್ನು ಸೇವಿಸಿದ ಬಳಿಕ ಹಸಿವಿನಿಂದ ಆನೆಯು ಸಾವನ್ನಪ್ಪಿರಬಹುದು. ಸಾಮಾನ್ಯವಾಗಿ

ಕೇರಳದಲ್ಲಿ ಆನೆಯ ಹತ್ಯೆ ಪ್ರಕರಣ ➤ ಓರ್ವನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ)newskadaba.com ಪುತ್ತೂರು. ಜೂ. 5, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಾಣಿಕ್ಯ ರಾಜ್ ಪಡಿವಾಳ್(68 ವ) ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಸದಸ್ಯ, ಎಪಿಎಂಸಿ ಮಾಜಿ ನಿರ್ದೇಶಕ, ಬಜತ್ತೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾಗಿಯೂ ಹಲವಾರು ಕ್ಷೇತ್ರಗಳಲ್ಲಿ ಸೇವೆಗೈದಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಸಹೋದರರು ಮತ್ತು ಓರ್ವ ಸಹೋದರಿಯರನ್ನು ಅಗಲಿದ್ದಾರೆ. ಶಕುಂತಲಾ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ಚಂದ್ರಹಾಸ ಶೆಟ್ಟಿ ಸೇರಿದಂತೆ ಹಲವಾರು

ಪುತ್ತೂರು: ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com , ಬೆಳ್ಳಾರೆ. ಜೂ. 4, ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುರುಳ್ಯ ಗ್ರಾಮದ ಬೊಣ್ಯಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಮುರುಳ್ಯ ಗ್ರಾಮದ ಬೊಣ್ಯಡ್ಕ ನಿವಾಸಿ ಶಶೀಂದ್ರ (41) ಎಂದು ಗುರುತಿಸಲಾಗಿದೆ. ಇವರು ಮನೆಯ ಬಿದಿರಿನ ಅಡ್ಡಕ್ಕೆ ಲುಂಗಿಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ ಮತ್ತು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳಾರೆ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮೂಕ ಪ್ರಾಣಿಯ ಹತ್ಯೆ ➤ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ

(ನ್ಯೂಸ್ ಕಡಬ) newskadaba.com ಕೇರಳ,ಜೂ 04: ಕೇರಳದ ಮಲಪ್ಪುರಂ ಜಿಲ್ಲೆಯ ಸೈಲೆಂಟ್ ವ್ಯಾಲಿಯಲ್ಲಿ ಕಳೆದ ದಿನ ಹೃದಯ ವಿದ್ರಾವಕ ಘಟನೆಯೊಂದು ನಡೆದಿತ್ತು.ಹೌದು, ಆ ಮೂಕ ಪ್ರಾಣಯೊಂದು ತನ್ನ ಹೊಟ್ಟೆಯಲ್ಲಿ ಕಂದನನ್ನು ಇಟ್ಟು ಕೊಂಡು ಆಹಾರ ಅರಸುತ್ತಾ ಗ್ರಾಮವೊಂದರ ಸಮೀಪಕ್ಕೆ ಬಂದಿತ್ತು. ಆದರೆ ಅಲ್ಲಿ ಅಗಿದ್ದೇ ಬೇರೆ. ಮನುಷ್ಯ ರೂಪದಲ್ಲಿದ್ದ ಕ್ರೂರ ನರ ರಾಕ್ಷಸರು, ಅನನಾಸುವಿನಲ್ಲಿ ಪಟಾಕಿ ಇಟ್ಟು ಆ ಗರ್ಭಿಣಿ ಆನೆಯನ್ನ ಹತ್ಯೆ ಮಾಡಿಯೇ ಬಿಟ್ಟಿದ್ದರು. ಇಲ್ಲಿ ಮನುಷ್ಯನ ಮಾನವೀಯತೆ ಸತ್ತು ಹೋಗಿದೆ.      

ಮೂಕ ಪ್ರಾಣಿಯ ಹತ್ಯೆ ➤ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ. ಜೂ. 4, ಕುಟ್ರುಪಾಡಿ ಗ್ರಾಮದ ಮುಳಿಯ ನಿವಾಸಿ ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಗ್ರಾಮದ ಆಳದಪದವು ಎಂಬಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕುಟ್ರುಪಾಡಿ ಗ್ರಾಮದ ಮುಳಿಯ ಬಾಲಕೃಷ್ಣ ಶೆಟ್ಟಿ ಎಂಬವರ ಪುತ್ರ ನವೀನ್ ಶೆಟ್ಟಿಯವರು ಕಳೆದ ಹಲವಾರು ವರ್ಷಗಳಿಂದ ಆಳದಪದವಿನಲ್ಲಿ ವಾಸವಿದ್ದರು. ಇವರ ಪತ್ನಿ ಮಕ್ಕಳು ಕಳೆದ ಶನಿವಾರ ಅವರ ತಾಯಿ ಮನೆಗೆ ತೆರಳಿದ ಸಂದರ್ಭ ಮನೆಯಲ್ಲಿ ಓರ್ವರೇ ಇದ್ದ ಇವರು  ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ

ಕಡಬ: ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಭೂಗತ ಪಾತಕಿ ರವಿ ಪೂಜಾರಿ ಸಹಚರನ ಬಂಧನ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ 03: ಭೂಗತ ಪಾತಕಿ ರವಿ ಪೂಜಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು, ರವಿ ಪೂಜಾರಿಯ ಸಹಚರನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುಲಾಮ ಎಂದು ಗುರುತಿಸಲಾಗಿದೆ. ಈತ ರವಿ ಪೂಜಾರಿ ಮಾಡುವ ಕೃತ್ಯಕ್ಕೆ ಸುಲಿಗೆ ಸಹಾಯ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.     ಸಿಸಿಬಿ ಅಧಿಕಾರಿಗಳು ಮಂಗಳೂರಿನಲ್ಲಿ ಬಂಧಿಸಿ, ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಸದ್ಯ ಗುಲಾಮನನ್ನ 10 ದಿನ ಕಸ್ಟಡಿಗೆ ತೆಗೆದುಕೊಂಡಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ರಾಜ್ಯ

ಭೂಗತ ಪಾತಕಿ ರವಿ ಪೂಜಾರಿ ಸಹಚರನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವತಿಗೆ ಲೈಂಗಿಕ ಕಿರುಕುಳ ➤ ಆರೋಪಿಯನ್ನ ಸುಟ್ಟ ಪೋಷಕರು

(ನ್ಯೂಸ್ ಕಡಬ) newskadaba.com ಲಖನೌ,ಜೂ 03: ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂಬ ಆರೋಪವಿದ್ದ 22ಹರೆಯದ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿಹಾಕಿ ಸಜೀವ ದಹನ ಮಾಡಿದ ಘಟನೆ ಉತ್ತರ ಪ್ರದೇಶದ ಪ್ರತಾಪ್ಗಡದಲ್ಲಿ ಸೋಮವಾರ ರಾತ್ರಿ ನಡೆದಿದೆ. ಪ್ರತಾಪ್ಗಡ ಜಿಲ್ಲೆಯ ಫತಾನ್ಪುರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ, ಸೋಮವಾರ ರಾತ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಜನರ ಗುಂಪು ಪೊಲೀಸರೊಂದಿಗೆ ಸಂಘರ್ಷಕ್ಕಿಳಿದು ಪೊಲೀಸ್ ವಾಹನಗಳನ್ನು ಸುಟ್ಟು ಹಾಕಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಅಂಬಿಕಾ ಪ್ರಸಾದ್ ಪಟೇಲ್

ಯುವತಿಗೆ ಲೈಂಗಿಕ ಕಿರುಕುಳ ➤ ಆರೋಪಿಯನ್ನ ಸುಟ್ಟ ಪೋಷಕರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮುಂಬೈನಿಂದ ಬಂದವರು ಪರಾರಿ ➤ ಕ್ವಾರಂಟೈನ್ಗೆ ಒಳಗಾಗದಿದ್ದರೆ ಕ್ರಿಮಿನಲ್ ಕೇಸ್

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ 02:  ಮುಂಬೈನಿಂದ ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಂಗಳವಾರ ಬೆಳಿಗ್ಗೆ ನಗರ ನಿಲ್ದಾಣಕ್ಕೆ ಬಂದಿಳಿದಿದ್ದ ಹಲವು ಪ್ರಯಾಣಿಕರು ನಿಲ್ದಾಣದಲ್ಲಿದ್ದ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾರೆ. ಇನ್ನುಪರಾರಿಯಾದವರ ಪತ್ತೆಗೆ ಪಶ್ಚಿಮ ವಿಭಾಗ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸ್ವಯಂಪ್ರೇರಿತವಾಗಿ ಬಂದು ಕ್ವಾರಂಟೈನ್ಗೆ ಒಳಪಡುವಂತೆಯೂ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ‘ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ 667 ಪ್ರಯಾಣಿಕರು ಬಂದಿದ್ದರು. ಅವರೆಲ್ಲರೂ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ

ಮುಂಬೈನಿಂದ ಬಂದವರು ಪರಾರಿ ➤ ಕ್ವಾರಂಟೈನ್ಗೆ ಒಳಗಾಗದಿದ್ದರೆ ಕ್ರಿಮಿನಲ್ ಕೇಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಲ್ವಾರ್ ದಾಳಿ ನಡೆಸಿ ಯುವಕನ ಹತ್ಯೆ ➤ ಐವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ 02: ಸೋಮವಾರ ಯುವಕನ ಮೇಲೆ ತಲ್ವಾರ್ನಿಂದ ದಾಳಿ ನಡೆಸಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಪೊಲೀಸರು ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮಾರಕಾಯುಧಗಳು ಹಾಗೂ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ದೀಪೇಶ್, ಸುಹಾಸ್ ಶೆಟ್ಟಿ, ಪ್ರಶಾಂತ್ ಯಾನೆ ಪಚ್ಚು ಮೋಕ್ಷಿತ್ ಮತ್ತು ಧನರಾಜ್ ಎಂದು ಗುರುತಿಸಲಾಗಿದೆ.   ಸೋಮವಾರ ತಂಡವೊಂದು ಮೂಡಬಿದ್ರೆ ತಾಲೂಕಿನ ಕಟೀಲು ಸಮೀಪದ ಎಕ್ಕಾರು ದೇವರಗುಡ್ಡೆಯಲ್ಲಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಮಂಗಳೂರಿನ ಮರಕಡ

ತಲ್ವಾರ್ ದಾಳಿ ನಡೆಸಿ ಯುವಕನ ಹತ್ಯೆ ➤ ಐವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top