ಕ್ರೈಮ್ ನ್ಯೂಸ್

ಎಲ್ಲೆಂದರಲ್ಲಿ ವಾಹನ ನಿಲ್ಲಿಸುತ್ತಿರುವವರಿಗೆ ಬಿಗ್ ಶಾಕ್ ➤ ಕಡಬ ಪೊಲೀಸರಿಂದ ವಾಹನಗಳ ವ್ಹೀಲ್ ಲಾಕ್..!!

(ನ್ಯೂಸ್ ಕಡಬ) newskadaba.com ಕಡಬ, ಮೇ.29. ರಸ್ತೆಯ ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸಿ ತೆರಳಿದವರಿಗೆ ಕಡಬ ಪೊಲೀಸರು ವ್ಹೀಲ್ ಲಾಕ್‌ ಮಾಡುವ ಮೂಲಕ ಶಾಕ್ ನೀಡಿದ್ದಾರೆ. ಕಡಬ ಪೇಟೆಗೆ ಆಗಮಿಸುತ್ತಿದ್ದ ಕೆಲವರು ವಾಹನಗಳನ್ನು ಬೇಕಾಬಿಟ್ಟಿಯಾಗಿ ರಸ್ತೆಯಲ್ಲೇ ನಿಲ್ಲಿಸಿ ತೆರಳುತ್ತಿದ್ದರು. ಇಂತಹ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಕಡಬ ಪೊಲೀಸರು ವ್ಹೀಲ್ ಲಾಕ್ ಮಾಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಈ ಮೂಲಕ ಕಡಬ ಪೊಲೀಸರು ಪೇಟೆಯ ಟ್ರಾಫಿಕ್ ಸಮಸ್ಯೆಗೆ ಕೊಂಚ ಮಟ್ಟಿನ ಪರಿಹಾರವನ್ನು ಕಂಡು ಹುಡುಕಿದ್ದಾರೆ.

ಎಲ್ಲೆಂದರಲ್ಲಿ ವಾಹನ ನಿಲ್ಲಿಸುತ್ತಿರುವವರಿಗೆ ಬಿಗ್ ಶಾಕ್ ➤ ಕಡಬ ಪೊಲೀಸರಿಂದ ವಾಹನಗಳ ವ್ಹೀಲ್ ಲಾಕ್..!! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಟ್ಟಂಪಾಡಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಟ್ಟಂಪಾಡಿ, ಮೇ. 29, ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಟ್ಟಂಪಾಡಿಯ ಮಿತ್ತಡ್ಕ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಮಿತ್ತಡ್ಕ ದಿ. ಶೀನ ಪೂಜಾರಿಯವರ ಪತ್ನಿ ಲಲಿತಾ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಸುಮಾರು 9 ಗಂಟೆಯವರೆಗೆ ಮನೆಯಲ್ಲಿಯೇ ಇದ್ದ ಲಲಿತಾರವರು ಏಕಾಏಕಿ ಮನೆಯಲ್ಲಿ ನಾಪತ್ತೆಯಾಗಿದ್ದು, ಮನೆಯವರು ಹುಡುಕಾಟ ನಡೆಸಿದ ವೇಳೆ ಮನೆಯ ಸಮೀಪದ ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಹಲವು ಸಮಯಗಳಿಂದ ಅನಾರೋಗ್ಯದಿಂದ

ಬೆಟ್ಟಂಪಾಡಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ ➤ ಕಡಬ ಪೊಲೀಸರಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹವೊಂದು ಕುಮಾರಧಾರ ನದಿ ತಟದಲ್ಲಿ ಕೊಳೆತ ಸ್ಥಿತಿಯಲ್ಲಿ ಗುರುವಾರದಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕು ಕುಂತೂರು ನಿವಾಸಿ ರುಕ್ಮಯ್ಯ ಗೌಡ(50) ಎಂದು ಗುರುತಿಸಲಾಗಿದೆ. ಕಳೆದ ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ಇವರನ್ನು ಎಲ್ಲಡೆ ಹುಡುಕಾಡಿ ಪತ್ತೆಯಾಗದ ಹಿನ್ನೆಲೆಯಲ್ಲಿ ಮಂಗಳವಾರದಂದು ಕಡಬ ಠಾಣೆಗೆ ದೂರು ನೀಡಲಾಗಿತ್ತು. ಗುರುವಾರ ಸಂಜೆ ಕೊಳೆತ ಸ್ಥಿತಿಯಲ್ಲಿ ಇವರ ಮೃತದೇಹವು ಕಡಬ ಠಾಣಾ ವ್ಯಾಪ್ತಿಯ ಚಾರ್ವಾಕ ಗ್ರಾಮದ ಓಟಕೆರೆ

ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ ➤ ಕಡಬ ಪೊಲೀಸರಿಂದ ಪರಿಶೀಲನೆ Read More »

ಕರಾವಳಿ, ಕ್ರೈಮ್ ನ್ಯೂಸ್

?? ?reaking News ದ.ಕ ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ, 25. ಕೊರೊನಾಗೆ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಬಲಿಯಾಗಿದ್ದು, ವೇಣೂರಿನ ವ್ಯಕ್ತಿ ಕೊರೋನಾ ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.   ಬೆಳ್ತಂಗಡಿ ತಾಲೂಕಿನ ವೇಣೂರು ಮೂಡುಕೋಡಿ ಪರಿಸರದ ವ್ಯಕ್ತಿಯಾದ ಇವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತಪಟ್ಟ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಇವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

?? ?reaking News ದ.ಕ ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಟ್ಟಣ: ಹೊಟೇಲ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ➤ ಅಬಕಾರಿ ಅಧಿಕಾರಿಗಳಿಂದ ದಾಳಿ, ಆರೋಪಿ ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಮೇ.22. ಹೊಟೇಲ್ ಒಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖಾಧಿಕಾರಿಗಳು ಅಕ್ರಮ ಮದ್ಯ ಮಾರಾಟವನ್ನು ಪತ್ತೆ ಹಚ್ಚಿರುವ ಘಟನೆ ಕಡಬ ತಾಲೂಕಿನ ನೆಟ್ಟಣ ಎಂಬಲ್ಲಿ ಶುಕ್ರವಾರದಂದು ನಡೆದಿದೆ. ನೆಟ್ಟಣ ಪೇಟೆಯಲ್ಲಿ ಕಾರ್ಯಚರಿಸುತ್ತಿರುವ ಹೋಟೆಲ್ ಅಂಬಾಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕಿ ಸುಜಾತ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ

ನೆಟ್ಟಣ: ಹೊಟೇಲ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ➤ ಅಬಕಾರಿ ಅಧಿಕಾರಿಗಳಿಂದ ದಾಳಿ, ಆರೋಪಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಚಿಕನ್ ಸೆಂಟರ್ ಹಾಗೂ ಮನೆಯಲ್ಲಿ ಅಕ್ರಮ ದನದ ಮಾಂಸ ಮಾರಾಟ ➤ ಓರ್ವನ ಬಂಧನ, ಮತ್ತೋರ್ವ ಪರಾರಿ, 23 ಕೆಜಿ ಮಾಂಸ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.22. ರಾಮಕುಂಜ ಗ್ರಾಮದ ನೀರಾಜೆ ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸಿ ದನದ ಮಾಂಸ ಮಾರಾಟ ಮತ್ತು ಆತೂರು ಡಿಲೈಟ್ ಚಿಕನ್ ಸೆಂಟರ್ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಕಡಬ ಪೋಲಿಸರು 23 ಕೆಜಿ ಮಾಂಸವನ್ನು ವಶಪಡಿಸಿಕೊಂಡು ಓರ್ವನನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ ಘಟನೆ ಶುಕ್ರವಾರದಂದು ನಡೆದಿದೆ. ರಾಮಕುಂಜ ಗ್ರಾಮದ ಆತೂರು ಡಿಲೈಟ್ ಚಿಕನ್ ಸೆಂಟರ್ ನಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ

ಚಿಕನ್ ಸೆಂಟರ್ ಹಾಗೂ ಮನೆಯಲ್ಲಿ ಅಕ್ರಮ ದನದ ಮಾಂಸ ಮಾರಾಟ ➤ ಓರ್ವನ ಬಂಧನ, ಮತ್ತೋರ್ವ ಪರಾರಿ, 23 ಕೆಜಿ ಮಾಂಸ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಹತ್ತನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ.21. ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕೊಂಬಾರು ಎಂಬಲ್ಲಿ ಗುರುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕೊಂಬಾರುಗದ್ದೆ ನಿವಾಸಿ ತಿಮ್ಮಪ್ಪ ಗೌಡ ಎಂಬವರ ಪುತ್ರ ನಂದನ್(16) ಎಂದು ಗುರುತಿಸಲಾಗಿದೆ. ನಂದನ್ ಹತ್ತನೆ ತರಗತಿಯಲ್ಲಿ ಓದುತ್ತಿದ್ದು ಗುರುವಾರ ಮುಂಜಾನೆ ತನ್ನ ಮನೆಯ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಮೃತದೇಹದ ಮರಣೋತ್ತರ ಪರೀಕ್ಷೆ ಯನ್ನು

ಕಡಬ: ಹತ್ತನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಕಸಾಯಿಖಾನೆಗೆ ಬೆಳ್ಳಾರೆ ಪೊಲೀಸರಿಂದ ದಾಳಿ ➤ 40 ಕೆಜಿ ದನದ ಮಾಂಸ ವಶಕ್ಕೆ- ಮೂವರ ಬಂಧನ, ಇಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.15. ಠಾಣಾ ವ್ಯಾಪ್ತಿಯ ಮಾಸ್ತಿಕಟ್ಟೆ ಸಮೀಪ ಉಮಿಕ್ಕಳದಲ್ಲಿ ಅಕ್ರಮವಾಗಿ ದನದ ಮಾಂಸ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಬೆಳ್ಳಾರೆ ಪೊಲೀಸರು ದನದ ಮಾಂಸ ವಶಪಡಿಸಿಕೊಂಡು ಮೂವರನ್ನು ಬಂಧಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಮರದ ಅಡಿಯಲ್ಲಿ ದನದ ಮಾಂಸ ಮಾಡುವ ಖಚಿತ ಮಾಹಿತಿ ದೊರೆತ ಬೆಳ್ಳಾರೆ ಪೊಲೀಸರು ದಾಳಿ ಮಾಡಿ ಸುಮಾರು 40 ಕೆ.ಜಿ.ದನದ ಮಾಂಸ ಹಾಗೂ ಮಾಂಸ ಮಾಡಲು ಉಪಯೋಗಿಸಿದ ಕತ್ತಿ, ಚೂರಿಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಹಾರಿಸ್,

ಅಕ್ರಮ ಕಸಾಯಿಖಾನೆಗೆ ಬೆಳ್ಳಾರೆ ಪೊಲೀಸರಿಂದ ದಾಳಿ ➤ 40 ಕೆಜಿ ದನದ ಮಾಂಸ ವಶಕ್ಕೆ- ಮೂವರ ಬಂಧನ, ಇಬ್ಬರು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.15. ಗ್ಯಾಸ್ ಸಾಗಾಟದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಶುಕ್ರವಾರ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ 75ರ ಗುಂಡ್ಯ ಸಮೀಪದಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿದ್ದು, ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಹೊರಠಾಣೆಯ ಪೋಲೀಸರು, ಅಗ್ನಿಶಾಮಕ ದಳದವರು, ಗ್ಯಾಸ್ ತುರ್ತುಸ್ಥಿತಿ ನಿವಾರಣೆ ವಾಹನ ಆಗಮಿಸಿದ್ದು ತೆರವು ಕಾರ್ಯಚರಣೆ ನಡೆಯುತ್ತಿದೆ‌.

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮೂಡುಬಿದಿರೆ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೂಡುಬಿದಿರೆ, ಮೇ 14: ತಾಲೂಕಿನ ತೋಡಾರಿನಲ್ಲಿ ನಿರ್ಮಾಣ ಹಂತದ ಕಟ್ಟಡದ 5ನೇ ಮಹಡಿಯಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ತೋಡಾರು ಪಡೀಲ್ ಬಾಕಿಯಾರು ನಿವಾಸಿ ವಿನಯ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಈತ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿರುವ ವೇಳೆ, 5ನೇ ಮಹಡಿಯಿಂದ ಆಯ ತಪ್ಪಿಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಮೂಡುಬಿದಿರೆ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top