ಕ್ರೈಮ್ ನ್ಯೂಸ್

ಕಾಂಗ್ರೆಸ್  ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ರಾಜಶೇಖರ್ ನಿಧನ

ಬೆಂಗಳೂರು, ಎ.13: ಕಾಂಗ್ರೆಸ್  ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಎಂ.ವಿ. ರಾಜಶೇಖರ್ (92) ಸೋಮವಾರ ಬೆಳಗ್ಗೆ ನಿಧನರಾದರು. ಅವರು ಬಹು ಅಂಗಾಗ ವೈಪಲ್ಯದಿಂದ ಬಳಲುತ್ತಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಪುತ್ರ ತಿಳಿಸಿದ್ದಾರೆ. ರಾಜಶೇಖರನ್‌ ಅವರು ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದು ಕಾಂಗ್ರೆಸ್‌ ಪಕ್ಷದಲ್ಲಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ. 92 ವರ್ಷ ವಯಸ್ಸಿನ ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಕನಕಪುರ ತಾಲೂಕಿನ ಮರಳವಾಡಿಯಲ್ಲಿ ಜನಿಸಿದ್ದು ಕರ್ನಾಟಕದ ಉತ್ತಮ ರಾಜಕಾರಣಿಗಳಲ್ಲಿ ಓರ್ವರಾಗಿದ್ದಾರೆ.  

ಕಾಂಗ್ರೆಸ್  ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ರಾಜಶೇಖರ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊರೋನ ವೈರಸ್ ಗೆ ಭಾರತದಲ್ಲಿ ಮತ್ತೊಬ್ಬ ವೈದ್ಯ ಬಲಿ

ಇಂದೋರ್, ಎ.12: ಭಾರತದಲ್ಲಿ ಕೊರೋನ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೊರೋನ ವೈರಸ್ ಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೊಬ್ಬರು ಕೊವಿಡ್ 19 ಗೆ ಬಲಿಯಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಲ್ಲಿ 65 ವರ್ಷದ ವೈದ್ಯ ಓಂ ಪ್ರಕಾಶ್ ಚೌಹಾಣ್ ಅವರು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ. ಆಯುಷ್ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಚೌಹಾಣ್ ಅವರಿಗೆ ಇತ್ತೀಚೆಗೆ ಕೊವಿಡ್ 19 ಸೋಂಕು ದೃಢಪಟ್ಟಿತ್ತು. ಕೊರೊನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಚೌಹಾಣ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ

ಕೊರೋನ ವೈರಸ್ ಗೆ ಭಾರತದಲ್ಲಿ ಮತ್ತೊಬ್ಬ ವೈದ್ಯ ಬಲಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಒಂದೇ ದಿನ ಕೊರೋನಗೆ 34 ಮಂದಿ ಸಾವು: 909 ಮಂದಿಗೆ ಸೋಂಕು ದೃಢ

ಹೊಸದಿಲ್ಲಿ, ಎ.12: ಮಹಾಮಾರಿ ಕೊರೋನ ವೈರಸ್​ ಅಟ್ಟಹಾಸ ಮುಂದುವರಿಯುತ್ತಲೇ ಇದೆ. ಭಾರತದಲ್ಲಿ ಸೋಂಕಿತರ ಸಂಖ್ಯೆ 8,356ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಯಲ್ಲಿ 909 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದ್ದು ಒಟ್ಟು 34 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಭಾರತದಲ್ಲಿ ಒಟ್ಟು ಸಾವಿನಸಂಖ್ಯೆ 273ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಮಾ.24ರ ಮಧ್ಯರಾತ್ರಿಯಿಂದ ಭಾರತ ಲಾಕ್​ಡೌನ್​ ಆಗಿತ್ತು. ಎ.14ರವರೆಗೆ ಅದರ ಅವಧಿ ಇತ್ತು. ಆದರೆ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲ

ದೇಶದಲ್ಲಿ ಒಂದೇ ದಿನ ಕೊರೋನಗೆ 34 ಮಂದಿ ಸಾವು: 909 ಮಂದಿಗೆ ಸೋಂಕು ದೃಢ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಡುಕೋಣೆ ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಆರೋಪ: ಫಾದರ್ ಸೇರಿ ಆರು ಜನರ ಮೇಲೆ ದೂರು

ಕುಂದಾಪುರ, ಎ.10: ಕೊರೋನ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವಿಕೆ ಹಿನ್ನಲೆಯಲ್ಲಿ ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಸಭೆ ಸಮಾರಂಭಗಳು ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿಷೇಧಿಸಿ ಹೊರಡಿಸಿರುವ ಆದೇಶ ಮಾಡಲಾಗಿತ್ತು. ಇದೀಗ ಆದೇಶ ಉಲ್ಲಂಘಿಸಿ, ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ನಾಡ ಗ್ರಾಮದ ಪಡುಕೋಣೆ ಸಂತ ಅಂತೋನಿ ಚರ್ಚ್‌ನಲ್ಲಿ ಜನರು ಸೇರಿ ಸಾಮೂಹಿಕ

ಪಡುಕೋಣೆ ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಆರೋಪ: ಫಾದರ್ ಸೇರಿ ಆರು ಜನರ ಮೇಲೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಲಯಾಳಂ ಹಾಸ್ಯ ನಟ ಶಶಿ ಕಳಿಂಗ ನಿಧನ

ಕೋಝಿಕ್ಕೋಡ್, ಎ.7: ರಂಗಭೂಮಿಯ ಜನಪ್ರಿಯ ನಟ, ಮಲಯಾಳಂ ಚಿತ್ರರಂಗದ ಖ್ಯಾತ ಹಾಸ್ಯ ನಟ ಶಶಿ ಕಳಿಂಗ ಅಲಿಯಾಸ್ ವಿ. ಚಂದ್ರಕುಮಾರ್ (59) ಮಂಗಳವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. 2009ರಲ್ಲಿ ಬಿಡುಗಡೆಯಾದ ಕೇರಳ ಕೆಫೆ ಸಿನಿಮಾದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ್ದರು. ಈ ವರೆಗೆ ಸುಮಾರು 30 ಮಲಯಾಳಂ ಸಿನಿಮಾದಲ್ಲಿ ನಟಿಸಿದ್ದರು. 2010ರಲ್ಲಿ ಬಿಡುಗಡೆಯಾಗಿದ್ದ ‘‘ಪ್ರಾಂಚಿಯೆಟ್ಟನ್ ಆ್ಯಂಡ್ ದ ಸೈಂಟ್’’ ಸಿನಿಮಾದಲ್ಲಿ ಕಾಳಿಂಗ ನಟನೆ ಅತ್ಯುತ್ತಮವಾಗಿತ್ತು. ಈ ಸಿನಿಮಾದಲ್ಲಿ ಸೂಪರ್

ಮಲಯಾಳಂ ಹಾಸ್ಯ ನಟ ಶಶಿ ಕಳಿಂಗ ನಿಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

breaking news ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ

ಬೆಂಗಳೂರು, ಎ.6: ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು. ಅವರಿಗೆ 44 ವರ್ಷ ವಯಸ್ಸಾಗಿತ್ತು. ಲಿವರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಸ್ಪಂಧಿಸದೆ ಅವರು ಸೋಮವಾರ ಸಂಜೆ ನಿಧರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬುಲೆಟ್ ಪ್ರಕಾಶ್ ಅವರು ಬಳಲುತ್ತಿದ್ದರು. ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಬುಲೆಟ್ ಪ್ರಕಾಶ್ ನಟಿಸಿದ್ದಾರೆ. ಸ್ವಲ್ಪ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ಅವರು

breaking news ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೋಮವಾರ 12 ಮಂದಿಗೆ ಕೊರೋನ ಸೋಂಕು ದೃಢ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 163ಕ್ಕೇರಿಕೆ

ಮೈಸೂರು, ಎ.6: ರಾಜ್ಯದಲ್ಲಿ ಸೋಮವಾರ ಹೊಸದಾಗಿ 12 ಮಂದಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 163ಕ್ಕೇರಿದೆ. ಈ ಪೈಕಿ ಮೈಸೂರು ಜಿಲ್ಲೆಯಲ್ಲಿ 7 ಸೋಂಕಿತರು ಪತ್ತೆಯಾಗಿದ್ದರೆ, ಬಾಗಲಕೋಟೆಯಲ್ಲಿ ಇಬ್ಬರಿಗೆ ಕೊರೋನ ಪಾಸಿಟಿವ್ ಆಗಿದೆ. ಹಾಗೆಯೇ ಬೆಂಗಳೂರು ನಗರ ಜಿಲ್ಲೆ ಹಾಗೂ ಗ್ರಾಮಾಂತರ ಜಿಲ್ಲೆಯ ಹಾಗೂ ಕೇರಳ ಮೂಲದ ತಲಾ ಒಬ್ಬರಲ್ಲಿ ಕೊರೋನ ಸೋಂಕು ಹರಡಿರುವುದು ದೃಢಪಟ್ಟಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ163ಕ್ಕೆ ಏರಿದೆ.

ಸೋಮವಾರ 12 ಮಂದಿಗೆ ಕೊರೋನ ಸೋಂಕು ದೃಢ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 163ಕ್ಕೇರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೀಪದ ಹತ್ತಿರ ಬರುವ ಕೊರೋನ ವೈರಸ್​ ಶಾಖದಿಂದ ಸಾಯುತ್ತದೆ!: ಬಿಜೆಪಿ ಶಾಸಕ ರಾಮದಾಸ್

ಮೈಸೂರು, ಎ.4: ದೀಪ ಹಚ್ಚುವುದರ ಹಿಂದೆ ವೈಜ್ಞಾನಿಕ ಕಾರಣವಿದೆ. ದೀಪ ಹಚ್ಚಿದರೆ ವೈರಸ್​ಗಳು ಆ ದೀಪದ ಬಳಿ ಬಂದು, ಶಾಖ ತಡೆಯಲಾರದೆ ಸಾಯುತ್ತವೆ ಎಂದು ಬಿಜೆಪಿ ಶಾಸಕ ಎಸ್​.ಎ. ರಾಮದಾಸ್ ಹೇಳಿದ್ದಾರೆ. ಕೊರೋನ ವೈರಸ್ ದಾಳಿಯಿಂದ ತತ್ತರಿಸಿರುವ ಭಾರತದಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ದೇಶದ ಜನರೆಲ್ಲರೂ ತಮ್ಮ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಏ. 5ಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಮೊಂಬತ್ತಿ, ಹಣತೆ ಅಥವಾ ಮೊಬೈಲ್ ಟಾರ್ಚ್​ ಬೆಳಗಬೇಕು ಎಂದು ಪ್ರಧಾನಮಂತ್ರಿ

ದೀಪದ ಹತ್ತಿರ ಬರುವ ಕೊರೋನ ವೈರಸ್​ ಶಾಖದಿಂದ ಸಾಯುತ್ತದೆ!: ಬಿಜೆಪಿ ಶಾಸಕ ರಾಮದಾಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊರೋನ ವೈರಸ್‌ಗೆ ಅಮೆರಿಕಾದಲ್ಲಿ ಒಂದೇ ದಿನ 1400 ಕ್ಕೂ ಅಧಿಕ ಸಾವು

ವಾಶಿಂಗ್ಟನ್, ಎ.4:  ಕೊರೋನ ವೈರಸ್ ಗೆ ಅಮೆರಿಕಾ ಸಂಪೂರ್ಣ ತತ್ತರಿಸಿ ಹೋಗಿದ್ದು, ಅಮೆರಿಕಾದಲ್ಲಿ 24 ಗಂಟೆಯಲ್ಲಿ 1,400ಕ್ಕೂ ಅಧಿಕ ಮಂದಿ ಸಾವನ್ನಪಿರುವ ಬಗ್ಗೆ ವರದಿಯಾಗಿದೆ. ಚೀನಾದ ವುಹಾನ್‌ನಿಂದ ಪ್ರಾರಂಭವಾದ ಕೊರೋನ ವೈರಸ್ ಅಮೆರಿಕದಲ್ಲಿ ಹಾನಿಯನ್ನುಂಟು ಮಾಡುತ್ತಿದೆ. ಅಮೆರಿಕಾದಲ್ಲಿ ಕೊರೋನ ವೈರಸ್‌ ಸೋಂಕಿತರ ಸಂಖ್ಯೆ 3 ಲಕ್ಷಕ್ಕೇರಿದೆ. ವಿಶ್ವದಲ್ಲೇ ಸೋಂಕಿತರ ಸಂಖ್ಯೆ ಅಮೆರಿಕಾದಲ್ಲಿ ಹೆಚ್ಚಾಗ್ತಿದೆ. 24 ಗಂಟೆಗಳಲ್ಲಿ ಕೊರೋನ ವೈರಸ್‌ನಿಂದಾದ ಸಾವಿನಲ್ಲೂ ಅಮೆರಿಕಾ ದಾಖಲೆ ಬರೆದಿದೆ. ಅಮೆರಿಕದಲ್ಲಿ ಕೊರೋನ ವೈರಸ್‌ನಿಂದ ಸಾವನ್ನಪ್ಪಿದವರ ಸಂಖ್ಯೆ 7406 ಕ್ಕೆ ತಲುಪಿದೆ. ಅಮೆರಿಕದಲ್ಲಿ

ಕೊರೋನ ವೈರಸ್‌ಗೆ ಅಮೆರಿಕಾದಲ್ಲಿ ಒಂದೇ ದಿನ 1400 ಕ್ಕೂ ಅಧಿಕ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲಾಕ್‌ಡೌನ್ ಉಲ್ಲಂಘಿಸಿ ಸ್ನೇಹಿತರ ಜತೆ ಜಾಲಿರೈಡ್: ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ

ಬೆಂಗಳೂರು, ಎ.4: ಕನ್ನಡದ ನಟಿ ಶರ್ಮಿಳಾ ಮಾಂಡ್ರೆ ಅವರ ಕಾರು ಶನಿವಾರ ನಸುಕಿನಲ್ಲಿ ಅಪಘಾತಕ್ಕೀಡಾಗಿದೆ. ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಶರ್ಮಿಳಾ ಮಾಂಡ್ರೆ ಜಾಲಿ ರೈಡ್‌ಗೆ ಹೋಗುತ್ತಿದ್ದರು ಎನ್ನಲಾಗಿದೆ. ಲಾಕ್‌ಡೌನ್ ಕಾರಣದಿಂದ ಅನೇಕ ಕಡೆ ವಾಹನ ಓಡಾಡಕ್ಕೆ ನಿರ್ಬಂಧ ವಿಧಿಸಲಾಗಿದೆ. ತೀರಾ ಅನಿವಾರ್ಯ ಪರಿಸ್ಥಿತಿಯಲ್ಲದೆ ವಾಹನಗಳನ್ನು ಹೊರಗೆ ತೆಗೆಯಬೇಡಿ ಎಂದು ಸೂಚಿಸಲಾಗಿದೆ. ತರಕಾರಿ, ದಿನಸಿಗಳನ್ನು ಖರೀದಿ ಮಾಡಲು ನಡೆದುಕೊಂಡೇ ಹೋಗುವಂತೆ ಹೇಳಲಾಗಿದೆ. ಆದರೂ ಜನರು ಕಾರಣಗಳಿಲ್ಲದೆಯೂ ವಾಹನಗಳಲ್ಲಿ ಓಡಾಡುತ್ತಿರುವುದು ಮುಂದುವರಿದಿದೆ. ಆದರೆ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಟಿ

ಲಾಕ್‌ಡೌನ್ ಉಲ್ಲಂಘಿಸಿ ಸ್ನೇಹಿತರ ಜತೆ ಜಾಲಿರೈಡ್: ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top