ಕ್ರೈಮ್ ನ್ಯೂಸ್

ಶಾಕಿಂಗ್ – ಪ್ರೇಯಸಿಯಿಂದ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ➤ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ್ದೇನು ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.28. ತನ್ನ ಪ್ರೇಯಸಿಯು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಡೆತ್ ನೋಟ್ ಬರೆದಿಟ್ಟು ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ರೈಲಿನಡಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಬೆಳಗಾವಿ ಮೂಲದ ಸಮ್ಮದ್ ರಾಯಗೌಡ (23) ಎಂದು ಗುರುತಿಸಲಾಗಿದೆ. ಬಿ.ಇ. ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ರಾಯಗೌಡ ಮಂಗಳೂರಿನ ಉಳ್ಳಾಲ ಸೋಮೇಶ್ವರ ರೈಲ್ವೇ ಬಳಿ ರೈಲಿನಡಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಪ್ರೇಯಸಿಯು ಹಣಕ್ಕಾಗಿ ಬ್ಲ್ಯಾಕ್ […]

ಶಾಕಿಂಗ್ – ಪ್ರೇಯಸಿಯಿಂದ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ➤ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ್ದೇನು ಗೊತ್ತೇ..? Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿರ್ಭಯಾ ಅಪರಾಧಿಯಿಂದ ಗಲ್ಲು ಶಿಕ್ಷೆಯನ್ನು ಜೀವಾವಧಿಯಾಗಿ ಪರಿವರ್ತಿಸುವಂತೆ ಸುಪ್ರೀಂಗೆ ಕ್ಯುರೇಟಿವ್ ಅರ್ಜಿ

ಹೊಸದಿಲ್ಲಿ, ಫೆ.28: ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪರಕರಣದ ಅಪರಾಧಿ ಪವನ್ ಕುಮಾರ್ ಗುಪ್ತಾ ತನಗೆ ನೀಡಲಾದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ. ಮೂವರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಕೋರ್ಟ್ ಈಗಾಗಲೇ ತಿರಸ್ಕರಿಸಿದ್ದು, ಮಾ.3ರಂದು ಅಪರಾಧಿಗಳಿಗೆ ಗಲ್ಲುಶಿಕ್ಷೆ ನಿಗದಿಯಾಗಿದೆ. ಈಗ ಪವನ್ ಕುಮಾರ್ ಗುಪ್ತಾ ತನಗೆ ನೀಡಲಾದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕ್ಯುರೇಟಿವ್ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾನೆ. ಈಗಾಗಲೇ ಗಲ್ಲುಶಿಕ್ಷೆ ಎರಡು ಬಾರಿ

ನಿರ್ಭಯಾ ಅಪರಾಧಿಯಿಂದ ಗಲ್ಲು ಶಿಕ್ಷೆಯನ್ನು ಜೀವಾವಧಿಯಾಗಿ ಪರಿವರ್ತಿಸುವಂತೆ ಸುಪ್ರೀಂಗೆ ಕ್ಯುರೇಟಿವ್ ಅರ್ಜಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರಿನಲ್ಲಿ ತಡೆಗೋಡೆ ಕುಸಿತ: ಇಬ್ಬರು ಕಾರ್ಮಿಕರು ಮೃತ್ಯು

ಮಂಗಳೂರು, ಫೆ.28: ಕಂಪೌಂಡ್ ಬಳಿ ಕೆಲಸ‌ ಮಾಡುತ್ತಿದ್ದ ಕಾರ್ಮಿಕರ ಮೇಲೆ ಮಣ್ಣು ಕುಸಿದು ಇಬ್ಬರು ಮೃತಪಟ್ಟ ಘಟನೆ ನಗರದ ಬಂಟ್ಸ್ ಹಾಸ್ಟೆಲ್‌ನ ಕರಂಗಲ್ಪಾಡಿ ಜಂಕ್ಷನ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ಕಾರ್ಮಿಕರನ್ನು ಬಾಗಲ್‌ಕೋಟೆಯ ಬಿಮೇಶ್‌ ಹಾಗೂ ಬೆಂಗಾಲ ಮೂಲದ ಮುಝ್ರಿಕುಲ್‌ ಎಂದು ಗುರುತಿಸಲಾಗಿದೆ. ಕಂಪೌಂಡ್ ಕುಸಿದ ಪರಿಣಾಮ ಐವರು ಮಣ್ಣಿನಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಪಾಂಡೇಶ್ವರ ಹಾಗೂ ಕದ್ರಿಯ ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚಾರಣೆ ಭರದಿಂದ ಸಾಗಿದೆ.  

ಮಂಗಳೂರಿನಲ್ಲಿ ತಡೆಗೋಡೆ ಕುಸಿತ: ಇಬ್ಬರು ಕಾರ್ಮಿಕರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಮಾರಧಾರ ನದಿಯಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಫೆ.27. ಸ್ನಾನಕ್ಕೆಂದು ತೆರಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಮಾರಧಾರ ನದಿಯಲ್ಲಿ ಗುರುವಾರದಂದು ನಡೆದಿದೆ. ಮೃತಪಟ್ಟ ಯುವಕನನ್ನು ಕೊಯಿಲ ಗ್ರಾಮದ ಜನತಾ ಕಾಲೋನಿ ನಿವಾಸಿ ಯೂಸುಫ್ ಎಂಬವರ ಪುತ್ರ ಅರ್ಫಾಝ್ (22) ಎಂದು ಗುರುತಿಸಲಾಗಿದೆ. ಅರ್ಫಾಝ್ ಗುರುವಾರದಂದು ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಕೊಯಿಲ ಗ್ರಾಮದ ಸುದೆಂಗಳ ಸಮೀಪ ಕುಮಾರಧಾರ ನದಿಗಿಳಿದಿದ್ದು, ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ವಿಚಾರ ತಿಳಿದ ಕಡಬ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಸ್ಥಳೀಯ ಮುಳುಗು ತಜ್ಞರ

ಕುಮಾರಧಾರ ನದಿಯಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್‌ಗೆ ಜೀವ ಬೆದರಿಕೆ: ದೂರು ದಾಖಲು

ಮಂಗಳೂರು, ಫೆ.27: ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಅವರನ್ನು ದುಷ್ಕರ್ಮಿಗಳು ಕೊಲೆಗೆಯತ್ನಿಸಿದ್ದಾರೆಂದು ಆರೋಪಿಸಿ ಖಾಝಿ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ದಾಖಲಿಸಿದ್ದಾರೆ. ಮಂಗಳೂರಿನ ನಿಕಟ ಪೂರ್ವ ಖಾಝಿಯಾಗಿದ್ದ ಚೆಂಬರಿಕ ಸಿ.ಎಂ.ಅಬ್ದುಲ್ಲಾ ಮುಸ್ಲಿಯಾರ್‌ರ ನಿಗೂಢ ಮರಣಕ್ಕೆ ಸಂಬಂಧಿಸಿ ಅಲ್ಲಲ್ಲಿ ನಡೆಯುವ ಪ್ರತಿಭಟನೆಯಲ್ಲಿ ತ್ವಾಕ ಅಹ್ಮದ್ ಮುಸ್ಲಿಯಾರ್ ಭಾಗವಹಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಖಾಝಿಗೆ ವಿದೇಶದಿಂದ ಕರೆಗಳು ಬಂದಿದ್ದು ಕೊಲೆ ಬೆದರಿಕೆ ಒಡ್ಡಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ ಈ ಹಿಂದೆ ಎರಡು ಬಾರಿ ತನ್ನ ಕೊಲೆಗೆ ವಿಫಲ

ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್‌ಗೆ ಜೀವ ಬೆದರಿಕೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಶಿರ್ವ: ಫಾ. ಮಹೇಶ್ ಡಿಸೋಜ ಆತ್ಮಹತ್ಯೆ ಪ್ರಕರಣ; ಓರ್ವನ ಬಂಧನ

ಶಿರ್ವ, ಫೆ.28: ನಾಲ್ಕು ತಿಂಗಳ ಹಿಂದೆ ನಡೆದ ಶಿರ್ವ ಚರ್ಚ್‌ನಧರ್ಮಗುರು, ಡಾನ್ ಬೋಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಫಾ..ಮಹೇಶ್ ಡಿಸೋಜರ ಸಾವಿನ ಪ್ರಕರಣಕ್ಕೆ ಸಂಬಂಸಿ ಮುದರಂಗಡಿ ಗ್ರಾಪಂ ಅಧ್ಯಕ್ಷ, ಪಿಲಾರು ಗ್ರಾಮದ ಡೇವಿಡ್ ಡಿಸೋಜನನ್ನು ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಡಿಸೋಜರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ೆರೆನ್ಸಿಕ್ ಡಿಪಾರ್ಟ್‌ಮೆಂಟ್ ನೀಡಿರುವ ಮಹತ್ವದ ಸುಳಿವನ್ನು ಆಧರಿಸಿ ಡೇವಿಡ್ ಡಿಸೋಜರ ವಿರುದ್ಧ ಪ್ರಕರಣದ ತನಿಖಾಕಾರಿಯಾಗಿದ್ದ ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ಬುಧವಾರ ಮೊಕದ್ದಮೆ ದಾಖಲಿಸಿದ್ದರು. ಬಳಿಕ ಆರೋಪಿಯನ್ನು ವಶಕ್ಕೆ

ಶಿರ್ವ: ಫಾ. ಮಹೇಶ್ ಡಿಸೋಜ ಆತ್ಮಹತ್ಯೆ ಪ್ರಕರಣ; ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೂಡಬಿದಿರೆ: ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ ಯುವಕ ಮೃತ್ಯು; ಇಬ್ಬರ ಸೆರೆ

ಮೂಡುಬಿದಿರೆ, ಫೆ.27: ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿ ಹಲ್ಲೆಗೊಳಗಾದ ಕೆಲ್ಲಪುತ್ತಿಗೆಯ ದಲಿತ ಯುವಕ ಸಿದ್ದು ಎಂಬವರ ಪುತ್ರ ರವೀಂದ್ರ (38) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಬಂಧಿತರನ್ನು ಆರೋಪಿಗಳಾದ ಶ್ರೀನಿವಾಸ (42) ಹಾಗೂ ಆನಂದ (40) ಎಂದು ಗುರುತಿಸಲಾಗಿದೆ. ರವಿವಾರ ರಾತ್ರಿ ರವೀಂದ್ರ ಕೆಲಸ ಮುಗಿಸಿ ಮನೆಗೆ ಬಂದಾಗ ಕ್ಷುಲ್ಲಕ ವಿಚಾರಕ್ಕಾಗಿ ಸಹೋದರ ಶ್ರೀನಿವಾಸ ಹಾಗೂ ಭಾವ ಆನಂದ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಆರೋಪಿಗಳು ರವೀಂದ್ರರ ಹೊಟ್ಟೆಗೆ ತುಳಿದಿದ್ದು, ಪರಿಣಾಮ ರಕ್ತ ವಾಂತಿ ಮಾಡಿದ್ದರು. ಬೊಬ್ಬೆ

ಮೂಡಬಿದಿರೆ: ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ ಯುವಕ ಮೃತ್ಯು; ಇಬ್ಬರ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಯುವಕ ಕಣ್ಮರೆ ➤ ಶೋಧ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಫೆ.27. ಸ್ನಾನಕ್ಕೆಂದು ತೆರಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿರುವ ಘಟನೆ ಕುಮಾರಧಾರ ನದಿಯಲ್ಲಿ ಗುರುವಾರದಂದು ನಡೆದಿದೆ. ನಾಪತ್ತೆಯಾಗಿರುವ ಯುವಕನನ್ನು ಕೊಯಿಲ ಜನತಾ ಕಾಲೋನಿ ನಿವಾಸಿ ಯೂಸುಫ್ ಎಂಬವರ ಪುತ್ರ ಅರ್ಫಾದ್ (22) ಎಂದು ಗುರುತಿಸಲಾಗಿದೆ. ಅರ್ಫಾದ್ ಗುರುವಾರದಂದು ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಕೊಯಿಲ ಗ್ರಾಮದ ಸುದೆಂಗಳ ಸಮೀಪ ಕುಮಾರಧಾರ ನದಿಗಿಳಿದಿದ್ದು, ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ಕುಮಾರಧಾರ‌ ನದಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಯುವಕ ಕಣ್ಮರೆ ➤ ಶೋಧ ಕಾರ್ಯ ಆರಂಭ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಕಳ್ಳತನ ಮಾಡಲೆಂದು ಮನೆಗೆ ನುಗ್ಗಿ ನಿದ್ದೆಗೆ ಜಾರಿದ ಕಳ್ಳ ➤ ಮನೆ ಮಾಲೀಕನ ಬೆತ್ತದೇಟಿಗೆ ಎದ್ದು ಪೊಲೀಸರ ಅತಿಥಿಯಾದ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.26. ಕಳ್ಳತನ ಮಾಡಲೆಂದು ಮನೆಯ ಒಳನುಗ್ಗಿದ ಕಳ್ಳನೋರ್ವ ನಿದ್ದೆಗೆ ಜಾರಿ ಬೆಳಿಗ್ಗೆ ಸುಲಭವಾಗಿ ಮನೆಯೊಡೆಯನ ಕೈಗೆ ಸಿಕ್ಕಿ ಪೊಲೀಸರ ಅತಿಥಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಪ್ರಸಿದ್ಧ ಉದ್ಯಮಿಯೋರ್ವರ ಹಳೆಯ ಕಾಲದ ಮನೆಯ ಸುಮಾರು 20 ಅಡಿ ಎತ್ತರದ ಗೋಡೆ ಏರಿ ಒಳ ನುಗ್ಗಿದ ಕಳ್ಳ ಕಪಾಟಿನಲ್ಲಿಟ್ಟಿದ್ದ ಬೀಗದ ಕೀಗಳನ್ನು ಜಾಲಾಡಿ ಮನೆಯ ನಡು ಕೋಣೆಯಲ್ಲಿದ್ದ ದಿವಾನದಲ್ಲಿ ನಿದ್ದೆಗೆ ಜಾರಿದ್ದಾನೆ. ಮುಂಜಾನೆ ಮನೆಯವರು ಎದ್ದು ನೋಡಿದಾಗ ಅಪರಿಚಿತ ವ್ಯಕ್ತಿ ಮಲಗಿರುವುದು ಕಂಡು

ಉಪ್ಪಿನಂಗಡಿ: ಕಳ್ಳತನ ಮಾಡಲೆಂದು ಮನೆಗೆ ನುಗ್ಗಿ ನಿದ್ದೆಗೆ ಜಾರಿದ ಕಳ್ಳ ➤ ಮನೆ ಮಾಲೀಕನ ಬೆತ್ತದೇಟಿಗೆ ಎದ್ದು ಪೊಲೀಸರ ಅತಿಥಿಯಾದ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಿಲ್ಲಿಯಲ್ಲಿ ತಾರಕ್ಕೇರಿದ ಹಿಂಸಾಚಾರ: ಸಾವಿನ ಸಂಖ್ಯೆ 10ಕ್ಕೇರಿಕೆ

ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊಸದಿಲ್ಲಿ, ಫೆ.25: ಈಶಾನ್ಯ ದಿಲ್ಲಿಯಲ್ಲಿ ಹಿಂಸಾಚಾರ ತಾರಕ್ಕೇರಿದ್ದು, ಸಾವಿನ ಸಂಖ್ಯೆ 10ಕ್ಕೇರಿದೆ. ಕಳೆದ 24 ಗಂಟೆಗಳಲ್ಲಿ 150 ಜನ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಗುರು ತೇಗ್ ಬಹದ್ದೂರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಸುನೀಲ್ ಕುಮಾರ್ ತಿಳಿಸಿದ್ದಾರೆ. ಖಾಜುರಿ ಖಾಸ್ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ತುರ್ತು ಕಾರ್ಯಪಡೆ ಪಥಸಂಚಲನ ನಡೆಸಿದ್ದು, ಶಾಂತಿ ಕಾಪಾಡಲು ಪ್ರಯತ್ನ ನಡೆಸಿವೆ. ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಹೇರಲಾಗಿದೆ. ಈಶಾನ್ಯ ದಿಲ್ಲಿಯಲ್ಲಿ ಅರೆಸೇನಾ ಪಡೆಗಳ

ದಿಲ್ಲಿಯಲ್ಲಿ ತಾರಕ್ಕೇರಿದ ಹಿಂಸಾಚಾರ: ಸಾವಿನ ಸಂಖ್ಯೆ 10ಕ್ಕೇರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top