ಕ್ರೈಮ್ ನ್ಯೂಸ್

ದಿಲ್ಲಿ ಹಿಂಸಾಚಾರ: ಪೊಲೀಸ್ ಪೇದೆ ಸಹಿತ ಐವರು ಮೃತ್ಯು

ಹೊತ್ತಿ ಉರಿಯುತ್ತಿರುವ ದಿಲ್ಲಿಯ ಬೀದಿಗಳು 60 ಕ್ಕೂ ಅಧಿಕ ಮಂದಿಗೆ ಗಾಯ ತಾರಕ್ಕೇರಿದ ಹಿಂಸಾಚಾರ ಹೊಸದಿಲ್ಲಿ, ಫೆ.25:  ದಿಲ್ಲಿಯಲ್ಲಿ ಸಿಎಎ ಪರ-ವಿರೋಧಿ ಪ್ರತಿಭಟನಕಾರರ ನಡುವೆ ನಡೆದ ಹಿಂಸಾಚಾರದ ಪರಿಣಾಮ ಪೊಲೀಸ್ ಪೇದೆ ಮತ್ತು ನಾಲ್ವರು ನಾಗರಿಕರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ರವಿವಾರ ನಡೆದ ಹಿಂಸಾಚಾರದಲ್ಲಿ ಕಲ್ಲುತೂರಾಟ ನಡೆದಿದ್ದು, ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ದುಷ್ಕರ್ಮಿಯೊಬ್ಬ ಪೊಲೀಸರ ಎದುರಲ್ಲೇ ಗುಂಡು ಹಾರಿಸಿದ್ದ. ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದರು. ಇನ್ನೂ ದಿಲ್ಲಿಯ ಬೀದಿಗಳು ಹೊತ್ತಿ ಉರಿಯುತ್ತಿದ್ದು, ಪರ-ವಿರೋಧಿಗಳ […]

ದಿಲ್ಲಿ ಹಿಂಸಾಚಾರ: ಪೊಲೀಸ್ ಪೇದೆ ಸಹಿತ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಡುಬಿದ್ರೆಯಲ್ಲಿ ಆಡುಗಳ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಆತಂಕ

ಪಡುಬಿದ್ರೆ, ಫೆ.25: ಮೇಯುತಿದ್ದ ಎರಡು ಆಡುಗಳನ್ನು ಚಿರತೆ ತಿಂದುಹೋದ ಘಟನೆ ಸೋಮವಾರ ಸಲಿಮಾರು ಗ್ರಾಪಂ ವ್ಯಾಪ್ತಿಯ ಅಡ್ವೆಯ ಕೋಚ ಬಾಳಿಕೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಝೈನಾಬಿ ಎಂಬವರು ಸಾಕಿದ ಹೆಣ್ಣು ಮತ್ತು ಗಂಡು ಆಡುಗಳನ್ನು ಮನೆ ಸಮೀಪ ಮೇಯಲು ಬಿಟ್ಟಿದ್ದರು. ಸಂಜೆ ಆಡುಗಳನ್ನು ಹಟ್ಟಿಗೆ ಕೊಂಡೊಯ್ಯಲು ಬಂದಾಗ ಆಡುಗಳನ್ನು ತಿಂದಿರುವುದು ಬೆಳಕಿಗೆ ಬಂತು. ಇದರಿಂದ ಸ್ಥಳೀಯರು ಆತಂಕಿರಾಗಿದ್ದು, ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಎರಡು ಆಡುಗಳನ್ನು ಖರೀದಿಸಿ ಸಾಕುತಿದ್ದೆ. ಈಗ ಆಡಿಗೆ

ಪಡುಬಿದ್ರೆಯಲ್ಲಿ ಆಡುಗಳ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಆತಂಕ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೊಲೀಸರಿಂದ ತಪ್ಪಿಸಲು ಹೋಗಿ ಬೈಕ್-ಲಾರಿ ಢಿಕ್ಕಿ: ಇಬ್ಬರು ಮೃತ್ಯು

ತರೀಕೆರೆ, ಫೆ.25: ದಂಡದ ಭಯದಿಂದ ಪೊಲೀಸರಿಂದ ತಪ್ಪಿಸಿಕೊಳ್ಳಲು ವೇಗವಾಗಿ ಚಾಲನೆ ಮಾಡಿದ ಪರಿಣಾಮ ಬೈಕೊಂದು ಟಿಪ್ಪರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುಮಾರ್ (30) ಮತ್ತು ಮೋಹನ್ (30) ಎಂದು ಗುರುತಿಸಲಾಗಿದೆ. ಇವರು ಬೈಕ್‌ನಲ್ಲಿ ಶಿವಮೊಗ್ಗದಿಂದ ಲಕ್ಕವಳ್ಳಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಲಕ್ಕವಳ್ಳಿ ಡ್ಯಾಂ ಬಳಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಇಬ್ಬರು ಯುವಕರಿದ್ದ ಮೋಟಾರ್ ಬೈಕೊಂದು ವೇಗವಾಗಿ ಬಂದಿದೆ. ಈ ವೇಳೆ ಪೊಲೀಸರು ಅಡ್ಡಹಾಕಿದರೂ ತಪ್ಪಿಸಿಕೊಂಡ ಅವರು ವೇಗವಾಗಿ

ಪೊಲೀಸರಿಂದ ತಪ್ಪಿಸಲು ಹೋಗಿ ಬೈಕ್-ಲಾರಿ ಢಿಕ್ಕಿ: ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭೂಗತ ಪಾತಕಿ ರವಿ ಪೂಜಾರಿ ರಾಜ್ಯ ಪೊಲೀಸ್ ವಶಕ್ಕೆ

ಬೆಂಗಳೂರು, ಫೆ.24: ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ದಕ್ಷಿಣ ಆಫ್ರಿಕಾದ ಸೆನೆಗಲ್ ನಲ್ಲಿ ಬಂಧಿತನಾಗಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ಸೋಮವಾರ ನಸುಕಿನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ರವಿ ಪೂಜಾರಿಯನ್ನು ಎಡಿಜಿಪಿ ಅಮರ್ ಕುಮಾರ್ ಪಾಂಡೆ, ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ನೇತೃತ್ವದ ತಂಡ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಸಂದೀಪ್ ಪಾಟೀಲ, “ರವಿ ಪೂಜಾರಿ ಅಪರಾಧ ಚಟುವಟಿಕೆ, ನಗರಕ್ಕೆ ಕರೆದುಕೊಂಡ ಬಂದಿರುವ ಕುರಿತಾಗಿ ಹೆಚ್ಚಿನ‌ ಮಾಹಿತಿಯನ್ನು ಸೋಮವಾರ ಬೆಳಗ್ಗೆ

ಭೂಗತ ಪಾತಕಿ ರವಿ ಪೂಜಾರಿ ರಾಜ್ಯ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಿಲ್ಲಿ: ಸಿಎಎ ಪರ-ವಿರೋಧಿಗಳ ನಡುವೆ ಘರ್ಷಣೆ; ಕಲ್ಲು ತೂರಾಟ

ಹೊಸದಿಲ್ಲಿ, ಫೆ.24: ಪೌರತ್ವ ತಿದ್ದುಪಡಿ ಕಾಯ್ದೆ ಪರ ದಿಲ್ಲಿಯ ಮೌಜ್‌ಪುರ್ ಪ್ರದೇಶದಲ್ಲಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಇದರಿಂದಾಗಿ ಸ್ಥಳದಲ್ಲಿ ಘರ್ಷಣೆ ಉಂಟಾಗಿದೆ. ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಜನರನ್ನು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ದಿಲ್ಲಿಯ ಝಫರಾಬಾದ್ ಬಳಿ ಸಿಎಎ ವಿರೋಧಿಸಿ ಧರಣಿ ನಡೆಸಲಾಗುತ್ತಿತ್ತು. ಈ ಪ್ರದೇಶ ಹಾಗೂ ಸಿಎಎ ಪರವಾಗಿ ನಡೆಯುತ್ತಿದ್ದ ಮೆರವಣಿಗೆಯ ಪ್ರದೇಶ ಹತ್ತಿರ ಹತ್ತಿರವೇ ಇದ್ದುದರಿಂದ ಘರ್ಷಣೆ ನಡೆದಿದೆ ಎನ್ನಲಾಗಿದೆ. ಎರಡು ಗುಂಪುಗಳು ಹತ್ತಿರವೇ ಇದ್ದುದರಿಂದ ಘರ್ಷಣೆ ನಡೆದಿದೆ.

ದಿಲ್ಲಿ: ಸಿಎಎ ಪರ-ವಿರೋಧಿಗಳ ನಡುವೆ ಘರ್ಷಣೆ; ಕಲ್ಲು ತೂರಾಟ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟರ್ಕಿಯಲ್ಲಿ ಭೂಕಂಪ: 9 ಮಂದಿ ಮೃತ್ಯು

ಅಂಕಾರಾ, ಫೆ.24: ಪಶ್ಚಿಮ ಇರಾನ್‌ನಲ್ಲಿ ರವಿವಾರ ಬೆಳಗ್ಗೆ ಸಂಭವಿಸಿದ ಭೂಕಂಪದಲ್ಲಿ 9 ಮಂದಿ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.7ರಷ್ಟಿತ್ತು. ಇರಾನ್‌ನ ಖೋಯ್ ಮತ್ತು ಟರ್ಕಿಯ ವ್ಯಾನ್ ಪ್ರಾಂತ್ಯದಲ್ಲಿ ಈ ಸಾವುನೋವು ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೃತರಲ್ಲಿ ಮೂವರು ಮಕ್ಕಳೂ ಸೇರಿದ್ದು, ಇವರು ಟರ್ಕಿಯ ಬಸ್ಕಾಲೆ ಜಿಲ್ಲೆಯವರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟರ್ಕಿಯಲ್ಲಿ ಭೂಕಂಪ: 9 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಬಾರ್‌ನಲ್ಲಿ ದಾಂಧಲೆ; 9 ಮಂದಿ ಪೊಲೀಸ್ ವಶಕ್ಕೆ

ವಿಟ್ಲ, ಫೆ.24: ಬಾರ್ ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ಗಲಾಟೆಗೆ ಮುಂದಾದ ಗುಂಪೊಂದರ ಹಲವು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಬೊಬ್ಬೆಕೇರಿಯ ಬಾರ್ ಬಳಿಯಲ್ಲಿ ಬಾರ್‌ನಲ್ಲಿ ಮದ್ಯ ಖರೀದಿಸಿ ಬಳಿಕ ಬಿಲ್ ಕೊಡದೆ ಸಿಬ್ಬಂದಿ ಹಾಗೂ ಸಾರ್ವಜನಿಕರ ಮೇಲೆ ಗುಂಪು ದಾಳಿಗೆ ಮುಂದಾಗಿದೆ. ಈ ಸಂದರ್ಭ ದಾಳಿಗೆ ಮುಂದಾದವರ ವಿರುದ್ಧ ಬಾರ್ ಮಾಲಕರು ಠಾಣೆಗೆ ದೂರು ನೀಡಿದ್ದಾರೆ. ಅದರಂತೆ ದೂರು ದಾಖಲಿಸಿಕೊಂಡ ಎಸ್ಸೈ ವಿನೋದ್ ಎಸ್. ಅವರ ತಂಡ ತಕ್ಷಣ ಕಾರ್ಯ ಪ್ರವೃತ್ತರಾಗಿ ಎಲ್ಲಾ

ವಿಟ್ಲ: ಬಾರ್‌ನಲ್ಲಿ ದಾಂಧಲೆ; 9 ಮಂದಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಓಮ್ನಿ ಮತ್ತು ಲಾರಿ ನಡುವೆ ಢಿಕ್ಕಿ ➤ ಓಮ್ನಿ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.23. ಕಾರು ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಎಂಬಲ್ಲಿ ಭಾನುವಾರದಂದು ಸಂಭವಿಸಿದೆ. ಮೃತರನ್ನು ಕೊಡಿಪ್ಪಾಡಿ ನಿವಾಸಿ ನಾರಾಯಣ ಜೋಯಿಷ ಎಂದು ಗುರುತಿಸಲಾಗಿದೆ. ನಾರಾಯಣ ಜೋಯಿಷರು ಪೆರ್ಲಂಪಾಡಿ ತರವಾಡು ಮನೆಯಲ್ಲಿ ಕಾರ್ಯಕ್ರಮ ನಿಮಿತ್ತ ತನ್ನ ಓಮ್ನಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗೆ‌ ಮಂಗಳೂರಿಗೆ‌

ಪುತ್ತೂರು: ಓಮ್ನಿ ಮತ್ತು ಲಾರಿ ನಡುವೆ ಢಿಕ್ಕಿ ➤ ಓಮ್ನಿ ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಸ್ ಢಿಕ್ಕಿ ಹೊಡೆದು ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ.23. ಮದ್ರಸದಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬಸ್ಸು ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆಯಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಮೃತಪಟ್ಟವಳನ್ನು ಅಲ್ಹಾನ್(8) ಎಂದು ಗುರುತಿಸಲಾಗಿದೆ. ಸಮೀಪದ ಮದ್ರಸದ ಎರಡನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಅಲ್ಹಾನ್ ಇಂದು ಬೆಳಗ್ಗೆ ಮದ್ರಸ ತರಗತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ಸಂದರ್ಭ ಬಾಲಕಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದ್ದರಿಂದ ಗಂಭೀರ ಗಾಯಗೊಂಡ ಅಲ್ಹಾನ್ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ

ಬಸ್ ಢಿಕ್ಕಿ ಹೊಡೆದು ವಿದ್ಯಾರ್ಥಿನಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕೊಲೆಗೆ ಸಂಚು; ಇಬ್ಬರ ಬಂಧನ

ಪುತ್ತೂರು, ಫೆ.23: ಆಸ್ತಿ ಹಾಗೂ ವ್ಯವಹಾರದ ಮನಸ್ತಾಪದಿಂದಾಗಿ ಜಯರಾಮ ಎಂಬವರ ಹತ್ಯೆ ಮಾಡಲು ಸಂಚು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹೇಶ್ ಹಾಗೂ ನಾಸೀರ್ ಇಡಬೆಟ್ಟು ಎಂದು ಗುರುತಿಸಲಾಗಿದೆ. ಜಯರಾಮ ಹಾಗೂ ಮಹೇಶ್ ಅಲಿಯಾಸ್ ಮಾಯಿಲಪ್ಪಅವರು ಸಹೋದರರಾಗಿದ್ದು, ಪಾಲುದಾರಿಕೆಯಲ್ಲಿ ಹೋಮ್ ಪ್ರೋಡಕ್ಟ್ ವ್ಯವಹಾರ ನಡೆಸುತ್ತಿದ್ದರು. ಇದರಲ್ಲಿ ಅವರೊಳಗೆ ಉಂಟಾಗಿದ್ದ ವೈಮನಸ್ಸು ಹಾಗೂ ಕುಟುಂಬದ ಆಸ್ತಿ ವಿಚಾರವಾಗಿ ಉಂಟಾದ ಮನಸ್ತಾಪದಿಂದಾಗಿ ಮಹೇಶ್ ನಾಸೀರ್ ಅಲಿಯಾಸ್ ಮುನ್ನಿ ಎಂಬವನೊಂದಿಗೆ ಸೇರಿ ಜಯರಾಮ ಅವರನ್ನು ಹತ್ಯೆ

ಪುತ್ತೂರು: ಕೊಲೆಗೆ ಸಂಚು; ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top