ಕ್ರೈಮ್ ನ್ಯೂಸ್

ವೈದ್ಯಕೀಯ ಚಿಕಿತ್ಸೆ ಕೋರಿ ನಿರ್ಭಯಾ ಅಪರಾಧಿ ಸಲ್ಲಿಸಿದ ಅರ್ಜಿ ವಜಾ

ಹೊಸದಿಲ್ಲಿ, ಫೆ.22: ತಾನು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ತನಗೆ ಉತ್ತಮ ವೈದ್ಯಕೀಯ ಚಿಕಿತ್ಸೆಗೆ ಅನುಮತಿ ನೀಡಬೇಕೆಂದು ಕೋರಿ ನಿರ್ಭಯಾ ಪ್ರಕರಣ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಪಟಿಯಾಲಾ ಹೌಸ್ ಕೋರ್ಟ್ ಶನಿವಾರ ವಜಾಗೊಳಿಸಿದೆ. ತಾನು ಮಾನಸಿಕ ಅಸ್ವಸ್ಥ, ತಲೆ ಹಾಗೂ ತೋಳಿಗೆ ಗಾಯವಾಗಿದೆ ಇದಕ್ಕೆ ಸರಿಯಾದ ಚಿಕಿತ್ಸೆ ಪಡೆಯಲು ಅನುಮತಿ ನೀಡಬೇಕೆಂದು ಕೋರಿ ಅಪರಾಧಿ ವಿನಯ್ ಶರ್ಮಾ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದರೆ, ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ವಿನಯ್ ಶರ್ಮಾನ ಅರ್ಜಿಯನ್ನು […]

ವೈದ್ಯಕೀಯ ಚಿಕಿತ್ಸೆ ಕೋರಿ ನಿರ್ಭಯಾ ಅಪರಾಧಿ ಸಲ್ಲಿಸಿದ ಅರ್ಜಿ ವಜಾ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಕಳ: ಓಮ್ನಿ ಕಾರು ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಕಾರ್ಕಳ, ಫೆ.22: ಓಮ್ನಿ ಕಾರೊಂದು ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವ್ಯಕ್ತಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಗುರ್ಗಲ್ ಗುಡ್ಡೆ ಎಂಬಲ್ಲಿ ನಡೆದಿದೆ. ಮೃತರನ್ನು ಕರ್ಕಳ ನಿವಾಸಿ ಸುಧಾಕರ ಶೆಟ್ಟಿ(51) ಎಂದು ಗುರುತಿಸಲಾಗಿದೆ. ತಾಲೂಕಿನ ನಲ್ಲೂರು ಗ್ರಾಮದ ಗುರ್ಗಲ್ ಗುಡ್ಡೆ ಎಂಬಲ್ಲಿ ಹಾದು ಹೋಗಿರುವ ಕಾರ್ಕಳ-ಬೆಳ್ತಂಗಡಿ ಹೆದ್ದಾರಿ ರಸ್ತೆಯ ಬದಿ ಮಣ್ಣು ರಸ್ತೆಯಲ್ಲಿ ಸುಧಾಕರ ಶೆಟ್ಟಿ ಅವರ ಸಂಬಂಧಿ ಹರಿಪ್ರಸಾದ್ ಶೆಟ್ಟಿ ಎಂಬುವವರೊಂದಿಗೆ ಮಾತನಡುತ್ತಿದ್ದರು. ಈ ಸಂದರ್ಭ ಅತೀ

ಕಾರ್ಕಳ: ಓಮ್ನಿ ಕಾರು ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್

ಗಡಿಯಾರ: ಕಂಟೈನರ್ ಢಿಕ್ಕಿ ಆಟೊ ಚಾಲಕ ಸಹಿತ ಇಬ್ಬರು ಪಾರು

ವಿಟ್ಲ, ಫೆ.22: ಕಂಟೈನರ್ ಲಾರಿಯೊಂದು ಆಟೊ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಚಾಲಕ ಸಹಿತ ಇಬ್ಬರು ಪವಾಡಸದೃಶ್ಯ ರೀತಿಯಲ್ಲಿ ಪಾರಾದ ಘಟನೆ ಮಂಗಳೂರು-ಬೆಂಗಳೂರು ರಾ.ಹೆ.ಯ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಸಂಭವಿಸಿದೆ. ಆಟೊ ರಿಕ್ಷಾ ಗಡಿಯಾರದಿಂದ ಪೇರಮೊಗೇರು ಕಡೆಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಕಂಟೈನರ್ ಲಾರಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯ ಬಳಿಕ ಚಾಲಕ ಕಂಟೈನರ್ ಸಹಿತವಾಗಿ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಸಾರ್ವಜನಿಕರು ಲಾರಿಯನ್ನು ಪತ್ತೆ ಹಚ್ಚಿದ್ದಾರೆ. ಘಟನೆಯಲ್ಲಿ ಇಬ್ಬರು ಆಟೊದೊಳಗಡೆ ಇದ್ದರು.

ಗಡಿಯಾರ: ಕಂಟೈನರ್ ಢಿಕ್ಕಿ ಆಟೊ ಚಾಲಕ ಸಹಿತ ಇಬ್ಬರು ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಸ್ ಕಾಯುತ್ತಿದ್ದವರಿಗೆ ಬೈಕ್ ಢಿಕ್ಕಿ: ಮೂವರು ಮೃತ್ಯು

ಮೈಸೂರು, ಫೆ.22: ಬಸ್‌ಗಾಗಿ ಕಾದು ನಿಂತಿದ್ದವರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ದ್ವಿಚಕ್ರ ವಾಹನ ಸವಾರ ಸೇರಿದಂತೆ ಮತ್ತೊಬ್ಬ ಪ್ರಯಾಣಿಕ ಗಾಯಗೊಂಡಿರುವ ಘಟನೆ ನರಸಿಂಹಪುರ ತಾಲೂಕಿನ ಮೂಗೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ತಾಲೂಕಿನ ಕರೋಹಟ್ಟಿ ಗ್ರಾಮದ ಬಸವರಾಜು ಅಲಿಯಾಸ್ ಬಸವಣ್ಣ, ಮೂಗೂರು ಹೊಸಳ್ಳಿ ಗ್ರಾಮದ ಚಿಕ್ಕಮ್ಮ ಹಾಗೂ ಚಾಮರಾಜನಗರ ತಾಲೂಕು ಉಮ್ಮತ್ತೂರು ಗ್ರಾಮದ ಗೋವಿಂದಶೆಟ್ಟಿ ಎಂದು ತಿಳಿದು ಬಂದಿದೆ. ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹದೇವಶೆಟ್ಟಿ ಹಾಗೂ ಢಿಕ್ಕಿ ಹೊಡೆದ ಬೈಕ್ ಸವಾರ ಕೇರಳ

ಬಸ್ ಕಾಯುತ್ತಿದ್ದವರಿಗೆ ಬೈಕ್ ಢಿಕ್ಕಿ: ಮೂವರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಿರಾಡಿ: ಮೀನು ಹಿಡಿಯಲೆಂದು ತೆರಳಿದ ಯುವಕ ಕಣ್ಮರೆ ➤ ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.22. ಮೀನು ಹಿಡಿಯಲೆಂದು ತೆರಳಿದ‌ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಶನಿವಾರದಂದು ನಡೆದಿದೆ. ನಾಪತ್ತೆಯಾಗಿರುವವರನ್ನು ಶಿರಾಡಿ ಗ್ರಾಮದ ಬಾಕಿಲ ಗದ್ದೆ ನಿವಾಸಿ ಚೋಮ ಮುಗೇರ ಎಂಬವರ ಪುತ್ರ ಹರೀಶ್(26) ಎಂದು ಗುರುತಿಸಲಾಗಿದೆ. ಹರೀಶ್ ಮೀನು ಹಿಡಿಯಲೆಂದು ಗುಂಡ್ಯ ಹೊಳೆಗೆ ತೆರಳಿದ್ದು, ಆ ಬಳಿಕ ನಾಪತ್ತೆಯಾಗಿರುವುದಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಮತ್ತು ನೆಲ್ಯಾಡಿ ಹೊರಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿದ್ದು, ಹುಡುಕಾಟ ಆರಂಭಿಸಿದ್ದಾರೆ.

ಶಿರಾಡಿ: ಮೀನು ಹಿಡಿಯಲೆಂದು ತೆರಳಿದ ಯುವಕ ಕಣ್ಮರೆ ➤ ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ಆರಂಭ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ. ಫೆ.21, ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವಿನ ರಂಜಿತ್ ಎಂಬ ಯುವಕ ಸುಳ್ಯ ತಾಲೂಕಿನ ಕೊಡೆಂಕಿರಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿದ್ದು, ಅಲ್ಲಿ ಮನೆಯ ಸಮೀಪದ ನದಿಗೆ ಈಜಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾಕ್ ಪರ ಘೋಷಣೆ ಕೂಗಿದ ‘ಅಮೂಲ್ಯ’ ➤ ಸ್ಟೇಜ್ ನಿಂದ ಹೊರದಬ್ಬಿ ಪೊಲೀಸರಿಗೆ ಒಪ್ಪಿಸಿದ ಆಯೋಜಕರು

ಬೆಂಗಳೂರು, ಫೆ.20: ಸಿಎಎ ವಿರೋಧಿಸಿ ಇಲ್ಲಿನ ಟಿಪ್ಪುಸುಲ್ತಾನ್ ಯುನೈಟೆಡ್ ಫ್ರಂಟ್ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಪ್ರತಿಭಟನೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಅಮೂಲ್ಯ ಎಂಬ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ಸಭೆ ಆರಂಭವಾಗುತ್ತಿದ್ದಂತೆ ವೇದಿಕೆ ಏರಿದ ಅಮೂಲ್ಯ, ಮೂರು ಬಾರಿ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದರು. ತಕ್ಷಣ ಅಲ್ಲೇ ಇದ್ದ ಪೊಲೀಸರು, ಅಮೂಲ್ಯರನ್ನು ತಮ್ಮ ವಶಕ್ಕೆ ಪಡೆದುಕೊಂಡರು.

ಪಾಕ್ ಪರ ಘೋಷಣೆ ಕೂಗಿದ ‘ಅಮೂಲ್ಯ’ ➤ ಸ್ಟೇಜ್ ನಿಂದ ಹೊರದಬ್ಬಿ ಪೊಲೀಸರಿಗೆ ಒಪ್ಪಿಸಿದ ಆಯೋಜಕರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟ ಪ್ರಕರಣ: ಆರೋಪಿ ಆದಿತ್ಯ ರಾವ್ ಗುರುತುಪತ್ತೆ ಪರೇಡ್‌ಗೆ ಸಿದ್ದತೆ

ಮಂಗಳೂರು, ಫೆ.20: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್‌ನನ್ನು ಗುರುತುಪತ್ತೆ ಪರೇಡ್ ನಡೆಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ. ಈಗಾಗಲೇ 45 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಸ್ಪೋಟಕ ಇರಿಸಿದ ಪ್ರಕರಣದ ತನಿಖಾಧಿಕಾರಿಗಳು ಸಂಗ್ರಹ ಮಾಡಿದ್ದಾರೆ. ಈ ಪೈಕಿ 10 ಕ್ಕೂ ಅಧಿಕ ಪ್ರತ್ಯಕ್ಷದರ್ಶಿಗಳ ಎದುರು ಆರೋಪಿ ಆದಿತ್ಯರಾವ್ ಪರೇಡ್ ನಡೆಸಲು ಎಲ್ಲಾ ಸಿದ್ಧತೆ ನಡೆದಿದೆ. ಪರೇಡ್ ನಡೆಸಲು ಮಂಗಳೂರು ತಹಶೀಲ್ದಾರ್‌ಗೆ ಪೊಲೀಸರು ಪತ್ರ ಬರೆದಿದ್ದು ತಹಶೀಲ್ದಾರ್ ಶೀಘ್ರದಲ್ಲೆ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟ ಪ್ರಕರಣ: ಆರೋಪಿ ಆದಿತ್ಯ ರಾವ್ ಗುರುತುಪತ್ತೆ ಪರೇಡ್‌ಗೆ ಸಿದ್ದತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಂದೆಯಿಂದಲೇ ಕಾಲುವೆಗೆ ಎಸೆಯಲ್ಪಟ್ಟಿದ್ದ ಮಗಳು ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ಬಳ್ಳಾರಿ. ಫೆ.19, ಹೆತ್ತ ತಂದೆಯಿಂದಲೇ ಕಾಲುವೆಗೆ ಎಸೆಯಲ್ಪಟ್ಟಿದ್ದ ಮಗಳು ಶವವಾಗಿ ಪತ್ತೆಯಾದ ಘಟನೆ ಆಂಧ್ರ ಪ್ರದೇಶದ ಉಂತಕಲ್ಲು ಎಂಬಲ್ಲಿ ನಡೆದಿದೆ. ನಗರದ ಬಂಡಿಹಟ್ಟಿ ನಿವಾಸಿಯಾದ ಸುರೇಶ್ ಮತ್ತು ಮಗಳು ಪಲ್ಲವಿ (22) ಇವರ ನಡುವೆ ಎರಡು ದಿನಗಳ ಹಿಂದೆ ಮನೆಯಲ್ಲಿ ಜಗಳವಾಗಿದ್ದು, ತಂದೆ ಸುರೇಶ್ ಕುಡಿಯಲು ಹಣ ನೀಡುವಂತೆ ಮಗಳನ್ನು ಪೀಡಿಸುತ್ತಿದ್ದನು. ಈ ವೇಳೆ ನನ್ನನ್ನು ಸಾಯಿಸಿಬಿಡಿ ಎಂದಿದ್ದ ಮಗಳನ್ನು ಕರೆದೊಯ್ದು ಕೈಕಾಲು ಕಟ್ಟಿ ಸಮೀಪದ ಎಚ್.ಎಲ್.ಸಿ ಕಾಲುವೆಗೆ ಎಸೆದಿದ್ದನು. ಸೋಮವಾರ ಇಡೀ

ತಂದೆಯಿಂದಲೇ ಕಾಲುವೆಗೆ ಎಸೆಯಲ್ಪಟ್ಟಿದ್ದ ಮಗಳು ಶವವಾಗಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಮ್ಮು- ಕಾಶ್ಮೀರ್ : ಎನ್ ಕೌಂಟರ್ ಗೆ ಮೂವರು ಬಲಿ

(ನ್ಯೂಸ್ ಕಡಬ) newskadaba.com ಶ್ರೀನಗರ. ಫೆ.19. ಉಗ್ರ ನಿಗ್ರಹ ದಳದ ಕಾರ್ಯಾಚರಣೆಯು ಮುಂದುವರಿದ ಪರಿಣಾಮವಾಗಿ ಜಮ್ಮು – ಕಾಶ್ಮೀರದಲ್ಲಿ ಬುಧವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ಗೆ ಮೂವರು ಉಗ್ರರು ಹತರಾಗಿದ್ದಾರೆ. ಹತರನ್ನು ಜಂಗೀರ್ ರಫೀಕ್ ವಾನಿ, ರಾಜಾ ಉಮರ್ ಮಕ್ಬೂಲ್ ಭಟ್, ಉಜೈರ್ ಆಮಿನ್ ಭಟ್ ಎಂದು ಸೇನಾ ಮೂಲಗಳು ತಿಳಿಸಿದೆ. ಉಗ್ರರು ಅನ್ಸಾರ್ ಫಜ್ವಾ ಉಲ್ ಹಿಂದ್ ಸಂಘಟನೆಗೆ ಸೇರಿದವರಾಗಿದ್ದು ಎಂದು ಕಾಶ್ಮೀರಿ ಪೊಲೀಸರು ತಿಳಿಸಿದ್ದಾರೆ.

ಜಮ್ಮು- ಕಾಶ್ಮೀರ್ : ಎನ್ ಕೌಂಟರ್ ಗೆ ಮೂವರು ಬಲಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top