ಕ್ರೈಮ್ ನ್ಯೂಸ್

ಪ್ರವಾದಿ ಮಹಮ್ಮದ್ (ಸ.ಅ) ರವರ ಬಗ್ಗೆ ಫೇಸ್‌ಬುಕ್‌ ನಲ್ಲಿ ಅವಹೇಳನ ➤ ಆರೋಪಿಯ ವಿರುದ್ಧ ಕ್ರಮಕ್ಕೆ ಎಸ್ಕೆಎಸ್ಸೆಸ್ಸೆಫ್ ನಿಂದ ಕಡಬ ಠಾಣೆಗೆ ದೂರು

ಕಡಬ, ಫೆ.18. ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ)ರವರನ್ನು ಅವಹೇಳನಕಾರಿ ಪದ ಬಳಕೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿರುವ ಮಧುಗಿರಿ ಮೋದಿ ಯಾನೆ ಅತುಲ್ ಕುಮಾರ್ ಎಂಬಾತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಕೆಎಸ್ಸೆಸ್ಸೆಫ್ ವತಿಯಿಂದ ಕಡಬ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಮಧುಗಿರಿ ಮೋದಿ ಯಾನೆ ಅತುಲ್ ಕುಮಾರ್ ಎಂಬಾತ ಹಲವಾರು ಬಾರಿ ಅನಾವಶ್ಯಕ ಆರೋಪಗಳನ್ನು ಮಾಡಿ ಮುಸ್ಲಿಂ ಧರ್ಮಕ್ಕೆ ಅವಮಾನ ಮಾಡುತ್ತಾ ಬಂದಿರುತ್ತಾನೆ. ಇದೀಗ ಮುಂದುವರಿದು ಸರ್ವಧರ್ಮಿಯರೂ ಗೌರವಿಸುವ ವಿಶ್ವಶಾಂತಿಯ ಹರಿಕಾರ […]

ಪ್ರವಾದಿ ಮಹಮ್ಮದ್ (ಸ.ಅ) ರವರ ಬಗ್ಗೆ ಫೇಸ್‌ಬುಕ್‌ ನಲ್ಲಿ ಅವಹೇಳನ ➤ ಆರೋಪಿಯ ವಿರುದ್ಧ ಕ್ರಮಕ್ಕೆ ಎಸ್ಕೆಎಸ್ಸೆಸ್ಸೆಫ್ ನಿಂದ ಕಡಬ ಠಾಣೆಗೆ ದೂರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿಗೆ ತೆರಳುತ್ತಿದ್ದ ಗೋ ಏರ್ ವಿಮಾನದಲ್ಲಿ ಬೆಂಕಿ: ಅಪಾಯದಿಂದ ಪಾರು

ಬೆಂಗಳೂರು, ಫೆ.18: ಬೆಂಗಳೂರಿಗೆ ಹೊರಟಿದ್ದ ಗೋ ಏರ್ ವಿಮಾನ ಟೇಕಾಫ್ ಸಂದರ್ಭ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಪರಿಣಾಮ ಆತಂಕದ ಸನ್ನಿವೇಶ ನಿರ್ಮಾಣವಾದ ಘಟನೆ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಎಲ್ಲ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಗಿದೆ. ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ‘ಅಹಮದಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಗೋಏರ್ ವಿಮಾನ ‘ಜಿ8 802’ರ ಬಲಭಾಗದ ಎಂಜಿನ್‌ಗೆ ಟೇಕ್‌ಆಫ್ ವೇಳೆ ಅನ್ಯವಸ್ತು ಡಿಕ್ಕಿಯಾದ ಅನುಮಾನವಿದೆ. ಡಿಕ್ಕಿಯ ಪರಿಣಾಮವಾಗಿ ಸಣ್ಣದಾಗಿ ಬೆಂಕಿ ಹೊತ್ತಿಕೊಂಡಿದೆ. ಎಲ್ಲ ಪ್ರಯಾಣಿಕರು

ಬೆಂಗಳೂರಿಗೆ ತೆರಳುತ್ತಿದ್ದ ಗೋ ಏರ್ ವಿಮಾನದಲ್ಲಿ ಬೆಂಕಿ: ಅಪಾಯದಿಂದ ಪಾರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರಾನಾ ವೈರಸ್‌ಗೆ ಆಸ್ಪತ್ರೆಯ ಮಾಲಕ ಬಲಿ

ಬೀಜಿಂಗ್, ಫೆ.18: ಕೊರಾನಾ ವೈರಸ್‌ಗೆ ಚೀನಾದ ವುಹಾನ್ ಆಸ್ಪತ್ರೆಯ ಮಾಲಕ ಲಿಯು ಝಿಮಿಂಗ್ ಸಾವನ್ನ್ನಪ್ಪಿರುವ ಬಗ್ಗೆ ಸರಕಾರಿ ಮಾಧ್ಯಮಗಳು ವರದಿ ಮಾಡಿದೆ. ಚೀನಾದ ವುಹಾನ್ ಕೊರೊನಾ ವೈರಸ್‌ನ ಮೂಲ ಸ್ಥಳವಾಗಿದ್ದು, ದೇಶಾದ್ಯಂತ ಮರಣಮೃದಂಗ ಬಾರಿಸುತ್ತಿರುವ ನೂತನ ವೈರಸ್ ದಾಳಿಗೆ ನಿರ್ದೇಶಕ ಲಿಯು ಸಾವನ್ನಪ್ಪಿದ್ದಾರೆ. ಕೋವಿಡ್ 19 ವೈರಸ್ ಕಳೆದ ವರ್ಷ ವುಹಾನ್‌ನಲ್ಲಿ ಮೊದಲು ಪತ್ತೆಯಾಗಿರುವುದಾಗಿ ನಂಬಲಾಗಿದೆ. ಈ ವೈರಸ್‌ಗೆ ಈವರೆಗೆ 1,900ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 72 ಸಾವಿರ ಮಂದಿ ವೈರಸ್‌ಗೆ ತುತ್ತಾಗಿದ್ದಾರೆ ಎಂದು ವರದಿ ತಿಳಿಸಿದೆ.

ಕೊರಾನಾ ವೈರಸ್‌ಗೆ ಆಸ್ಪತ್ರೆಯ ಮಾಲಕ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೆಎಸ್ಸಾರ್ಟಿಸಿ-ಕಾರು ಢಿಕ್ಕಿ: ಅಪಾಯದಿಂದ ಪಾರಾದ ಚಿತ್ರದುರ್ಗ ಡಿಸಿ

ಚಿತ್ರದುರ್ಗ, ಫೆ.18: ಚಿತ್ರದುರ್ಗ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಸರಕಾರಿ ಬಸ್ ಮುಖಾಮುಖಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಇಲ್ಲಿನ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ಬಳಿ ನಡೆದಿದೆ. ಕಾರಿನ ಏರ್‌ಬ್ಯಾಗ್ ತೆರೆದುಕೊಂಡ ಪರಿಣಾಮ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಚಾಲಕ ಮನ್ಸೂರ್ ಹಾಗೂ ಗನ್ ಮ್ಯಾನ್ ನವೀನ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿನೋತ್ ಪ್ರಿಯಾ ಚಿತ್ರದುರ್ಗದಿಂದ ಹೊಳಲ್ಕೆರೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಜಿಲ್ಲಾಧಿಕಾರಿ ವಿನೋತ್

ಕೆಎಸ್ಸಾರ್ಟಿಸಿ-ಕಾರು ಢಿಕ್ಕಿ: ಅಪಾಯದಿಂದ ಪಾರಾದ ಚಿತ್ರದುರ್ಗ ಡಿಸಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಒಂಟಿ ಮಹಿಳೆಯ ಕತ್ತು ಸೀಳಿ ಕೊಲೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ.18.  ಒಬ್ಬಂಟಿ ಮಹಿಳೆಯ ಕತ್ತು ಸೀಳಿ ಹತ್ಯೆಗೈದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಲಕ್ಷ್ಮೀಶ ನಗರದಲ್ಲಿ ನಡೆದಿದೆ. ಕೊಲೆಯಾದವರನ್ನು ಕವಿತಾ (31) ಎಂದು ಗುರುತಿಸಲಾಗಿದೆ. ಮೃತರ ಗಂಡ ದಂತ ವೈದ್ಯರಾಗಿದ್ದು, ಕ್ಲಿನಿಕ್‍ಗೆ ಹೋದ ಸಂರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಂಜೆ ಸುಮಾರು 6.45 ರಿಂದ 8.15 ರೊಳಗೆ ಇವರ ಕೊಲೆ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ಸಂಜೆ 6.45ಕ್ಕೆ ಕವಿತಾ ಅವರು ಪತಿಯೊಂದಿಗೆ ಮೊಬೈಲ್ ನಲ್ಲಿ ಕೊನೆಯದಾಗಿ ಮಾತನಾಡಿದ್ದಾಳೆ.  8.15ಕ್ಕೆ ಆಕೆಯ

ಒಂಟಿ ಮಹಿಳೆಯ ಕತ್ತು ಸೀಳಿ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದನದ ಹಟ್ಟಿಯ ಗೋಡೆ ಕುಸಿದು ಬಿದ್ದು ವ್ಯಕ್ತಿ ದುರ್ಮರಣ

(ನ್ಯೂಸ್ ಕಡಬ) newskadaba.com, ವೇಣೂರು, ಫೆ.18. ದನದ ಹಟ್ಟಿಯ ಗೋಡೆಯು ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸೋಮವಾರದಂದು ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಬಡಕೋಡಿ ಗ್ರಾಮದ ಕಿಂರ್ಬಿ ನಿವಾಸಿ ರುಕ್ಮಯ್ಯ ಮೂಲ್ಯ ಎಂದು ಗುರುತಿಸಲಾಗಿದೆ. ಅವರು ತನ್ನ ಮನೆಯ ಹಿಂಬದಿಯಲ್ಲಿರುವ ಹಟ್ಟಿಯಿಂದ ದನವನ್ನು ಹೊರಗೆ ತರುತ್ತಿರುವಾಗ ಹಳೆಯದಾದ ಹಟ್ಟಿಯ ಗೋಡೆಯು ಆಕಸ್ಮಿಕವಾಗಿ ಕುಸಿದು ಮೈಮೇಲೆ ಬಿದ್ದು ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ.

ದನದ ಹಟ್ಟಿಯ ಗೋಡೆ ಕುಸಿದು ಬಿದ್ದು ವ್ಯಕ್ತಿ ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕ್ರಮವಾಗಿ ಇರಿಸಿದ್ದ ಸ್ಫೋಟಕ ತಿಂದ ಹಸು ➤ ಸ್ಫೋಟಕ ಸಿಡಿದು ಹಸು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಫೆ.17. ಅಕ್ರಮವಾಗಿ ಇರಿಸಿದ್ದ ಸ್ಫೋಟಕವನ್ನು ತಿಂದ ಹಸುವೊಂದು ಸ್ಫೋಟಕ ಸಿಡಿದ ಪರಿಣಾಮ ದವಡೆ ಕಿತ್ತುಹೋಗಿ ಗಂಭೀರ ಗಾಯಗೊಂಡ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ದೇರಾಜೆಯ ಸಂಪಡ್ಕ ನಿವಾಸಿ ಬಾಲಚಂದ್ರ ಎಂಬವರಿಗೆ ಸೇರಿದ ಹಸು ಯಾರೋ ಕಿಡಿಗೇಡಿಗಳು ಇರಿಸಿದ್ದ ಸ್ಪೋಟಕವನ್ನು ತಿಂದಿದೆ. ಹಸುವಿನ ದವಡೆ ಸೀಳಿ ಬಂದಿದ್ದು, ಗಂಭೀರ ಗಾಯಗೊಂಡಿದೆ‌. ಸ್ಥಳಕ್ಕೆ ಕಡಬ ಪೋಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಅಕ್ರಮವಾಗಿ ಇರಿಸಿದ್ದ ಸ್ಫೋಟಕ ತಿಂದ ಹಸು ➤ ಸ್ಫೋಟಕ ಸಿಡಿದು ಹಸು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

breaking news ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಮಾರ್ಚ್ 3ರಂದು ಗಲ್ಲು

ಹೊಸದಿಲ್ಲಿ, ಫೆ.17: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮಾರ್ಚ್ 3ರಂದು ಬೆಳಗ್ಗೆ 6ಕ್ಕೆ ನೇಣಿಗೇರಿಸಲು ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಸೋಮವಾರ ಹೊಸ ಡೆತ್ ವಾರಂಟನ್ನು ಜಾರಿಗೊಳಿಸಿದೆ. ಪ್ರಕರಣದಲ್ಲಿ ಅಪರಾಧಿಗಳಾಗಿರುವ ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಪವನ್ ಗುಪ್ತಾ ಮತ್ತು ಮುಕೇಶ್ ಸಿಂಗ್‌ರನ್ನು ನೇಣಿಗೇರಿಸುವಂತೆ ಹೊಸ ದಿನಾಂಕ ನಿಗದಿಪಡಿಸಿದೆ. ಅಪರಾಧಿಗಳಿಗೆ ಸಂಬಂಧಿಸಿದ ವರದಿಯನ್ನು ತಿಹಾರ್ ಜೈಲು ಅಧಿಕಾರಿಗಳು ಕೋರ್ಟ್ ಗೆ ಹಸ್ತಾಂತರಿಸಿದ್ದರು. ನಾಲ್ವರು ಅಪರಾಧಿಗಳಲ್ಲಿ ಮೂವರು ಈಗಾಗಲೇ ಎಲ್ಲಾ ಕಾನೂನು ಅವಕಾಶಗಳನ್ನು

breaking news ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಮಾರ್ಚ್ 3ರಂದು ಗಲ್ಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ➤➤ ಪತ್ನಿಯನ್ನು ರಕ್ಷಿಸಿದ್ದ ಪತಿ ಮೃತ್ಯು

(ನ್ಯೂಸ್ ಕಡಬ) newskadaba.com, ದುಬೈ . ಫೆ.17. ಕಳೆದ ವಾರ ಅಬುಧಾಬಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಹೆಂಡತಿಯನ್ನು ರಕ್ಷಿಸಲು ಹೋಗಿ ಗಾಯಗೊಂಡಿದ್ದ ಪತಿ ಮೃತಪಟ್ಟಿದ್ದಾರೆ. ಕೇರಳ ಮೂಲದ ಅಬುಧಾಬಿ ನಿವಾಸಿ ಅನಿಲ್ ನಿನಾನ್ ತಮ್ಮ ಪತ್ನಿಯನ್ನು ಬೆಂಕಿಯಿಂದ ರಕ್ಷಿಸಲು ಹೋದಾಗ ಗಾಯಗೊಂಡಿದ್ದರು. ಸದ್ಯ ನಿನಾನ್ ಅವರ ಪತ್ನಿಯ ಸ್ಥಿತಿ ಸುಧಾರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿತ್ತು. ಅಲ್ಲಿ ನಡೆದ ಅವಘಡದ ಬಗ್ಗೆ ನಮಗೆ ಪೂರ್ಣ ಮಾಹಿತಿ

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ➤➤ ಪತ್ನಿಯನ್ನು ರಕ್ಷಿಸಿದ್ದ ಪತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೆಹಲಿ ಎನ್ ಕೌಂಟರ್ ಗೆ ಇಬ್ಬರು ಬಲಿ

(ನ್ಯೂಸ್ ಕಡಬ) newskadaba.com, ಹೊಸದಿಲ್ಲಿ. ಫೆ.17. ಇಂದು ಬೆಳ್ಳಂಬೆಳಗ್ಗೆ ಸುಮಾರು 5 ಗಂಟೆ ವೇಳೆ ದೆಹಲಿಯ ಪ್ರಹ್ಲಾದ್ ಪುರ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಪೊಲೀಸರು ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ್ದಾರೆ. ಹತ್ಯೆಯಾದವರನ್ನು ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎಂದು ಗುರುತಿಸಲಾಗಿದೆ. ಈ ಇಬ್ಬರು ಆರೋಪಿಗಳು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವರು ಎನ್ನಲಾಗಿದ್ದು, ಹಾಗೂ ಇತ್ತೀಚೆಗೆ ದಿಲ್ಲಿಯ ಕರವಾಲ್ ನಗರದಲ್ಲಿ ನಡೆದ ಕೊಲೆ ಪ್ರಕರಣದಲ್ಲೂ ಈ ಆರೋಪಿಗಳು ಭಾಗಿಯಾಗಿದ್ದರು ಎನ್ನಲಾಗಿದೆ. ಈ ವರದಿಯ ಪ್ರಕಾರ

ದೆಹಲಿ ಎನ್ ಕೌಂಟರ್ ಗೆ ಇಬ್ಬರು ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top