ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ರಿಕ್ಷಾ – ಕಾರು – ಬೈಕ್ ನಡುವೆ ಸರಣಿ ಅಪಘಾತ ➤ ಐವರು ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.29. ಕಾರು, ಬೈಕ್ ಹಾಗೂ ಆಟೋರಿಕ್ಷಾ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೆರಿಯಡ್ಕ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಫೋರ್ಡ್ ಕಾರು ಹಾಗೂ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಆಟೋರಿಕ್ಷಾ ಮತ್ತು ಬೈಕ್ ನಡುವೆ ಸರಣಿ ಅಪಘಾತವಾಗಿದೆ. ಘಟನೆಯಲ್ಲಿ ಮೂರೂ ವಾಹನಗಳು ಜಖಂಗೊಂಡಿದ್ದು, ಗಂಭೀರ ಗಾಯಗಿರುವ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಪ್ಪಿನಂಗಡಿ: ರಿಕ್ಷಾ – ಕಾರು – ಬೈಕ್ ನಡುವೆ ಸರಣಿ ಅಪಘಾತ ➤ ಐವರು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಅಕ್ರಮ ಹಣ ಸಾಗಾಟ; ಓರ್ವ ಬಂಧನ

ಕಾಸರಗೋಡು, ಜ.28: ದಾಖಲೆಗಳಿಲ್ಲದ ಸುಮಾರು 15 ಲಕ್ಷ ರೂಪಾಯಿ ಹಣವನ್ನು ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಓರ್ವನನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ಕಣ್ಣೂರಿನ ಮುಹಮ್ಮದ್ ಕುಂಞಿ (33) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಅಕ್ರಮವಾಗಿ ಹಣ ಸಾಗಾಟ ಮಾಡಲಾಗುತ್ತಿತ್ತು. ವಾಹನ ತಪಾಸಣೆ ವೇಳೆ ಅಕ್ರಮವಾಗಿ ಸಾಗಾಟ ನಡೆಸುತ್ತಿರುವುದು ಪತ್ತೆಯಾಗಿದೆ.‌ ಕಂಕನಾಡಿಯಿಂದ ಓರ್ವ ವ್ಯಕ್ತಿ ಕಣ್ಣೂರು ತಳಿಪರಂಬದಲ್ಲಿರುವ ವ್ಯಕ್ತಿಯೋರ್ವರಿಗೆ ನೀಡಲು ಈ ಹಣ ಒಪ್ಪಿಸಿದ್ದಾಗಿ ಬಂಧಿತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು

ಕಾಸರಗೋಡು: ಅಕ್ರಮ ಹಣ ಸಾಗಾಟ; ಓರ್ವ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಗದ್ದೆಗೆ ಉರುಳಿದ ಆಟೋ ರಿಕ್ಷಾ ➤ ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.26. ಆಟೋರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ – ಕಡಬ ರಾಜ್ಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಪುಳಿತ್ತಡಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಆಪೆ ಆಟೋರಿಕ್ಷಾ ಹೆದ್ದಾರಿ ಪಕ್ಕದ ಗದ್ದೆಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಪ್ಪಿನಂಗಡಿ: ಗದ್ದೆಗೆ ಉರುಳಿದ ಆಟೋ ರಿಕ್ಷಾ ➤ ಮೂವರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಂದಾಪುರ: ಬೈಕ್ ಢಿಕ್ಕಿ ಹೊಡೆದು ಮಹಿಳೆ ಮೃತ್ಯು

ಕುಂದಾಪುರ, ಜ.25: ಪಾದಚಾರಿ ಮಹಿಳೆಯೊಬ್ಬಳಿಗೆ ಬೈಕ್ಕೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇರುವ ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಾದ್ವಾರದ ಎದುರು ನಡೆದಿದೆ.         ಮೃತ ಮಹಿಳೆಯನ್ನು ಸ್ಥಳೀಯ ನಿವಾಸಿ ವಿನಯ ಕಾಮತ್‌(62) ಎಂದು ಗುರುತಿಸಲಾಗಿದೆ. ಸವಾರ ಹಳವಳ್ಳಿ ನಿವಾಸಿ ಕೀರ್ತಿರಾಜ್ ಕೊಟೇಶ್ವರದಿಂದ ಕುಂಭಾಶಿ ಕಡೆಗೆ ಅತೀ ವೇಗದಿಂದ ಬಂದಿದ್ದು ಪಾದಚಾರಿ ವೃದ್ಧೆಗೆ ಢಿಕ್ಕಿ ಹೊಡೆದಿದ್ದಾನೆ. ಈ ಸಂದರ್ಭದಲ್ಲಿ ಬೈಕ್‌ ಸವಾರ ಕೀರ್ತಿರಾಜ್‌ ತಲೆಗೂ

ಕುಂದಾಪುರ: ಬೈಕ್ ಢಿಕ್ಕಿ ಹೊಡೆದು ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಪತಿಯ ಕೊಲೆಗೆ ಸುಪಾರಿ ನೀಡಿದ ಪತಿ; ಇಬ್ಬರ ಬಂಧನ

ಕಾಸರಗೋಡು, ಜ 24: ಮಂಜೇಶ್ವರ ಪಾವೂರು ಕೆದಂಬಾಡಿಯ ಇಸ್ಮಾಯಿಲ್ (50) ನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಸ್ಮಾಯಿಲ್ ಪತ್ನಿ ಹಾಗೂ ಈಕೆಯ ನೆರೆಮನೆಯ ಯುವಕನೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಇಸ್ಮಾಯಿಲ್ ನ ಪತ್ನಿ ಆಯಿಷಾ (30) ಮತ್ತು ಮುಹಮ್ಮದ್ ಹನೀಫ್ (35) ಎಂದು ಗುರುತಿಸಲಾಗಿದೆ. ಜನವರಿ 20ರಂದು ಇಸ್ಮಾಯಿಲ್ ಮನೆಯಲ್ಲಿ ಕೊಲೆಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತದೇಹವನ್ನು ಗಮನಿಸಿದ್ದ ಸಂಬಂಧಿಕರು ಇಸ್ಮಾಯಿಲ್ ನ ಕುತ್ತಿಗೆಯಲ್ಲಿ ಹಗ್ಗ ಬಿಗಿದ ಗುರುತು ಪತ್ತೆಯಾದ ಹಿನ್ನಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ಸ್ಥಳಕ್ಕೆ

ಕಾಸರಗೋಡು: ಪತಿಯ ಕೊಲೆಗೆ ಸುಪಾರಿ ನೀಡಿದ ಪತಿ; ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಸಹ ಶಿಕ್ಷಕನಿಂದಲೇ ಶಿಕ್ಷಕಿಯ ಕೊಲೆ; ಕ್ರೈಂ ಬ್ರಾಂಚ್ ತನಿಖೆಯಿಂದ ಬಹಿರಂಗ

ಇಬ್ಬರ ಬಂಧನ ಕಾಸರಗೋಡು, ಜ.24: ಮೀಯಪದವು ವಿದ್ಯಾವಿರ್ಧಕ ಹಯರ್ ಸೆಕಂಡರಿ ಶಾಲೆಯ ಶಿಕ್ಷಕಿ ರೂಪಶ್ರೀ (44) ರವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಹ ಶಿಕ್ಷಕ ಸೇರಿದಂತೆ ಇಬ್ಬರನ್ನು ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಾಲೆಯ ಡ್ರಾಯಿಂಗ್ ಶಿಕ್ಷಕ ವೆಂಕಟರಮಣ ಕಾರಂತ (50) ಮತ್ತು ಕಾರು ಚಾಲಕ ನಿರಂಜನ ಎಂದು ಗುರುತಿಸಲಾಗಿದೆ. ಜನವರಿ 14ರ ಸಂಜೆಯಿಂದ ಶಿಕ್ಷಕಿ ರೂಪಶ್ರೀ ನಾಪತ್ತೆಯಾಗಿದ್ದಳು. 16 ರಂದು ಕುಂಬಳೆ ಸಮೀಪದ ಪೆರುವಾಡು ಕಡಲ ತೀರದಲ್ಲಿ ಮೃತದೇಹ ಪತ್ತೆಯಾಗಿತ್ತು. ಪ್ರಕರಣದ ಬಗ್ಗೆ ತನಿಖೆ ನಡೆಸಿದ

ಕಾಸರಗೋಡು: ಸಹ ಶಿಕ್ಷಕನಿಂದಲೇ ಶಿಕ್ಷಕಿಯ ಕೊಲೆ; ಕ್ರೈಂ ಬ್ರಾಂಚ್ ತನಿಖೆಯಿಂದ ಬಹಿರಂಗ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮರ್ಧಾಳ: ‘ಹೊಟೇಲ್ ಸಾಂತಪ್ಪ’ ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜ.25. ಕಳೆದ ಕೆಲವು ದಶಕಗಳಿಂದ ಕಡಬ ತಾಲೂಕಿನ ಮರ್ಧಾಳದಲ್ಲಿ ಹೊಟೇಲ್ ಉದ್ಯಮವನ್ನು ನಡೆಸುತ್ತಿದ್ದ ಸಾಂತಪ್ಪ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ತಡರಾತ್ರಿ ಬೆಳಕಿಗೆ ಬಂದಿದೆ. ಹೊಟೇಲ್ ಸಾಂತಪ್ಪ ಎಂದೇ ಚಿರಪರಿಚಿತರಾಗಿದ್ದ ಸಾಂತಪ್ಪರವರು ಶುಕ್ರವಾರ ಸಂಜೆ ವೇಳೆಗೆ ಐತ್ತೂರು ಗ್ರಾಮದ ಭ್ರಾಂತಿಕಟ್ಟೆ ಎಂಬಲ್ಲಿ ಅರಣ್ಯ ಇಲಾಖೆಯ ಜಮೀನಿನಲ್ಲಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ತಡರಾತ್ರಿ ವೇಳೆ ಮೃತದೇಹವು ಕಂಡುಬಂದಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಆತ್ಮಹತ್ಯೆಗೆ ನಿಖರ

ಮರ್ಧಾಳ: ‘ಹೊಟೇಲ್ ಸಾಂತಪ್ಪ’ ವಿಷ ಸೇವಿಸಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಮೈದುನನಿಂದ ಆ್ಯಸಿಡ್ ದಾಳಿ ➤ ಮಹಿಳೆ ಮತ್ತು ಮಗು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜ.24. ಹಣಕಾಸು ಹಾಗೂ ಭೂ ವಿವಾದಕ್ಕೆ ಸಂಬಂಧಿಸಿ ಮಹಿಳೆಯೋರ್ವರ ಮುಖಕ್ಕೆ ಆಕೆಯ ಬಾವ ಆ್ಯಸಿಡ್ ಎರಚಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಆಸಿಡ್ ಎರಚಿದ ಆರೋಪಿಯನ್ನು ಕೋಡಿಂಬಾಳ ಗ್ರಾಮದ ಕೊಠಾರಿ ನಿವಾಸಿ ಜಯಾನಂದ ಕೊಠಾರಿ(55) ಎಂದು ಗುರುತಿಸಲಾಗಿದೆ. ಕೃಷಿಕರಾಗಿರುವ ಜಯಾನಂದ ತನ್ನ ತಮ್ಮನ ಪತ್ನಿ ವಿಧವೆ ಸ್ವಪ್ನಾ(35) ಹಾಗೂ ಆಕೆಯ ಹೆಣ್ಣುಮಗಳ ಮುಖಕ್ಕೆ ರಬ್ಬರ್ ಶೀಟ್ ಗೆ ಬಳಸುವ ಆ್ಯಸಿಡ್ ಎರಚಿದ್ದಾರೆ‌. ಗಾಯಗೊಂಡಿರುವ ತಾಯಿ

ಕಡಬ: ಮೈದುನನಿಂದ ಆ್ಯಸಿಡ್ ದಾಳಿ ➤ ಮಹಿಳೆ ಮತ್ತು ಮಗು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇರಳದಲ್ಲಿ ಸಂಸದೆ ಶೋಭಾ ವಿರುದ್ಧ ಪ್ರಕರಣ ದಾಖಲು

ತಿರುವನಂತಪುರಂ, ಜ.24: ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿದ್ದ ಮಲಪ್ಪುರಂನ ಕೆಲ ಹಿಂದೂ ಕುಟುಂಬಗಳಿಗೆ ಕೇರಳ ಸರ್ಕಾರ ನೀರು ಸರಬರಾಜನ್ನು ತಡೆ ಹಿಡಿದಿದೆ ಎಂದು ಸಾಮಾಜಿಕ ತಾಣ ಟ್ವಿಟ್ಟರ್ ನಲ್ಲಿ ಆರೋಪಿಸಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿಸೆಕ್ಷನ್ 153 (ಎ) ಅಡಿಯಲ್ಲಿ ಸಂಸದೆ ಶೋಭಾ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ವಕೀಲ ಮತ್ತು ಮಲಪ್ಪುರಂ ನಿವಾಸಿ ಸುಭಾಷ್ ಚಂದ್ರನ್ ಕೆ.ಆರ್. ಅವರ ದೂರಿನ ಆಧಾರದ

ಕೇರಳದಲ್ಲಿ ಸಂಸದೆ ಶೋಭಾ ವಿರುದ್ಧ ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ವರದಿ ಕೇಳಿದ ರಾಜ್ಯ ಸರಕಾರ

ಮಂಗಳೂರು, ಜ.24: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೂಡಲೇ ವರದಿ ಸಲ್ಲಿಸುವಂತೆ ರಾಜ್ಯ ಸರಕಾರ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯಕ್ಕೆ ಸೂಚನೆ ನೀಡಿದೆ. ಶುಕ್ರವಾರ ಮಧ್ಯಾಹ್ನದ ಒಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ವರದಿಯನ್ನು ಕೇಂದ್ರ ಗೃಹ ಇಲಾಖೆಗೆ ರಾಜ್ಯ ಸರ್ಕಾರ ಕಳುಹಿಸಲಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬಿಟ್ಟ ಘಟನೆಗೆ ಸಂಬಂಧಪಟ್ಟಂತೆ ಹಲವಾರು ಊಹಾಪೋಹಗಳು ಎದ್ದಿದ್ದವು. ಈಗ ಪ್ರಕರಣ ತಿರುವು ಪಡೆದುಕೊಂಡಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಧ್ಯಂತರ ವರದಿ 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ವರದಿ ಕೇಳಿದ ರಾಜ್ಯ ಸರಕಾರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top