ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಯುವತಿಯರನ್ನು ಬಳಸಿ ಹನಿಟ್ರ್ಯಾಪ್ ಪ್ರಕರಣ ➤ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.13. ನಾಲ್ಕು ದಿನಗಳ ಹಿಂದೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಟ್ಲ ಕಸಬಾ ಗ್ರಾಮದ ಕಡಂಬು ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಜಮಾಲುದ್ದೀನ್, ಕೊಡಗು ಜಿಲ್ಲೆಯ ಕುಶಾಲನಗರ ನಿವಾಸಿ ಬಿ.ಎಂ. ಭಾಸ್ಕರ್ ಎಂಬವರ ಪುತ್ರ ಲೋಹಿತ್ ಹಾಗೂ ವಿಟ್ಲ ಕಸಬಾ ಗ್ರಾಮದ ನೆತ್ತರಕೆರೆ ಕೆದುಮೂಲೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಆರೋಪಿಗಳು […]

ಉಪ್ಪಿನಂಗಡಿ: ಯುವತಿಯರನ್ನು ಬಳಸಿ ಹನಿಟ್ರ್ಯಾಪ್ ಪ್ರಕರಣ ➤ ಮೂವರು ಆರೋಪಿಗಳ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆ: ಬಸ್ ಢಿಕ್ಕಿ ➤ ಯುವ ವೈದ್ಯ ಮೃತ್ಯು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜ.13. ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ಮೂಡುಬಿದಿರೆಯ ಕೆಸರುಗದ್ದೆ ಬಳಿ ಭಾನುವಾರದಂದು ನಡೆದಿದೆ. ಮೃತರನ್ನು ಕೇರಳದ ಕೊಲ್ಲಂ ನಿವಾಸಿ, ಮೂಡುಬಿದಿರೆ ಅಳ್ವಾಸ್ ಕಾಲೇಜಿನ ಯುವ ವೈದ್ಯ ಡಾ. ಕೃಷ್ಣಾನಂದ(24) ಎಂದು ಗುರುತಿಸಲಾಗಿದೆ. ಕಾರ್ಕಳದಲ್ಲಿ ನಡೆಯಲಿದ್ದ ವೈದ್ಯಕೀಯ ಶಿಬಿರದಲ್ಲಿ ಪಾಲ್ಗೊಳ್ಳಲೆಂದು ಭಾನುವಾರ ಮೂಡುಬಿದಿರೆಯಿಂದ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕೆಸರುಗದ್ದೆ ಎಂಬಲ್ಲಿ ಖಾಸಗಿ ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್‍ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಅಪಘಾತದಿಂದ ವೈದ್ಯ

ಮೂಡುಬಿದಿರೆ: ಬಸ್ ಢಿಕ್ಕಿ ➤ ಯುವ ವೈದ್ಯ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

➤➤ ವೀಡಿಯೋ ನ್ಯೂಸ್ – ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ

➤➤ ವೀಡಿಯೋ ನ್ಯೂಸ್ ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ ➤ ಬೃಹತ್ ಅಕ್ರಮ ಕಟ್ಟಡ ನೆಲಸಮ ➤ ಕಡಬದ ಮೋಹನ್ ಗೆ 800 ಮೀ. ಓಟದಲ್ಲಿ ಕಂಚು ➤ ಕೇಪು ಸರಕಾರಿ ಶಾಲೆಯಲ್ಲಿ ವಿಜ್ಞಾನ ಮೇಳ ➤ ಬೆಳ್ಳಾರೆ ಹಿದಾಯ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ ವೀಡಿಯೋಗಾಗಿ??ಕ್ಲಿಕ್ ಮಾಡಿ

➤➤ ವೀಡಿಯೋ ನ್ಯೂಸ್ – ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ, ಓರ್ವನ ಬಂಧನ ➤ ಕದ್ದ ಜಾನುವಾರುಗಳ ಸಹಿತ ಕತ್ತಿ, ತೂಕದ ಮಾಪನ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜ.11. ಕಳವು ಮಾಡಿ ತಂದಿರುವ ಜಾನುವಾರು ಅಡ್ಡೆಗೆ ದಾಳಿ ನಡೆಸಿದ ಕಡಬ ಪೋಲೀಸರು ಓರ್ವನನ್ನು ಬಂಧಿಸಿ, ದನಕರುಗಳು ಸೇರಿದಂತೆ ಕತ್ತಿ, ತೂಕದ ಮಾಪನಗಳನ್ನು ವಶಪಡಿಸಿಕೊಂಡ ಘಟನೆ ಕಡಬ ತಾಲೂಕಿನ ಕೊಯ್ಲ ಗ್ರಾಮದ ಬಡ್ಡಮೆ ಎಂಬಲ್ಲಿ ನಡೆದಿದೆ.  ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಕಡಬ ಪೋಲೀಸರು ಮಹಮ್ಮದ್ ಮುಸ್ತಫಾ ಎಂಬಾತನನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಇಲಿಯಾಸ್ ಪರಾರಿಯಾಗಿದ್ದಾನೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ದಾಳಿ ಮಾಡಿದ ಪೋಲೀಸರು ಆರೋಪಿಯ

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ, ಓರ್ವನ ಬಂಧನ ➤ ಕದ್ದ ಜಾನುವಾರುಗಳ ಸಹಿತ ಕತ್ತಿ, ತೂಕದ ಮಾಪನ ವಶಕ್ಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೆಟ್ಟು ನಿಂತಿದ್ದ ಲಾರಿ ಏಕಾಏಕಿ ಚಲಿಸಿ ರಿಕ್ಷಾಕ್ಕೆ ಢಿಕ್ಕಿ

(ನ್ಯೂಸ್ ಕಡಬ) newskadaba.com ವಿಟ್ಲ, ಜ.09. ಕೆಟ್ಟು ನಿಂತಿದ್ದ ಲಾರಿಯೊಂದು ಹಠಾತ್ತನೆ ಚಲಿಸಿದ ಪರಿಣಾಮ ಎದುರಗಡೆ ನಿಲ್ಲಿಸಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ. ಲಾರಿಯೊಂದು ಕೆಟ್ಟು ಹೋದ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಲಾರಿಯನ್ನು ದುರಸ್ತಿ ಮಾಡಲೆಂದು ಮೆಕ್ಯಾನಿಕ್ ಆಟೋ ರಿಕ್ಷಾದಲ್ಲಿ ಆಗಮಿಸಿದ್ದರು. ದುರಸ್ತಿ ವೇಳೆ ಲಾರಿ ಹಠಾತ್ತನೆ ಚಲಿಸಿ ಎದುರುಗಡೆ ಇದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾವನ್ನು ದೂಡಿಕೊಂಡು ಹೋಗಿ ಮರಕ್ಕೆ ಢಿಕ್ಕಿ

ಕೆಟ್ಟು ನಿಂತಿದ್ದ ಲಾರಿ ಏಕಾಏಕಿ ಚಲಿಸಿ ರಿಕ್ಷಾಕ್ಕೆ ಢಿಕ್ಕಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ➤ ಜೋಡಿಗಳನ್ನು ಕೂಡಿಟ್ಟು ಹಣ ಮಾಡುವ ದಂಧೆ ಭೇದಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.09. ದೇಶದ ವಿವಿಧೆಡೆ ಕೇಳಿ ಬರುತ್ತಿದ್ದ ಹನಿ ಟ್ರ್ಯಾಪ್ ಘಟನೆಯು ಉಪ್ಪಿನಂಗಡಿಯಲ್ಲಿ ನಡೆದಿದ್ದು, ಶಂಕಿತ ಆರೋಪಿಗಳು ಪೊಲೀಸರ ಬಲೆಗೆ ಬಿದ್ದ ಘಟನೆ ಗುರುವಾರದಂದು ನಡೆದಿದೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಳಿಪರಂಬ ನಿವಾಸಿ ದಿಲೀಪ್ ಟಿ ಎಂಬವರು ತನ್ನ ಸ್ನೇಹಿತರಾದ ಜನಾರ್ಧನನ್, ಪ್ರಶಾಂತ್, ಪ್ರವೀಣ್ ಎಂಬವರೊಂದಿಗೆ ಇನ್ನೋವಾ ಕಾರಿನಲ್ಲಿ ಕಣ್ಣೂರಿನಿಂದ ಪುತ್ತೂರಿಗೆ ಆಗಮಿಸಿದ್ದು, ಪುತ್ತೂರಿನಲ್ಲಿ ಪರಿಚಯದ ಹುಡುಗಿಯೊಂದಿಗೆ ಒಂದು ಮನೆಗೆ ತೆರಳಿದ್ದರೆನ್ನಲಾಗಿದೆ. ಆ ಮನೆಯಲ್ಲಿ ಮತ್ತೊಬ್ಬಳು ಹುಡುಗಿಯಿದ್ದು ಅದೇ ಸಮಯದಲ್ಲಿ ಇಬ್ಬರು

ರಾಜ್ಯದಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ➤ ಜೋಡಿಗಳನ್ನು ಕೂಡಿಟ್ಟು ಹಣ ಮಾಡುವ ದಂಧೆ ಭೇದಿಸಿದ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಅಕ್ರಮ‌ ಮರ ಸಾಗಾಟಕ್ಕೆ ಲಂಚದ ಬೇಡಿಕೆ ➤ ಫಾರೆಸ್ಟ್ ಗಾರ್ಡ್ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.08. ಅಕ್ರಮವಾಗಿ ಮರ ಸಾಗಾಟಕ್ಕೆ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಅರಣ್ಯ ರಕ್ಷಕನೋರ್ವನನ್ನು ಬಂಧಿಸಿದ ಘಟನೆ ಬುಧವಾರದಂದು ಬೆಳ್ತಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕಣಿಯೂರು ಬೀಟ್ ಸಿಬ್ಬಂದಿ ಅರಣ್ಯ ರಕ್ಷಕ ಸುಧೀರ್ ಎಂದು ಗುರುತಿಸಲಾಗಿದೆ. ಆರೋಪಿಯು ಬೆಳ್ತಂಗಡಿ ತಾಲೂಕಿನ ಉರುವಾಲು ನಿವಾಸಿ ಸಿದ್ದೀಕ್ ಅಕ್ಬರ್ ಎಂಬವರಿಂದ ಅಕ್ರಮವಾಗಿ ಮರ ಸಾಗಾಟ ಮಾಡುವುದಕ್ಕಾಗಿ 15 ಸಾವಿರ ಲಂಚದ ಬೇಡಿಕೆ ಇಟ್ಟಿದ್ದು, 10 ಸಾವಿರ

ಬೆಳ್ತಂಗಡಿ: ಅಕ್ರಮ‌ ಮರ ಸಾಗಾಟಕ್ಕೆ ಲಂಚದ ಬೇಡಿಕೆ ➤ ಫಾರೆಸ್ಟ್ ಗಾರ್ಡ್ ಎಸಿಬಿ ಬಲೆಗೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದೇಶದಿಂದ ಕೋಮು ಪ್ರಚೋದನೆಯ ಸಂದೇಶ ರವಾನೆ ➤ ಊರಿಗೆ ತಲುಪಿದ ವಿಟ್ಲ ನಿವಾಸಿಯ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಜ.07. ಕೋಮು ಸೌಹಾರ್ದಕ್ಕೆ ಧಕ್ಕೆ ಬರುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಡಿದ ಆರೋಪದಲ್ಲಿ ಓರ್ವನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎನ್.ಆರ್.ಸಿ ಮತ್ತು ಸಿ.ಎ.ಎ ಕಾಯ್ದೆಗೆ ಸಂಬಂಧಿಸಿದಂತೆ ಮಂಗಳೂರು ವಾಮಂಜೂರಿನ ಹಿಂದೂ ಸಂಘಟನೆಗೆ ಸೇರಿದ ಕೆಲವು ವ್ಯಕ್ತಿಗಳಿಗೆ ಹಾಗೂ ವಿದೇಶದಲ್ಲಿ ಉದ್ಯೋಗದಲ್ಲಿರುವ ವಾಮಂಜೂರು ಮೂಲದ ವ್ಯಕ್ತಿಯೋರ್ವರಿಗೆ ಬಂಟ್ವಾಳ ಪೆರಿವಾಯಿ ಗ್ರಾಮದ ಅನ್ವರ್ ಮತ್ತು ನಿಯಾಜ್ ಎಂಬವರು ವಿದೇಶದಿಂದ ಪೋನ್ ಕರೆ ಮಾಡಿ ಒತ್ತಡ ಹೇರಿದ್ದಲ್ಲದೆ, ಈ ಸಂಬಂಧ ಆರೋಪಿಗಳು ಕಳುಹಿಸಿರುವ

ವಿದೇಶದಿಂದ ಕೋಮು ಪ್ರಚೋದನೆಯ ಸಂದೇಶ ರವಾನೆ ➤ ಊರಿಗೆ ತಲುಪಿದ ವಿಟ್ಲ ನಿವಾಸಿಯ ಬಂಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜ.04. ಶಾಲೆ‌ ಬಿಟ್ಟು ಮನೆಗೆ ತೆರಳುತ್ತಿದ್ದ ಆರನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ತಡೆದು ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೋಳ್ಪಾಡಿ ಗ್ರಾಮದ ಕಳೆಂಜೋಡಿ ನಿವಾಸಿ ರುಕ್ಮಯ್ಯ ಪೂಜಾರಿ ಎಂಬವರ ಪುತ್ರ ಲಿಂಗಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಆರೋಪಿಯು ಕಡಬದ ಖಾಸಗಿ ಶಾಲೆಯೊಂದರ ಆರನೇ ತರಗತಿಯ ವಿದ್ಯಾರ್ಥಿನಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ಮಧ್ಯದಲ್ಲಿ ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದನು.

ಕಡಬ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಿರಾಡಿ: ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್‌ ಬೆಂಕಿ ➤ ನೋಡನೋಡುತ್ತಿದ್ದಂತೆಯೇ ಸುಟ್ಟು ಕರಕಲಾದ ಕಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ.04. ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್‌ ಬೆಂಕಿ ಉಂಟಾಗಿ ಕಾರು ಸುಟ್ಟು ಭಸ್ಮವಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಬಳಿಯ ಕೊಡ್ಯಕಲ್ ಎಂಬಲ್ಲಿ ಶನಿವಾರದಂದು ನಡೆದಿದೆ. ಕಡಬ ತಾಲೂಕಿನ ರಾಮಕುಂಜ ನಿವಾಸಿ ಪ್ರವೀಣ್ ಎಂಬವರು ತನ್ನ ಮಾರುತಿ 800 ಕಾರಿನಲ್ಲಿ ಸಕಲೇಶಪುರ ಕಡೆಯಿಂದ ತನ್ನ ಮನೆಗೆ ಆಗಮಿಸುತ್ತಿದ್ದ ವೇಳೆ ಶಿರಾಡಿಯ ಕೊಡ್ಯಾಕಲ್ ಎಂಬಲ್ಲಿ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಪ್ರವೀಣ್ ಕಾರಿನಿಂದ ಇಳಿದಿದ್ದಾರೆ. ನೋಡನೋಡುತ್ತಿದ್ದಂತೆಯೇ ಕಾರು

ಶಿರಾಡಿ: ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್‌ ಬೆಂಕಿ ➤ ನೋಡನೋಡುತ್ತಿದ್ದಂತೆಯೇ ಸುಟ್ಟು ಕರಕಲಾದ ಕಾರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top