ಕ್ರೈಮ್ ನ್ಯೂಸ್

ಪೆರ್ನೆ: ಕಿರು ಸೇತುವೆ ಬಳಿ ಕೆಳಕ್ಕುರುಳಿದ ಖಾಸಗಿ ಬಸ್ ➤ ಪವಾಡ ಸದೃಶವಾಗಿ ಪಾರಾದ 27 ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.04. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಕಿರು ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಅಮೈ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀದುರ್ಗಾ ಸಂಸ್ಥೆಯ ಖಾಸಗಿ ಬಸ್ ಅಮೈ ಕಿರು ಸೇತುವೆ ಪಕ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ಕೆಳಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಬಸ್ಸಿನಲ್ಲಿ 27 ಮಂದಿ ಪ್ರಯಾಣಿಕರಿದ್ದರೆಂದು ತಿಳಿದುಬಂದಿದ್ದು, ಸಣ್ಣಪುಟ್ಟ ತರಚಿದ ಗಾಯಗಳೊಂದಿಗೆ ಪವಾಡ […]

ಪೆರ್ನೆ: ಕಿರು ಸೇತುವೆ ಬಳಿ ಕೆಳಕ್ಕುರುಳಿದ ಖಾಸಗಿ ಬಸ್ ➤ ಪವಾಡ ಸದೃಶವಾಗಿ ಪಾರಾದ 27 ಪ್ರಯಾಣಿಕರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಮಾರಧಾರ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.03. ಠಾಣಾ ವ್ಯಾಪ್ತಿಯ ಕೊೈಲ ಗ್ರಾಮದ ನೀಡೇಲು ಎಂಬಲ್ಲಿ ಗುರುವಾರದಂದು ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಶುಕ್ರವಾರ ಸಂಜೆ ನದಿಯಲ್ಲಿ ದೊರೆತಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕೊೈಲ ಗ್ರಾಮದ ಗುಲ್ಗೋಡಿ ನಿವಾಸಿ ರತ್ನಾಕರ ಕುಮಾರ್ ಯಾನೆ ಉದಯ ಪೂಜಾರಿ(32) ಎಂದು ಗುರುತಿಸಲಾಗಿದೆ. ಗುರುವಾರದಂದು ಸಂಜೀವ ಪೂಜಾರಿ ಮಾರಂಗ, ಹರೀಶ್ ಪಲ್ಲತ್ತಾರು, ಸತ್ಯಾ ರೈ ಸುಣ್ಣಾಡಿ, ಬೇಬಿ ಗೋಳಿತ್ತಡಿ ಎಂಬವರೊಂದಿಗೆ ನದಿಗೆ ತೆರಳಿದ್ದ ರತ್ನಾಕರ್ ನೀರಲ್ಲಿ ಮುಳುಗಿದ್ದರು. ತಕ್ಷಣವೇ ಮೆಲಕ್ಕೆತ್ತಲು ಪ್ರಯತ್ನಿಸಿದರೂ

ಕುಮಾರಧಾರ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

Breaking – ಆರನೇ ತರಗತಿಯ ಬಾಲಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಪರಾರಿ

ಕಡಬ, ಜ.03. ಶಾಲೆ‌ ಬಿಟ್ಟು ಮನೆಗೆ ತೆರಳುತ್ತಿದ್ದ ಆರನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ತಡೆದು ನಿಲ್ಲಿಸಿ ಲೈಂಗಿಕ ಕಿರುಕುಳ ನೀಡೊದ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ನಡೆದಿದೆ. ಕಡಬದ ಖಾಸಗಿ ಶಾಲೆಯೊಂದರ ಆರನೇ ತರಗತಿಯ ವಿದ್ಯಾರ್ಥಿನಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ದೋಳ್ಪಾಡಿ ನಿವಾಸಿ ರುಕ್ಮಯ್ಯ ಪೂಜಾರಿ ಎಂಬವರ ಪುತ್ರ ಲಿಂಗಪ್ಪ ಪೂಜಾರಿ ಎಂಬಾತ ರಸ್ತೆ ಮಧ್ಯದಲ್ಲಿ ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಬಾಲಕಿಯ ತಾಯಿಯು ಅದೇ ದಾರಿಯಿಂದಾಗಿ ಬರುತ್ತಿದ್ದುದನ್ನು ಕಂಡ ಆರೋಪಿಯು

Breaking – ಆರನೇ ತರಗತಿಯ ಬಾಲಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಪರಾರಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಸ್ವಿಫ್ಟ್ ಕಾರು – ಟಿಪ್ಪರ್ ನಡುವೆ ಢಿಕ್ಕಿ ➤ ಕಾರಿನ ಮುಂಭಾಗ ಜಖಂ

(ನ್ಯೂಸ್ ಕಡಬ) newskadaba.com ಕಡಬ, ಜ.03. ಸ್ವಿಫ್ಟ್ ಕಾರು ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಜಖಂಗೊಂಡ ಘಟನೆ ಪಂಜದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಕಡಬದಿಂದ ನಿಂತಿಕಲ್ಲು ಕಡೆಗೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಹಾಗೂ ಟಿಪ್ಪರ್ ನಡುವೆ ಪಂಜ ಸಮೀಪದ ಕರಿಕ್ಕಳ ಕೃಷ್ಣನಗರ ಎಂಬಲ್ಲಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ.

ಕಡಬ: ಸ್ವಿಫ್ಟ್ ಕಾರು – ಟಿಪ್ಪರ್ ನಡುವೆ ಢಿಕ್ಕಿ ➤ ಕಾರಿನ ಮುಂಭಾಗ ಜಖಂ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ನಾಪತ್ತೆ ➤ ಮುಳುಗು ತಜ್ಞರಿಂದ ತೀವ್ರ ಶೋಧ

(ನ್ಯೂಸ್ ಕಡಬ) newskadaba.com ಕಡಬ, ಡಿ.03. ಠಾಣಾ ವ್ಯಾಪ್ತಿಯ ಕೊೈಲ ಗ್ರಾಮದ ನೀಡೇಲು ಎಂಬಲ್ಲಿ ಕುಮಾರಧಾರ ನದಿಯಲ್ಲಿ ಮುಳುಗಿ ಯುವಕನೋರ್ವ ನಾಪತ್ತೆಯಾದ ಘಟನೆ ಗುರುವಾರ ನಡೆದಿದೆ. ನಾಪತ್ತೆಯಾದ ಯುವಕನನ್ನು ಕೊೈಲ ಗ್ರಾಮದ ಗುಲ್ಗೋಡಿ ನಿವಾಸಿ ರತ್ನಾಕರ ಕುಮಾರ್ ಯಾನೆ ಉದಯ ಪೂಜಾರಿ(32) ಎಂದು ಗುರುತಿಸಲಾಗಿದೆ. ಗುರುವಾರದಂದು ಸಂಜೀವ ಪೂಜಾರಿ ಮಾರಂಗ, ಹರೀಶ್ ಪಲ್ಲತ್ತಾರು, ಸತ್ಯಾ ರೈ ಸುಣ್ಣಾಡಿ, ಬೇಬಿ ಗೋಳಿತ್ತಡಿ ಎಂಬವರೊಂದಿಗೆ ನದಿಗೆ ತೆರಳಿದ್ದ ರತ್ನಾಕರ್ ನೀರಲ್ಲಿ ಮುಳುಗಿದ್ದಾರೆ. ತಕ್ಷಣವೇ ಮೆಲಕ್ಕೆತ್ತಲಾಲು ಪ್ರಯತ್ನಿಸಿದರೂ ರಕ್ಷಣೆ ಮಾಡಲು ಸಾಧ್ಯವಾಗಿರಲಿಲ್ಲ.

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ನಾಪತ್ತೆ ➤ ಮುಳುಗು ತಜ್ಞರಿಂದ ತೀವ್ರ ಶೋಧ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಳ್ಪ: ಚಿರತೆ ದಾಳಿಗೆ ವ್ಯಕ್ತಿ ಗಂಭೀರ

ಸುಬ್ರಹ್ಮಣ್ಯ, ಜ.2: ವ್ಯಕ್ತಿಯ ಮೇಲೆ ಚಿರತೆಯೊಂದು ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಕಡಬ ತಾಲೂಕಿನ ಬಳ್ಪಗ್ರಾಮದಲ್ಲಿ ಗುರುವಾರ ನಡೆದಿದೆ. ಗಾಯಗೊಂಡವರನ್ನು ಕಾಯರ ನಿವಾಸಿ ಕೃಷಿಕ ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಬಾಲಕೃಷ್ಣ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಗುರುವಾರ ಹಗಲು ಹೊತ್ತಲ್ಲಿ ನಡೆದಿದ್ದು ಕೃಷಿಕ ಬಾಲಕೃಷ್ಣ ಅವರು ಹುಲ್ಲು ತರಲೆಂದು ತೋಟಕ್ಕೆ ತೆರಳಿದ ವೇಳೆ ಈ ಘಟನೆ

ಬಳ್ಪ: ಚಿರತೆ ದಾಳಿಗೆ ವ್ಯಕ್ತಿ ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ರೈಲು ಢಿಕ್ಕಿಯಾಗಿ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ.! ➤ ಸೋಮವಾರದಂದು ಆತನ ಬದುಕಿನಲ್ಲಿ ನಡೆದಿದ್ದಾರೂ ಏನು..?

(ನ್ಯೂಸ್ ಕಡಬ) newskadaba.com ಕಡಬ, ಡಿ.31. ಕೋಡಿಂಬಾಳ ರೈಲ್ವೇ ಹಳಿಯ ಬಳಿ ಯುವಕನೋರ್ವನ ಮೃತದೇಹವು ಪತ್ತೆಯಾಗಿದ್ದು, ಯುವಕನ ಸಾವಿನ ಬಗ್ಗೆ ಇದೀಗ ಅನುಮಾನ ಉಂಟಾಗಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಪಂಜ ಸಮೀಪದ ನೇಲ್ಯಡ್ಕ ನಿವಾಸಿ ಕಡಬದ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ವಿನೀತ್ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಕೋಡಿಂಬಾಳ ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂ ಬಳಿ ವಿನೀತ್ ನ ಮೃತದೇಹವು ಕಂಡುಬಂದಿದೆ. ಪಕ್ಕದಲ್ಲೇ ಮದ್ಯದ ಬಾಟಲ್ ಕಂಡುಬಂದಿದ್ದು, ಈತ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ವಿನಿತ್

ಕಡಬ: ರೈಲು ಢಿಕ್ಕಿಯಾಗಿ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ.! ➤ ಸೋಮವಾರದಂದು ಆತನ ಬದುಕಿನಲ್ಲಿ ನಡೆದಿದ್ದಾರೂ ಏನು..? Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಂದಾಪುರ: ನೀರು ಸೇದಲು ಹೋದ ವಿದ್ಯಾರ್ಥಿನಿ ಬಾವಿಗೆ ಬಿದ್ದು  ಮೃತ್ಯು

ಕುಂದಾಪುರ, ಡಿ.31: ಬಾವಿಯಿಂದ ನೀರು ಸೇದುವ ವೇಳೆ ಹಗ್ಗ ತುಂಡಾದ ಪರಿಣಾಮ ವಿದ್ಯಾರ್ಥಿನಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಾವುಂದ ಗ್ರಾಮದ ಕುದ್ರುಕೋಡು ಬಾಗಳಾಡಿಯಲ್ಲಿ ನಡೆದಿದೆ. ಮೃತರನ್ನು  ಕುದ್ರುಕೋಡಿನ ಬಾಬು ಮೊಗವೀರ ಎಂಬವರ ಪುತ್ರಿ ಪ್ರೀತಿ (19) ಎಂದು ಗುರುತಿಸಲಾಗಿದೆ. ಬಾರ್ಕೂರಿನಲ್ಲಿ ಪದವಿ ವಿದ್ಯಾರ್ಥಿನಿಯಾಗಿರುವ ಪ್ರೀತಿ ಕ್ರಿಸ್‌ಮಸ್‌ ರಜೆಯ ಹಿನ್ನೆಲೆಯಲ್ಲಿ ಮನೆಗೆ ಬಂದಿದ್ದರು. ಮನೆಯ ಹತ್ತಿರವಿರುವ ಬಾವಿಯಿಂದ ನೀರು ತರಲೆಂದು ಹೋಗಿದ್ದು, ಈ ಸಂದರ್ಭ ಹಗ್ಗ ತುಂಡಾಗಿ ಪ್ರೀತಿ ಬಾವಿಗೆ ಬಿದ್ದಿದ್ದಾರೆನ್ನಲಾಗಿದೆ. ತುಂಬಾ ಹೊತ್ತು ಕಳೆದರೂ ಮನೆಗೆ

ಕುಂದಾಪುರ: ನೀರು ಸೇದಲು ಹೋದ ವಿದ್ಯಾರ್ಥಿನಿ ಬಾವಿಗೆ ಬಿದ್ದು  ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ರಸ್ತೆ ಬದಿ ಉರುಳಿ ಬಿದ್ದ ಲಾರಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.31. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಕರುವೇಲ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೃಹತ್ ಗಾತ್ರದ ಲಾರಿಯು ಕರುವೇಲ್ ಹಾಗೂ ನೆಕ್ಕಿಲಾಡಿ ಮಧ್ಯೆಯ ಕಾಂಕ್ರೀಟ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಚಾಲಕನನ್ನು ಆಸ್ಪತ್ರೆಗೆ

ಉಪ್ಪಿನಂಗಡಿ: ರಸ್ತೆ ಬದಿ ಉರುಳಿ ಬಿದ್ದ ಲಾರಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top